AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಎಸ್​ಆರ್​ಟಿಸಿ ಬಸ್ ಸೋರಿಕೆ; ಬೆಂಗಳೂರಿನಿಂದ ಓಂಶಕ್ತಿ ದೇವಾಲಯಕ್ಕೆ ಹೋಗಿದ್ದ ಭಕ್ತರ ಪರದಾಟ

ಬೆಂಗಳೂರಿನ ಭಕ್ತರು ಕೆಎಸ್​ಆರ್​ಟಿಸಿ ಬಸ್ ಮೂಲಕ ಕಾಂಚೀಪುರಂನಲ್ಲಿರುವ ಓಂ ಶಕ್ತಿ ದೇವಾಲಯಕ್ಕೆ ಹೋಗಿದ್ದರು. ಆದರೆ ಬಸ್ ಬುಕ್ ಮಾಡಿದ ಭಕ್ತರಿಗೆ ಸಾರಿಗೆ ಇಲಾಖೆ ಡಕೋಟ ಬಸ್ ಕೊಟ್ಟಿರುವುದರಿಂದ ಭಕ್ತರು ಪರದಾಡುವಂತಾಗಿದೆ. ಮಳೆ ಹಿನ್ನೆಲೆ ಬಸ್​ನ ಒಳಗಡೆ ನೀರು ಸೋರುತ್ತಿದ್ದು, ಭಕ್ತರು ಆಕ್ರೋಶ ಹೊರಹಾಕಿದ್ದಾರೆ.

ಕೆಎಸ್​ಆರ್​ಟಿಸಿ ಬಸ್ ಸೋರಿಕೆ; ಬೆಂಗಳೂರಿನಿಂದ ಓಂಶಕ್ತಿ ದೇವಾಲಯಕ್ಕೆ ಹೋಗಿದ್ದ ಭಕ್ತರ ಪರದಾಟ
ಕೆಎಸ್​ಆರ್​ಟಿಸಿ ಬಸ್ ಸೋರಿಕೆ; ಬೆಂಗಳೂರಿನಿಂದ ಓಂಶಕ್ತಿ ದೇವಾಲಯಕ್ಕೆ ಹೋಗಿದ್ದ ಭಕ್ತರ ಪರದಾಟ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Jan 08, 2024 | 4:17 PM

Share

ಬೆಂಗಳೂರು, ಜ.8: ನಗರದಿಂದ ಕಾಂಚೀಪುರಂನಲ್ಲಿರುವ ಓಂ ಶಕ್ತಿ ದೇವಸ್ಥಾನಕ್ಕೆ ಕೆಎಸ್​ಆರ್​ಟಿಸಿ (KSRTC) ಸ್ಪೆಷಲ್ ಬಸ್ ಮೂಲಕ ತೆರಳಿದ್ದ ಓಂ ಶಕ್ತಿ ಮಾಲಾಧಾರಿಗಳು ಬಸ್ ಸೋರಿಕೆಯಿಂದ ಪರದಾಡುವಂತಾಗಿದೆ. ಬಸ್ ಬುಕ್ ಮಾಡಿದ ಭಕ್ತರಿಗೆ ಸಾರಿಗೆ ಇಲಾಖೆ ಡಕೋಟ ಬಸ್ ಕೊಟ್ಟಿರುವುದರಿಂದ ಭಕ್ತರು ಪರದಾಡುವಂತಾಗಿದೆ.

ಚೆನ್ನೈ, ಕಾಂಚೀಪುರಂ ಸೇರಿದಂತೆ ತಮಿಳುನಾಡಿನ ಹಲವೆಡೆ ಭಾರೀ ಮಳೆಯಾಗುತ್ತಿದೆ. ಆದರೆ, ಬೆಂಗಳೂರಿನಿಂದ ಓಂ ಶಕ್ತಿ ದೇವಾಲಯಕ್ಕೆ ಭಕ್ತರು ಹೋಗಿದ್ದ ಕೆಎಸ್​ಆರ್​ಟಿಸಿ ಬಸ್​ ಗುಜರಿಯಾಗಿದ್ದರಿಂದ ಮಳೆ ನೀರು ಸೋರಿಕೆಯಾಗುತ್ತಿದೆ.

ಬಸ್ ಒಳಗೆ ಮಳೆ ನೀರು ಸೋರುತ್ತಿದ್ದರೂ ಬಸ್ ಚಾಲಕ ಕ್ಯಾರೇ ಆನ್ನುತ್ತಿಲ್ಲ. ಮಳೆ ನೀರು ಮೈಮೇಲೆ ಬೀಳುತ್ತಿದ್ದರಿಂದ ಕುಳಿತುಕೊಳ್ಳಲು ಪರದಾಡುತ್ತಿದ್ದ ಭಕ್ತರು, ಚಾಲಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬೆಂಗಳೂರಿನಿಂದ ಕೆಎಸ್​ಆರ್​ಟಿಸಿ ಬಸ್ ಬುಕ್ ಮಾಡಿಕೊಂಡು ಹೋಗಿದ್ದರು.

ಇದನ್ನೂ ಓದಿ: ಗದಗ: ನಡುರಸ್ತೆಯಲ್ಲೇ ಕೆಟ್ಟುನಿಂತ ಕೆಎಸ್​ಆರ್​ಟಿಸಿ ಬಸ್​; ಪ್ರಯಾಣಿಕರು, ಪೊಲೀಸರೇ ತಳ್ಳಿ ಸ್ಟಾರ್ಟ್​

ಕರ್ನಾಟಕದ ಕೆಎಸ್​ಆರ್​ಟಿಸಿ ದೇಶದಲ್ಲೇ ಬೆಸ್ಟ್ ಸಾರಿಗೆ ಎನ್ನುವ ಹೆಗ್ಗಳಿಕೆ ಪಡೆದುಕೊಂಡಿದ್ದರೂ ರಾಜ್ಯದಲ್ಲಿ ಸಂಚರಿಸುವ ಹಲವು ಕೆಎಸ್​ಆರ್​ಟಿಸಿ ಹಾಗೂ ಬಿಎಂಟಿಸಿ ಬಸ್​ಗಳು ಗುಜರಿಯಾಗಿವೆ. ಮೇಲ್ಛಾವಣಿಯಲ್ಲಿ ತೂತುಗಳಿದ್ದು, ಕೆಲವೊಂದು ಕಿಟಕಿಗಳಿಗೆ ಸರಿಯಾದ ಗ್ಲಾಸ್ ಕೂಡ ಇಲ್ಲ. ಇದರಿಂದಾಗಿ ಮಳೆಗಾಳದಲ್ಲಿ ಪ್ರಯಾಣಿಸುವಾಗ ನೀರು ಒಳಗೆ ಬಂದು ಜನರು ಪರದಾಡುತ್ತಿದ್ದಾರೆ.

ರಾಜ್ಯದಲ್ಲಿ ನಿಗದಿತ ಕಿಲೋ ಮೀಟರ್​ಗಿಂತಲೂ ಹೆಚ್ಚು ಸಂಚರಿಸಿದ ಗುಜರಿ ಬಸ್​ಗಳು ಈಗಲೂ ಸಂಚರಿಸುತ್ತಿವೆ. ಇದರಿಂದಾಗಿ ಅಪಘಾತಗಳು ನಡೆಯುತ್ತಿವೆ. ಹೀಗೆ ಗುಜರಿ ಬಸ್​ನಿಂದ ಉಂಟಾದ ಅಪಘಾತದಲ್ಲಿ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ್ದರು. ಈ ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ಹೈಕೋರ್ಟ್, ಸಾಮರ್ಥ್ಯ ಕಳೆದುಕೊಂಡಿರುವ ಕೆಎಸ್​ಆರ್​ಟಿಸಿ ಬಸ್​ಗಳನ್ನು ಗುಜರಿಗೆ ಹಾಕುವಂತೆ ಇತ್ತೀಚೆಗೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.

ಬಸ್​ಗಳು ಸಂಚಾರಕ್ಕೆ ಅರ್ಹವಾಗಿದೆಯೇ ಎಂಬುದರ ಕುರಿತು ಪ್ರತಿ ವರ್ಷ ಪ್ರಾದೇಶಿಕ ಸಾರಿಗೆ ಅಧಿಕಾರಿಯಿಂದ ಸುಸ್ಥಿತಿ ದೃಢೀಕರಣ ಪತ್ರ ಬಡೆಯಬೇಕು. ದೃಢೀಕರಣ ಪತ್ರ ಪಡೆದ ಬಸ್​ಗಳಿಗೆ ಮಾತ್ರ ರಸ್ತೆಗಿಳಿಸಲು ಅವಕಾಶ ಕೊಡಬೇಕು, ಸಮಸ್ಯೆ ಇರುವ ಬಸ್​ಗಳನ್ನು ಸರಿಪಡಿಸಬೇಕು ಎಂದು ಕೋರ್ಟ್ ಆದೇಶದಲ್ಲಿ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ