ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದಾಖಲಾಯ್ತು ಎಫ್​ಐಆರ್; ಕಾರಣ?

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್(Basanagouda Patil Yatnal) ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್(FIR) ದಾಖಲಾಗಿದೆ. ಹೌದು, ರಾಹುಲ್​ ಗಾಂಧಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನಲೆ ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ಎಸ್‌‍. ಮನೋಹರ್‌ ನೇತೃತ್ವದ ನಿಯೋಗವು ಯತ್ನಾಳ್​ ವಿರುದ್ಧ ತುರ್ತಾಗಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಿದೆ.

ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದಾಖಲಾಯ್ತು ಎಫ್​ಐಆರ್; ಕಾರಣ?
ಬಸನಗೌಡ ಪಾಟೀಲ್ ಯತ್ನಾಳ್
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 18, 2024 | 10:17 PM

ಬೆಂಗಳೂರು, ಸೆ.18: ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್(Basanagouda Patil Yatnal) ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್(FIR) ದಾಖಲಾಗಿದೆ. ಹೌದು, ಸಂಸದ ರಾಹುಲ್ ಗಾಂಧಿ ಜನನದ ಬಗ್ಗೆ ಹೇಳಿಕೆ ನೀಡಿದ್ದ ಯತ್ನಾಳ್ ವಿರುದ್ದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನೋಹರ್ ಅವರು ದೂರು ನೀಡಿದ್ದು, ಇದೀಗ ಎಫ್ಐಆರ್ ದಾಖಲಿಸಲಾಗಿದೆ.

ದೂರಿನಲ್ಲೇನಿದೆ?

ಹೌದು, ಬಸವನಗೌಡ ಪಾಟೀಲ್‌ ಯತ್ನಾಳ್‌ ಪ್ರತಿ ಬಾರಿಯೂ ಕೇವಲ ತನ್ನ ರಾಜಕೀಯ ಹಾಗೂ ಪ್ರಚಾರಕ್ಕೋಸ್ಕರ ಕಾಂಗ್ರೆಸ್‌‍ ಪಕ್ಷದ ನಾಯಕರ ವಿರುದ್ಧ ಟೀಕೆ ನಡೆಸುತ್ತಿರುತ್ತಾರೆ. ಜೊತೆಗೆ ರಾಹುಲ್‌ ಗಾಂಧಿ ಅವರ ಬಗ್ಗೆ ಈಗಾಗಲೆ ಅನೇಕ ಬಾರಿ ಇಂತಹ ಟೀಕೆಗಳನ್ನು ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಈಗಾಗಲೇ ತಮಗೆ ದೂರನ್ನು ಸಲ್ಲಿಸಿದ್ದೇವೆ. ಆದರೂ ಸಹ ಪೊಲೀಸ್‌‍ ಇಲಾಖೆ ಬಸವನಗೌಡ ಪಾಟೀಲ್‌ ಯತ್ನಾಳ್‌ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ. ಆದ್ದರಿಂದ ವೈಯಕ್ತಿಕವಾಗಿ ರಾಹುಲ್‌ಗಾಂಧಿರವರ ವಿರುದ್ಧ ನಿಂದನೆ ಹಾಗೂ ಟೀಕೆಯನ್ನು ಮಾಡುತ್ತಿದ್ದಾರೆ.

ಇದನ್ನೂ ಓದಿ:ಮಸೀದಿ ಮುಂದೆ ಡ್ಯಾನ್ಸ್ ಮಾಡಬಾರದು ಎಂದರೆ ಪಾಕಿಸ್ತಾನ, ಬಾಂಗ್ಲಾಕ್ಕೆ ಹೋಗಲಿ; ಬಸನಗೌಡ ಯತ್ನಾಳ್ ವಾಗ್ದಾಳಿ

ತುರ್ತಾಗಿ ಕಾನೂನು ಕ್ರಮ ಕೈಗೊಳ್ಳಲು ಒತ್ತಾಯ

ಇದು ಕಾನೂನು ಸುವ್ಯವಸ್ಥೆಗೆ ವಿರುದ್ಧವಾದ ಹೇಳಿಕೆ ಆಗಿರುವುದರಿಂದ ಹಾಗೂ ಕಾಂಗ್ರೆಸ್‌‍ ಪಕ್ಷದ ಕಾರ್ಯಕರ್ತರಿಗೆ ತೀವ್ರ ನೋವು ತರುವಂತಹ ಹೇಳಿಕೆ ನೀಡಿರುವ ಇವರ ವಿರುದ್ಧ ತುರ್ತಾಗಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ಎಸ್‌‍. ಮನೋಹರ್‌ ನೇತೃತ್ವದ ನಿಯೋಗ ಮನವಿ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ