ಬೆಂಗಳೂರಿನಲ್ಲಿ ಹೆಚ್ಚಿದ ಡೆಂಗ್ಯೂ: ಎಚ್ಚರ, ಮನೆ ಸುತ್ತ ಸ್ವಚ್ಛತೆ ಕಾಪಾಡದಿದ್ದರೆ ಬೀಳಲಿದೆ ದಂಡ

ಬೆಂಗಳೂರಿನಲ್ಲಿ ಡೆಂಗ್ಯೂ ಅಬ್ಬರ ಜೋರಾಗುತ್ತಿದೆ. ದಿನದಿಂದ ದಿನಕ್ಕೆ ಪ್ರಕರಣಗಳು ಹೆಚ್ಚಾಗುತ್ತಿರುವ ಹೊತ್ತಲ್ಲೇ ಬೆಂಗಳೂರಿನ ರಸ್ತೆಗಳು, ಕಾರಂಜಿಗಳು ಕೂಡ ಡೆಂಗ್ಯೂ ಹಾಟ್​​ಸ್ಪಾಟ್ ಆಗಿ ಬದಲಾಗಿವೆ. ಎಲ್ಲೆಂದರಲ್ಲಿ ಕಸದ ರಾಶಿ ಬಿದ್ದಿರುವುದರಿಂದ, ನೀರು ತುಂಬಿಕೊಳ್ಳುತ್ತಿರುವುದರಿಂದ ಸೊಳ್ಳೆಗಳ ಸಂಖ್ಯೆ ಏರಿಕೆಯಾಗುತ್ತಿದೆ. ಈ ಮಧ್ಯೆ, ಖಾಸಗಿ ಮಾಲೀಕತ್ವದ ಜಮೀನುಗಳಲ್ಲಿ, ಮನೆ ಸಮೀಪ ಸ್ವಚ್ಛತೆ ಕಾಪಾಡದವರಿಗೆ ದಂಡ ವಿಧಿಸಲು ಬಿಬಿಎಂಪಿ ಮುಂದಾಗಿದೆ.

ಬೆಂಗಳೂರಿನಲ್ಲಿ ಹೆಚ್ಚಿದ ಡೆಂಗ್ಯೂ: ಎಚ್ಚರ, ಮನೆ ಸುತ್ತ ಸ್ವಚ್ಛತೆ ಕಾಪಾಡದಿದ್ದರೆ ಬೀಳಲಿದೆ ದಂಡ
ಬಿಬಿಎಂಪಿ ಸಿಬ್ಬಂದಿಯಿಂದ ಸೊಳ್ಳೆ ಉತ್ಪತ್ತಿ ಜಾಗಗಳಲ್ಲಿ ಔಷಧ ಸಿಂಪಡಣೆImage Credit source: PTI
Follow us
| Updated By: ಗಣಪತಿ ಶರ್ಮ

Updated on: Jul 05, 2024 | 9:43 AM

ಬೆಂಗಳೂರು, ಜುಲೈ 5: ಬೆಂಗಳೂರಿನಲ್ಲಿ ಡೆಂಗ್ಯೂ ಹಾವಳಿ ಮಿತಿ ಮೀರಿದ್ದು, ನೈರ್ಮಲ್ಯ ಕಾಪಾಡದಿರುವುದು ಸೊಳ್ಳೆಗಳ ಉತ್ಪತ್ತಿಗೆ ಕಾರಣವಾಗಿ ಮತ್ತಷ್ಟು ಸಮಸ್ಯೆಗೆ ಕಾರಣವಾಗುತ್ತಿದೆ. ಹೀಗಾಗಿ ಸ್ವಚ್ಛತೆ ಕಾಪಾಡದವರಿಗೆ ದಂಡ ವಿಧಿಸಲು ಬಿಬಿಎಂಪಿ ಮುಂದಾಗಿದೆ. ವೈಯಕ್ತಿಕ ಜಾಗಗಳಲ್ಲಿ ಮತ್ತು ಪ್ರದೇಶಗಳಲ್ಲಿ ಸೊಳ್ಳೆ ಉತ್ಪತ್ತಿಗೆ ಕಾರಣವಾಗುವಂತೆ ಮಾಡುವ ಸಾರ್ವಜನಿಕರಿಗೆ ದಂಡ‌ ವಿಧಿಸಲು ತೀರ್ಮಾನಿಸಲಾಗಿದೆ ಎಂದು ಬಿಬಿಎಂಪಿ ಮೂಲಗಳು ತಿಳಿಸಿವೆ.

ಖಾಸಗಿಯವರ ನಿವೇಶನ, ಜಾಗ ಅಥವಾ ಸ್ವತ್ತುಗಳಲ್ಲಿ‌ ಸೊಳ್ಳೆ ಉತ್ಪತ್ತಿ ಕಂಡು ಬಂದಲ್ಲಿ ಮೊದಲಿಗೆ ಎಚ್ಚರಿಕೆ ನೀಡಲಾಗುತ್ತದೆ. ಅದಕ್ಕೆ ಸ್ಪಂದಿಸದಿದ್ದರೆ ಮೊದಲ ಹಂತದಲ್ಲಿ 50 ರೂ. ದಂಡ ವಿಧಿಸಲಾಗುತ್ತದೆ. ನಂತರ ಆ ಸ್ಥಳ ಸ್ವಚ್ಛವಾಗುವ ತನಕ ಪ್ರತಿ ನಿತ್ಯ 15 ರೂ. ದಂಡ ವಿಧಿಸಲು ತೀರ್ಮಾನಿಸಲಾಗಿದೆ. ಕರ್ನಾಟಕ ಮುನ್ಸಿಪಲ್ ಕಾಯ್ದೆ ಪ್ರಕಾರ ಅನೈರ್ಮಲ್ಯಕ್ಕೆ ದಂಡದ ಮೊತ್ತ ಕಡೆಮೆ ಇದೆ. ಇದನ್ನು ಹೆಚ್ಚಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಬಿಬಿಎಂಪಿ ಸಿದ್ಧತೆ ನಡೆಸಿದೆ ಎಂದು ಬಿಬಿಎಂಪಿ ಮೂಲಗಳಿಂದ ಅಧಿಕೃತ ಮಾಹಿತಿ ದೊರೆತಿದೆ.

ಸೊಳ್ಳೆ ಉತ್ಪತ್ತಿಯ ಹಾಟ್​​ಸ್ಪಾಟ್​ಗಳು

ಒಂದೆಡೆ ಖಾಸಗಿಯವರಿಗೆ ದಂಡ ವಿಧಿಸಲು ಬಿಬಿಎಂಪಿ ಮುಂದಾಗಿದ್ದರೆ ಅತ್ತ ಸಾರ್ವಜನಿಕ ಸ್ಥಳಗಳೇ ಸೊಳ್ಳೆ ಉತ್ಪತ್ತಿಯ ಹಾಟ್​​ಸ್ಪಾಟ್​ಗಳಾಗಿ ಪರಿಣಮಿಸಿರುವುದು ಕಂಡುಬಂದಿದೆ. ನಗರದ ಬಹುತೇಕ ರಸ್ತೆಗಳಲ್ಲಿರುವ ಕಸದ ರಾಶಿ ಇದೀಗ ಸೊಳ್ಳೆಗಳ ಸ್ಪಾಟ್ ಆಗಿ ಬದಲಾಗಿದೆ. ಸಸ್ಯಕಾಶಿ ಲಾಲ್​​ಬಾಗ್ ಸುತ್ತಮುತ್ತ ಫುಟ್ ಪಾತ್​​ನಲ್ಲಿ ರಾಶಿ ರಾಶಿ ಕಸ ಬಿದ್ದಿದ್ದು, ಕಸದ ರಾಶಿ ಸೊಳ್ಳೆಗಳ ವಾಸಸ್ಥಾನವಾಗಿರುವುದರಿಂದ ಡೆಂಗ್ಯೂ ಮತ್ತಷ್ಟು ಹೆಚ್ಚಾಗುವ ಆತಂಕ ಎದುರಾಗಿದೆ.

ವಿಧಾನಸೌಧದ ಕೂಗಳತೆ ದೂರದಲ್ಲಿರುವ ಕೆಆರ್ ಸರ್ಕಲ್ ಬಳಿ ಪಾಲಿಕೆಯೇ ನಿರ್ಮಿಸಿದ್ದ ಕಾರಂಜಿ ಇದೀಗ ಸೊಳ್ಳೆಗಳ ಹಾಟ್​ಸ್ಪಾಟ್ ಆಗಿ ಬದಲಾಗಿದೆ. ಮಳೆ ನೀರು ನಿಂತಿರುವ ಜಾಗದಲ್ಲಿ ಸೊಳ್ಳೆಗಳ ಉತ್ಪತಿಯಾಗ್ತಿದ್ದು, ಕಾರಂಜಿಯನ್ನ ಸರಿಯಾಗಿ ನಿರ್ವಹಿಸದ ಪಾಲಿಕೆ ಹಾಗೂ ಸರ್ಕಾರಕ್ಕೆ ಜನರು ಹಿಡಿಶಾಪ ಹಾಕ್ತಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಹೆಚ್ಚಿದ ಡೆಂಗ್ಯೂ ಪ್ರಕರಣಗಳು: ಮೈಸೂರು, ಉತ್ತರ ಕನ್ನಡದಲ್ಲಿ ಸೋಂಕಿಗೆ ಮೊದಲ ಬಲಿ

ಇತ್ತ ನಗರದಲ್ಲಿ ಮನೆ ಮನೆ ಸರ್ವೇ ಮಾಡುತ್ತಿದ್ದೇವೆ ಎನ್ನುತ್ತಿರುವ ಪಾಲಿಕೆ ಅಧಿಕಾರಿಗಳನ್ನು ಈ ಬಗ್ಗೆ ಕೇಳಿದರೆ ಸಾರ್ವಜನಿಕ ಸ್ಥಳಗಳಲ್ಲಿ ಎಲ್ಲೆಲ್ಲಿ ಅಂಥ ಸ್ಥಳಗಳಿವೆಯೋ ಅಲ್ಲೆಲ್ಲ ನಿಗಾ ಇಟ್ಟಿದ್ದೇವೆ. ನಮ್ಮ ತಂಡ ಸ್ವಚ್ಚತೆ ಕಾಪಾಡಲು ಕ್ರಮ ಕೈಗೊಳ್ಳುತ್ತಿದೆ ಎಂದು ಸಬೂಬು ಹೇಳುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
‘ಪ್ರಕೃತಿ ವಿಕೋಪದಲ್ಲಿ ನೂರಾರು ಜನ ಸಾಯ್ತಾರೆ, ಯಾರಿಗೆ ಶಿಕ್ಷೆ ಸಿಗುತ್ತೆ?’
‘ಪ್ರಕೃತಿ ವಿಕೋಪದಲ್ಲಿ ನೂರಾರು ಜನ ಸಾಯ್ತಾರೆ, ಯಾರಿಗೆ ಶಿಕ್ಷೆ ಸಿಗುತ್ತೆ?’
ಡ್ರೋನ್​ ಕಣ್ಣಲ್ಲಿ ವಿಶ್ವದ ಅತಿ ದೊಡ್ಡ ಪುರಿ ಜಗನ್ನಾಥ ರಥಯಾತ್ರೆ: ವಿಡಿಯೋ
ಡ್ರೋನ್​ ಕಣ್ಣಲ್ಲಿ ವಿಶ್ವದ ಅತಿ ದೊಡ್ಡ ಪುರಿ ಜಗನ್ನಾಥ ರಥಯಾತ್ರೆ: ವಿಡಿಯೋ
ಮುಂಗಾರು ಮಳೆಗೆ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ; ನೂರಾರು ಜಲಪಾತಗಳ ಸೃಷ್ಟಿ
ಮುಂಗಾರು ಮಳೆಗೆ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ; ನೂರಾರು ಜಲಪಾತಗಳ ಸೃಷ್ಟಿ
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
‘ಯಜಮಾನ’ ತಂದುಕೊಟ್ಟ ಭರ್ಜರಿ ಲಾಭದ ಬಗ್ಗೆ ನಿರ್ಮಾಪಕರ ಮಾತು
‘ಯಜಮಾನ’ ತಂದುಕೊಟ್ಟ ಭರ್ಜರಿ ಲಾಭದ ಬಗ್ಗೆ ನಿರ್ಮಾಪಕರ ಮಾತು
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್