AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PSI Recruitment Scam: ಧಾರವಾಡದಲ್ಲೂ ಅಕ್ರಮ ನಡೆದಿರುವ ಅನುಮಾನ! ಕಿಂಗ್​ಪಿನ್​ ಮಂಜುನಾಥ ಫೋನ್​ಗಾಗಿ ಅಣೆಕಟ್ಟಿನಲ್ಲಿ ಹುಡುಕಾಟ

ಕಿಂಗ್​ಪಿನ್​ ಆಗಿರುವ ಮಂಜುನಾಥ ಮೇಳಕುಂದಿ ಫೋನ್ಗಾಗಿ ಶೋಧಕಾರ್ಯ ಮುಂದುವರಿದಿದೆ. ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಅಮರ್ಜಾ ಅಣೆಕಟ್ಟೆಯಲ್ಲಿ ಸಿಐಡಿ ತಂಡ ಹುಡುಕಾಟ ನಡೆಸಿದೆ.

PSI Recruitment Scam: ಧಾರವಾಡದಲ್ಲೂ ಅಕ್ರಮ ನಡೆದಿರುವ ಅನುಮಾನ! ಕಿಂಗ್​ಪಿನ್​ ಮಂಜುನಾಥ ಫೋನ್​ಗಾಗಿ ಅಣೆಕಟ್ಟಿನಲ್ಲಿ ಹುಡುಕಾಟ
ಅಣೆಕಟ್ಟಿನಲ್ಲಿ ಸಿಐಡಿ ಅಧಿಕಾರಿಗಳು ಫೋನ್​ಗಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ
TV9 Web
| Edited By: |

Updated on:May 10, 2022 | 11:58 AM

Share

ಬೆಂಗಳೂರು: ಪಿಎಸ್ಐ ಹುದ್ದೆಗಳ (PSI Recruitment) ನೇಮಕಾತಿಯಲ್ಲಿ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಅಕ್ರಮ ನಡೆದಿರುವ ಬಗ್ಗೆ ಸಿಐಡಿ (CID) ತನಿಖೆಯಲ್ಲಿ ತಿಳಿದುಬಂದಿದೆ. ಇನ್ನು ಧಾರವಾಡದ ಪರೀಕ್ಷಾ ಕೇಂದ್ರಗಳಲ್ಲೂ ಅಕ್ರಮ ನಡೆದಿರುವ ಶಂಕೆ ವ್ಯಕ್ತವಾಗಿದೆ. ನಿನ್ನೆಯಿಂದ ಧಾರವಾಡದಲ್ಲಿ ಸಿಐಡಿ ಅಧಿಕಾರಿಗಳು ಬೀಡುಬಿಟ್ಟಿದ್ದಾರಂತೆ. ಹು-ಧಾ ಅವಳಿ ನಗರದ 23 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದೆ. ಧಾರವಾಡದ ಐದು ಕೇಂದ್ರಗಳಲ್ಲಿ ಪಿಎಸ್ಐ ಪರೀಕ್ಷೆ ನಡೆದಿತ್ತು. ಪರೀಕ್ಷೆ ನಡೆದಿದ್ದ ಕೇಂದ್ರಗಳಿಗೆ ಸಿಐಡಿ ತಂಡ ಭೇಟಿ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

ಕಿಂಗ್​ಪಿನ್​ ಆಗಿರುವ ಮಂಜುನಾಥ ಮೇಳಕುಂದಿ ಫೋನ್ಗಾಗಿ ಶೋಧಕಾರ್ಯ ಮುಂದುವರಿದಿದೆ. ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಅಮರ್ಜಾ ಅಣೆಕಟ್ಟೆಯಲ್ಲಿ ಸಿಐಡಿ ತಂಡ ಹುಡುಕಾಟ ನಡೆಸಿದೆ. ನಿನ್ನೆ ಇಡೀ ದಿನ ಸಿಬ್ಬಂದಿ ಮೊಬೈಲ್ಗಾಗಿ ಹುಡುಕಾಟ ನಡೆಸಿತ್ತು. ಆದರೆ ಸಿಕ್ಕಿರಲಿಲ್ಲ. ನುರಿತ ಈಜು ತಜ್ಞರನ್ನು ಕರೆದುಕೊಂಡು ಹೋಗಿ ಹುಡುಕಾಟ ನಡೆಸುತ್ತಿದ್ದಾರೆ. ಮಂಜುನಾಥ ಪರೀಕ್ಷಾ ಅಕ್ರಮಕ್ಕೆ ಬಳಸಿದ್ದ ಮೊಬೈಲ್ ಎಸೆದಿದ್ದಾನೆ. 100 ಅಡಿ ಆಳದಲ್ಲಿರುವ ಮೊಬೈಲ್​ಗಾಗಿ ಸಿಐಡಿ ಹುಡುಕುತ್ತಿದೆ.

ತನ್ನ ಸಹೋದರನನ್ನು ಪಿಎಸ್ಐ ಮಾಡಬೇಕು ‌ಅಂತ ಮಂಜುನಾಥ ಮೇಳಕುಂದಿ ಆಸೆ ಹೊಂದಿದ್ದ. ಆದರೆ ವಯಸ್ಸಿನ ಸಮಸ್ಯಯಿಂದ ಅದು ಸಾಧ್ಯವಾಗಿರಲಿಲ್ಲ. ಆದರೆ ಅಕ್ರಮದ ಮೂಲಕ ಅನೇಕರಿಗೆ ಪಿಎಸ್ಐ ನೌಕರಿ ಕೊಡಿಸಿದ್ದಾನೆ.

21 ಲಕ್ಷ ರೂಪಾಯಿ ವಂಚನೆ: ಪಿಎಸ್​ಐ ಹುದ್ದೆ ಕೊಡಿಸುವುದಾಗಿ ಸುಮಾರು 21 ಲಕ್ಷ ರೂಪಾಯಿ ವಂಚನೆ ಮಾಡಿದ್ದಾರೆ ಎಂದು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಠಾಣೆಯಲ್ಲಿ ಕೇಸ್ ದಾಖಲಾಗಿದೆ. 2019ರಲ್ಲಿ PSI ಹುದ್ದೆ ಕೊಡಿಸುವುದಾಗಿ ಬಾಗೇಪಲ್ಲಿ ಮೂಲದ ಶಿಕ್ಷಕ ಸತ್ಯನಾರಾಯಣ ಎಂಬುವವರಿಗೆ ವಂಚನೆ ಮಾಡಿದ್ದಾರೆ. ಹುಬ್ಬಳ್ಳಿ ಮೂಲದ ನವೀನ್, ಸುಹಾಸ್, ಪವನ್ ವಂಚನೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಇದನ್ನೂ ಓದಿ

IND vs AUS T20: ಸೆಪ್ಟೆಂಬರ್​ನಲ್ಲಿ ಭಾರತ-ಆಸ್ಟ್ರೇಲಿಯಾ ನಡುವೆ ಟಿ20 ಸರಣಿ: ಎಲ್ಲಿ?, ಯಾವಾಗ?

America Stock Market: ಅಮೆರಿಕದ ನಾಸ್ಡಾಕ್ 100 ಸೂಚ್ಯಂಕದ ಮಾರುಕಟ್ಟೆ ಮೌಲ್ಯ 3 ದಿನದಲ್ಲಿ 115.85 ಲಕ್ಷ ಕೋಟಿ ರೂಪಾಯಿ ಉಡೀಸ್

Published On - 11:47 am, Tue, 10 May 22

Follow Us
Web contact
Web contact

TV9 Kannada

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ