AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಗಗನಸಖಿ ಮೇಲೆ ಕೈ ಹಾಕಿ, ನಿನ್ನ ರೇಟ್ ಎಷ್ಟು, ಎಷ್ಟಕ್ಕೆ ಬರುತ್ತೀಯಾ? ಎಂದಿದ್ದ ವಿದೇಶಿ ಪ್ರಜೆಯ ಬಂಧನ

ವಿಮಾನದಲ್ಲಿ ಗಗನ ಸಖಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ವಿದೇಶಿ ಪ್ರಜೆಯನ್ನು ದೇವನಹಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸರು ಬಂಧಿಸಿದ್ದಾರೆ. ಅಕ್ರಂ ಅಹಮದ್ ಬಂಧಿತ ಅರೋಪಿ.

ಬೆಂಗಳೂರು: ಗಗನಸಖಿ ಮೇಲೆ ಕೈ ಹಾಕಿ, ನಿನ್ನ ರೇಟ್ ಎಷ್ಟು, ಎಷ್ಟಕ್ಕೆ ಬರುತ್ತೀಯಾ? ಎಂದಿದ್ದ ವಿದೇಶಿ ಪ್ರಜೆಯ ಬಂಧನ
ಆರೋಪಿ ಅಕ್ರಂ ಅಹಮದ್​
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Aug 21, 2023 | 12:39 PM

Share

ಬೆಂಗಳೂರು: ವಿಮಾನದಲ್ಲಿ (Airplane) ಗಗನಸಖಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ವಿದೇಶಿ ಪ್ರಜೆಯನ್ನು ದೇವನಹಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (Devanahalli International Airport) ಪೊಲೀಸರು ಬಂಧಿಸಿದ್ದಾರೆ. ಅಕ್ರಂ ಅಹಮದ್ ಬಂಧಿತ ಅರೋಪಿ. ಮಾಲ್ಡೀವ್ಸ್​​​ನಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೋ ​ವಿಮಾನದಲ್ಲಿ ಆರೋಪಿ ಅಕ್ರಂ ಅಹಮದ್ ಬಿಜಿನೆಸ್ ಕ್ಲಾಸ್​​ನಲ್ಲಿ ಪ್ರಯಾಣ ಮಾಡುತ್ತಿದ್ದನು. ಈ ವೇಳೆ ಆರೋಪಿ ಗಗನಸಖಿಗೆ (Air Hostess) ನಿನ್ನ ರೇಟ್ ಎಷ್ಟು ? ಎಷ್ಟಕ್ಕೆ ಬರುತ್ತೀಯಾ? ಎಷ್ಟು ಡಾಲರ್ ಕೊಟ್ಟರೇ ಬರುತ್ತೀಯಾ? ನೂರು ಡಾಲರ್ ಕೊಟ್ಟರೇ ಸಾಕಾ? ಅಥವಾ ಇನ್ನೂ ಬೇಕೆ ? ಎಂದೆಲ್ಲಾ ಕೇಳಿದ್ದಾನೆ.

ಈ ನಡುವೆ ಅಕ್ರಂ ಅಹಮದ್​ ಕುಳಿತಿದ್ದ ಸೀಟ್ ಬಳಿ ಗಗನಸಖಿ ನಡೆದುಕೊಂಡು ಹೋಗುವಾಗ ಆರೋಪಿ​ ಮೈ ಮೇಲೆ ಕೈ ಹಾಕಿದ್ದಾನೆ. ಘಟನೆ ಸಂಬಂಧ ದೇವನಹಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೂರು ಡಾಲರ್ ಕೊಟ್ಟರೇ ಸಾಕಾ ಎಂದ ಆರೋಪಿ

ಆರೋಪಿ I have been looking for a girl like you , how much you charge for service and when will you be free ಎಂದು ಕೇಳಿದ್ದಾನೆ. ನಂತರ  ಸರ್ವಿಸ್​ಗೆ ಹತ್ತು ಡಾಲರ್ ಬದಲಾಗಿ ನೂರು ಡಾಲರ್ ನೀಡುತ್ತೇನೆ. ನೀನೆ ಇಟ್ಟಿಕೋ ಎಂದಿದ್ದಾನೆ. ಅಲ್ಲದೇ ಗಗನ ಸಖಿಯ ದೇಹವನ್ನು ಅಸಭ್ಯವಾಗಿ ಮುಟ್ಟಿದ್ದಾನೆ. ಬೆಂಗಳೂರಲ್ಲಿ ವಿಮಾನ ಲ್ಯಾಂಡ್ ಆಗುವ ಸಮಯದಲ್ಲಿ ಆರೋಪಿ ಎದ್ದು ನಿಲ್ಲಲು ಪ್ರಯತ್ನಿಸಿದ್ದಾನೆ. ಈ ವೇಳೆ ಗಗನಸಖಿ ಕುಳಿತುಕೊಳ್ಳಿ ಎಂದು ಹೇಳಿದಾರೆ. ಆಗ ಆರೋಪಿ I love rough things and you are very rough ಎಂದು ಹೇಳಿ ಮುಜುಗರ ಉಂಟು ಮಾಡಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:55 am, Mon, 21 August 23

ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ