AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರೇಟರ್ ಬೆಂಗಳೂರು: ಡಿಕೆ ಶಿವಕುಮಾರ್ ನೇತೃತ್ವದ ಸರ್ವ ಪಕ್ಷ ಸಭೆಯಲ್ಲಿ ನಡೆಯಿತು ಮಹತ್ವದ ಚರ್ಚೆ

ಗ್ರೇಟರ್ ಬೆಂಗಳೂರು ಅಥಾರಿಟಿ. ಇದು ಸದ್ಯ ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ವಿಷಯ. ಇದೇ ಗ್ರೇಟರ್ ಬೆಂಗಳೂರು ಅಥಾರಿಟಿ ವಿಚಾರ, ಸರ್ವ ಪಕ್ಷ ಸಭೆ ಸೇರುವಂತೆ ಮಾಡಿದೆ. ಬೆಂಗಳೂರು ಅಭಿವೃದ್ಧಿ ವಿಷಯದಲ್ಲಿ ನಾವೆಲ್ಲರೂ ಒಟ್ಟಾಗಿ ಹೋಗೋಣ ಎಂಬ ಅಭಿವೃದ್ಧಿ ಮಂತ್ರವನ್ನು ಡಿಸಿಎಂ ಡಿಕೆ ಶಿವಕುಮಾರ್ ಜಪಿಸಿದಂತಿದೆ. ಸರ್ವ ಪಕ್ಷ ಸಭೆಯಲ್ಲಿ ಏನೇನು ಚರ್ಚೆ ನಡೆಯಿತು ಎಂಬ ವಿವರ ಇಲ್ಲಿದೆ.

ಗ್ರೇಟರ್ ಬೆಂಗಳೂರು: ಡಿಕೆ ಶಿವಕುಮಾರ್ ನೇತೃತ್ವದ ಸರ್ವ ಪಕ್ಷ ಸಭೆಯಲ್ಲಿ ನಡೆಯಿತು ಮಹತ್ವದ ಚರ್ಚೆ
ಆರ್ ಅಶೋಕ್ ಮತ್ತು ಡಿಕೆ ಶಿವಕುಮಾರ್
Jagadisha B
| Edited By: |

Updated on: Jul 27, 2024 | 6:00 PM

Share

ಬೆಂಗಳೂರು, ಜುಲೈ 27: ಬೆಂಗಳೂರಿನ ಬಿಬಿಎಂಪಿಯನ್ನು ಈಗ ಗ್ರೇಟರ್ ಬೆಂಗಳೂರು ಅಥಾರಿಟಿ ಮಾಡಲು ಸರ್ಕಾರ ಮುಂದಾಗಿದೆ. ಆದರೆ ಗ್ರೇಟರ್ ಬೆಂಗಳೂರು ವಿಧೇಯಕವನ್ನು ಪ್ರತಿಪಕ್ಷಗಳು ವಿರೋಧಿಸುತ್ತಿರುವುದರಿಂದ ಸರ್ಕಾರ ಇವತ್ತು ಸರ್ವ ಪಕ್ಷ ಸಭೆ ನಡೆಸಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲು ಮುಂದಾಗಿದೆ. ಗ್ರೇಟರ್ ಬೆಂಗಳೂರು ವಿಧೇಯಕ ಮಂಡನೆಯಾದ ಬೆನ್ನಲ್ಲೇ, ಡಿಸಿಎಂ ಡಿಕೆ ಶಿವಕುಮಾರ್ ವಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳೋ ಕೆಲಸ ಮಾಡಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ, ‘ನಾಗರೀಕರ ಧ್ವನಿ, ಅದೇ ಸರ್ಕಾರದ ಧ್ವನಿ’ ಎಂಬ ಪರಿಕಲ್ಪನೆಯಡಿ ಬೆಂಗಳೂರು ನಗರಾಭಿವೃದ್ಧಿ ಸಂಬಂಧ ಡಿಸಿಎಂ ಡಿಕೆ ಶಿವಕುಮಾರ್ ಸರ್ವ ಪಕ್ಷ ಸಭೆ ಕರೆದಿದ್ದರು. ಇದರಲ್ಲಿ ಬೆಂಗಳೂರಿನ‌ ಬಿಜೆಪಿ ಹಾಗೂ ಕಾಂಗ್ರೆಸ್ ಶಾಸಕರು ಭಾಗಿಯಾದರು. ವಿಪಕ್ಷ ನಾಯಕ ಆರ್ ಅಶೋಕ್, ಶಾಸಕ ಎಸ್​​ಟಿ ಸೋಮಶೇಖರ್ ಕೂಡ ಭಾಗಿಯಾದರು. ಸಭೆಯಲ್ಲಿ ಟ್ರಾಫಿಕ್, ಕುಡಿಯುವ ನೀರು, ಮೆಟ್ರೋ, ರಸ್ತೆ, ಎಲಿವೇಟೆಡ್ ಕಾರಿಡಾರ್ ಸೇರಿದಂತೆ ಹತ್ತು ಹಲವು ವಿಷಯಗಳ ಕುರಿತು ಚರ್ಚೆಯಾಗಿದೆ.

ಸಭೆಯಲ್ಲಿ, ಗ್ರೇಟರ್ ಬೆಂಗಳೂರು ವಿಚಾರವಾಗಿ ಅಶ್ವತ್ಥ್ ನಾರಾಯಣ ಗಾಬರಿಯಾಗುವುದು ಬೇಡ. ವಿಧೇಯಕದ ಸಂಪೂರ್ಣ ಮಾಹಿತಿ ನಿಮ್ಮ ಕೈಯಲ್ಲಿದೆ. ಪ್ರತಿ ಪದವನ್ನೂ ಪರಿಶೀಲಿಸಿ. ಬೆಂಗಳೂರಿನ ಭವಿಷ್ಯದ ಹಿತ ಕಾಯಲು ಅಗತ್ಯವಾದ ಎಲ್ಲಾ ಕ್ರಮಗಳನ್ನು ಗ್ರೇಟರ್ ಬೆಂಗಳೂರಿನಲ್ಲಿ ಕೈಗೊಂಡಿದ್ದೇವೆ. ನೀವು ಚರ್ಚೆ ಮಾಡಿ, ನಿಮ್ಮ ಸಲಹೆ ಸೂಚನೆ ಪರಿಗಣಿಸುತ್ತೇವೆ ಎಂದು ಡಿಸಿಎಂ ಕೋರಿದರು.

ಜೊತೆಗೆ ವಿರೋಧ ಪಕ್ಷದ ನಾಯಕರು ಇಲ್ಲೇ ಇದ್ದು, ನಿಮ್ಮ ಪಕ್ಷದಿಂದ ಸಮಿತಿಗೆ ಹೆಸರು ಶಿಫಾರಸ್ಸು ಮಾಡಿದರೆ ಇಂದೇ ಸಮಿತಿ ರಚಿಸಿ ಅದನ್ನು ಅಧಿಕೃತವಾಗಿ ಘೋಷಣೆ ಮಾಡಬಹುದು ಅಂತ ಹೇಳಿದರು.

ಸಭೆಯಲ್ಲಿ ಇನ್ನೂ ಏನೇನು ಚರ್ಚೆಯಾಯಿತು?

  • ತಂತ್ರಜ್ಞಾನ, ಮಾನವ ಸಂಪನ್ಮೂಲ, ಹವಾಮಾನ, ಸಂಸ್ಕೃತಿ ನೋಡಿ ಇಲ್ಲಿಗೆ ಬಂದವರು ಮತ್ತೆ ವಾಪಸ್ ಹೋಗುತ್ತಿಲ್ಲ.
  • ಬಿಜೆಪಿ ಸರ್ಕಾರ 110 ಹಳ್ಳಿಗಳನ್ನು ಬೆಂಗಳೂರಿನ ವ್ಯಾಪ್ತಿಗೆ ಸೇರಿಸಿದೆ.
  • ಆ ಭಾಗಕ್ಕೆ ಮೂಲಸೌಕರ್ಯ ಒದಗಿಸಿಕೊಡಲು ಸಾಧ್ಯವಾಗಿಲ್ಲ.
  • ಕಾವೇರಿ ನೀರಿನ ಸಮಸ್ಯೆ ಒಂದೆಡೆಯಾದರೆ, ಬೇಸಿಗೆಯಲ್ಲಿ ನಗರದ 7 ಸಾವಿರ ಕೊಳವೆಬಾವಿ ಬರಿದಾಗಿ ಸಮಸ್ಯೆ ಉದ್ಭವಿಸಿತ್ತು.
  • ಕೆರೆಗಳನ್ನು ಉಳಿಸಿ ಜೀವಂತವಾಗಿರಿಸಿಕೊಳ್ಳಬೇಕು.
  • ಕಸದ ವಿಚಾರ, ಸಂಚಾರಿ ದಟ್ಟಣೆ ಸಮಸ್ಯೆ ಹೆಚ್ಚಾಗಿದೆ.
  • ಕಸ ಹಾಗೂ ಸಂಚಾರಿ ದಟ್ಟಣೆ ಸಮಸ್ಯೆ ವಿಚಾರವಾಗಿ ಸುಮಾರು 70 ಸಾವಿರ ಸಲಹೆಗಳು ಬಂದಿವೆ.
  • ಬೆಂಗಳೂರಿನಲ್ಲಿ ಸ್ಕೈಡೆಕ್ ನಿರ್ಮಿಸಲು ಯೋಜನೆ ರೂಪಿಸಲಾಗಿದೆ.
  • ಎಸ್ಟೇಮ್ ಮಾಲ್ ಟು ಸಿಲ್ಕ್ ಬೋರ್ಡ್ ಸುರಂಗ ಮಾರ್ಗ ಮಾಡುವ ಬಗ್ಗೆ ಚರ್ಚೆಯಾಗಿದೆ.
  • 100 ಕಿಮೀ ಸಿಗ್ನಲ್ ಫ್ರೀ ಕಾರಿಡಾರ್ 12 ಕೋಟಿ ರೂಪಾಯಿ ವೆಚ್ಚದಲ್ಲಿ ಮಾಡುವ ತೀರ್ಮಾನ.

ಇದನ್ನೂ ಓದಿ: ಇನ್ಮುಂದೆ ಎಲ್ಲೇ ಮೆಟ್ರೋ ಮಾಡಿದ್ರೂ ಡಬಲ್ ಡೆಕ್ಕರ್​ ಮಾಡಲು ತಿರ್ಮಾನ: ಡಿಕೆ ಶಿವಕುಮಾರ್​​

ಇನ್ನು, ಯಶವಂತಪುರ ಬಿಜೆಪಿ ಶಾಸಕ ಎಸ್​​​ಟಿ ಸೋಮಶೇಖರ್, ಗ್ರೇಟರ್ ಬೆಂಗಳೂರು ಅಥಾರಿಟಿ ನಿರ್ಧಾರವನ್ನು ಸ್ವಾಗತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ