AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BDA ಮೇಲೆ ACB ದಾಳಿ ಪ್ರಕರಣ; ಉದ್ಯಮಿಗಳಿಂದ ಸಾಲು ಸಾಲು ದೂರು

ದಾಳಿ ನಡೆಸಿರುವ ಎಸಿಬಿ ಅಧಿಕಾರಿಗಳು ಹಳೆ ದಾಖಲಾತಿಗಳನ್ನು ಕೆದಕುತ್ತಿದ್ದಾರೆ. 2020, 2019, 2018, 2017 ರ ವರೆಗಿನ ದಾಖಲಾತಿಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಒಂದೊಂದು ಫೈಲ್​ಗೂ ಒಂದೊಂದು ಎಫ್ಐಆರ್ ದಾಖಲಿಸಲು ಎಸಿಬಿ ತೀರ್ಮಾನಿಸಿದೆ.

BDA ಮೇಲೆ ACB ದಾಳಿ ಪ್ರಕರಣ; ಉದ್ಯಮಿಗಳಿಂದ ಸಾಲು ಸಾಲು ದೂರು
ಸಾಂಕೇತಿಕ ಚಿತ್ರ
TV9 Web
| Edited By: |

Updated on:Nov 22, 2021 | 9:32 AM

Share

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಕಚೇರಿ ಮೇಲೆ ಎಸಿಬಿ ಅಧಿಕಾರಿಗಳ ದಾಳಿ ಇನ್ನು ಸಂಪೂರ್ಣವಾಗಿ ಅಂತ್ಯವಾಗಿಲ್ಲ. ಸದ್ಯ ಅಧಿಕಾರಿಗಳು ಸರ್ಕಾರಿ ರಜೆ ಅಂತ ಗ್ಯಾಪ್ ಕೊಟ್ಟಿದ್ದು, ಬಿಡಿಎ ಬೀಗದ ಕೀ ಅವರ ಬಳಿಯೇ ಇದೆ. ನವೆಂಬರ್ 25ರ ವರೆಗೆ ಸರ್ಚ್ ವಾರೆಂಟ್ ಹೊಂದಿರುವ ಎಸಿಬಿ, ಅವಶ್ಯಕತೆ ಇದ್ದರೆ ಮತ್ತೆ ಸರ್ಚ್ ವಾರೆಂಟ್ ಹೆಚ್ಚುವರಿ ದಿನ ನೀಡುವಂತೆ ಕೋರ್ಟ್​ಗೆ ಮನವಿ ಮಾಡಲಿದ್ದಾರೆ. ಮೂವರು ಎಸ್ಪಿಗಳ ನೇತ್ರತ್ವದಲ್ಲಿ ನಡೆಯುತ್ತಿರುವ ಈ ದಾಳಿ ನಾಳೆ ಬೆಳಿಗ್ಗೆಯಿಂದ ಮತ್ತೆ ಮುಂದುವರೆಯಲಿದೆ.

ಬಿಡಿಎ ಅಧಿಕಾರಿಗಳಿಂದ ವಿವಿಧ ಮಾದರಿಯಲ್ಲಿ ಜನರಿಗೆ ಹಾಗು ಸರ್ಕಾರಕ್ಕೆ ವಂಚನೆಯಾಗಿದೆ. ಬ್ರೋಕರ್​ಗಳ ಮೂಲಕ ಹಣ ಪಡೆದು ವಂಚಿಸಿದ್ದಾರೆ. ಈ ಹಿಂದೆ ಅಂದರೆ 2000ನೇ ಇಸವಿ ಹಾಗೂ ಅದಕ್ಕಿಂತ ಹಿಂದೆ ಮಾರಿದ್ದ ಸೈಟ್​ಗಳನ್ನ ಮತ್ತೆ ಮತ್ತೆ ಮಾರಾಟ ಮಾಡಿದ್ದಾರೆ. ಪ್ರೈಮ್ ಏರಿಯಾದಲ್ಲಿ ನೀಡಬೇಕಿರುವ ಸೈಟ್ ಬೇರೆಯವರಿಗೆ ನೀಡಿ ಅದಕ್ಕೆ ಪ್ರತಿಯಾಗಿ ಬೇರೆಡೆ ಸೈಟ್ ನೀಡಲಾಗಿದೆ. ಅರ್ಹತೆ ಇಲ್ಲದವರಿಗೂ ಸೈಟ್ ನೀಡಲಾಗಿದೆ. ಭೂ ಸ್ವಾಧೀನ ಪಡೆಯುವಾಗಲೂ ಅಕ್ರಮ ಎಸೆದಿದ್ದಾರೆ. ಹೀಗೆ ಹಣ ಮಾಡುವ ಉದ್ದೇಶಕ್ಕೆ ಸರ್ಕಾರಕ್ಕೆ ಮತ್ತು ಜನರಿಗೆ ವಂಚಿಸಿರುವ ಬಗ್ಗೆ ದಾಖಲಾತಿ ಲಭ್ಯವಾಗಿದೆ.

ದಾಳಿ ನಡೆಸಿರುವ ಎಸಿಬಿ ಅಧಿಕಾರಿಗಳು ಹಳೆ ದಾಖಲಾತಿಗಳನ್ನು ಕೆದಕುತ್ತಿದ್ದಾರೆ. 2020, 2019, 2018, 2017 ರ ವರೆಗಿನ ದಾಖಲಾತಿಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಒಂದೊಂದು ಫೈಲ್​ಗೂ ಒಂದೊಂದು ಎಫ್ಐಆರ್ ದಾಖಲಿಸಲು ಎಸಿಬಿ ತೀರ್ಮಾನಿಸಿದೆ. ಪ್ರತಿಯೊಂದು ಕೇಸ್ ಅತಿ ಮುಖ್ಯ ಅಂತ ಎಸಿಬಿ ಅಧಿಕಾರಿಗಳು ಹೇಳುತ್ತಿದ್ದಾರೆ. ಅಂದಾಜಿನ ಪ್ರಕಾರ ನಲವತ್ತರಿಂದ ಐವತ್ತಕ್ಕೂ ಹೆಚ್ಚು ಎಫ್ಐಆರ್ ದಾಖಲಾಗುವ ಸಾಧ್ಯತೆಯಿದೆ.

ಸಾಲು ಸಾಲು ದೂರುಗಳು ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ ಬೆನ್ನಲ್ಲೆ ಬಿಡಿಎ ವಿರುದ್ಧ ಸಾಲು ಸಾಲು ದೂರುಗಳು ಬರುತ್ತಿವೆ. ಬಿಡಿಎನಿಂದ ವಂಚಿತರಾದ ಉದ್ಯಮಿಗಳು, ಸಾರ್ವಜನಿಕರು ದೂರು ನೀಡುತ್ತಿದ್ದಾರೆ. ದಾಖಲೆಗಳ ಸಹಿತ ವಂಚಿತರಾದರು ದೂರು ನೀಡುತ್ತಿದ್ದಾರೆ. ಇದುವರೆಗೆ ಸುಮಾರು ಮೂವತ್ತಕ್ಕು ಹೆಚ್ಚು ದೂರು ಬಂದಿವೆ.

ಇದನ್ನೂ ಓದಿ

ಎಸಿಬಿ ದಾಳಿ ಸ್ವಾಗತಿಸುವೆ, ದಾಖಲೆಗಳ ನೀಡಿ ಸಹಕರಿಸುವೆ, ಸರಿಯಾದ ದಿಕ್ಕಿನಲ್ಲಿ ತನಿಖೆ ನಡೆಯಲಿ -ಬಿಡಿಎ ಅಧ್ಯಕ್ಷ ವಿಶ್ವನಾಥ್

ಬಿಡಿಎ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳ ದಾಳಿ: 75 ಕೋಟಿ ಮೌಲ್ಯದ 6 ನಿವೇಶನಗಳ ನಕಲಿ ದಾಖಲೆ ಪತ್ತೆ

Published On - 9:31 am, Mon, 22 November 21

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ