AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿ ದಿನ 1 ಠಾಣೆಗೆ ಭೇಟಿ ನೀಡುವಂತೆ ಹಿರಿಯ ಅಧಿಕಾರಿಗಳಿಗೆ ಖಡಕ್​ ಸೂಚನೆ ನೀಡಿದ ಡಿಜಿ & ಐಜಿಪಿ ಅಲೋಕ್ ಮೋಹನ್

ಪ್ರತಿ ದಿನ 1 ಠಾಣೆಗೆ ಭೇಟಿ ನೀಡುವಂತೆ ಕಮಿಷನರ್​, ಐಜಿಪಿ, ಡಿಐಜಿಪಿ, ಎಸ್​ಪಿಗಳಿಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಖಡಕ್​ ಸೂಚನೆ ನೀಡಿದ್ದಾರೆ.

ಪ್ರತಿ ದಿನ 1 ಠಾಣೆಗೆ ಭೇಟಿ ನೀಡುವಂತೆ ಹಿರಿಯ ಅಧಿಕಾರಿಗಳಿಗೆ ಖಡಕ್​ ಸೂಚನೆ ನೀಡಿದ ಡಿಜಿ & ಐಜಿಪಿ ಅಲೋಕ್ ಮೋಹನ್
ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್
ಗಂಗಾಧರ​ ಬ. ಸಾಬೋಜಿ
|

Updated on:Jun 21, 2023 | 9:52 PM

Share

ಬೆಂಗಳೂರು: ಪ್ರತಿ ದಿನ 1 ಠಾಣೆಗೆ ಭೇಟಿ ನೀಡುವಂತೆ ಹಿರಿಯ ಅಧಿಕಾರಿಗಳಿಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ (Alok Mohan) ಸೂಚನೆ ನೀಡಿದ್ದಾರೆ. ಕಮಿಷನರ್​, ಐಜಿಪಿ, ಡಿಐಜಿಪಿ, ಎಸ್​ಪಿಗಳಿಗೆ ಪ್ರತಿ ದಿನ ನಿಮ್ಮ ವ್ಯಾಪ್ತಿಯ ಒಂದು ಠಾಣೆಗೆ ದಿಢೀರ್ ಭೇಟಿ ನೀಡಬೇಕು ಎಂದಿದ್ದಾರೆ. ಆ ಮೂಲಕ ಪೊಲೀಸರ ಕಾರ್ಯವೈಖರಿ ಪರಿಶೀಲಿಸುವಂತೆ ಸೂಚನೆ ನೀಡಿದ್ದಾರೆ. ಭದ್ರತೆಗೆ ನಿಯೋಜನೆಯಾಗಿದ್ದರೆ ಅಧಿಕಾರಿಗಳ ಸಂಪರ್ಕದಲ್ಲಿ ಇರಬೇಕು ಎಂದು ಹೇಳಿದ್ದಾರೆ.

ಹೆಡ್​ ಕಾನ್ಸ್​ಟೇಬಲ್, ಕಾನ್ಸ್​ಟೇಬಲ್​ಗಳ ಜೊತೆಗೂ ಸಂವಹನ ನಡೆಸಿ. ಪೊಲೀಸ್ ಠಾಣೆಗೆ ಬರುವ ಸಾರ್ವಜನಿಕರ ಜೊತೆ ಚರ್ಚೆ ನಡೆಸಬೇಕು. ಕಮಿಷನರ್, ಎಸ್​ಪಿ ವಾರದಲ್ಲಿ ಒಂದು ದಿನ ನೈಟ್​ ರೌಂಡ್ಸ್ ಮಾಡಬೇಕು. ನೈಟ್​ ಬೀಟ್​ ಸಿಬ್ಬಂದಿ ಕಾರ್ಯವೈಖರಿ ಪರಿಶೀಲಿಸಲು ದಿಢೀರ್ ಭೇಟಿ ನೀಡಿ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಭೇಟಿಗೆ ಅವಕಾಶ ನೀಡುತ್ತಿಲ್ಲ; ಕೇಂದ್ರ ಸಚಿವ ಪಿಯೂಷ್ ಗೋಯಲ್ ವಿರುದ್ಧ ಮುನಿಯಪ್ಪ ಆರೋಪ

ಕರ್ನಾಟಕದ ನೂತನ ಡಿಜಿ ಹಾಗೂ ಐಜಿಪಿಯಾಗಿ ಅಲೋಕ್ ಮೋಹನ್​ ಅವರು ಮೇ ತಿಂಗಳಲ್ಲಿ ಅಧಿಕಾರ ಸ್ವೀಕರಿಸಿದ್ದರು. ಬಿಹಾರ ಮೂಲದ ಡಾ. ಅಲೋಕ್ ಮೋಹನ್ ಹಿರಿಯ ಐಪಿಎಸ್ ಅಧಿಕಾರಿಯಾಗಿದ್ದಾರೆ. ಇವರು 1987ನೇ ಬ್ಯಾಚ್​​ನ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿಯಾಗಿದ್ದು, 36 ವರ್ಷಗಳಿಂದ ಸುದೀರ್ಘ ಸೇವೆ ಸಲ್ಲಿಸುತ್ತಿದ್ದಾರೆ.

ಇದನ್ನೂ ಓದಿ: ವಿದ್ಯುತ್ ಆಯ್ತು, ಇನ್ನು ದುಬಾರಿಯಾಗಲಿದೆ ಅಕ್ಕಿ; ಬೆಲೆ ಹೆಚ್ಚಳಕ್ಕೆ ಕರ್ನಾಟಕ ರೈಸ್ ಮಿಲ್ಲರ್ಸ್ ಫೆಡರೇಷನ್ ಚಿಂತನೆ

ಅಗ್ನಿಶಾಮಕ ದಳ, ತುರ್ತು ಸೇವೆಗಳ ಡಿಜಿಪಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಕಾರಾಗೃಹ ಡಿಜಿಪಿ, ಬೆಂಗಳೂರು ನಗರ ಅಪರಾಧ ವಿಭಾಗದ ಜಂಟಿ ಆಯುಕ್ತ, ಎಸಿಬಿ ಎಡಿಜಿಪಿ ಸೇರಿದಂತೆ ಹಲವು ಹುದ್ದೆಗಳನ್ನು ನಿರ್ವಹಿಸಿದ್ದಾರೆ. 2025ರ ಏಪ್ರಿಲ್​ನಲ್ಲಿ ನಿವೃತ್ತರಾಗಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:45 pm, Wed, 21 June 23

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ