AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ನಿರ್ಮಾಣವಾಗಲಿದೆ ಲಾಲ್‌ಬಾಗ್‌, ಕಬ್ಬನ್ ಪಾರ್ಕ್​ಗಿಂತಲೂ ಅತಿದೊಡ್ಡ ಪಾರ್ಕ್; ತೋಟಗಾರಿಕೆ ಇಲಾಖೆ ಹೊಸ ಪ್ಲಾನ್

ಬೆಂಗಳೂರಿನ ಸುತ್ತಮುತ್ತಲಿನ ಸರ್ಕಾರಿ ಜಮೀನಿನಲ್ಲಿ‌ ಲಾಲ್‌ಬಾಗ್‌, ಕಬ್ಬನ್ ಪಾರ್ಕ್ಗಿಂತಲೂ ದೊಡ್ಡ ಪಾರ್ಕ್ ನಿರ್ಮಿಸಲು ತೋಟಗಾರಿಕಾ ಇಲಾಖೆ ನಿರ್ಧರಿಸಿದೆ. ತೋಟಗಾರಿಕಾ ಸಚಿವ ಮುನಿರತ್ನ ಪಾರ್ಕ್ ನಿರ್ಮಾಣಕ್ಕೆ ಸ್ಥಳ ಗುರುತಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ನಿರ್ಮಾಣವಾಗಲಿದೆ ಲಾಲ್‌ಬಾಗ್‌, ಕಬ್ಬನ್ ಪಾರ್ಕ್​ಗಿಂತಲೂ ಅತಿದೊಡ್ಡ ಪಾರ್ಕ್; ತೋಟಗಾರಿಕೆ ಇಲಾಖೆ ಹೊಸ ಪ್ಲಾನ್
ಕಬ್ಬನ್​ ಪಾರ್ಕ್​ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on:Sep 29, 2021 | 7:03 AM

Share

ಬೆಂಗಳೂರು: ಸಿಲಿಕಾನ್ ಸಿಟಿ, ಗಾರ್ಡನ್ ಸಿಟಿ ಬೆಂಗಳೂರಿನಲ್ಲಿ ದೊಡ್ಡ ಪಾರ್ಕ್ ಯಾವುದಾದರೂ ಇದೆಯಾ ಎಂದರೆ ಮೊದಲು ನೆನಪಾಗುವುದೇ ಲಾಲ್‌ಬಾಗ್‌, ಕಬ್ಬನ್ ಪಾರ್ಕ್ ಆದ್ರೆ ನಗರದಲ್ಲಿ ಅವುಗಳಿಗಿಂತಲೂ ಅತಿದೊಡ್ಡ ಪಾರ್ಕ್ ನಿರ್ಮಾಣಕ್ಕೆ ಪ್ಲಾನ್ ಮಾಡಿಕೊಳ್ಳಲಾಗಿದೆ. ಅಹಮದಾಬಾದ್‌ ಸೈನ್ಸ್ ಸಿಟಿ ಪಾರ್ಕ್ ಮಾದರಿಯಂತೆ ದೊಡ್ಡ ಉದ್ಯಾನ ನಿರ್ಮಿಸಲು ತೋಟಗಾರಿಕೆ ಇಲಾಖೆಯ ಸಚಿವ ಮುನಿರತ್ನ ಮುಂದಾಗಿದ್ದಾರೆ.

ಬೆಂಗಳೂರಿನ ಸುತ್ತಮುತ್ತಲಿನ ಸರ್ಕಾರಿ ಜಮೀನಿನಲ್ಲಿ‌ ಲಾಲ್‌ಬಾಗ್‌, ಕಬ್ಬನ್ ಪಾರ್ಕ್ಗಿಂತಲೂ ದೊಡ್ಡ ಪಾರ್ಕ್ ನಿರ್ಮಿಸಲು ತೋಟಗಾರಿಕಾ ಇಲಾಖೆ ನಿರ್ಧರಿಸಿದೆ. ತೋಟಗಾರಿಕಾ ಸಚಿವ ಮುನಿರತ್ನ ಪಾರ್ಕ್ ನಿರ್ಮಾಣಕ್ಕೆ ಸ್ಥಳ ಗುರುತಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಹಾಗೂ ಪಾರ್ಕ್ ನಿರ್ಮಾಣ ಬಗ್ಗೆ DPR ಸಿದ್ಧಪಡಿಸಲು‌ ಸೂಚಿಸಿದ್ದಾರೆ. ಈ ಸಂಬಂಧ ಅಕ್ಟೋಬರ್ 4ರಂದು ವಿಧಾನಸೌಧದಲ್ಲಿ ಸಭೆ ನಿಗದಿ ಮಾಡಲಾಗಿದೆ. ಬಹುತೇಕ ಬೆಂಗಳೂರು ಉತ್ತರ ಭಾಗದಲ್ಲಿ ಪಾರ್ಕ್ ನಿರ್ಮಾಣವಾಗಲಿದೆ. ನಂದಿ ಹಿಲ್ಸ್, ದೊಡ್ಡಬಳ್ಳಾಪುರ ಸುತ್ತಮುತ್ತ ಸೇರಿದಂತೆ 4 ಕಡೆ ಬೇರೆ ಬೇರೆ ವಿಸ್ತೀರ್ಣದಲ್ಲಿ ಪಾರ್ಕ್ ನಿರ್ಮಾಣಕ್ಕೆ ಚಿಂತನೆ ನಡೆದಿದೆ. ಆದ್ರೆ ಸೋಮವಾರದಂದು ನಡೆಯುವ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಗುತ್ತೆ.

ಹೇಗಿರಲಿದೆ ಬೆಂಗಳೂರಿನ ಅತಿ ದೊಡ್ಡ ಪಾರ್ಕ್ ಗುಜರಾತ್ನ ಅಹಮದಾಬಾದ್ನಲ್ಲಿ 260 ಎಕರೆ ಜಾಗದಲ್ಲಿರುವ ಸೈನ್ಸ್ ಸಿಟಿ ಪಾರ್ಕ್ ಮಾದರಿಯಂತೆ ಪಾರ್ಕ್ ನಿರ್ಮಿಸುವ ಉದ್ದೇಶವನ್ನು ತೋಟಗಾರಿಕೆ ಇಲಾಖೆ ಹೊಂದಿದೆ. ಅದೇ ಮಾದರಿಯಲ್ಲಿ ಬೆಂಗಳೂರಿನಲ್ಲಿ‌ ಉದ್ಯಾನ ನಿರ್ಮಿಸಲು ತೀರ್ಮಾನ ಮಾಡಿದೆ. ನಂದಿ ಹಿಲ್ಸ್, ದೊಡ್ಡಬಳ್ಳಾಪುರ ಸುತ್ತಮುತ್ತ ಸೇರಿ ಒಟ್ಟು ನಾಲ್ಕು ಕಡೆ ಬೇರೆ ಬೇರೆ ವಿಸ್ತೀರ್ಣದಲ್ಲಿ ಸರ್ಕಾರಿ ಜಮೀನಿನಲ್ಲಿ ಪಾರ್ಕ್ ನಿರ್ಮಾಣದ ಬಗ್ಗೆ ತೋಟಗಾರಿ ಇಲಾಖೆ ಪ್ಲಾನ್ ಮಾಡಿಕೊಂಡಿದೆ.

ಇದನ್ನೂ ಓದಿ: ಲಾಲ್‌ಬಾಗ್‌ನಲ್ಲಿ ಅಕಾಡೆಮಿ ಉದ್ಘಾಟಿಸಿ, MTR ‌ನಲ್ಲಿ ಬೊಂಬಾಟ್ ಬ್ರೇಕ್​ಫಾಸ್ಟ್ ಮಾಡಿದ BSY

Karnataka Weather Today: ರಾಜ್ಯದಲ್ಲಿ ನಾಳೆಯಿಂದ ಮಳೆ ಹೆಚ್ಚಳ; ಉತ್ತರ ಕರ್ನಾಟಕದಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಣೆ

Published On - 7:03 am, Wed, 29 September 21

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್