AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಾಫಿಕ್​ ಕಿರಿಕಿರಿ: ಬೆಂಗಳೂರಿನ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ಬೆಂಗಳೂರಿನ ದೇವರಬಿಸನಹಳ್ಳಿ ಜಂಕ್ಷನ್‌ನಲ್ಲಿನ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಬೆಂಗಳೂರು ಸಂಚಾರ ಪೊಲೀಸರು ಸಂಚಾರ ನಿರ್ಬಂಧ ಹೇರಿದ್ದಾರೆ. ಸಕ್ರಾ ಆಸ್ಪತ್ರೆ ಕಡೆಯಿಂದ ದೇವರಬಿಸನಹಳ್ಳಿಗೆ ನೇರ ಸಂಚಾರ ನಿಷೇಧಿಸಲಾಗಿದೆ. ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದ್ದು, ಕಾಡಬಿಸನಹಳ್ಳಿ ಮೂಲಕ ಸಂಚರಿಸುವಂತೆ ಸೂಚಿಸಲಾಗಿದೆ. ವ್ಯವಸ್ಥಿತ ಸಂಚಾರಕ್ಕಾಗಿ ಪರ್ಯಾಯ ಮಾರ್ಗಗಳನ್ನು ಅನುಸರಿಸುವಂತೆ ವಿನಂತಿಸಲಾಗಿದೆ.

ಟ್ರಾಫಿಕ್​ ಕಿರಿಕಿರಿ: ಬೆಂಗಳೂರಿನ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
|

Updated on: Jul 14, 2025 | 7:40 PM

Share

ಬೆಂಗಳೂರು, ಜುಲೈ 14: ಬೆಂಗಳೂರಿನ (Bengaluru) ದೇವರಬಿಸನಹಳ್ಳಿ ಜಂಕ್ಷನ್‌ನಲ್ಲಿ ಉಂಟಾಗುತ್ತಿರುವ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ಸಲುವಾಗಿ ಸಾರ್ವಜನಿಕರ ಸುಗಮ ಸಂಚಾರದ ಹಿತದೃಷ್ಟಿಯಿಂದ ಬೆಂಗಳೂರು ಸಂಚಾರಿ ಪೊಲೀಸರು (Bengaluru Traffic Police) ಈ ಮಾರ್ಗದಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಿದ್ದಾರೆ. ಬದಲಿ ಮಾರ್ಗವನ್ನು ಸೂಚಿಸಿದ್ದಾರೆ.

ಇದನ್ನೂ ಓದಿ
Image
ಟ್ರಾಫಿಕ್ ಜಾಮ್ ನಡುವೆ ಸಮಯವನ್ನು ಸರಿಯಾಗಿ ಬಳಸಿಕೊಳ್ಳುತ್ತಿರುವ ಉದ್ಯಮಿ
Image
ಇದಕ್ಕೆಲ್ಲ ಬೆಂಗಳೂರು ಟ್ರಾಫಿಕ್ ಕಾರಣ
Image
Bangalore Rain: ಬೆಂಗಳೂರಿನಲ್ಲಿ ಭಾರೀ ಗಾಳಿ ಮಳೆ, ಹಲವೆಡೆ ಟ್ರಾಫಿಕ್ ಜಾಮ್
Image
ಬೆಂಗಳೂರಿನ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ: ಪರ್ಯಾಯ ಮಾರ್ಗ ವಿವರ ಇಲ್ಲಿದೆ

ಸಂಚಾರ ನಿರ್ಬಂಧ:

ಸಕ್ರಾ ಆಸ್ಪತ್ರೆ ಕಡೆಯಿಂದ ದೇವರಬಿಸನಹಳ್ಳಿ ಇಕೋವರ್ಲ್ಸ್-ಇಂಟೆಲ್-ಇಕೋಸ್ಪೇಸ್ ಕಡೆಗೆ ನೇರ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ಬೆಂಗಳೂರು ಸಂಚಾರಿ ಪೊಲೀಸರು ತಿಳಿಸಿದ್ದಾರೆ.

ಪರ್ಯಾಯ ಮಾರ್ಗ:

ದೇವರಬಿಸನಹಳ್ಳಿ ಜಂಕ್ಷನ್‌ನಲ್ಲಿ ಕಡ್ಡಾಯ ಎಡ ತಿರುವು ಪಡೆದು ಕಾಡಬಿಸನಹಳ್ಳಿ, ಕಡೆಯ ಸರ್ವೀಸ್ ರಸ್ತೆಯ ಮೂಲಕ ಸಾಗಿ ಕಾಡಬಿಸನಹಳ್ಳಿ ಜಂಕ್ಷನ್‌ನಲ್ಲಿ ‘ಯು’ ತಿರುವು ಪಡೆದು, ದೇವರಬಿಸನಹಳ್ಳಿ, ಕಡೆಯ ಮಧ್ಯದಲ್ಲಿರುವ ಸರ್ವೀಸ್ ರಸ್ತೆ, ಹೊರವರ್ತುಲ ರಸ್ತೆ ಮುಖಾಂತರ ದೇವರಬಿಸನಹಳ್ಳಿ ಕಡೆಯ ಸರ್ವೀಸ್ ರಸ್ತೆಗೆ ಹೋಗಿ, ದೇವರಬಿಸನಹಳ್ಳಿ ಜಂಕ್ಷನ್ ಮುಖಾಂತರ ಸಂಚರಿಸಬಹುದಾಗಿದೆ.

ಬೆಳ್ಳಂದೂರು ಕಡೆಯಿಂದ ಪಾಸ್‌ಪೋರ್ಟ್ ಸರ್ವೀಸ್ ರಸ್ತೆ ಮೂಲಕ ಮಾರತ್​ಹಳ್ಳಿ ಕಡೆ ಸಂಚರಿಸುವ ವಾಹನಗಳು ದೇವರಬಿಸನಹಳ್ಳಿ ಜಂಕ್ಷನ್‌ನಲ್ಲಿನ ಕಾಡಬಿಸನಹಳ್ಳಿ ಕಡೆಗೆ ಹೋಗುವ ಮಧ್ಯಭಾಗದ ಸರ್ವೀಸ್ ರಸ್ತೆ ಮೂಲಕ ನೇರವಾಗಿ ಮಾರತ್​ಹಳ್ಳಿ ಕಡೆಗೆ ಸಂಚರಿಸಬಹುದು.

ಬೆಳ್ಳಂದೂರು ಕಡೆಯಿಂದ ಪಾಸ್‌ಪೋರ್ಟ್ ಸರ್ವೀಸ್ ರಸ್ತೆ ಮೂಲಕ ದೇವರಬಿಸನಹಳ್ಳಿ ರಸ್ತೆ ಕಡೆ ಸಂಚರಿಸುವ ವಾಹನಗಳು, ದೇವರಬಿಸನಹಳ್ಳಿ ಜಂಕ್ಷನ್‌ನಲ್ಲಿನ ಮಾರ್ಗದ ಮೂಲಕ ಮಧ್ಯ ಭಾಗದ ಸರ್ವೀಸ್ ರಸ್ತೆಯಲ್ಲಿ ಎಡ ತಿರುವು ಪಡೆದು, ಕಾಡಬಿಸನಹಳ್ಳಿ, ಸರ್ವೀಸ್ ರಸ್ತೆ ಮೂಲಕ ಕಾಡಬಿಸನಹಳ್ಳಿ, ಜಂಕ್ಷನ್‌ನಲ್ಲಿ ‘ಯು’ ತಿರುವು ಪಡೆದು ದೇವರಬಿಸನಹಳ್ಳಿ, ಕಡೆಯ ಮಧ್ಯದಲ್ಲಿರುವ ಸರ್ವೀಸ್ ರಸ್ತೆ, ಹೊರವರ್ತುಲ ರಸ್ತೆ ಮುಖಾಂತರ ದೇವರಬಿಸನಹಳ್ಳಿ ಕಡೆಯ ಸರ್ವೀಸ್ ರಸ್ತೆಗೆ ಹೋಗಿ ದೇವರಬಿಸನಹಳ್ಳಿ, ಜಂಕ್ಷನ್ ಮುಖಾಂತರ ಸಂಚರಿಸಬಹುದು.

ಟ್ರಾಫಿಕ್​ ಪೊಲೀಸರ ಟ್ವೀಟ್​

ಇಕೋವರ್ಲ್ಡ್ (ಆರ್.ಎಂ.ಜಡ್) ಕಡೆಯಿಂದ ಮಾರತ್​ಹಳ್ಳಿಕಡೆಗೆ ಸಂಚರಿಸುವ ವಾಹನಗಳು ದೇವರಬಿಸನಹಳ್ಳಿ, ಜಂಕ್ಷನ್‌ನಲ್ಲಿ ನೇರವಾಗಿ ಚಲಿಸಿ ಪಾಸ್‌ಪೋರ್ಟ್ ಸರ್ವೀಸ್ ರಸ್ತೆಯಲ್ಲಿ ಬಲತಿರುವು ಪಡೆದು, ದೇವರಬಿಸನಹಳ್ಳಿ ಜಂಕ್ಷನ್‌ನಲ್ಲಿ ಕಾಡಬಿಸನಹಳ್ಳಿ ಕಡೆಗೆ ಹೋಗುವ ಮಧ್ಯಭಾಗದ ಸರ್ವೀಸ್ ರಸ್ತೆ ಮೂಲಕ ನೇರವಾಗಿ ಮಾರತಹಳ್ಳಿ, ಕಡೆಗೆ ಸಂಚರಿಸಬಹುದು.

ಇದನ್ನೂ ಓದಿ: ಬೆಂಗಳೂರಿನ ಟ್ರಾಫಿಕ್ ಸಮಸ್ಯೆಯಿಂದ ಬೇಸತ್ತಿದ್ದೀರಾ? ಈ ಟಿಪ್ಸ್ ಫಾಲೋ ಮಾಡಿ ಎಂದ ವ್ಯಕ್ತಿ

ಇಕೋವರ್ಲ್ಡ್ (ಆರ್.ಎಂ.ಜಡ್) ಕಡೆಯಿಂದ ದೇವರಬೀಸನಹಳ್ಳಿ ಕಡೆಗೆ ಸಂಚರಿಸುವ ವಾಹನಗಳು ದೇವರಬಿಸನಹಳ್ಳಿ, ಜಂಕ್ಷನ್‌ನಲ್ಲಿ ನೇರವಾಗಿ ಚಲಿಸಿ, ಪಾಸ್‌ಪೋರ್ಟ್ ಸರ್ವೀಸ್ ರಸ್ತೆಯಲ್ಲಿ ಬಲತಿರುವು ಪಡೆದು, ದೇವರ ಬೀಸನಹಳ್ಳಿ, ಜಂಕ್ಷನ್ ಬಲ ಮಾರ್ಗದ ಮೂಲಕ ಮಧ್ಯಭಾಗದ ಸರ್ವೀಸ್ ರಸ್ತೆಯಲ್ಲಿ ಎಡ ತಿರುವು ಪಡೆದು, ಕಾಡಬಿಸನಹಳ್ಳಿ, ಸರ್ವೀಸ್ ರಸ್ತೆ ಮೂಲಕ ಕಾಡಬಿಸನಹಳ್ಳಿ ಜಂಕ್ಷನ್‌ನಲ್ಲಿ ‘ಯು’ ತಿರುವು ಪಡೆದು ದೇವರಬಿಸನಹಳ್ಳಿ ಕಡೆಯ ಮಧ್ಯದಲ್ಲಿರುವ ಸರ್ವೀಸ್ ರಸ್ತೆ, ಹೊರವರ್ತುಲ ರಸ್ತೆ ಮುಖಾಂತರ ದೇವರಬಿಸನಹಳ್ಳಿ ಕಡೆಯ ಸರ್ವೀಸ್ ರಸ್ತೆಗೆ ಹೋಗಿ, ದೇವರಬಿಸನಹಳ್ಳಿ ಜಂಕ್ಷನ್ ಮೂಲಕ ಸಂಚರಿಸಬಹುದು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?
50 ಎಕರೆ ಸವಾಲು ಹಾಕಿದ ಮಾಜಿ ಶಾಸಕರಿಗೆ ವಿಡಿಯೋ ಟಾಂಗ್ ಕೊಟ್ಟ ತಂಗಡಗಿ
50 ಎಕರೆ ಸವಾಲು ಹಾಕಿದ ಮಾಜಿ ಶಾಸಕರಿಗೆ ವಿಡಿಯೋ ಟಾಂಗ್ ಕೊಟ್ಟ ತಂಗಡಗಿ
ಕುಡಿದ ನಶೆಯಲ್ಲಿ ಮಾಡಿದ ಎಡವಟ್ಟಿಗೆ ಸುಟ್ಟು ಕರಕಲಾದ ಬಸ್‌
ಕುಡಿದ ನಶೆಯಲ್ಲಿ ಮಾಡಿದ ಎಡವಟ್ಟಿಗೆ ಸುಟ್ಟು ಕರಕಲಾದ ಬಸ್‌
ಪತ್ನಿಯನ್ನ ಹತ್ಯೆಗೈದ ಪತಿ: ಶಾಕಿಂಗ್ ಮಾಹಿತಿ ಬಿಚ್ಚಿಟ್ಟ ಆಯುಕ್ತ
ಪತ್ನಿಯನ್ನ ಹತ್ಯೆಗೈದ ಪತಿ: ಶಾಕಿಂಗ್ ಮಾಹಿತಿ ಬಿಚ್ಚಿಟ್ಟ ಆಯುಕ್ತ
ಶತಕ ಬಾರಿಸಿ ಇಶಾನ್ ಕಿಶನ್ ದಾಖಲೆ ಮುರಿದ ಪಾಕ್ ಆರಂಭಿಕ
ಶತಕ ಬಾರಿಸಿ ಇಶಾನ್ ಕಿಶನ್ ದಾಖಲೆ ಮುರಿದ ಪಾಕ್ ಆರಂಭಿಕ