AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ: ಡಿಜಿ-ಐಜಿಪಿ ಅಲೋಕ್ ಮೋಹನ್

ನಗರ‌ ಪೊಲೀಸ್ ಇಲಾಖೆ ಅಧಿಕಾರಿಗಳೊಡನೆ ಇಂದು ಸಭೆ ಮಾಡಿರುವ ಡಿಜಿ-ಐಜಿಪಿ ಅಲೋಕ್ ಮೋಹನ್ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಸೋಷಿಯಲ್ ಮೀಡಿಯಾದಲ್ಲಿ ಬರುವ ಸುಳ್ಳು ಸುದ್ದಿಗಳ ಬಗ್ಗೆ ವಿಶೇಷ ನಿಗಾಕ್ಕೆ ಸೂಚಿಸಲಾಗಿದೆ ಎಂದಿದ್ದಾರೆ.

ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ: ಡಿಜಿ-ಐಜಿಪಿ ಅಲೋಕ್ ಮೋಹನ್
ಡಿಜಿ-ಐಜಿಪಿ ಅಲೋಕ್ ಮೋಹನ್
ಗಂಗಾಧರ​ ಬ. ಸಾಬೋಜಿ
|

Updated on: Jun 22, 2023 | 4:11 PM

Share

ಬೆಂಗಳೂರು: ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಸೋಷಿಯಲ್ ಮೀಡಿಯಾದಲ್ಲಿ ಬರುವ ಸುಳ್ಳು ಸುದ್ದಿಗಳ ಬಗ್ಗೆ ವಿಶೇಷ ನಿಗಾಕ್ಕೆ ಸೂಚಿಸಲಾಗಿದೆ ಎಂದು ಡಿಜಿ-ಐಜಿಪಿ ಅಲೋಕ್ ಮೋಹನ್ (Alok Mohan) ಹೇಳಿದರು. ನಗರ‌ ಪೊಲೀಸ್ ಇಲಾಖೆ ಅಧಿಕಾರಿಗಳೊಡನೆ ಸಭೆ ಮುಕ್ತಾಯ ಬಳಿಕ ಮಾತನಾಡಿದ ಅವರು, ಕಾನೂನು‌ ಸುವ್ಯವಸ್ಥೆ, ಟ್ರಾಫಿಕ್‌ ಸುಧಾರಣೆಗೆ ಒತ್ತು ನೀಡಲಾಗುವುದು ಎಂದು ಹೇಳಿದರು.

ದೂರುಗಳಿಗೆ ಸ್ಪಂದನೆ

ಸಾರ್ವಜನಿಕರ ಜತೆ ಪೊಲೀಸರು ನಡವಳಿಕೆ ಉತ್ತಮವಾಗಿರಬೇಕು. ದೂರುಗಳು ಬಂದಾಗ ಕೂಡಲೇ ಪರಿಹರಿಸುವ ಕೆಲಸವಾಗಬೇಕು. ಈಗಾಗಲೇ ಎಲ್ಲಾ ಜಿಲ್ಲೆಗಳ ಎಸ್​ಪಿಗಳಿಗೆ ನಿರ್ದೇಶನ‌ ನೀಡಲಾಗಿದೆ. ಪೊಲೀಸ್ ಠಾಣೆಗಳಿಗೆ ಭೇಟಿ ನೀಡುವಂತೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.

ಇದನ್ನೂ ಓದಿ: ಪ್ರತಿ ದಿನ 1 ಠಾಣೆಗೆ ಭೇಟಿ ನೀಡುವಂತೆ ಹಿರಿಯ ಅಧಿಕಾರಿಗಳಿಗೆ ಖಡಕ್​ ಸೂಚನೆ ನೀಡಿದ ಡಿಜಿ & ಐಜಿಪಿ ಅಲೋಕ್ ಮೋಹನ್

ಫೋನ್ ನಂಬರ್​ ಹಾಕದ ಅಧಿಕಾರಿಗಳ ವಿರುದ್ಧ ಕ್ರಮ

ಠಾಣೆಗಳ ಮುಂದೆ ಅಧಿಕಾರಿಗಳ ದೂರವಾಣಿ ಸಂಖ್ಯೆ ಹಾಕುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಪೊಲೀಸ್ ಅಧಿಕಾರಿಗಳ ದೂರವಾಣಿ ಸಂಖ್ಯೆ ಅಳವಡಿಸಲು ಸೂಚನೆ ನೀಡಲಾಗಿದೆ. ಕೆಲ ಠಾಣೆಗಳಲ್ಲಿ ಫೋನ್​ ನಂಬರ್ ಹಾಕದಿರುವ ಬಗ್ಗೆ ದೂರುಗಳಿವೆ. ಫೋನ್ ನಂಬರ್​ ಹಾಕದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದರು.

ಇದನ್ನೂ ಓದಿ: Shivananda Patil: ಅಪ್ಪನ ಸರ್ಕಾರಿ ಕಾರಿನಲ್ಲಿ ಸಕ್ಕರೆ ಖಾತೆ ಸಚಿವರ ಪುತ್ರಿ ಸಂಚಾರ

ಒಂದು ಠಾಣೆಗೆ ದಿಢೀರ್​ ಭೇಟಿ: ಹಿರಿಯ ಅಧಿಕಾರಿಗಳಿಗೆ ಸೂಚನೆ

ಬುಧವಾರ ಕೂಡ ಹಿರಿಯ ಅಧಿಕಾರಿಗಳೊಂದಿಗೆ ಸಭೆ ಮಾಡಿದ್ದ ಡಿಜಿ-ಐಜಿಪಿ ಅಲೋಕ್ ಮೋಹನ್​  ಕಮಿಷನರ್​, ಐಜಿಪಿ, ಡಿಐಜಿಪಿ, ಎಸ್​​ಪಿಗಳಿಗೆ ಪ್ರತಿದಿನ ನಿಮ್ಮ ವ್ಯಾಪ್ತಿಯ ಒಂದು ಠಾಣೆಗೆ ದಿಢೀರ್​ ಭೇಟಿ ನೀಡಬೇಕು ಎಂದಿದ್ದಾರೆ. ಆ ಮೂಲಕ ಪೊಲೀಸರ ಕಾರ್ಯವೈಖರಿ ಪರಿಶೀಲಿಸುವಂತೆ ಸೂಚನೆ ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು