AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ರಕರ್ತರ ಬೇಡಿಕೆ ಈಡೇರಿಕೆಗೆ ಇಲಾಖೆ ಬದ್ದ: ವಾರ್ತಾ ಆಯುಕ್ತ ವಿಕಾಸ ಸುರಳಕರ ಭರವಸೆ

ಮೂರು ತಿಂಗಳಿಂದ ಬಾಕಿ ಇದ್ದ ನಿವೃತ್ತ ಪತ್ರಕರ್ತರ ಮಾಸಾಶನಕ್ಕೆ ಸರ್ಕಾರ ಒಪ್ಪಿಗೆ ನೀಡಿದ್ದು, ಶೀಘ್ರವೇ ಮಾಸಾಶನ ಬಿಡುಗಡೆ ಮಾಡಲಾಗುವುದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಸುರಳಕರ ವಿಕಾಸ ಕಿಶೋರ ಅವರು ಭರವಸೆ ನೀಡಿದ್ದಾರೆ.

ಪತ್ರಕರ್ತರ ಬೇಡಿಕೆ ಈಡೇರಿಕೆಗೆ ಇಲಾಖೆ ಬದ್ದ: ವಾರ್ತಾ ಆಯುಕ್ತ ವಿಕಾಸ ಸುರಳಕರ ಭರವಸೆ
ಪತ್ರಕರ್ತರ ಬೇಡಿಕೆ ಈಡೇರಿಕೆಗೆ ಇಲಾಖೆ ಬದ್ದ: ವಾರ್ತಾ ಆಯುಕ್ತ ವಿಕಾಸ ಸುರಳಕರ ಭರವಸೆ
ಕಿರಣ್ ಹನುಮಂತ್​ ಮಾದಾರ್
|

Updated on:Jun 14, 2024 | 9:39 PM

Share

ಬೆಂಗಳೂರು, ಜೂ.14: ರಾಜ್ಯದ ಪತ್ರಕರ್ತ(Journalists)ರಿಗೆ ತ್ವರಿತ ಬಸ್ ಪಾಸ್ ನೀಡಿಕೆಯ ಸಂಬಂಧ ಶೀಘ್ರವಾಗಿ ಕ್ರಮ ವಹಿಸಲಾಗುವುದು. ಮೂರು ತಿಂಗಳಿಂದ ಬಾಕಿ ಇದ್ದ ನಿವೃತ್ತ ಪತ್ರಕರ್ತರ ಮಾಸಾಶನಕ್ಕೆ ಸರ್ಕಾರ ಒಪ್ಪಿಗೆ ನೀಡಿದ್ದು, ಶೀಘ್ರವೇ ಮಾಸಾಶನ ಬಿಡುಗಡೆ ಮಾಡಲಾಗುವುದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಸುರಳಕರ ವಿಕಾಸ ಕಿಶೋರ ಅವರು ಭರವಸೆ ನೀಡಿದ್ದಾರೆ.

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಅವರ ನೇತೃತ್ವದಲ್ಲಿ ಶುಕ್ರವಾರ(ಜೂ.14) ವಾರ್ತಾ ಇಲಾಖೆಯಲ್ಲಿ ಭೇಟಿಯಾಗಿದ್ದ ನಿಯೋಗಕ್ಕೆ ಮಾಹಿತಿ ನೀಡಿದರು. ಹಿರಿಯ ಪತ್ರಕರ್ತರ ಮಾಸಾಶನಕ್ಕೆ ಇರುವ ಅಡೆ ತಡೆಗಳನ್ನು ಆದಷ್ಟು ಬೇಗ ನಿವಾರಣೆ ಮಾಡಬೇಕು. ಬಾಕಿ ಇರುವ ಪತ್ರಕರ್ತರ ಮಾಸಾಶನ ಅರ್ಜಿಗಳನ್ನು ಪರಿಗಣಿಸಿ ಮಾಸಾಶನ ಮಂಜೂರು ಮಾಡಬೇಕು. ಮಾನ್ಯತೆ ಪಡೆದ ಪತ್ರಕರ್ತರ ಬಸ್ ಪಾಸ್ ಕಾರ್ಡ್‌ಗಳನ್ನು ಕೂಡಲೇ ಕೊಡಬೇಕು ಎಂಬಿತ್ಯಾಧಿ ಬೇಡಿಕೆಗಳ ಬಗ್ಗೆ ಆಯುಕ್ತರ ಜೊತೆಗೆ ಚರ್ಚೆ ನಡೆಸಲಾಯಿತು.

ಇದನ್ನೂ ಓದಿ:ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಪತ್ರಕರ್ತರ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ ಅವರ ಬಳಿಯೂ ಪ್ರಸ್ತಾಪಿಸಿ ಮನವಿ ಸಲ್ಲಿಸಿದ್ದು, ಅವರು ವಾರ್ತಾ ಇಲಾಖೆ ಕಾರ್ಯದರ್ಶಿ ಅವರ ಜೊತೆಗೆ ಚರ್ಚೆ ನಡೆಸಿದ್ದಾರೆ ಎನ್ನುವುದನ್ನು ಗಮನಕ್ಕೆ ತರಲಾಯಿತು. ಸಂಘದ ಬೇಡಿಕೆಗಳನ್ನು ಸಹಾನುಭೂತಿಯಿಂದ ಆಲಿಸಿದ ಆಯುಕ್ತರಾದ ವಿಕಾಸ ಸುರಳಕರ, ಪತ್ರಕರ್ತರ ಬೇಡಿಕೆಗಳನ್ನು ಈಡೇರಿಸಲು ಇಲಾಖೆ ಬದ್ಧವಾಗಿದ್ದು, ಬೇಡಿಕೆಗಳನ್ನು ಶೀಘ್ರದಲ್ಲೇ ಅನುಷ್ಠಾನಕ್ಕೆ ತರಲಾಗುವುದು ಎಂದು ನಿಯೋಗಕ್ಕೆ ಭರವಸೆ ನೀಡಿದರು. ನಿಯೋಗದಲ್ಲಿ ವಿಜಯಪುರ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಚೂರಿ, ಹಿರಿಯ ಪತ್ರಕರ್ತ ಅಲ್ಲಮಪ್ರಭು ಮಲ್ಲಿಕಾರ್ಜುನಮಠ, ಚಿತ್ರದುರ್ಗದ ಹಿರಿಯ ಪತ್ರಕರ್ತ ಹೆಂಜಾರಪ್ಪ, ಬೆಂಗಳೂರು ನಗರ ಘಟಕದ ಶಿವರಾಜು ಮತ್ತಿತರರಿದ್ದರು

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:37 pm, Fri, 14 June 24

Follow Us
Kiran Hanumant Madar
Kiran Hanumant Madar

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ