AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿ ದಿನ 1 ಠಾಣೆಗೆ ಭೇಟಿ ನೀಡುವಂತೆ ಹಿರಿಯ ಅಧಿಕಾರಿಗಳಿಗೆ ಖಡಕ್​ ಸೂಚನೆ ನೀಡಿದ ಡಿಜಿ & ಐಜಿಪಿ ಅಲೋಕ್ ಮೋಹನ್

ಪ್ರತಿ ದಿನ 1 ಠಾಣೆಗೆ ಭೇಟಿ ನೀಡುವಂತೆ ಕಮಿಷನರ್​, ಐಜಿಪಿ, ಡಿಐಜಿಪಿ, ಎಸ್​ಪಿಗಳಿಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಖಡಕ್​ ಸೂಚನೆ ನೀಡಿದ್ದಾರೆ.

ಪ್ರತಿ ದಿನ 1 ಠಾಣೆಗೆ ಭೇಟಿ ನೀಡುವಂತೆ ಹಿರಿಯ ಅಧಿಕಾರಿಗಳಿಗೆ ಖಡಕ್​ ಸೂಚನೆ ನೀಡಿದ ಡಿಜಿ & ಐಜಿಪಿ ಅಲೋಕ್ ಮೋಹನ್
ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್
ಗಂಗಾಧರ​ ಬ. ಸಾಬೋಜಿ
|

Updated on:Jun 21, 2023 | 9:52 PM

Share

ಬೆಂಗಳೂರು: ಪ್ರತಿ ದಿನ 1 ಠಾಣೆಗೆ ಭೇಟಿ ನೀಡುವಂತೆ ಹಿರಿಯ ಅಧಿಕಾರಿಗಳಿಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ (Alok Mohan) ಸೂಚನೆ ನೀಡಿದ್ದಾರೆ. ಕಮಿಷನರ್​, ಐಜಿಪಿ, ಡಿಐಜಿಪಿ, ಎಸ್​ಪಿಗಳಿಗೆ ಪ್ರತಿ ದಿನ ನಿಮ್ಮ ವ್ಯಾಪ್ತಿಯ ಒಂದು ಠಾಣೆಗೆ ದಿಢೀರ್ ಭೇಟಿ ನೀಡಬೇಕು ಎಂದಿದ್ದಾರೆ. ಆ ಮೂಲಕ ಪೊಲೀಸರ ಕಾರ್ಯವೈಖರಿ ಪರಿಶೀಲಿಸುವಂತೆ ಸೂಚನೆ ನೀಡಿದ್ದಾರೆ. ಭದ್ರತೆಗೆ ನಿಯೋಜನೆಯಾಗಿದ್ದರೆ ಅಧಿಕಾರಿಗಳ ಸಂಪರ್ಕದಲ್ಲಿ ಇರಬೇಕು ಎಂದು ಹೇಳಿದ್ದಾರೆ.

ಹೆಡ್​ ಕಾನ್ಸ್​ಟೇಬಲ್, ಕಾನ್ಸ್​ಟೇಬಲ್​ಗಳ ಜೊತೆಗೂ ಸಂವಹನ ನಡೆಸಿ. ಪೊಲೀಸ್ ಠಾಣೆಗೆ ಬರುವ ಸಾರ್ವಜನಿಕರ ಜೊತೆ ಚರ್ಚೆ ನಡೆಸಬೇಕು. ಕಮಿಷನರ್, ಎಸ್​ಪಿ ವಾರದಲ್ಲಿ ಒಂದು ದಿನ ನೈಟ್​ ರೌಂಡ್ಸ್ ಮಾಡಬೇಕು. ನೈಟ್​ ಬೀಟ್​ ಸಿಬ್ಬಂದಿ ಕಾರ್ಯವೈಖರಿ ಪರಿಶೀಲಿಸಲು ದಿಢೀರ್ ಭೇಟಿ ನೀಡಿ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಭೇಟಿಗೆ ಅವಕಾಶ ನೀಡುತ್ತಿಲ್ಲ; ಕೇಂದ್ರ ಸಚಿವ ಪಿಯೂಷ್ ಗೋಯಲ್ ವಿರುದ್ಧ ಮುನಿಯಪ್ಪ ಆರೋಪ

ಕರ್ನಾಟಕದ ನೂತನ ಡಿಜಿ ಹಾಗೂ ಐಜಿಪಿಯಾಗಿ ಅಲೋಕ್ ಮೋಹನ್​ ಅವರು ಮೇ ತಿಂಗಳಲ್ಲಿ ಅಧಿಕಾರ ಸ್ವೀಕರಿಸಿದ್ದರು. ಬಿಹಾರ ಮೂಲದ ಡಾ. ಅಲೋಕ್ ಮೋಹನ್ ಹಿರಿಯ ಐಪಿಎಸ್ ಅಧಿಕಾರಿಯಾಗಿದ್ದಾರೆ. ಇವರು 1987ನೇ ಬ್ಯಾಚ್​​ನ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿಯಾಗಿದ್ದು, 36 ವರ್ಷಗಳಿಂದ ಸುದೀರ್ಘ ಸೇವೆ ಸಲ್ಲಿಸುತ್ತಿದ್ದಾರೆ.

ಇದನ್ನೂ ಓದಿ: ವಿದ್ಯುತ್ ಆಯ್ತು, ಇನ್ನು ದುಬಾರಿಯಾಗಲಿದೆ ಅಕ್ಕಿ; ಬೆಲೆ ಹೆಚ್ಚಳಕ್ಕೆ ಕರ್ನಾಟಕ ರೈಸ್ ಮಿಲ್ಲರ್ಸ್ ಫೆಡರೇಷನ್ ಚಿಂತನೆ

ಅಗ್ನಿಶಾಮಕ ದಳ, ತುರ್ತು ಸೇವೆಗಳ ಡಿಜಿಪಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಕಾರಾಗೃಹ ಡಿಜಿಪಿ, ಬೆಂಗಳೂರು ನಗರ ಅಪರಾಧ ವಿಭಾಗದ ಜಂಟಿ ಆಯುಕ್ತ, ಎಸಿಬಿ ಎಡಿಜಿಪಿ ಸೇರಿದಂತೆ ಹಲವು ಹುದ್ದೆಗಳನ್ನು ನಿರ್ವಹಿಸಿದ್ದಾರೆ. 2025ರ ಏಪ್ರಿಲ್​ನಲ್ಲಿ ನಿವೃತ್ತರಾಗಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:45 pm, Wed, 21 June 23

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?