AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ ಮತ್ತೆ ಕೊರೊನಾ ಪರಿಸ್ಥಿತಿ ಆತಂಕ; ಬೆಂಗಳೂರಿನಲ್ಲಿ ಮಕ್ಕಳಲ್ಲಿ ಹೆಚ್ಚಾದ ಡೆಂಗ್ಯೂ, ಆರೋಗ್ಯ ಇಲಾಖೆಯಿಂದ ಪೋಷಕರಿಗೆ ಗೈಡ್ ಲೈನ್ಸ್

ಕೇರಳದಲ್ಲಿ ನಿಫಾ ವೈರಸ್ ಕಾಟ ಶುರುವಾಗಿದೆ. ಅಸ್ಸಾಂ, ಒಡಿಶಾ, ರಾಜಸ್ಥಾನ, ತಮಿಳುನಾಡಿನ ಕೆಲ ಭಾಗದಲ್ಲಿ ಸ್ಕ್ರಬ್ ಟೈಫಸ್ ಹಾವಳಿ ಜೋರಾಗಿದೆ. ಇನ್ನು ಬೆಂಗಳೂರಿನ ಮಕ್ಕಳಲ್ಲಿ ಡೆಂಗ್ಯೂ ಹಾವಳಿ ಶುರುವಾಗಿದೆ. ಈ ಹಿನ್ನಲೆ ಶಾಲೆಗಳು ಹಾಗೂ ಮಕ್ಕಳಿಗೆ ಎಚ್ಚರಿಕೆಯಿಂದಿರಲು ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಮಕ್ಕಳ ಆರೋಗ್ಯದ ಬಗ್ಗೆ ಕೇರ್ ತಗೆದುಕೊಳ್ಳುವಂತೆ ಪೋಷಕರಿಗೆ ಸೂಚನೆ ನೀಡಲಾಗಿದೆ.

ದೇಶದಲ್ಲಿ ಮತ್ತೆ ಕೊರೊನಾ ಪರಿಸ್ಥಿತಿ ಆತಂಕ; ಬೆಂಗಳೂರಿನಲ್ಲಿ ಮಕ್ಕಳಲ್ಲಿ ಹೆಚ್ಚಾದ ಡೆಂಗ್ಯೂ, ಆರೋಗ್ಯ ಇಲಾಖೆಯಿಂದ ಪೋಷಕರಿಗೆ ಗೈಡ್ ಲೈನ್ಸ್
ಡೆಂಗ್ಯೂ
ವಿನಯ್​ ಕಾಶಪ್ಪನವರ್​
| Edited By: ಆಯೇಷಾ ಬಾನು|

Updated on: Sep 18, 2023 | 8:29 AM

Share

ಬೆಂಗಳೂರು, ಸೆ.18: ದೇಶದಲ್ಲಿ ಕೊರೊನಾ(Coronavirus) ವೈರಸ್​ನಂತಹ ಪರಿಸ್ಥಿತಿ ಮತ್ತೆ ನಿರ್ಮಾಣವಾಗಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಏಕೆಂದರೆ ವೈರಸ್​ಗಳ ಭೀತಿ ಶುರುವಾಗಿದೆ. ಕೇರಳದಲ್ಲಿ ನಿಫಾ ವೈರಸ್(Nipah Virus) ಕಾಟ ಹೆಚ್ಚಾಗಿದ್ದು, ಅಸ್ಸಾಂ, ಒಡಿಶಾ, ರಾಜಸ್ಥಾನ, ತಮಿಳುನಾಡಿನಲ್ಲಿ ಸ್ಕ್ರಬ್ ಟೈಫಸ್(Scrub Typhus) ಹಾವಳಿ ಜೋರಾಗಿದೆ. ಬೆಂಗಳೂರಿನಲ್ಲಿ ಡೆಂಗ್ಯೂ ಜ್ವರ(Dengue Fever) ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ನಗರದಲ್ಲಿ ಕಳೆದ 17 ದಿನಗಳಲ್ಲಿ ದಾಖಲೆ ಮಟ್ಟದಲ್ಲಿ ಅಂದರೆ 3,018 ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ. ಕಳೆದ ಒಂದು ತಿಂಗಳಿನಿಂದ ಬೆಂಗಳೂರು ನಗರದಲ್ಲಿ ಗರಿಷ್ಠ ಡೆಂಗ್ಯೂ ದಾಖಲಾಗಿದ್ದು ಕಳೆದ ಮೂರು ವರ್ಷಗಳಲ್ಲಿಯೇ ದಾಖಲೆ ಪ್ರಮಾಣದಲ್ಲಿ ಕೇಸ್​ಗಳು ಪತ್ತೆಯಾಗಿವೆ.

ಬೆಂಗಳೂರು ನಗರದಲ್ಲಿ ಈ ವರ್ಷ ಜನವರಿಯಿಂದ ನಿನ್ನೆಯವರೆಗೂ(ಸೆ.17) 5,220 ಡೆಂಗ್ಯೂ ಕೇಸ್​ಗಳು ದಾಖಲಾಗಿವೆ. ರಾಜ್ಯದಲ್ಲಿ 3,965 ಡೆಂಗ್ಯೂ ಕೇಸ್​ಗಳು ದಾಖಲಾಗಿವೆ. ಒಟ್ಟು 9,185 ಡೆಂಗ್ಯೂ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಕಳೆದ ಮೂರು ವರ್ಷಗಳಲ್ಲಿಯೇ ಗರಿಷ್ಠ ಡೆಂಗ್ಯೂ ಕೇಸ್ ವರದಿಯಾಗಿದೆ. ಹೀಗಾಗಿ ಆರೋಗ್ಯ ಇಲಾಖೆಯು ಶಾಲಾ ಮಕ್ಕಳಿಗೆ ಹಾಗೂ ಪೋಷಕರಿಗೆ ಎಚ್ಚರಿಕೆಯಿಂದಿರಲು ಸೂಚಿಸಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಡೆಂಘೀ, ಚಿಕನ್ ಗುನ್ಯಾ ಹಾವಳಿ; ವಾರಕ್ಕೆ 80 ಕೇಸ್ ಪತ್ತೆ

ಮಕ್ಕಳಲ್ಲಿ ಹೆಚ್ಚಾದ ಆರೋಗ್ಯ ಸಮಸ್ಯೆ

ಕೇರಳದಲ್ಲಿ ನಿಫಾ ವೈರಸ್ ಕಾಟ ಶುರುವಾಗಿದೆ. ಅಸ್ಸಾಂ, ಒಡಿಶಾ, ರಾಜಸ್ಥಾನ, ತಮಿಳುನಾಡಿನ ಕೆಲ ಭಾಗದಲ್ಲಿ ಸ್ಕ್ರಬ್ ಟೈಫಸ್ ಹಾವಳಿ ಜೋರಾಗಿದೆ. ಇನ್ನು ಬೆಂಗಳೂರಿನ ಮಕ್ಕಳಲ್ಲಿ ಡೆಂಗ್ಯೂ ಹಾವಳಿ ಶುರುವಾಗಿದೆ. ಈ ಹಿನ್ನಲೆ ಶಾಲೆಗಳು ಹಾಗೂ ಮಕ್ಕಳಿಗೆ ಎಚ್ಚರಿಕೆಯಿಂದಿರಲು ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಮಕ್ಕಳ ಆರೋಗ್ಯದ ಬಗ್ಗೆ ಕೇರ್ ತಗೆದುಕೊಳ್ಳುವಂತೆ ಪೋಷಕರಿಗೆ ಸೂಚನೆ ನೀಡಲಾಗಿದೆ. ಕಳೆದ ಕೆಲವು ದಿನಗಳಿಂದ ರಾಜಧಾನಿ ಬೆಂಗಳೂರಿನ ಮಕ್ಕಳಲ್ಲಿ ಕೆಮ್ಮು, ಹೊಟ್ಟೆ ನೋವು, ಚಳಿ ಜ್ವರ, ವೈರಲ್ ಫೀವರ್, ಮೈ- ಕೈ ನೋವು, ತಲೆನೋವು, ನ್ಯೂಮೋನಿಯಾ ಹೆಚ್ಚಾಗಿ ಕಂಡು ಬರುತ್ತಿದೆ. ಮಕ್ಕಳಲ್ಲಿ ಡೆಂಗ್ಯೂ ಜೊತೆಗೆ ಬೇರೆ ಬೇರೆ ವೈರಸ್​ಗಳ ಕಾಟ ಶುರುವಾಗಿದೆ.

ಮಕ್ಕಳ ಬಗ್ಗೆ ಎಚ್ಚರ ವಹಿಸಲು ಆರೋಗ್ಯ ಇಲಾಖೆ ಸೂಚನೆ

  • ಇನ್ನು ಮಕ್ಕಳಲ್ಲಿ ತೀವ್ರ ಜ್ವರ, ಕೆಮ್ಮು, ನೆಗಡಿ ಇದ್ರೆ ಶಾಲೆಗೆ ಕಳಿಸದಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.
  • ಮಕ್ಕಳಿಗೆ ಡೆಂಗ್ಯೂ ನಿಂದ ದೂರ ಇಡಲು ಸೊಳ್ಳೆ ಕಾಟ ತಪ್ಪಿಸುವಂತೆ ಸಲಹೆ ನೀಡಿದೆ.
  • ಶಾಲೆಗೆ ಬರುವ ಮಕ್ಕಳಿಗೆ ಕೆಲ ದಿನಗಳ ವರೆಗೂ ಕೈ ಕಾಲು ಮುಚ್ಚುವ ಬಟ್ಟೆ ಧರಿಸುವಂತೆ ಸೂಚಿಸಲಾಗಿದೆ.
  • ಕೈ ಹಾಗೂ ಕಾಲು ಭಾಗಕ್ಕೆ ಯಾವುದಾದ್ರೂ ಲೋಶನ್ ಕ್ರೀಮ್ ಗಳ ಬಳಕೆ ಮಾಡುವಂತೆ ಸೂಚಿಸಿದೆ
  • ಮಕ್ಕಳಿಗೆ ಸಣ್ಣ ಜ್ವರ ಕಾಣಿಸಿಕೊಂಡ್ರೂ ನಿರ್ಲಕ್ಷ್ಯವಹಿಸದಂತೆ ಆರೋಗ್ಯ ಇಲಾಖೆ ಪೋಷಕರಿಗೆ ಎಚ್ಚರಿಕೆಯಿಂದಿರಲು ತಿಳಿಸಿದೆ.
  • ಡೆಂಗ್ಯೂ ಶಾಕ್ ಗೆ ಮಕ್ಕಳು ಹೋಗದಂತೆ ನೋಡಿಕೊಳ್ಳುವಂತೆ ಎಚ್ಚರಿಕೆ ವಹಿಸಲು ಸೂಚಿಸಿದೆ.
  • ಇತರೆ ವೈರಸ್ ಗಳ ಬಗ್ಗೆ ಕೂಡಾ ಜಾಗೃತಿವಹಿಸುವಂತೆ ಸೂಚನೆ. ಹೀಗೆ ಶಾಲಾ ಮಕ್ಕಳು ಹಾಗೂ ಪೋಷಕರಿಗೆ ಮಕ್ಕಳ ಆರೋಗ್ಯದ ಬಗ್ಗೆ ಸೂಕ್ತ ಎಚ್ಚರಿಕೆಗೆ ಆರೋಗ್ಯ ಇಲಾಖೆ ನಿರ್ದೇಶನ ನೀಡಿದೆ.

    ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ