AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ: ಡಿಜಿ-ಐಜಿಪಿ ಅಲೋಕ್ ಮೋಹನ್

ನಗರ‌ ಪೊಲೀಸ್ ಇಲಾಖೆ ಅಧಿಕಾರಿಗಳೊಡನೆ ಇಂದು ಸಭೆ ಮಾಡಿರುವ ಡಿಜಿ-ಐಜಿಪಿ ಅಲೋಕ್ ಮೋಹನ್ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಸೋಷಿಯಲ್ ಮೀಡಿಯಾದಲ್ಲಿ ಬರುವ ಸುಳ್ಳು ಸುದ್ದಿಗಳ ಬಗ್ಗೆ ವಿಶೇಷ ನಿಗಾಕ್ಕೆ ಸೂಚಿಸಲಾಗಿದೆ ಎಂದಿದ್ದಾರೆ.

ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ: ಡಿಜಿ-ಐಜಿಪಿ ಅಲೋಕ್ ಮೋಹನ್
ಡಿಜಿ-ಐಜಿಪಿ ಅಲೋಕ್ ಮೋಹನ್
ಗಂಗಾಧರ​ ಬ. ಸಾಬೋಜಿ
|

Updated on: Jun 22, 2023 | 4:11 PM

Share

ಬೆಂಗಳೂರು: ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಸೋಷಿಯಲ್ ಮೀಡಿಯಾದಲ್ಲಿ ಬರುವ ಸುಳ್ಳು ಸುದ್ದಿಗಳ ಬಗ್ಗೆ ವಿಶೇಷ ನಿಗಾಕ್ಕೆ ಸೂಚಿಸಲಾಗಿದೆ ಎಂದು ಡಿಜಿ-ಐಜಿಪಿ ಅಲೋಕ್ ಮೋಹನ್ (Alok Mohan) ಹೇಳಿದರು. ನಗರ‌ ಪೊಲೀಸ್ ಇಲಾಖೆ ಅಧಿಕಾರಿಗಳೊಡನೆ ಸಭೆ ಮುಕ್ತಾಯ ಬಳಿಕ ಮಾತನಾಡಿದ ಅವರು, ಕಾನೂನು‌ ಸುವ್ಯವಸ್ಥೆ, ಟ್ರಾಫಿಕ್‌ ಸುಧಾರಣೆಗೆ ಒತ್ತು ನೀಡಲಾಗುವುದು ಎಂದು ಹೇಳಿದರು.

ದೂರುಗಳಿಗೆ ಸ್ಪಂದನೆ

ಸಾರ್ವಜನಿಕರ ಜತೆ ಪೊಲೀಸರು ನಡವಳಿಕೆ ಉತ್ತಮವಾಗಿರಬೇಕು. ದೂರುಗಳು ಬಂದಾಗ ಕೂಡಲೇ ಪರಿಹರಿಸುವ ಕೆಲಸವಾಗಬೇಕು. ಈಗಾಗಲೇ ಎಲ್ಲಾ ಜಿಲ್ಲೆಗಳ ಎಸ್​ಪಿಗಳಿಗೆ ನಿರ್ದೇಶನ‌ ನೀಡಲಾಗಿದೆ. ಪೊಲೀಸ್ ಠಾಣೆಗಳಿಗೆ ಭೇಟಿ ನೀಡುವಂತೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.

ಇದನ್ನೂ ಓದಿ: ಪ್ರತಿ ದಿನ 1 ಠಾಣೆಗೆ ಭೇಟಿ ನೀಡುವಂತೆ ಹಿರಿಯ ಅಧಿಕಾರಿಗಳಿಗೆ ಖಡಕ್​ ಸೂಚನೆ ನೀಡಿದ ಡಿಜಿ & ಐಜಿಪಿ ಅಲೋಕ್ ಮೋಹನ್

ಫೋನ್ ನಂಬರ್​ ಹಾಕದ ಅಧಿಕಾರಿಗಳ ವಿರುದ್ಧ ಕ್ರಮ

ಠಾಣೆಗಳ ಮುಂದೆ ಅಧಿಕಾರಿಗಳ ದೂರವಾಣಿ ಸಂಖ್ಯೆ ಹಾಕುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಪೊಲೀಸ್ ಅಧಿಕಾರಿಗಳ ದೂರವಾಣಿ ಸಂಖ್ಯೆ ಅಳವಡಿಸಲು ಸೂಚನೆ ನೀಡಲಾಗಿದೆ. ಕೆಲ ಠಾಣೆಗಳಲ್ಲಿ ಫೋನ್​ ನಂಬರ್ ಹಾಕದಿರುವ ಬಗ್ಗೆ ದೂರುಗಳಿವೆ. ಫೋನ್ ನಂಬರ್​ ಹಾಕದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದರು.

ಇದನ್ನೂ ಓದಿ: Shivananda Patil: ಅಪ್ಪನ ಸರ್ಕಾರಿ ಕಾರಿನಲ್ಲಿ ಸಕ್ಕರೆ ಖಾತೆ ಸಚಿವರ ಪುತ್ರಿ ಸಂಚಾರ

ಒಂದು ಠಾಣೆಗೆ ದಿಢೀರ್​ ಭೇಟಿ: ಹಿರಿಯ ಅಧಿಕಾರಿಗಳಿಗೆ ಸೂಚನೆ

ಬುಧವಾರ ಕೂಡ ಹಿರಿಯ ಅಧಿಕಾರಿಗಳೊಂದಿಗೆ ಸಭೆ ಮಾಡಿದ್ದ ಡಿಜಿ-ಐಜಿಪಿ ಅಲೋಕ್ ಮೋಹನ್​  ಕಮಿಷನರ್​, ಐಜಿಪಿ, ಡಿಐಜಿಪಿ, ಎಸ್​​ಪಿಗಳಿಗೆ ಪ್ರತಿದಿನ ನಿಮ್ಮ ವ್ಯಾಪ್ತಿಯ ಒಂದು ಠಾಣೆಗೆ ದಿಢೀರ್​ ಭೇಟಿ ನೀಡಬೇಕು ಎಂದಿದ್ದಾರೆ. ಆ ಮೂಲಕ ಪೊಲೀಸರ ಕಾರ್ಯವೈಖರಿ ಪರಿಶೀಲಿಸುವಂತೆ ಸೂಚನೆ ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ