AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ ಮತ್ತೆ ಕೊರೊನಾ ಪರಿಸ್ಥಿತಿ ಆತಂಕ; ಬೆಂಗಳೂರಿನಲ್ಲಿ ಮಕ್ಕಳಲ್ಲಿ ಹೆಚ್ಚಾದ ಡೆಂಗ್ಯೂ, ಆರೋಗ್ಯ ಇಲಾಖೆಯಿಂದ ಪೋಷಕರಿಗೆ ಗೈಡ್ ಲೈನ್ಸ್

ಕೇರಳದಲ್ಲಿ ನಿಫಾ ವೈರಸ್ ಕಾಟ ಶುರುವಾಗಿದೆ. ಅಸ್ಸಾಂ, ಒಡಿಶಾ, ರಾಜಸ್ಥಾನ, ತಮಿಳುನಾಡಿನ ಕೆಲ ಭಾಗದಲ್ಲಿ ಸ್ಕ್ರಬ್ ಟೈಫಸ್ ಹಾವಳಿ ಜೋರಾಗಿದೆ. ಇನ್ನು ಬೆಂಗಳೂರಿನ ಮಕ್ಕಳಲ್ಲಿ ಡೆಂಗ್ಯೂ ಹಾವಳಿ ಶುರುವಾಗಿದೆ. ಈ ಹಿನ್ನಲೆ ಶಾಲೆಗಳು ಹಾಗೂ ಮಕ್ಕಳಿಗೆ ಎಚ್ಚರಿಕೆಯಿಂದಿರಲು ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಮಕ್ಕಳ ಆರೋಗ್ಯದ ಬಗ್ಗೆ ಕೇರ್ ತಗೆದುಕೊಳ್ಳುವಂತೆ ಪೋಷಕರಿಗೆ ಸೂಚನೆ ನೀಡಲಾಗಿದೆ.

ದೇಶದಲ್ಲಿ ಮತ್ತೆ ಕೊರೊನಾ ಪರಿಸ್ಥಿತಿ ಆತಂಕ; ಬೆಂಗಳೂರಿನಲ್ಲಿ ಮಕ್ಕಳಲ್ಲಿ ಹೆಚ್ಚಾದ ಡೆಂಗ್ಯೂ, ಆರೋಗ್ಯ ಇಲಾಖೆಯಿಂದ ಪೋಷಕರಿಗೆ ಗೈಡ್ ಲೈನ್ಸ್
ಡೆಂಗ್ಯೂ
Follow us
Vinay Kashappanavar
| Updated By: ಆಯೇಷಾ ಬಾನು

Updated on: Sep 18, 2023 | 8:29 AM

ಬೆಂಗಳೂರು, ಸೆ.18: ದೇಶದಲ್ಲಿ ಕೊರೊನಾ(Coronavirus) ವೈರಸ್​ನಂತಹ ಪರಿಸ್ಥಿತಿ ಮತ್ತೆ ನಿರ್ಮಾಣವಾಗಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಏಕೆಂದರೆ ವೈರಸ್​ಗಳ ಭೀತಿ ಶುರುವಾಗಿದೆ. ಕೇರಳದಲ್ಲಿ ನಿಫಾ ವೈರಸ್(Nipah Virus) ಕಾಟ ಹೆಚ್ಚಾಗಿದ್ದು, ಅಸ್ಸಾಂ, ಒಡಿಶಾ, ರಾಜಸ್ಥಾನ, ತಮಿಳುನಾಡಿನಲ್ಲಿ ಸ್ಕ್ರಬ್ ಟೈಫಸ್(Scrub Typhus) ಹಾವಳಿ ಜೋರಾಗಿದೆ. ಬೆಂಗಳೂರಿನಲ್ಲಿ ಡೆಂಗ್ಯೂ ಜ್ವರ(Dengue Fever) ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ನಗರದಲ್ಲಿ ಕಳೆದ 17 ದಿನಗಳಲ್ಲಿ ದಾಖಲೆ ಮಟ್ಟದಲ್ಲಿ ಅಂದರೆ 3,018 ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ. ಕಳೆದ ಒಂದು ತಿಂಗಳಿನಿಂದ ಬೆಂಗಳೂರು ನಗರದಲ್ಲಿ ಗರಿಷ್ಠ ಡೆಂಗ್ಯೂ ದಾಖಲಾಗಿದ್ದು ಕಳೆದ ಮೂರು ವರ್ಷಗಳಲ್ಲಿಯೇ ದಾಖಲೆ ಪ್ರಮಾಣದಲ್ಲಿ ಕೇಸ್​ಗಳು ಪತ್ತೆಯಾಗಿವೆ.

ಬೆಂಗಳೂರು ನಗರದಲ್ಲಿ ಈ ವರ್ಷ ಜನವರಿಯಿಂದ ನಿನ್ನೆಯವರೆಗೂ(ಸೆ.17) 5,220 ಡೆಂಗ್ಯೂ ಕೇಸ್​ಗಳು ದಾಖಲಾಗಿವೆ. ರಾಜ್ಯದಲ್ಲಿ 3,965 ಡೆಂಗ್ಯೂ ಕೇಸ್​ಗಳು ದಾಖಲಾಗಿವೆ. ಒಟ್ಟು 9,185 ಡೆಂಗ್ಯೂ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಕಳೆದ ಮೂರು ವರ್ಷಗಳಲ್ಲಿಯೇ ಗರಿಷ್ಠ ಡೆಂಗ್ಯೂ ಕೇಸ್ ವರದಿಯಾಗಿದೆ. ಹೀಗಾಗಿ ಆರೋಗ್ಯ ಇಲಾಖೆಯು ಶಾಲಾ ಮಕ್ಕಳಿಗೆ ಹಾಗೂ ಪೋಷಕರಿಗೆ ಎಚ್ಚರಿಕೆಯಿಂದಿರಲು ಸೂಚಿಸಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಡೆಂಘೀ, ಚಿಕನ್ ಗುನ್ಯಾ ಹಾವಳಿ; ವಾರಕ್ಕೆ 80 ಕೇಸ್ ಪತ್ತೆ

ಮಕ್ಕಳಲ್ಲಿ ಹೆಚ್ಚಾದ ಆರೋಗ್ಯ ಸಮಸ್ಯೆ

ಕೇರಳದಲ್ಲಿ ನಿಫಾ ವೈರಸ್ ಕಾಟ ಶುರುವಾಗಿದೆ. ಅಸ್ಸಾಂ, ಒಡಿಶಾ, ರಾಜಸ್ಥಾನ, ತಮಿಳುನಾಡಿನ ಕೆಲ ಭಾಗದಲ್ಲಿ ಸ್ಕ್ರಬ್ ಟೈಫಸ್ ಹಾವಳಿ ಜೋರಾಗಿದೆ. ಇನ್ನು ಬೆಂಗಳೂರಿನ ಮಕ್ಕಳಲ್ಲಿ ಡೆಂಗ್ಯೂ ಹಾವಳಿ ಶುರುವಾಗಿದೆ. ಈ ಹಿನ್ನಲೆ ಶಾಲೆಗಳು ಹಾಗೂ ಮಕ್ಕಳಿಗೆ ಎಚ್ಚರಿಕೆಯಿಂದಿರಲು ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಮಕ್ಕಳ ಆರೋಗ್ಯದ ಬಗ್ಗೆ ಕೇರ್ ತಗೆದುಕೊಳ್ಳುವಂತೆ ಪೋಷಕರಿಗೆ ಸೂಚನೆ ನೀಡಲಾಗಿದೆ. ಕಳೆದ ಕೆಲವು ದಿನಗಳಿಂದ ರಾಜಧಾನಿ ಬೆಂಗಳೂರಿನ ಮಕ್ಕಳಲ್ಲಿ ಕೆಮ್ಮು, ಹೊಟ್ಟೆ ನೋವು, ಚಳಿ ಜ್ವರ, ವೈರಲ್ ಫೀವರ್, ಮೈ- ಕೈ ನೋವು, ತಲೆನೋವು, ನ್ಯೂಮೋನಿಯಾ ಹೆಚ್ಚಾಗಿ ಕಂಡು ಬರುತ್ತಿದೆ. ಮಕ್ಕಳಲ್ಲಿ ಡೆಂಗ್ಯೂ ಜೊತೆಗೆ ಬೇರೆ ಬೇರೆ ವೈರಸ್​ಗಳ ಕಾಟ ಶುರುವಾಗಿದೆ.

ಮಕ್ಕಳ ಬಗ್ಗೆ ಎಚ್ಚರ ವಹಿಸಲು ಆರೋಗ್ಯ ಇಲಾಖೆ ಸೂಚನೆ

  • ಇನ್ನು ಮಕ್ಕಳಲ್ಲಿ ತೀವ್ರ ಜ್ವರ, ಕೆಮ್ಮು, ನೆಗಡಿ ಇದ್ರೆ ಶಾಲೆಗೆ ಕಳಿಸದಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.
  • ಮಕ್ಕಳಿಗೆ ಡೆಂಗ್ಯೂ ನಿಂದ ದೂರ ಇಡಲು ಸೊಳ್ಳೆ ಕಾಟ ತಪ್ಪಿಸುವಂತೆ ಸಲಹೆ ನೀಡಿದೆ.
  • ಶಾಲೆಗೆ ಬರುವ ಮಕ್ಕಳಿಗೆ ಕೆಲ ದಿನಗಳ ವರೆಗೂ ಕೈ ಕಾಲು ಮುಚ್ಚುವ ಬಟ್ಟೆ ಧರಿಸುವಂತೆ ಸೂಚಿಸಲಾಗಿದೆ.
  • ಕೈ ಹಾಗೂ ಕಾಲು ಭಾಗಕ್ಕೆ ಯಾವುದಾದ್ರೂ ಲೋಶನ್ ಕ್ರೀಮ್ ಗಳ ಬಳಕೆ ಮಾಡುವಂತೆ ಸೂಚಿಸಿದೆ
  • ಮಕ್ಕಳಿಗೆ ಸಣ್ಣ ಜ್ವರ ಕಾಣಿಸಿಕೊಂಡ್ರೂ ನಿರ್ಲಕ್ಷ್ಯವಹಿಸದಂತೆ ಆರೋಗ್ಯ ಇಲಾಖೆ ಪೋಷಕರಿಗೆ ಎಚ್ಚರಿಕೆಯಿಂದಿರಲು ತಿಳಿಸಿದೆ.
  • ಡೆಂಗ್ಯೂ ಶಾಕ್ ಗೆ ಮಕ್ಕಳು ಹೋಗದಂತೆ ನೋಡಿಕೊಳ್ಳುವಂತೆ ಎಚ್ಚರಿಕೆ ವಹಿಸಲು ಸೂಚಿಸಿದೆ.
  • ಇತರೆ ವೈರಸ್ ಗಳ ಬಗ್ಗೆ ಕೂಡಾ ಜಾಗೃತಿವಹಿಸುವಂತೆ ಸೂಚನೆ. ಹೀಗೆ ಶಾಲಾ ಮಕ್ಕಳು ಹಾಗೂ ಪೋಷಕರಿಗೆ ಮಕ್ಕಳ ಆರೋಗ್ಯದ ಬಗ್ಗೆ ಸೂಕ್ತ ಎಚ್ಚರಿಕೆಗೆ ಆರೋಗ್ಯ ಇಲಾಖೆ ನಿರ್ದೇಶನ ನೀಡಿದೆ.

    ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ