AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲೆಕ್ಟ್ರಾನಿಕ್ ಸಿಟಿ ಆರ್​ಟಿಓ ಕಚೇರಿಯಲ್ಲಿ ಅಕ್ರಮ: 3 ದಿನಗಳಲ್ಲಿ ಬರೋಬ್ಬರಿ 2504 ಡಿಎಲ್​ ಮಾರಾಟ

ಎಲೆಕ್ಟ್ರಾನಿಕ್ ಸಿಟಿ ಕೆಎ.51 ಆರ್​ಟಿಓ ಕಚೇರಿಯಲ್ಲಿ ಅಕ್ರಮ ತಾಂಡವಾಡುತ್ತಿದ್ದು, ಸಾರಿಗೆ ಇಲಾಖೆ ಅಧಿಕಾರಿ ಟೆಸ್ಟ್​​ ಡ್ರೈವ್​​ ತೆಗೆದುಕೊಳ್ಳದೆ ಡಿಎಲ್​​ ಮಾರಾಟ ಮಾಡಿದ್ದಾರೆ ಎಂಬ ಆರೋಪ ಕೇಳಿಬಂಬಿದೆ.

ಎಲೆಕ್ಟ್ರಾನಿಕ್ ಸಿಟಿ ಆರ್​ಟಿಓ ಕಚೇರಿಯಲ್ಲಿ ಅಕ್ರಮ: 3 ದಿನಗಳಲ್ಲಿ ಬರೋಬ್ಬರಿ 2504 ಡಿಎಲ್​ ಮಾರಾಟ
ಎಲೆಕ್ಟ್ರಾನಿಕ್ ಸಿಟಿ ಆರ್​ಟಿಓ ಕಚೇರಿ
Follow us
TV9 Web
| Updated By: ವಿವೇಕ ಬಿರಾದಾರ

Updated on: Jan 17, 2023 | 10:23 AM

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಕೆಎ.51 (KA.51 RTO Office) ಸಾರಿಗೆ ಇಲಾಖೆ ಕಚೇರಿಯಲ್ಲಿ (RTO) ಅಕ್ರಮ ತಾಂಡವಾಡುತ್ತಿದ್ದು, ಸಾರಿಗೆ ಇಲಾಖೆ ಅಧಿಕಾರಿ ಟೆಸ್ಟ್​​ ಡ್ರೈವ್​​ ತೆಗೆದುಕೊಳ್ಳದೆ ಡಿಎಲ್​​ (Driving License​​) ಮಾರಾಟ ಮಾಡಿದ್ದಾನೆ ಎಂಬ ಆರೋಪ ಕೇಳಿಬಂಬಿದೆ. ಡಿಸೆಂಬರ್-19 2022 ರಂದು 964, ಡಿಸೆಂಬರ್​-20 ರಂದು 979 ಡಿಎಲ್, ಡಿಸೆಂಬರ್-21 ರಂದು 561 ಡಿಎಲ್​ಗಳನ್ನು ವಿತರಿಸಿದ್ದಾನೆ. ಅಧಿಕಾರಿ ಡಿಎಲ್​ಗೆ 3 ರಿಂದ 5 ಸಾವಿರ ರೂ. ಪಡೆದು 3 ದಿನಗಳಲ್ಲಿ ಬರೋಬ್ಬರಿ 2504 ಡ್ರೈವಿಂಗ್ ಲೈಸೆನ್ಸ್​​ಗಳನ್ನು ಅಕ್ರಮವಾಗಿ ಮಾರಿದ್ದಾನೆ.

ಹೀಗೆ ಅಕ್ರಮವಾಗಿ ಬೇಕಾಬಿಟ್ಟಿ ಡಿಎಲ್​ಗಳನ್ನು ವಿತರಣೆ ಮಾಡಿದ್ದ ARTO ಕೃಷ್ಣಾನಂದನನ್ನು ಕರ್ತವ್ಯ ಲೋಪವೆಸಗಿದ್ದಾನೆಂದು ಸಾರಿಗೆ ಇಲಾಖೆ ಕಮಿಷನರ್ ಎಸ್.ಎನ್ ಸಿದ್ದರಾಮಪ್ಪ ಅಮಾನತು ಮಾಡಿದ್ದಾರೆ.ಕೇವಲ ಎಲೆಕ್ಟ್ರಾನಿಕ್ ಸಿಟಿ ಆರ್​ಟಿಓ ಕಚೇರಿಯಲ್ಲಿ ಮಾತ್ರವಲ್ಲ, ಬೆಂಗಳೂರು ಕೇಂದ್ರ, ದಕ್ಷಿಣ, ಹಾಗೂ ಕೆಆರ್​ಪುರಂ ಕಚೇರಿಗಳಲ್ಲಿಯೂ ಬೇಕಾಬಿಟ್ಟಿಯಾಗಿ ಡಿಎಲ್​ಗಳನ್ನು ಮಾರಾಟ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಈ ಸಂಬಂಧ ಸಾರಿಗೆ ಇಲಾಖೆ ಆಯುಕ್ತ ಸಿದ್ದರಾಮಪ್ಪ ಅಧಿಕಾರಿಗಳಿಗೆ ನೋಟೀಸ್ ನೀಡಿದ್ದಾರೆ. ಇನ್ನು ಅಮಾನತು ಆದ ಎಆರ್​ಟಿಓ ಕೃಷ್ಣನಂದ ಈಗಾಗಲೇ ಕೆಎಟಿಯಿಂದ ತಡೆಯಾಜ್ಞೆ ತಂದಿದ್ದು, ಕೆಎಟಿಯಲ್ಲಿ ತಡೆಯಾಜ್ಞೆ ತೆರವು ಮಾಡಲು ಕಾನೂನು ಹೋರಾಟ ಮಾಡುತ್ತೇವೆ ಎಂದು ಆರ್​ಟಿಓ ಕಮೀಷನರ್ ಸಿದ್ದರಾಮಪ್ಪ ಮಾಹಿತಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ