AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿ ದಿನ 1 ಠಾಣೆಗೆ ಭೇಟಿ ನೀಡುವಂತೆ ಹಿರಿಯ ಅಧಿಕಾರಿಗಳಿಗೆ ಖಡಕ್​ ಸೂಚನೆ ನೀಡಿದ ಡಿಜಿ & ಐಜಿಪಿ ಅಲೋಕ್ ಮೋಹನ್

ಪ್ರತಿ ದಿನ 1 ಠಾಣೆಗೆ ಭೇಟಿ ನೀಡುವಂತೆ ಕಮಿಷನರ್​, ಐಜಿಪಿ, ಡಿಐಜಿಪಿ, ಎಸ್​ಪಿಗಳಿಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಖಡಕ್​ ಸೂಚನೆ ನೀಡಿದ್ದಾರೆ.

ಪ್ರತಿ ದಿನ 1 ಠಾಣೆಗೆ ಭೇಟಿ ನೀಡುವಂತೆ ಹಿರಿಯ ಅಧಿಕಾರಿಗಳಿಗೆ ಖಡಕ್​ ಸೂಚನೆ ನೀಡಿದ ಡಿಜಿ & ಐಜಿಪಿ ಅಲೋಕ್ ಮೋಹನ್
ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್
ಗಂಗಾಧರ​ ಬ. ಸಾಬೋಜಿ
|

Updated on:Jun 21, 2023 | 9:52 PM

Share

ಬೆಂಗಳೂರು: ಪ್ರತಿ ದಿನ 1 ಠಾಣೆಗೆ ಭೇಟಿ ನೀಡುವಂತೆ ಹಿರಿಯ ಅಧಿಕಾರಿಗಳಿಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ (Alok Mohan) ಸೂಚನೆ ನೀಡಿದ್ದಾರೆ. ಕಮಿಷನರ್​, ಐಜಿಪಿ, ಡಿಐಜಿಪಿ, ಎಸ್​ಪಿಗಳಿಗೆ ಪ್ರತಿ ದಿನ ನಿಮ್ಮ ವ್ಯಾಪ್ತಿಯ ಒಂದು ಠಾಣೆಗೆ ದಿಢೀರ್ ಭೇಟಿ ನೀಡಬೇಕು ಎಂದಿದ್ದಾರೆ. ಆ ಮೂಲಕ ಪೊಲೀಸರ ಕಾರ್ಯವೈಖರಿ ಪರಿಶೀಲಿಸುವಂತೆ ಸೂಚನೆ ನೀಡಿದ್ದಾರೆ. ಭದ್ರತೆಗೆ ನಿಯೋಜನೆಯಾಗಿದ್ದರೆ ಅಧಿಕಾರಿಗಳ ಸಂಪರ್ಕದಲ್ಲಿ ಇರಬೇಕು ಎಂದು ಹೇಳಿದ್ದಾರೆ.

ಹೆಡ್​ ಕಾನ್ಸ್​ಟೇಬಲ್, ಕಾನ್ಸ್​ಟೇಬಲ್​ಗಳ ಜೊತೆಗೂ ಸಂವಹನ ನಡೆಸಿ. ಪೊಲೀಸ್ ಠಾಣೆಗೆ ಬರುವ ಸಾರ್ವಜನಿಕರ ಜೊತೆ ಚರ್ಚೆ ನಡೆಸಬೇಕು. ಕಮಿಷನರ್, ಎಸ್​ಪಿ ವಾರದಲ್ಲಿ ಒಂದು ದಿನ ನೈಟ್​ ರೌಂಡ್ಸ್ ಮಾಡಬೇಕು. ನೈಟ್​ ಬೀಟ್​ ಸಿಬ್ಬಂದಿ ಕಾರ್ಯವೈಖರಿ ಪರಿಶೀಲಿಸಲು ದಿಢೀರ್ ಭೇಟಿ ನೀಡಿ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಭೇಟಿಗೆ ಅವಕಾಶ ನೀಡುತ್ತಿಲ್ಲ; ಕೇಂದ್ರ ಸಚಿವ ಪಿಯೂಷ್ ಗೋಯಲ್ ವಿರುದ್ಧ ಮುನಿಯಪ್ಪ ಆರೋಪ

ಕರ್ನಾಟಕದ ನೂತನ ಡಿಜಿ ಹಾಗೂ ಐಜಿಪಿಯಾಗಿ ಅಲೋಕ್ ಮೋಹನ್​ ಅವರು ಮೇ ತಿಂಗಳಲ್ಲಿ ಅಧಿಕಾರ ಸ್ವೀಕರಿಸಿದ್ದರು. ಬಿಹಾರ ಮೂಲದ ಡಾ. ಅಲೋಕ್ ಮೋಹನ್ ಹಿರಿಯ ಐಪಿಎಸ್ ಅಧಿಕಾರಿಯಾಗಿದ್ದಾರೆ. ಇವರು 1987ನೇ ಬ್ಯಾಚ್​​ನ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿಯಾಗಿದ್ದು, 36 ವರ್ಷಗಳಿಂದ ಸುದೀರ್ಘ ಸೇವೆ ಸಲ್ಲಿಸುತ್ತಿದ್ದಾರೆ.

ಇದನ್ನೂ ಓದಿ: ವಿದ್ಯುತ್ ಆಯ್ತು, ಇನ್ನು ದುಬಾರಿಯಾಗಲಿದೆ ಅಕ್ಕಿ; ಬೆಲೆ ಹೆಚ್ಚಳಕ್ಕೆ ಕರ್ನಾಟಕ ರೈಸ್ ಮಿಲ್ಲರ್ಸ್ ಫೆಡರೇಷನ್ ಚಿಂತನೆ

ಅಗ್ನಿಶಾಮಕ ದಳ, ತುರ್ತು ಸೇವೆಗಳ ಡಿಜಿಪಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಕಾರಾಗೃಹ ಡಿಜಿಪಿ, ಬೆಂಗಳೂರು ನಗರ ಅಪರಾಧ ವಿಭಾಗದ ಜಂಟಿ ಆಯುಕ್ತ, ಎಸಿಬಿ ಎಡಿಜಿಪಿ ಸೇರಿದಂತೆ ಹಲವು ಹುದ್ದೆಗಳನ್ನು ನಿರ್ವಹಿಸಿದ್ದಾರೆ. 2025ರ ಏಪ್ರಿಲ್​ನಲ್ಲಿ ನಿವೃತ್ತರಾಗಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:45 pm, Wed, 21 June 23

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!