AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜಪೇಟೆಯ ಈದ್ಗಾ ಮೈದಾನ ವಿವಾದ; ಮತ್ತೊಂದು ಮಾಹಿತಿ ಬಹಿರಂಗ

ಮೊದಲು ಯಾರಿಗೆ ಸೇರಿದ ಮೈದಾನ ಎಂದು ನಿರ್ಧಾರ ಆಗಲಿ ಅಂತಾ ನೇಸರ್ಗಿ ಪಟ್ಟು ಹಿಡಿದಿದ್ದರು. ಎಸಿಪಿ ಕಚೇರಿಯಲ್ಲಿ, ಆಗೀನ ಡಿಸಿಪಿ ಆಗಿದ್ದ ಅಲೋಕ್ ಕುಮಾರ್ ನೇತೃತ್ವದಲ್ಲಿ ಒಂದು ಸಂಧಾನ ಸಭೆ ನಡೆದಿತ್ತು.

ಚಾಮರಾಜಪೇಟೆಯ ಈದ್ಗಾ ಮೈದಾನ ವಿವಾದ; ಮತ್ತೊಂದು ಮಾಹಿತಿ ಬಹಿರಂಗ
ಚಾಮರಾಜಪೇಟೆ ಈದ್ಗಾ ಮೈದಾನ (ಸಂಗ್ರಹ ಚಿತ್ರ)
TV9 Web
| Edited By: |

Updated on:Jun 08, 2022 | 12:55 PM

Share

ಬೆಂಗಳೂರು: ರಾಜ್ಯದಲ್ಲಿ ಒಂದಲ್ಲ ಒಂದು ವಿವಾದಗಳು ಹುಟ್ಟಿಕೊಳ್ಳುತ್ತಿವೆ. ಹಿಜಾಬ್, ಹಲಾಲ್, ಆಜಾನ್, ಮಂದಿರ ವರ್ಸಸ್ ಮಸೀದಿ ಸೇರಿ ಇದೀಗ ಹೊಸ ವಿವಾದ ಭುಗಿಲೆದ್ದಿದೆ. ಅದೇ ಚಾಮರಾಜಪೇಟೆಯ (Chamarajpet) ಈದ್ಗಾ ಮೈದಾನ (idgah field) ವಿವಾದ. ಈ ವಿವಾದ ವಿಚಾರಕ್ಕೆ ಸಂಬಂಧಿಸಿ ಮತ್ತೊಂದು ಮಾಹಿತಿ ಬಹಿರಂಗವಾಗಿದೆ. ಚಾಮರಾಜಪೇಟೆಯ ಈದ್ಗಾ ಮೈದಾನದ ವಿವಾದ ಇಂದು ನಿನ್ನೆಯದಲ್ಲ. ಕಳೆದ 14 ವರ್ಷದ ಹಿಂದೆಯೇ ಅಂದರೆ 2006ರಲ್ಲಿ ಬಗ್ಗೆ ಮಹತ್ವದ ಸಂಧಾನ ಸಭೆ ನಡೆದಿದೆ.

ಜಮೀರ್ ಅಹ್ಮದ್ ಖಾನ್ ಮೊದಲ ಬಾರಿಗೆ ಶಾಸಕರಾಗಿದ್ದಾಗ, ಚಾಮರಾಜಪೇಟೆ ಮೈದಾನದ ಟವರ್ ಪರಿಶೀಲನೆ ಮಾಡಿದ್ದಾರೆ. ಆ ಟವರ್​ನಲ್ಲಿ ಮಳೆಯಿಂದ ಕ್ರಾಕ್ಸ್ ಆಗಿರುವುದು ಪತ್ತೆಯಾಗಿತ್ತು. ಆ ಟವರ್​ನನ್ನು ಮತ್ತೆ ರಿನೋವೇಶನ್ ಮಾಡಲು ಜಮೀರ್ ಅಹ್ಮದ್ ಖಾನ್ ಚಿಂತನೆ ಮಾಡುತ್ತಾರೆ. ಇದಕ್ಕೆ ಮಾಜಿ ಶಾಸಕಿ ಪ್ರಮೀಳಾ ನೇಸರ್ಗಿ ವಿರೋಧ ವ್ಯಕ್ತಪಡಿಸಿದ್ದರು.

ಇದು ಮೊದಲು ಯಾರಿಗೆ ಸೇರಿದ ಮೈದಾನ ಎಂದು ನಿರ್ಧಾರ ಆಗಲಿ ಅಂತಾ ನೇಸರ್ಗಿ ಪಟ್ಟು ಹಿಡಿದಿದ್ದರು. ಎಸಿಪಿ ಕಚೇರಿಯಲ್ಲಿ, ಆಗೀನ ಡಿಸಿಪಿ ಆಗಿದ್ದ ಅಲೋಕ್ ಕುಮಾರ್ ನೇತೃತ್ವದಲ್ಲಿ ಒಂದು ಸಂಧಾನ ಸಭೆ ನಡೆದಿತ್ತು. ಈ ಸಭೆಯಲ್ಲಿ ಪ್ರಮೀಳಾ ನೇಸರ್ಗಿ, ಜಮೀರ್, ಆರ್.ವಿ ದೇವರಾಜ್, ಇಬ್ಬರು ಮಾಜಿ ಕಾರ್ಪೋರೇಟರ್ ಹಾಗೂ ಹಲವರು ಸದಸ್ಯರು ಭಾಗಿಯಾಗಿದ್ದರು. ಇವರೆಲ್ಲರೂ ಸೇರಿ ಒಂದು ಸಂಧಾನ ಮಾಡಿಕೊಳ್ಳುತ್ತಾರೆ. ಈದ್ಗಾ ಟವರ್​​ನಲ್ಲಿ ಕ್ರಾಕ್ ಬಿಟ್ಟಿರುವುದನ್ನು ಸರಿ ಮಾಡಿಕೊಳ್ಳಿ. ಆದರೆ ನಮಗೆ ದಸರಾ, ದೀಪಾವಳಿ, ಗಣೇಶೋತ್ಸವ ಮಾಡಲು ಅವಕಾಶ ಕೊಡಬೇಕು ಅಂತಾ ಅಗ್ರಿಮೆಂಟ್ ಆಗಿದೆ. 2006 ರಲ್ಲಿ ಆಗಿರುವ ಅಗ್ರಿಮೆಂಟ್ ಇದು. ಈ ರೀತಿ ಅಗ್ರಿಮೆಂಟ್ ಮಾಡಿಕೊಂಡ ನಂತರ ಜಮೀರ್ ಅಹ್ಮದ್ ಖಾನ್ ಉಲ್ಟಾ ಹೊಡೆದಿದ್ದಾರೆ ಅಂತಾ ವಿಶ್ವ ಸನಾತನ ಪರಿಷತ್ತು ಆರೋಪ ಮಾಡಿದೆ.

ಇದನ್ನೂ ಓದಿ
Image
World Brain Tumour Day 2022 : ಬ್ರೇನ್ ಟ್ಯೂಮರ್​ಗೆ ಅತಿಯಾದ ತಲೆನೋವೊಂದೇ ಮುಖ್ಯಲಕ್ಷಣವಲ್ಲ
Image
Inspirational Story: 73ರ ಇಳಿ ವಯಸ್ಸಿನಲ್ಲೂ ಸೈಕಲ್​ನಲ್ಲೇ 2,500 ಕಿ.ಮೀ. ಪ್ರಯಾಣಿಸಿದ ವೃದ್ಧ
Image
Para Shooting World Cup : ಚಿನ್ನ ಗೆದ್ದ ಲೇಖರ, ದೇವರಡ್ಡಿಗೆ ಅಭಿನಂದಿಸಿದ ಪ್ರಧಾನಿ ಮೋದಿ
Image
ಸೈಟ್ ಖರೀದಿಸುವಾಗ ಇರಲಿ ಎಚ್ಚರ! ಮಾರಾಟವಾಗಿರುವ ಸೈಟಿಗೆ ನಕಲಿ ದಾಖಲೆ ಸೃಷ್ಟಿಸಿ ಮತ್ತೆ ಮಾರಾಟ ಮಾಡಿ ವಂಚಿಸುತ್ತಿದ್ದ ಐವರು ಆರೋಪಿಗಳನ್ನು ಅರೆಸ್ಟ್ ಮಾಡಿದ ಪೊಲೀಸ್

ಇದನ್ನೂ ಓದಿ: Kangana Ranaut: ನೂಪುರ್​ ಶರ್ಮಾಗೆ ಬೆಂಬಲ ನೀಡಿದ ಕಂಗನಾ; ‘ಧಾಕಡ್​’ ನಟಿ ಹೇಳಿದ್ದೇನು?

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದೇನು?:

ಈದ್ಗಾ ಮೈದಾನ ವಿವಾದದ ಬಗ್ಗೆ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, 1974ರ ಸಿಟಿ ಸರ್ವೆ ಪ್ರಕಾರ ಇದು ಆಟದ ಮೈದಾನ. ಸರ್ವೆ ಪ್ರಕಾರ ಈ ಮೈದಾನ ಪಾಲಿಕೆಗೆ ಸೇರಿದೆ. ಅಲ್ಲಿ ಪ್ರಾರ್ಥನೆ ಮಾಡುವ ಸ್ಟಕ್ಚರ್​​ ಇದೆ ಅಂತ ನಮೂದು. ಈ ಸಂಬಂಧ ಸುಪ್ರೀಂಕೋರ್ಟ್ ಆದೇಶದ ಪ್ರತಿ ಸಿಕ್ಕಿದೆ. ಆದರೆ ಆದೇಶದ ಪ್ರತಿಯಲ್ಲಿ ಒಂದು ಪೇಜ್ ಮಿಸ್ ಆಗಿದೆ. ಈ ಬಗ್ಗೆ ಸೂಕ್ತ ದಾಖಲೆ ಇದ್ದರೆ ತಂದು ಕೊಡಬಹುದು. ಅಲ್ಲಿ ವರ್ಷಕ್ಕೆ 2 ಬಾರಿ ಪ್ರಾರ್ಥನೆ ಮಾಡಲು ಅವಕಾಶ ಇದೆ. ಪ್ರಾರ್ಥನೆ ಮಾಡಲು ನಾವು ಅಡ್ಡಿಪಡಿಸಲ್ಲ. ಮೈದಾನದಲ್ಲಿ ಮಕ್ಕಳು ಆಟವಾಡಲು ಯಾವುದೇ ತೊಂದರೆ ಇಲ್ಲ ಎಂದು ಎಂದರು.

ತಾಜಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:47 pm, Wed, 8 June 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ