AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲೆಕ್ಟ್ರಾನಿಕ್ ಸಿಟಿ ಆರ್​ಟಿಓ ಕಚೇರಿಯಲ್ಲಿ ಅಕ್ರಮ: 3 ದಿನಗಳಲ್ಲಿ ಬರೋಬ್ಬರಿ 2504 ಡಿಎಲ್​ ಮಾರಾಟ

ಎಲೆಕ್ಟ್ರಾನಿಕ್ ಸಿಟಿ ಕೆಎ.51 ಆರ್​ಟಿಓ ಕಚೇರಿಯಲ್ಲಿ ಅಕ್ರಮ ತಾಂಡವಾಡುತ್ತಿದ್ದು, ಸಾರಿಗೆ ಇಲಾಖೆ ಅಧಿಕಾರಿ ಟೆಸ್ಟ್​​ ಡ್ರೈವ್​​ ತೆಗೆದುಕೊಳ್ಳದೆ ಡಿಎಲ್​​ ಮಾರಾಟ ಮಾಡಿದ್ದಾರೆ ಎಂಬ ಆರೋಪ ಕೇಳಿಬಂಬಿದೆ.

ಎಲೆಕ್ಟ್ರಾನಿಕ್ ಸಿಟಿ ಆರ್​ಟಿಓ ಕಚೇರಿಯಲ್ಲಿ ಅಕ್ರಮ: 3 ದಿನಗಳಲ್ಲಿ ಬರೋಬ್ಬರಿ 2504 ಡಿಎಲ್​ ಮಾರಾಟ
ಎಲೆಕ್ಟ್ರಾನಿಕ್ ಸಿಟಿ ಆರ್​ಟಿಓ ಕಚೇರಿ
TV9 Web
| Edited By: ವಿವೇಕ ಬಿರಾದಾರ|

Updated on: Jan 17, 2023 | 10:23 AM

Share

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಕೆಎ.51 (KA.51 RTO Office) ಸಾರಿಗೆ ಇಲಾಖೆ ಕಚೇರಿಯಲ್ಲಿ (RTO) ಅಕ್ರಮ ತಾಂಡವಾಡುತ್ತಿದ್ದು, ಸಾರಿಗೆ ಇಲಾಖೆ ಅಧಿಕಾರಿ ಟೆಸ್ಟ್​​ ಡ್ರೈವ್​​ ತೆಗೆದುಕೊಳ್ಳದೆ ಡಿಎಲ್​​ (Driving License​​) ಮಾರಾಟ ಮಾಡಿದ್ದಾನೆ ಎಂಬ ಆರೋಪ ಕೇಳಿಬಂಬಿದೆ. ಡಿಸೆಂಬರ್-19 2022 ರಂದು 964, ಡಿಸೆಂಬರ್​-20 ರಂದು 979 ಡಿಎಲ್, ಡಿಸೆಂಬರ್-21 ರಂದು 561 ಡಿಎಲ್​ಗಳನ್ನು ವಿತರಿಸಿದ್ದಾನೆ. ಅಧಿಕಾರಿ ಡಿಎಲ್​ಗೆ 3 ರಿಂದ 5 ಸಾವಿರ ರೂ. ಪಡೆದು 3 ದಿನಗಳಲ್ಲಿ ಬರೋಬ್ಬರಿ 2504 ಡ್ರೈವಿಂಗ್ ಲೈಸೆನ್ಸ್​​ಗಳನ್ನು ಅಕ್ರಮವಾಗಿ ಮಾರಿದ್ದಾನೆ.

ಹೀಗೆ ಅಕ್ರಮವಾಗಿ ಬೇಕಾಬಿಟ್ಟಿ ಡಿಎಲ್​ಗಳನ್ನು ವಿತರಣೆ ಮಾಡಿದ್ದ ARTO ಕೃಷ್ಣಾನಂದನನ್ನು ಕರ್ತವ್ಯ ಲೋಪವೆಸಗಿದ್ದಾನೆಂದು ಸಾರಿಗೆ ಇಲಾಖೆ ಕಮಿಷನರ್ ಎಸ್.ಎನ್ ಸಿದ್ದರಾಮಪ್ಪ ಅಮಾನತು ಮಾಡಿದ್ದಾರೆ.ಕೇವಲ ಎಲೆಕ್ಟ್ರಾನಿಕ್ ಸಿಟಿ ಆರ್​ಟಿಓ ಕಚೇರಿಯಲ್ಲಿ ಮಾತ್ರವಲ್ಲ, ಬೆಂಗಳೂರು ಕೇಂದ್ರ, ದಕ್ಷಿಣ, ಹಾಗೂ ಕೆಆರ್​ಪುರಂ ಕಚೇರಿಗಳಲ್ಲಿಯೂ ಬೇಕಾಬಿಟ್ಟಿಯಾಗಿ ಡಿಎಲ್​ಗಳನ್ನು ಮಾರಾಟ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಈ ಸಂಬಂಧ ಸಾರಿಗೆ ಇಲಾಖೆ ಆಯುಕ್ತ ಸಿದ್ದರಾಮಪ್ಪ ಅಧಿಕಾರಿಗಳಿಗೆ ನೋಟೀಸ್ ನೀಡಿದ್ದಾರೆ. ಇನ್ನು ಅಮಾನತು ಆದ ಎಆರ್​ಟಿಓ ಕೃಷ್ಣನಂದ ಈಗಾಗಲೇ ಕೆಎಟಿಯಿಂದ ತಡೆಯಾಜ್ಞೆ ತಂದಿದ್ದು, ಕೆಎಟಿಯಲ್ಲಿ ತಡೆಯಾಜ್ಞೆ ತೆರವು ಮಾಡಲು ಕಾನೂನು ಹೋರಾಟ ಮಾಡುತ್ತೇವೆ ಎಂದು ಆರ್​ಟಿಓ ಕಮೀಷನರ್ ಸಿದ್ದರಾಮಪ್ಪ ಮಾಹಿತಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್