AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಪಡಿತರ ಕಾರ್ಡ್​ ವಿತರಣೆಗೆ ಕಾರ್ಯಾರಂಭ, ಆದಷ್ಟು ಬೇಗ ಹಣದ ಬದಲಿಗೆ ಅಕ್ಕಿ- ಕೆಎಚ್ ಮುನಿಯಪ್ಪ

ಹೊಸದಾಗಿ ಪಡಿತರ ಕಾರ್ಡ್ ವಿತರಣೆಗೆ ಸೂಚನೆ ನೀಡಲಾಗಿದೆ. ಹೊಸದಾಗಿ BPL​, APL​ ಕಾರ್ಡ್​ಗೆ ಅರ್ಜಿ ಸಲ್ಲಿಸಬಹುದು ಎಂದು ಬೆಂಗಳೂರಿನಲ್ಲಿ ಆಹಾರ ಸಚಿವ ಕೆ.ಹೆಚ್​.ಮುನಿಯಪ್ಪ ಹೇಳಿದರು.

ಹೊಸ ಪಡಿತರ ಕಾರ್ಡ್​ ವಿತರಣೆಗೆ ಕಾರ್ಯಾರಂಭ, ಆದಷ್ಟು ಬೇಗ ಹಣದ ಬದಲಿಗೆ ಅಕ್ಕಿ- ಕೆಎಚ್ ಮುನಿಯಪ್ಪ
ಕೆ.ಎಚ್​.ಮುನಿಯಪ್ಪ
ಪ್ರಸನ್ನ ಗಾಂವ್ಕರ್​
| Edited By: |

Updated on:Aug 04, 2023 | 1:18 PM

Share

ಬೆಂಗಳೂರು, ಆ.04: ನೀತಿ ಸಂಹಿತೆ ಜಾರಿ ಹಿನ್ನೆಲೆ ರೇಷನ್​​ ಕಾರ್ಡ್(Ration Card)​ ವಿತರಣೆ ಸ್ಥಗಿತವಾಗಿತ್ತು. ಈಗ ಹೊಸ ಪಡಿತರ ಕಾರ್ಡ್​ ವಿತರಣೆಗೆ ಅಧಿಕಾರಿಗಳಿಗೆ ಸೂಚಿಸಿದ್ದೇವೆ ಎಂದು ಆಹಾರ ಸಚಿವ ಕೆ.ಹೆಚ್​.ಮುನಿಯಪ್ಪ(KH Muniyappa) ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಟಿ ನಡೆಸಿದ ಸಚಿವ ಮುನಿಯಪ್ಪ, ಹೊಸ ಪಡಿತರ ಕಾರ್ಡ್ ವಿತರಣೆ ಸಂಬಂಧ ಮಾಹಿತಿ ನೀಡಿದರು. ಅನ್ನಭಾಗ್ಯದ ಉದ್ದೇಶ ಹಸಿದವರಿಗೆ ಅನ್ನ ಕೊಡಬೇಕು ಅಂತ. ಈವರೆಗೆ ಒಂದು ಕೋಟಿ ಕುಟುಂಬಗಳಿಗೆ ಹಣ ಹಾಕಲಾಗಿದೆ ಎಂದು ಹೇಳಿದರು.

ಅನ್ನಭಾಗ್ಯದ ಉದ್ದೇಶ ಹಸಿದವರಿಗೆ ಅನ್ನ ಕೊಡಬೇಕು ಎಂದು. ಈವರೆಗೆ ಒಂದು ಕೋಟಿ ಕುಟುಂಬಗಳಿಗೆ ಹಣ ಹಾಕಲಾಗಿದೆ. ಸುಮಾರು 556 ಕೋಟಿ ಹಣವನ್ನ ಹಾಕಲಾಗಿದೆ. ಇದರಿಂದ 3.50 ಕೋಟಿ ಫಲಾನುಭವಿಗಳಿಗೆ ಅನುಕೂಲ ಆಗಿದೆ. ಹೊಸದಾಗಿ ಪಡಿತರ ಕಾರ್ಡ್ ವಿತರಣೆಗೆ ಸೂಚನೆ ನೀಡಲಾಗಿದೆ. ಹೊಸದಾಗಿ BPL​, APL​ ಕಾರ್ಡ್​ಗೆ ಅರ್ಜಿ ಸಲ್ಲಿಸಬಹುದು. ನೀತಿ ಸಂಹಿತೆ ಜಾರಿಯಾಗಿದ್ದ ಹಿನ್ನೆಲೆ ರೇಷನ್​​ ಕಾರ್ಡ್​ ವಿತರಣೆ ಮಾಡುವುದನ್ನು ಸ್ಥಗಿತ ಮಾಡಲಾಗಿತ್ತು. ಈಗ ಹೊಸ ಪಡಿತರಕಾರ್ಡ್​ ವಿತರಣೆಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಪಡಿತರ ಕಾರ್ಡ್​ಗೆ ಹೊಸ ಸದಸ್ಯರ ಹೆಸರು ಸೇರ್ಪಡೆಗೆ ಅವಕಾಶ ನೀಡಲಾಗಿದೆ. ಕಾರ್ಡ್​ನಲ್ಲಿರುವ ಮೃತರ ಹೆಸರನ್ನು ತೆರವುಗೊಳಿಸಲು ಸೂಚಿಸಲಾಗಿದೆ. ರಾಗಿ, ಜೋಳಕ್ಕೆ ಬೆಂಬಲ ಬೆಲೆ ಹೆಚ್ಚಳಕ್ಕೆ ಕೇಂದ್ರ ಸಚಿವರಿಗೆ ಮನವಿ ಮಾಡಲಾಗಿದೆ ಎಂದು ಬೆಂಗಳೂರಿನಲ್ಲಿ ಆಹಾರ ಸಚಿವ ಕೆ.ಹೆಚ್​.ಮುನಿಯಪ್ಪ ಹೇಳಿದರು.

ಇದನ್ನೂ ಓದಿ: ವೇದಿಕೆ ಮೇಲೆ ಅನ್ನಭಾಗ್ಯ ಯೋಜನೆ ಟೀಕಿಸಿದ ಬಿಜೆಪಿ ಸಂಸದ ಎಸ್​​ ಮುನಿಸ್ವಾಮಿ

ಆಂಧ್ರ ಹಾಗೂ ತೆಲಂಗಾಣ ಸರ್ಕಾರ ಅಕ್ಕಿ ನೀಡಲು ಮುಂದಾಗಿವೆ. ಆಹಾರ ನಿಗಮದ ದರದಲ್ಲಿ ಅಕ್ಕಿ ನೀಡುವಂತೆ ಮನವಿ ಮಾಡುತ್ತೇವೆ. 1 ವಾರದಲ್ಲಿ ಅಲ್ಲಿನ ಅಧಿಕಾರಿಗಳು ನಿರ್ಧಾರ ಪ್ರಕಟಿಸುವ ವಿಶ್ವಾಸವಿದೆ. ಸೆಪ್ಟೆಂಬರ್​ ತಿಂಗಳಿನಲ್ಲಿ 10 ಕೆಜಿ ಅಕ್ಕಿ ವಿತರಿಸುವ ಚಿಂತನೆ ಇದೆ. 34 ರೂ ಗೆ ಅಕ್ಕಿ ಕೊಡುತ್ತೇವೆ ಅಂದರೆ ನಾವು ತೆಗೆದುಕೊಳ್ಳಲು ಸಿದ್ದರಿದ್ದೇವೆ ಎಂದರು.

ವೈಟ್​ಬೋರ್ಡ್​ ಕಾರು ಹೊಂದಿರುವವರಿಗೆ ಬಿಪಿಎಲ್​ ​​ಕಾರ್ಡ್​ ಇಲ್ಲ

ಇನ್ನು ಇದೇ ವೇಳೆ ವೈಟ್​ಬೋರ್ಡ್​ ಕಾರು ಹೊಂದಿರುವವರಿಗೆ ಬಿಪಿಎಲ್​ ​​ಕಾರ್ಡ್​ ಇಲ್ಲ, ಯಲ್ಲೋ ಬೋರ್ಡ್ ಕಾರು ಇದ್ದರೆ BPL ಕಾರ್ಡ್ ನೀಡಲಾಗುವುದು. ಈ ಬಗ್ಗೆ ಚರ್ಚೆ ಮಾಡಿ ಶೀಘ್ರದಲ್ಲೇ ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:10 pm, Fri, 4 August 23

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!