AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಯೋನಿಕ್ಸ್​ನಲ್ಲಿ ಹಣಕಾಸು ವ್ಯವಹಾರಗಳಲ್ಲಿ ವ್ಯತ್ಯಾಸ: ತನಿಖಾ ಸಮಿತಿ ರಚಿಸಿ ಸರ್ಕಾರ ಆದೇಶ

ಕರ್ನಾಟಕ ರಾಜ್ಯ ವಿದ್ಮುನ್ಮಾನ ಅಭಿವೃದ್ಧಿ ನಿಗಮದಲ್ಲಿ (ಕಿಯೋನಿಕ್ಸ್​) 2018-19ರಿಂದ 2022-23ರವರೆಗಿನ ಹಣಕಾಸು ವ್ಯವಹಾರಗಳ ವ್ಯತ್ಯಾಸ ಹಿನ್ನೆಲೆ ನಿವೃತ್ತ IAS ಅಧಿಕಾರಿ ಎಸ್.ಡಿ.ಮೀನಾ ನೇತೃತ್ವದಲ್ಲಿ ತನಿಖಾ ಸಮಿತಿ ರಚಿಸಿ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ. ಆಕ್ಷೇಪದ ಹಿನ್ನೆಲೆಯಲ್ಲಿ ತನಿಖಾ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 

ಕಿಯೋನಿಕ್ಸ್​ನಲ್ಲಿ ಹಣಕಾಸು ವ್ಯವಹಾರಗಳಲ್ಲಿ ವ್ಯತ್ಯಾಸ: ತನಿಖಾ ಸಮಿತಿ ರಚಿಸಿ ಸರ್ಕಾರ ಆದೇಶ
vidhana soudha
ಪ್ರಸನ್ನ ಗಾಂವ್ಕರ್​
| Edited By: |

Updated on:Feb 03, 2024 | 10:59 PM

Share

ಬೆಂಗಳೂರು, ಫೆಬ್ರವರಿ 3: ಕರ್ನಾಟಕ ರಾಜ್ಯ ವಿದ್ಮುನ್ಮಾನ ಅಭಿವೃದ್ಧಿ ನಿಗಮದಲ್ಲಿ (Keonics​) 2018-19ರಿಂದ 2022-23ರವರೆಗಿನ ಹಣಕಾಸು ವ್ಯವಹಾರಗಳ ವ್ಯತ್ಯಾಸ ಹಿನ್ನೆಲೆ ನಿವೃತ್ತ IAS ಅಧಿಕಾರಿ ಎಸ್.ಡಿ.ಮೀನಾ ನೇತೃತ್ವದಲ್ಲಿ ತನಿಖಾ ಸಮಿತಿ ರಚಿಸಿ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ. ಕಿಯೋನಿಕ್ಸ್ ಹಣಕಾಸು ನಿರ್ವಹಣೆಯಲ್ಲಿ ಲೋಪದೋಷ ಬಗ್ಗೆ ಪ್ರಧಾನ ಮಹಾ ಲೆಕ್ಕಪರಿಶೋಧಕರಿಂದ ಆಕ್ಷೇಪ ವ್ಯಕ್ತಪಡಿಸಲಾಗಿದೆ. ಆಕ್ಷೇಪದ ಹಿನ್ನೆಲೆಯಲ್ಲಿ ತನಿಖಾ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

8 ತಿಂಗಳಿನಿಂದ ಆಗುತ್ತಿದೆ ಕಿಯೋನಿಕ್ಸ್ ಗುತ್ತಿಗೆದಾರರಿಗೆ ಸಮಸ್ಯೆ

ಕಳೆದ ಎಂಟು ತಿಂಗಳಿನಿಂದ ನಮಗೆ ಸಮಸ್ಯೆ ಇದ್ದು, ಇವತ್ತು ಮಿನಿಸ್ಟರ್ ಒಂದು ಮಾತು ಹೇಳಿದ್ರು, ‘ನಾವು ಯಾವುದೇ ಕಾರಣಕ್ಕೂ ರಾಜಕಾರಣಿಗಳು ಅಲ್ಲ, ಅವರಿಗೆ ತಕ್ಕನಾಗೇ ವಿರೋಧ ಪಕ್ಷದ ಮುಖಂಡರು ಮಾತನಾಡಿದ್ದಾರೆ ಎಂದಿದ್ದಾರೆ.

ಇದನ್ನೂ ಓದಿ: ಗುತ್ತಿಗೆದಾರರಿಗೆ ಬಾಕಿ ಬಿಲ್ ಪಾವತಿ ವಿಳಂಬ; ಸಚಿವ ಪ್ರಿಯಾಂಕ್ ಖರ್ಗೆ ಆಸ್ತಿ ವಿಚಾರ ಕೆದಕಿದ ಕಿಯೋನಿಕ್ಸ್ ಸಂಘದ ಅಧ್ಯಕ್ಷ ವಸಂತ್ ಬಂಗೇರ

ಇದರಲ್ಲಿ ನಾವು ರಾಜಕೀಯ ಬೇರಿಸಿಲ್ಲ, ನಾವು ಯಾವುದೇ ಸರ್ಕಾರ ಬಂದರೂ ಸರ್ಕಾರದ ಅಂಗಾಂಗಳು ನಮ್ಮನ್ನ ಆಡಿಸ್ತಾ ಇಲ್ಲ. ನಮ್ಮ ನೋವು ಹೇಳಿಕೊಳ್ಳುತ್ತಾ ಇದ್ದೀವಿ. ನಾವು ನಿಮ್ಮ ಹತ್ರ ಬಂದಾಗ ಬಿಲ್ ಕ್ಲಿಯರ್ ಮಾಡಿ ಎಂದು ಹೇಳಿದ್ದೀರಿ ಎಂದರು.

ನಾವು ಕಿಯೋನಿಕ್ಸ್ ಸಂಸ್ಥೆಯಲ್ಲಿ ಅನ್ನ ತಿಂದಿದ್ದೇವೆ. ನೀವು ಬಂದಾಗ ಅವರದ್ದು ಹುಡುಕುವುದು, ಅವರು ಬಂದಾಗ ನಿಮ್ಮದು ಹುಡುಕುವುದು. ಉತ್ತರ ಕರ್ನಾಟಕದ ‌ತಾಂಡ ಅಭಿವೃದ್ಧಿ ನಿಗಮದಿಂದ ಶುದ್ಧ ನೀರು ಕುಡಿಯುವ ಮಿಷನ್​ನ್ನು 2019 ರಲ್ಲಿ ಹಾಕಿ, 5 ಕೋಟಿ 50 ಲಕ್ಷ ಹಣವನ್ನ ಬಿಡುಗಡೆ ಮಾಡಿದ್ದಾರೆ.

ಇದನ್ನೂ ಓದಿ: ಕಿಯೋನಿಕ್ಸ್ ಎಂಡಿ 32 ಕೋಟಿ ರೂ. ಲಂಚ ಆರೋಪ: ಅಂತಹ ಯಾವುದೇ ಘಟನೆ ನಡೆದಿಲ್ಲ ಎಂದ ಸಚಿವ ಪ್ರಿಯಾಂಕ್​ ಖರ್ಗೆ

ಇದರಲ್ಲಿ ಬರೋಬ್ಬರಿ ಒಂದು ಲಕ್ಷ ಹಣ ವ್ಯತ್ಯಾಸ ಇದೆ. ನಮ್ಮನ್ನ ಕಳ್ಳರಂತೆ ಬಿಂಬಿಸಲಾಗುತ್ತಿದೆ. ಪ್ರತಿ ವರ್ಷ ಅಡಿಟ್ ಆಗುತ್ತೆ. ಯಾವುದೇ ಇಲಾಖೆಯಲ್ಲಿ ಹೋದರೂ, ನ್ಯೂನತೆಗಳನ್ನ ಬರೆದು ಬರುತ್ತಾರೆ. ಯಾರೋ ನಾಲ್ಕು ಜನ ಕಳ್ಳರು ಮಾಡಿರಬಹುದು, ಅವರನ್ನ ಬ್ಲಾಕ್ ಲಿಸ್ಟ್​ಗೆ ಹಾಕಿ, ಅವರ ಮೇಲೆ ನೀವು ಕ್ರಮ‌ಕೈಗೊಳ್ಳಿ ಎಂದು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:43 pm, Sat, 3 February 24

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!