AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಂ ಬಗ್ಗೆ ಅವಹೇಳನಾಕಾರಿ ಹೇಳಿಕೆ: ಪ.ಬಂಗಾಳ ಮೂಲದ ವ್ಯಕ್ತಿ ವಿರುದ್ಧ ಬೆಂಗಳೂರಿನ ಎಫ್​ಐಆರ್

ಫೇಸ್​ಬುಕ್​ ಲೈವ್​ನಲ್ಲಿ ಮುಸ್ಲಿಂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ಹಿನ್ನಲೆ ಪಶ್ಚಿಮ ಬಂಗಾಳ ಮೂಲದ ಬಿಜನ್ ದಾಸ್ ಎಂಬುವವನ ವಿರುದ್ಧ ಬೆಂಗಳೂರಿನ ಆಡುಗೋಡಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ (FIR) ದಾಖಲಾಗಿದೆ.

ಮುಸ್ಲಿಂ ಬಗ್ಗೆ ಅವಹೇಳನಾಕಾರಿ ಹೇಳಿಕೆ: ಪ.ಬಂಗಾಳ ಮೂಲದ ವ್ಯಕ್ತಿ ವಿರುದ್ಧ ಬೆಂಗಳೂರಿನ ಎಫ್​ಐಆರ್
ಪ್ರಾತಿನಿಧಿಕ ಚಿತ್ರ
Jagadisha B
| Edited By: |

Updated on: Aug 02, 2023 | 12:13 PM

Share

ಬೆಂಗಳೂರು, ಆ.2: ಫೇಸ್​ಬುಕ್​ ಲೈವ್​ನಲ್ಲಿ ಮುಸ್ಲಿಂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ಹಿನ್ನಲೆ ಪಶ್ಚಿಮ ಬಂಗಾಳ(West Bangal) ಮೂಲದ ಬಿಜನ್ ದಾಸ್ ಎಂಬುವವನ ವಿರುದ್ಧ ಬೆಂಗಳೂರಿನ ಆಡುಗೋಡಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ (FIR) ದಾಖಲಾಗಿದೆ. ಹೌದು ಬಿಜನ್ ದಾಸ್ ಎಂಬುವವನ ಸಾಮಾಜಿಕ ಜಾಲತಾಣದಲ್ಲಿ ‘ಮುಸ್ಲಿಮರೆಲ್ಲರೂ ಉಗ್ರರು, ಜಿಹಾದಿಗಳು ಎಂದು ಆಕ್ಷೇಪಾರ್ಹ ಹೇಳಿಕೆ ನೀಡಿದ್ದು, ಜೊತೆಗೆ ಮುಸ್ಲಿಂ ಧರ್ಮ, ಧರ್ಮಗುರುಗಳ ವಿರುದ್ಧ ಹಾಗೂ ಹೆಣ್ಣುಮಕ್ಕಳ ಚಾರಿತ್ರ್ಯದ ವಿರುದ್ದ ಮಾತನಾಡಿರುವ ಕುರಿತು ಆರೋಪಿಸಿ ಆಶೀಕ್ ಹುಸೇನ್ ಎಂಬುವವರು ಇತನ ಮೇಲೆ ದೂರು ನೀಡಿದ್ದಾರೆ.

ಗ್ಯಾಸ್ ರೀಫಿಲಿಂಗ್ ಅಡ್ಡೆ ಮೇಲೆ ಏಕಾಏಕಿ ಕುಣಿಗಲ್ ಪೊಲೀಸರ ದಾಳಿ; 269 ಗ್ಯಾಸ್ ಸಿಲಿಂಡರ್ ವಶ

ತುಮಕೂರು: ಗ್ಯಾಸ್ ರೀಫಿಲಿಂಗ್ ಅಡ್ಡೆ ಮೇಲೆ ಏಕಾಏಕಿ ಕುಣಿಗಲ್ ಪೊಲೀಸರು ದಾಳಿ ಮಾಡಿದ್ದು, ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ವಿವಿಧ ಕಂಪನಿಯ 269 ಗ್ಯಾಸ್ ಸಿಲಿಂಡರ್​ನ್ನು ವಶಕ್ಕೆ ಪಡೆದಿದ್ದಾರೆ. ಇನ್ನು ಈ ಗ್ಯಾಸ್ ಸಿಲಿಂಡರ್​ಗಳನ್ನು ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಬೋರಲಿಂಗನಪಾಳ್ಯದ ತೋಟದ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದರು. ಖಚಿತ ಮಾಹಿತಿ ಮೇರೆಗೆ ಕುಣಿಗಲ್ ಪೊಲೀಸ್ ಇನ್ಸ್ಪೆಕ್ಟರ್ ಗುರುಪ್ರಸಾದ್ ನೇತೃತ್ವದಲ್ಲಿ ದಾಳಿ ಮಾಡಿದ್ದರು. ಈ ವೇಳೆ ಪೊಲೀಸರನ್ನ ಕಂಡು ಆರೋಪಿ ಕುಮಾರ್ ಎಂಬಾತ ಎಸ್ಕೇಪ್ ಆಗಿದ್ದಾನೆ.

ಇದನ್ನೂ ಓದಿ:ಲಿಂಗಾಯತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧದ ಮಾನನಷ್ಟ ಮೊಕದ್ದಮೆ ಅರ್ಜಿ ವಜಾ

ಲಕ್ಷಾಂತರ ಮೌಲ್ಯದ ವಿವಿಧ ಕಂಪನಿಯ 269 ಗ್ಯಾಸ್ ಸಿಲಿಂಡರ್ ವಶಕ್ಕೆ

ಇನ್ನು ದಾಳಿ ಮಾಡಿದ ಪೊಲೀಸರು ತೋಟದ ಮನೆಯ ಬೀಗ ಹೊಡೆದು ಪರಿಶೀಲನೆ ನಡೆಸಿದಾಗ ಅಕ್ರಮವಾಗಿ ಗ್ಯಾಸ್ ರೀಫಿಲಿಂಗ್ ಮಾಡುತ್ತಿರುವುದು ಪತ್ತೆಯಾಗಿದೆ. ದಾಳಿ ವೇಳೆ ಲಕ್ಷಾಂತರ ಮೌಲ್ಯದ ವಿವಿಧ ಕಂಪನಿಯ 269 ಗ್ಯಾಸ್ ಸಿಲಿಂಡರ್​ಗಳು ಸಿಕ್ಕಿದ್ದು, ಜೊತೆಗೆ ಒಂದು ಬೋಲೆರೋ ವಾಹನ, ಗ್ಯಾಸ್ ರೀಫಿಲಿಂಗ್ ವಸ್ತುಗಳು ವಶ ಪಡೆದು, ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​