AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲೆಕ್ಟ್ರಾನಿಕ್ ಸಿಟಿ ಆರ್​ಟಿಓ ಕಚೇರಿಯಲ್ಲಿ ಅಕ್ರಮ: 3 ದಿನಗಳಲ್ಲಿ ಬರೋಬ್ಬರಿ 2504 ಡಿಎಲ್​ ಮಾರಾಟ

ಎಲೆಕ್ಟ್ರಾನಿಕ್ ಸಿಟಿ ಕೆಎ.51 ಆರ್​ಟಿಓ ಕಚೇರಿಯಲ್ಲಿ ಅಕ್ರಮ ತಾಂಡವಾಡುತ್ತಿದ್ದು, ಸಾರಿಗೆ ಇಲಾಖೆ ಅಧಿಕಾರಿ ಟೆಸ್ಟ್​​ ಡ್ರೈವ್​​ ತೆಗೆದುಕೊಳ್ಳದೆ ಡಿಎಲ್​​ ಮಾರಾಟ ಮಾಡಿದ್ದಾರೆ ಎಂಬ ಆರೋಪ ಕೇಳಿಬಂಬಿದೆ.

ಎಲೆಕ್ಟ್ರಾನಿಕ್ ಸಿಟಿ ಆರ್​ಟಿಓ ಕಚೇರಿಯಲ್ಲಿ ಅಕ್ರಮ: 3 ದಿನಗಳಲ್ಲಿ ಬರೋಬ್ಬರಿ 2504 ಡಿಎಲ್​ ಮಾರಾಟ
ಎಲೆಕ್ಟ್ರಾನಿಕ್ ಸಿಟಿ ಆರ್​ಟಿಓ ಕಚೇರಿ
TV9 Web
| Edited By: |

Updated on: Jan 17, 2023 | 10:23 AM

Share

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಕೆಎ.51 (KA.51 RTO Office) ಸಾರಿಗೆ ಇಲಾಖೆ ಕಚೇರಿಯಲ್ಲಿ (RTO) ಅಕ್ರಮ ತಾಂಡವಾಡುತ್ತಿದ್ದು, ಸಾರಿಗೆ ಇಲಾಖೆ ಅಧಿಕಾರಿ ಟೆಸ್ಟ್​​ ಡ್ರೈವ್​​ ತೆಗೆದುಕೊಳ್ಳದೆ ಡಿಎಲ್​​ (Driving License​​) ಮಾರಾಟ ಮಾಡಿದ್ದಾನೆ ಎಂಬ ಆರೋಪ ಕೇಳಿಬಂಬಿದೆ. ಡಿಸೆಂಬರ್-19 2022 ರಂದು 964, ಡಿಸೆಂಬರ್​-20 ರಂದು 979 ಡಿಎಲ್, ಡಿಸೆಂಬರ್-21 ರಂದು 561 ಡಿಎಲ್​ಗಳನ್ನು ವಿತರಿಸಿದ್ದಾನೆ. ಅಧಿಕಾರಿ ಡಿಎಲ್​ಗೆ 3 ರಿಂದ 5 ಸಾವಿರ ರೂ. ಪಡೆದು 3 ದಿನಗಳಲ್ಲಿ ಬರೋಬ್ಬರಿ 2504 ಡ್ರೈವಿಂಗ್ ಲೈಸೆನ್ಸ್​​ಗಳನ್ನು ಅಕ್ರಮವಾಗಿ ಮಾರಿದ್ದಾನೆ.

ಹೀಗೆ ಅಕ್ರಮವಾಗಿ ಬೇಕಾಬಿಟ್ಟಿ ಡಿಎಲ್​ಗಳನ್ನು ವಿತರಣೆ ಮಾಡಿದ್ದ ARTO ಕೃಷ್ಣಾನಂದನನ್ನು ಕರ್ತವ್ಯ ಲೋಪವೆಸಗಿದ್ದಾನೆಂದು ಸಾರಿಗೆ ಇಲಾಖೆ ಕಮಿಷನರ್ ಎಸ್.ಎನ್ ಸಿದ್ದರಾಮಪ್ಪ ಅಮಾನತು ಮಾಡಿದ್ದಾರೆ.ಕೇವಲ ಎಲೆಕ್ಟ್ರಾನಿಕ್ ಸಿಟಿ ಆರ್​ಟಿಓ ಕಚೇರಿಯಲ್ಲಿ ಮಾತ್ರವಲ್ಲ, ಬೆಂಗಳೂರು ಕೇಂದ್ರ, ದಕ್ಷಿಣ, ಹಾಗೂ ಕೆಆರ್​ಪುರಂ ಕಚೇರಿಗಳಲ್ಲಿಯೂ ಬೇಕಾಬಿಟ್ಟಿಯಾಗಿ ಡಿಎಲ್​ಗಳನ್ನು ಮಾರಾಟ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಈ ಸಂಬಂಧ ಸಾರಿಗೆ ಇಲಾಖೆ ಆಯುಕ್ತ ಸಿದ್ದರಾಮಪ್ಪ ಅಧಿಕಾರಿಗಳಿಗೆ ನೋಟೀಸ್ ನೀಡಿದ್ದಾರೆ. ಇನ್ನು ಅಮಾನತು ಆದ ಎಆರ್​ಟಿಓ ಕೃಷ್ಣನಂದ ಈಗಾಗಲೇ ಕೆಎಟಿಯಿಂದ ತಡೆಯಾಜ್ಞೆ ತಂದಿದ್ದು, ಕೆಎಟಿಯಲ್ಲಿ ತಡೆಯಾಜ್ಞೆ ತೆರವು ಮಾಡಲು ಕಾನೂನು ಹೋರಾಟ ಮಾಡುತ್ತೇವೆ ಎಂದು ಆರ್​ಟಿಓ ಕಮೀಷನರ್ ಸಿದ್ದರಾಮಪ್ಪ ಮಾಹಿತಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ