AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲೆಕ್ಟ್ರಾನಿಕ್ ಸಿಟಿ ಆರ್​ಟಿಓ ಕಚೇರಿಯಲ್ಲಿ ಅಕ್ರಮ: 3 ದಿನಗಳಲ್ಲಿ ಬರೋಬ್ಬರಿ 2504 ಡಿಎಲ್​ ಮಾರಾಟ

ಎಲೆಕ್ಟ್ರಾನಿಕ್ ಸಿಟಿ ಕೆಎ.51 ಆರ್​ಟಿಓ ಕಚೇರಿಯಲ್ಲಿ ಅಕ್ರಮ ತಾಂಡವಾಡುತ್ತಿದ್ದು, ಸಾರಿಗೆ ಇಲಾಖೆ ಅಧಿಕಾರಿ ಟೆಸ್ಟ್​​ ಡ್ರೈವ್​​ ತೆಗೆದುಕೊಳ್ಳದೆ ಡಿಎಲ್​​ ಮಾರಾಟ ಮಾಡಿದ್ದಾರೆ ಎಂಬ ಆರೋಪ ಕೇಳಿಬಂಬಿದೆ.

ಎಲೆಕ್ಟ್ರಾನಿಕ್ ಸಿಟಿ ಆರ್​ಟಿಓ ಕಚೇರಿಯಲ್ಲಿ ಅಕ್ರಮ: 3 ದಿನಗಳಲ್ಲಿ ಬರೋಬ್ಬರಿ 2504 ಡಿಎಲ್​ ಮಾರಾಟ
ಎಲೆಕ್ಟ್ರಾನಿಕ್ ಸಿಟಿ ಆರ್​ಟಿಓ ಕಚೇರಿ
TV9 Web
| Edited By: ವಿವೇಕ ಬಿರಾದಾರ|

Updated on: Jan 17, 2023 | 10:23 AM

Share

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಕೆಎ.51 (KA.51 RTO Office) ಸಾರಿಗೆ ಇಲಾಖೆ ಕಚೇರಿಯಲ್ಲಿ (RTO) ಅಕ್ರಮ ತಾಂಡವಾಡುತ್ತಿದ್ದು, ಸಾರಿಗೆ ಇಲಾಖೆ ಅಧಿಕಾರಿ ಟೆಸ್ಟ್​​ ಡ್ರೈವ್​​ ತೆಗೆದುಕೊಳ್ಳದೆ ಡಿಎಲ್​​ (Driving License​​) ಮಾರಾಟ ಮಾಡಿದ್ದಾನೆ ಎಂಬ ಆರೋಪ ಕೇಳಿಬಂಬಿದೆ. ಡಿಸೆಂಬರ್-19 2022 ರಂದು 964, ಡಿಸೆಂಬರ್​-20 ರಂದು 979 ಡಿಎಲ್, ಡಿಸೆಂಬರ್-21 ರಂದು 561 ಡಿಎಲ್​ಗಳನ್ನು ವಿತರಿಸಿದ್ದಾನೆ. ಅಧಿಕಾರಿ ಡಿಎಲ್​ಗೆ 3 ರಿಂದ 5 ಸಾವಿರ ರೂ. ಪಡೆದು 3 ದಿನಗಳಲ್ಲಿ ಬರೋಬ್ಬರಿ 2504 ಡ್ರೈವಿಂಗ್ ಲೈಸೆನ್ಸ್​​ಗಳನ್ನು ಅಕ್ರಮವಾಗಿ ಮಾರಿದ್ದಾನೆ.

ಹೀಗೆ ಅಕ್ರಮವಾಗಿ ಬೇಕಾಬಿಟ್ಟಿ ಡಿಎಲ್​ಗಳನ್ನು ವಿತರಣೆ ಮಾಡಿದ್ದ ARTO ಕೃಷ್ಣಾನಂದನನ್ನು ಕರ್ತವ್ಯ ಲೋಪವೆಸಗಿದ್ದಾನೆಂದು ಸಾರಿಗೆ ಇಲಾಖೆ ಕಮಿಷನರ್ ಎಸ್.ಎನ್ ಸಿದ್ದರಾಮಪ್ಪ ಅಮಾನತು ಮಾಡಿದ್ದಾರೆ.ಕೇವಲ ಎಲೆಕ್ಟ್ರಾನಿಕ್ ಸಿಟಿ ಆರ್​ಟಿಓ ಕಚೇರಿಯಲ್ಲಿ ಮಾತ್ರವಲ್ಲ, ಬೆಂಗಳೂರು ಕೇಂದ್ರ, ದಕ್ಷಿಣ, ಹಾಗೂ ಕೆಆರ್​ಪುರಂ ಕಚೇರಿಗಳಲ್ಲಿಯೂ ಬೇಕಾಬಿಟ್ಟಿಯಾಗಿ ಡಿಎಲ್​ಗಳನ್ನು ಮಾರಾಟ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಈ ಸಂಬಂಧ ಸಾರಿಗೆ ಇಲಾಖೆ ಆಯುಕ್ತ ಸಿದ್ದರಾಮಪ್ಪ ಅಧಿಕಾರಿಗಳಿಗೆ ನೋಟೀಸ್ ನೀಡಿದ್ದಾರೆ. ಇನ್ನು ಅಮಾನತು ಆದ ಎಆರ್​ಟಿಓ ಕೃಷ್ಣನಂದ ಈಗಾಗಲೇ ಕೆಎಟಿಯಿಂದ ತಡೆಯಾಜ್ಞೆ ತಂದಿದ್ದು, ಕೆಎಟಿಯಲ್ಲಿ ತಡೆಯಾಜ್ಞೆ ತೆರವು ಮಾಡಲು ಕಾನೂನು ಹೋರಾಟ ಮಾಡುತ್ತೇವೆ ಎಂದು ಆರ್​ಟಿಓ ಕಮೀಷನರ್ ಸಿದ್ದರಾಮಪ್ಪ ಮಾಹಿತಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು