Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಗಗನಸಖಿ ಮೇಲೆ ಕೈ ಹಾಕಿ, ನಿನ್ನ ರೇಟ್ ಎಷ್ಟು, ಎಷ್ಟಕ್ಕೆ ಬರುತ್ತೀಯಾ? ಎಂದಿದ್ದ ವಿದೇಶಿ ಪ್ರಜೆಯ ಬಂಧನ

ವಿಮಾನದಲ್ಲಿ ಗಗನ ಸಖಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ವಿದೇಶಿ ಪ್ರಜೆಯನ್ನು ದೇವನಹಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸರು ಬಂಧಿಸಿದ್ದಾರೆ. ಅಕ್ರಂ ಅಹಮದ್ ಬಂಧಿತ ಅರೋಪಿ.

ಬೆಂಗಳೂರು: ಗಗನಸಖಿ ಮೇಲೆ ಕೈ ಹಾಕಿ, ನಿನ್ನ ರೇಟ್ ಎಷ್ಟು, ಎಷ್ಟಕ್ಕೆ ಬರುತ್ತೀಯಾ? ಎಂದಿದ್ದ ವಿದೇಶಿ ಪ್ರಜೆಯ ಬಂಧನ
ಆರೋಪಿ ಅಕ್ರಂ ಅಹಮದ್​
Follow us
Prajwal Kumar NY
| Updated By: ವಿವೇಕ ಬಿರಾದಾರ

Updated on:Aug 21, 2023 | 12:39 PM

ಬೆಂಗಳೂರು: ವಿಮಾನದಲ್ಲಿ (Airplane) ಗಗನಸಖಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ವಿದೇಶಿ ಪ್ರಜೆಯನ್ನು ದೇವನಹಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (Devanahalli International Airport) ಪೊಲೀಸರು ಬಂಧಿಸಿದ್ದಾರೆ. ಅಕ್ರಂ ಅಹಮದ್ ಬಂಧಿತ ಅರೋಪಿ. ಮಾಲ್ಡೀವ್ಸ್​​​ನಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೋ ​ವಿಮಾನದಲ್ಲಿ ಆರೋಪಿ ಅಕ್ರಂ ಅಹಮದ್ ಬಿಜಿನೆಸ್ ಕ್ಲಾಸ್​​ನಲ್ಲಿ ಪ್ರಯಾಣ ಮಾಡುತ್ತಿದ್ದನು. ಈ ವೇಳೆ ಆರೋಪಿ ಗಗನಸಖಿಗೆ (Air Hostess) ನಿನ್ನ ರೇಟ್ ಎಷ್ಟು ? ಎಷ್ಟಕ್ಕೆ ಬರುತ್ತೀಯಾ? ಎಷ್ಟು ಡಾಲರ್ ಕೊಟ್ಟರೇ ಬರುತ್ತೀಯಾ? ನೂರು ಡಾಲರ್ ಕೊಟ್ಟರೇ ಸಾಕಾ? ಅಥವಾ ಇನ್ನೂ ಬೇಕೆ ? ಎಂದೆಲ್ಲಾ ಕೇಳಿದ್ದಾನೆ.

ಈ ನಡುವೆ ಅಕ್ರಂ ಅಹಮದ್​ ಕುಳಿತಿದ್ದ ಸೀಟ್ ಬಳಿ ಗಗನಸಖಿ ನಡೆದುಕೊಂಡು ಹೋಗುವಾಗ ಆರೋಪಿ​ ಮೈ ಮೇಲೆ ಕೈ ಹಾಕಿದ್ದಾನೆ. ಘಟನೆ ಸಂಬಂಧ ದೇವನಹಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೂರು ಡಾಲರ್ ಕೊಟ್ಟರೇ ಸಾಕಾ ಎಂದ ಆರೋಪಿ

ಆರೋಪಿ I have been looking for a girl like you , how much you charge for service and when will you be free ಎಂದು ಕೇಳಿದ್ದಾನೆ. ನಂತರ  ಸರ್ವಿಸ್​ಗೆ ಹತ್ತು ಡಾಲರ್ ಬದಲಾಗಿ ನೂರು ಡಾಲರ್ ನೀಡುತ್ತೇನೆ. ನೀನೆ ಇಟ್ಟಿಕೋ ಎಂದಿದ್ದಾನೆ. ಅಲ್ಲದೇ ಗಗನ ಸಖಿಯ ದೇಹವನ್ನು ಅಸಭ್ಯವಾಗಿ ಮುಟ್ಟಿದ್ದಾನೆ. ಬೆಂಗಳೂರಲ್ಲಿ ವಿಮಾನ ಲ್ಯಾಂಡ್ ಆಗುವ ಸಮಯದಲ್ಲಿ ಆರೋಪಿ ಎದ್ದು ನಿಲ್ಲಲು ಪ್ರಯತ್ನಿಸಿದ್ದಾನೆ. ಈ ವೇಳೆ ಗಗನಸಖಿ ಕುಳಿತುಕೊಳ್ಳಿ ಎಂದು ಹೇಳಿದಾರೆ. ಆಗ ಆರೋಪಿ I love rough things and you are very rough ಎಂದು ಹೇಳಿ ಮುಜುಗರ ಉಂಟು ಮಾಡಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:55 am, Mon, 21 August 23

ಫ್ಯಾನ್ಸ್ ಪ್ರಕಾರ ಆರ್​ಸಿಬಿ- ಸಿಎಸ್​ಕೆ ಕಾಳಗದ ಸ್ಮರಣೀಯ ಕ್ಷಣ ಇದೆ
ಫ್ಯಾನ್ಸ್ ಪ್ರಕಾರ ಆರ್​ಸಿಬಿ- ಸಿಎಸ್​ಕೆ ಕಾಳಗದ ಸ್ಮರಣೀಯ ಕ್ಷಣ ಇದೆ
‘ಮನದ ಕಡಲು’ ನಟ-ನಟಿಯರಿಗೆ ಶಾಪ ಹಾಕಿದ ರಂಗಾಯಣ ರಘು
‘ಮನದ ಕಡಲು’ ನಟ-ನಟಿಯರಿಗೆ ಶಾಪ ಹಾಕಿದ ರಂಗಾಯಣ ರಘು
ಹನಿ ಟ್ರ್ಯಾಪ್ ಪ್ರಕರಣ ಸಿಐಡಿ ತನಿಖೆಗೆ ಒಪ್ಪಿಸಿದನ್ನು ಸ್ವಾಗತಿಸಿದ ರಾಜಣ್ಣ
ಹನಿ ಟ್ರ್ಯಾಪ್ ಪ್ರಕರಣ ಸಿಐಡಿ ತನಿಖೆಗೆ ಒಪ್ಪಿಸಿದನ್ನು ಸ್ವಾಗತಿಸಿದ ರಾಜಣ್ಣ
ಒಡಿಶಾದಲ್ಲಿ ಪೊಲೀಸರಿಂದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಜಲಫಿರಂಗಿ ಬಳಕೆ
ಒಡಿಶಾದಲ್ಲಿ ಪೊಲೀಸರಿಂದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಜಲಫಿರಂಗಿ ಬಳಕೆ
ರೈತರಿಗೆ ಡಬಲ್​ ಗುಡ್​ನ್ಯೂಸ್ ನೀಡಿದ ಕೃಷಿ ಸಚಿವ ಚಲುವರಾಯಸ್ವಾಮಿ..!
ರೈತರಿಗೆ ಡಬಲ್​ ಗುಡ್​ನ್ಯೂಸ್ ನೀಡಿದ ಕೃಷಿ ಸಚಿವ ಚಲುವರಾಯಸ್ವಾಮಿ..!
ಯತ್ನಾಳ್ ಕಾಂಗ್ರೆಸ್​ಗೆ ಬರುತ್ತೇನೆಂದರೆ ಸ್ವಾಗತಿಸಲು ನಾನ್ಯಾರೂ ಅಲ್ಲ: ಶಾಸಕ
ಯತ್ನಾಳ್ ಕಾಂಗ್ರೆಸ್​ಗೆ ಬರುತ್ತೇನೆಂದರೆ ಸ್ವಾಗತಿಸಲು ನಾನ್ಯಾರೂ ಅಲ್ಲ: ಶಾಸಕ
ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ
ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ
ಉಚ್ಚಾಟನೆ ನಿರ್ಧಾರವನ್ನು ಪುನರ್​ಪರಿಶೀಲಿಸುವಂತೆ ಕೋರುವೆ: ಶ್ರೀರಾಮುಲು
ಉಚ್ಚಾಟನೆ ನಿರ್ಧಾರವನ್ನು ಪುನರ್​ಪರಿಶೀಲಿಸುವಂತೆ ಕೋರುವೆ: ಶ್ರೀರಾಮುಲು
ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ