AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೆಂಗ್ಯೂ ಏರಿಕೆಯ ಅಸಲಿ ಕಾರಣ ಪತ್ತೆ, ಖಾಸಗಿ ಆಸ್ಪತ್ರೆಗಳಲ್ಲಿ ಟೆಸ್ಟಿಂಗ್ ಮಾಡಿಸಿದವರಿಗೆಲ್ಲ ಪಾಸಿಟಿವ್!

ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಇತ್ತ ಡೆಂಗ್ಯೂ ನಿಯಂತ್ರಿಸಲು ಹರಸಾಹಸ ಪಡುತ್ತಿದ್ದರೂ ಪ್ರಕರಣಗಳು ಇಳಿಕೆಯಾಗದೇ ಇರುವ ಕಾರಣ ಕಂಗಾಲಾದ ಪಾಲಿಕೆ ಇದೀಗ ಡೆಂಗ್ಯೂ ಪ್ರಕರಣಗಳ ಏರಿಕೆಗೆ ಅಸಲಿ ಕಾರಣವನ್ನು ಪತ್ತೆಹಚ್ಚಿದೆ. ಸುಖಾಸುಮ್ಮನೆ ಡೆಂಗ್ಯೂ ಪಾಸಿಟಿವ್ ರಿಪೋರ್ಟ್ ಕೊಡುವ ಖಾಸಗಿ ಆಸ್ಪತ್ರೆಗಳಿಗೆ ಬಿಸಿ ಮುಟ್ಟಿಸಲು ಸಜ್ಜಾಗಿದೆ.

ಡೆಂಗ್ಯೂ ಏರಿಕೆಯ ಅಸಲಿ ಕಾರಣ ಪತ್ತೆ, ಖಾಸಗಿ ಆಸ್ಪತ್ರೆಗಳಲ್ಲಿ ಟೆಸ್ಟಿಂಗ್ ಮಾಡಿಸಿದವರಿಗೆಲ್ಲ ಪಾಸಿಟಿವ್!
ಡೆಂಗ್ಯೂ ಏರಿಕೆಯ ಅಸಲಿ ಕಾರಣ ಪತ್ತೆ, ಖಾಸಗಿ ಆಸ್ಪತ್ರೆಗಳಲ್ಲಿ ಟೆಸ್ಟಿಂಗ್ ಮಾಡಿಸಿದವರಿಗೆಲ್ಲ ಪಾಸಿಟಿವ್!
ಶಾಂತಮೂರ್ತಿ
| Edited By: |

Updated on: Jul 24, 2024 | 7:59 AM

Share

ಬೆಂಗಳೂರು, ಜುಲೈ 24: ಆಗಾಗ ಮಳೆ, ಎಲ್ಲೆಂದರಲ್ಲಿ ನಿಂತ ಮಳೆ ನೀರಿನಿಂದ ಬೆಂಗಳೂರು ನಗರದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಅತ್ತ ಡೆಂಗ್ಯೂಗೆ ಕಡಿವಾಣ ಹಾಕಲು ಫಾಗಿಂಗ್, ಔಷಧ ಸಿಂಪಡಣೆ ಮಾಡಿದರೂ ಪ್ರಕರಣ ಹೆಚ್ಚಾಗುತ್ತಲೇ ಇರುವುದು ಪಾಲಿಕೆಯನ್ನು ಆತಂಕಕ್ಕೆ ದೂಡಿದೆ. ಮತ್ತೊಂದೆಡೆ, ಡೆಂಗ್ಯೂವಿನಿಂದ ಸಾವನ್ನಪ್ಪಿದವರು ಎಂದು ಯಾರನ್ನು ಗುರ್ತಿಸಲಾಗುತ್ತಿದೆಯೋ ಅವರ ರಿಪೋರ್ಟ್ ಸರ್ಕಾರಿ ಆಸ್ಪತ್ರೆಗಳಲ್ಲಿ ನೆಗೆಟಿವ್ ಬರುತ್ತಿರುವುದು ಅಚ್ಚರಿ ಹುಟ್ಟಿಸಿದೆ.

ಸದ್ಯ ಬೆಂಗಳೂರಿನಲ್ಲಿ ಇದುವರೆಗೆ ಡೆಂಗ್ಯೂವಿನಿಂದ ಮೂವರು ಮೃತಪಟ್ಟಿರುವುದು ಆರೋಗ್ಯ ಇಲಾಖೆಯಿಂದ ದೃಢಪಟ್ಟಿದೆ. ಆದರೆ ಇತ್ತೀಚೆಗೆ ಖಾಸಗಿ ಆಸ್ಪತ್ರೆಗಳಲ್ಲಿ ಯಾರೇ ಮೃತಪಟ್ಟರೂ ಅವರ ಡೆಂಗ್ಯೂ ಟೆಸ್ಟಿಂಗ್ ರಿಪೋರ್ಟ್ ಪಾಸಿಟಿವ್ ಬರುತ್ತಿದೆ. ಈ ಬಗ್ಗೆ ನಿಗಾ ಇಟ್ಟಿರುವ ಪಾಲಿಕೆಗೆ ಅಸಲಿ ಕಾರಣ ಬಯಲಾಗಿದೆ. ಡೆಂಗ್ಯೂ ಪತ್ತೆಗಾಗಿ ಖಾಸಗಿ ಆಸ್ಪತ್ರೆಗಳಲ್ಲಿ ನಡೆಸೋ ಎನ್​ಎಸ್1 ಟೆಸ್ಟ್​​ನಲ್ಲಿ ಬಹುತೇಕ ಪಾಸಿಟಿವ್ ರಿಪೋರ್ಟ್ ಬರುತ್ತಿದೆ. ಇತ್ತ ಅದೇ ಮಾದರಿಯನ್ನು ಸರ್ಕಾರಿ ಲ್ಯಾಬ್​​ನಲ್ಲಿ ಟೆಸ್ಟ್ ಮಾಡಿದಾಗ ನೆಗೆಟಿವ್ ಬರುತ್ತಿದ್ದು, ಪಾಸಿಟಿವ್ ರಿಪೋರ್ಟ್ ಕೊಟ್ಟ ಆಸ್ಪತ್ರೆಗಳ ವಿರುದ್ಧ ಕ್ರಮಕ್ಕೆ ಪಾಲಿಕೆ ಸಜ್ಜಾಗಿದೆ.

ಸದ್ಯ ಯಾವ್ಯಾವ ಖಾಸಗಿ ಆಸ್ಪತ್ರೆಗಳು ಮೃತಪಟ್ಟವರಿಗೆ ಪಾಸಿಟಿವ್ ರಿಪೋರ್ಟ್ ನೀಡಿವೆ ಎಂಬ ಬಗ್ಗೆ ನಿಗಾ ಇಟ್ಟಿರುವ ಪಾಲಿಕೆ, ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆಗೆ ಮನವಿ ಮಾಡಿದೆ. ಅಲ್ಲದೇ ಟೆಸ್ಟ್ ಮೂಲಕ ಜನರಿಗೆ ಆತಂಕ ಮೂಡಿಸದಂತೆ ಖಾಸಗಿ ಆಸ್ಪತ್ರೆಗಳಿಗೆ ಬಿಸಿ ಮುಟ್ಟಿಸಲು ಮುಂದಾಗಿದೆ.

ಇದನ್ನೂ ಓದಿ: ಬೆಂಗಳೂರು: ನಗರಕ್ಕೆ ನಿಫಾ ವೈರಸ್ ಭೀತಿ, ಡೆಂಗ್ಯೂ ಮಧ್ಯೆ ಮತ್ತೊಂದು ಆತಂಕ

ಒಟ್ಟಿನಲ್ಲಿ ಒಂದೆಡೆ ಡೆಂಗ್ಯೂ ಪ್ರಕರಣ ಏರಿಕೆಯಾಗುತ್ತಿದ್ದರೆ, ಮತ್ತೊಂದೆಡೆ ಕೆಲ ಖಾಸಗಿ ಆಸತ್ರೆಗಳ ಯಡವಟ್ಟಿನಿಂದ ಜನರು ಆತಂಕಪಡುವಂತಾಗಿದೆ. ಸದ್ಯ ಈಗ ಅಲರ್ಟ್ ಆಗಿರುವ ಪಾಲಿಕೆ ಆರೋಗ್ಯ ಇಲಾಖೆಯ ಮೊರೆಹೋಗಿದ್ದು, ಪಾಸಿಟಿವ್ ರಿಪೋರ್ಟ್ ಕೊಟ್ಟ ಆಸ್ಪತ್ರೆಗಳ ಮೇಲೆ ಯಾವ ರೀತಿ ಕ್ರಮ ಕೈಗೊಳ್ಳಲಿದೆ ಎಂದು ಕಾದುನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್