Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದಾಖಲಾಯ್ತು ಎಫ್​ಐಆರ್; ಕಾರಣ?

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್(Basanagouda Patil Yatnal) ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್(FIR) ದಾಖಲಾಗಿದೆ. ಹೌದು, ರಾಹುಲ್​ ಗಾಂಧಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನಲೆ ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ಎಸ್‌‍. ಮನೋಹರ್‌ ನೇತೃತ್ವದ ನಿಯೋಗವು ಯತ್ನಾಳ್​ ವಿರುದ್ಧ ತುರ್ತಾಗಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಿದೆ.

ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದಾಖಲಾಯ್ತು ಎಫ್​ಐಆರ್; ಕಾರಣ?
ಬಸನಗೌಡ ಪಾಟೀಲ್ ಯತ್ನಾಳ್
Follow us
ಪ್ರಸನ್ನ ಗಾಂವ್ಕರ್​
| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 18, 2024 | 10:17 PM

ಬೆಂಗಳೂರು, ಸೆ.18: ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್(Basanagouda Patil Yatnal) ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್(FIR) ದಾಖಲಾಗಿದೆ. ಹೌದು, ಸಂಸದ ರಾಹುಲ್ ಗಾಂಧಿ ಜನನದ ಬಗ್ಗೆ ಹೇಳಿಕೆ ನೀಡಿದ್ದ ಯತ್ನಾಳ್ ವಿರುದ್ದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನೋಹರ್ ಅವರು ದೂರು ನೀಡಿದ್ದು, ಇದೀಗ ಎಫ್ಐಆರ್ ದಾಖಲಿಸಲಾಗಿದೆ.

ದೂರಿನಲ್ಲೇನಿದೆ?

ಹೌದು, ಬಸವನಗೌಡ ಪಾಟೀಲ್‌ ಯತ್ನಾಳ್‌ ಪ್ರತಿ ಬಾರಿಯೂ ಕೇವಲ ತನ್ನ ರಾಜಕೀಯ ಹಾಗೂ ಪ್ರಚಾರಕ್ಕೋಸ್ಕರ ಕಾಂಗ್ರೆಸ್‌‍ ಪಕ್ಷದ ನಾಯಕರ ವಿರುದ್ಧ ಟೀಕೆ ನಡೆಸುತ್ತಿರುತ್ತಾರೆ. ಜೊತೆಗೆ ರಾಹುಲ್‌ ಗಾಂಧಿ ಅವರ ಬಗ್ಗೆ ಈಗಾಗಲೆ ಅನೇಕ ಬಾರಿ ಇಂತಹ ಟೀಕೆಗಳನ್ನು ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಈಗಾಗಲೇ ತಮಗೆ ದೂರನ್ನು ಸಲ್ಲಿಸಿದ್ದೇವೆ. ಆದರೂ ಸಹ ಪೊಲೀಸ್‌‍ ಇಲಾಖೆ ಬಸವನಗೌಡ ಪಾಟೀಲ್‌ ಯತ್ನಾಳ್‌ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ. ಆದ್ದರಿಂದ ವೈಯಕ್ತಿಕವಾಗಿ ರಾಹುಲ್‌ಗಾಂಧಿರವರ ವಿರುದ್ಧ ನಿಂದನೆ ಹಾಗೂ ಟೀಕೆಯನ್ನು ಮಾಡುತ್ತಿದ್ದಾರೆ.

ಇದನ್ನೂ ಓದಿ:ಮಸೀದಿ ಮುಂದೆ ಡ್ಯಾನ್ಸ್ ಮಾಡಬಾರದು ಎಂದರೆ ಪಾಕಿಸ್ತಾನ, ಬಾಂಗ್ಲಾಕ್ಕೆ ಹೋಗಲಿ; ಬಸನಗೌಡ ಯತ್ನಾಳ್ ವಾಗ್ದಾಳಿ

ತುರ್ತಾಗಿ ಕಾನೂನು ಕ್ರಮ ಕೈಗೊಳ್ಳಲು ಒತ್ತಾಯ

ಇದು ಕಾನೂನು ಸುವ್ಯವಸ್ಥೆಗೆ ವಿರುದ್ಧವಾದ ಹೇಳಿಕೆ ಆಗಿರುವುದರಿಂದ ಹಾಗೂ ಕಾಂಗ್ರೆಸ್‌‍ ಪಕ್ಷದ ಕಾರ್ಯಕರ್ತರಿಗೆ ತೀವ್ರ ನೋವು ತರುವಂತಹ ಹೇಳಿಕೆ ನೀಡಿರುವ ಇವರ ವಿರುದ್ಧ ತುರ್ತಾಗಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ಎಸ್‌‍. ಮನೋಹರ್‌ ನೇತೃತ್ವದ ನಿಯೋಗ ಮನವಿ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ