AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rain: ರಾಜಧಾನಿಯಲ್ಲಿ ವರುಣನ ಅಬ್ಬರ, ಬೆಂಗಳೂರು ನಗರ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಣೆ

ಬೆಂಗಳೂರು ನಗರ ಜಿಲ್ಲಾಡಳಿತ, ಬೆಂಗಳೂರು ನಗರ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಿದೆ.

Bengaluru Rain: ರಾಜಧಾನಿಯಲ್ಲಿ ವರುಣನ ಅಬ್ಬರ, ಬೆಂಗಳೂರು ನಗರ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಣೆ
ಮಳೆ
TV9 Web
| Edited By: |

Updated on:Aug 29, 2022 | 10:48 PM

Share

ಬೆಂಗಳೂರು: ರಾಜ್ಯದಲ್ಲಿ ವರುಣನ ಅಬ್ಬರ ಜೋರಾಗಿದೆ(Karnataka Rains). ಅಲ್ಲದೆ ಬೆಂಗಳೂರಿನಲ್ಲೂ ಮಳೆ(Bengaluru Rain) ಹೆಚ್ಚಾಗಿದ್ದು ಬೆಂಗಳೂರಿನ ರಸ್ತೆಗಳು ಕೆರೆಯಂತಾಗಿವೆ. ಹಲವು ಕಡೆ ಮನೆಗಳಿಗೆ ನೀರು ನುಗ್ಗಿದ್ದು ಜನ ಜೀವನ ಅಸ್ತವ್ಯಸ್ತವಾಗಿದೆ. ಭೀಕರ ಮಳೆ ಹಿನ್ನೆಲೆ ಬೆಂಗಳೂರು ನಗರ ಜಿಲ್ಲಾಡಳಿತ, ಬೆಂಗಳೂರು ನಗರ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಿದೆ.

ಭಾರಿ ಮಳೆಯಾಗುತ್ತಿರುವ ಕಾರಣ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾಧಿಕಾರಿಗಳ ಅನುಮತಿಯ ಮೇರೆಗೆ ಆಗಸ್ಟ್ 30ರ ಮಂಗಳವಾರ ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ ಮಾಡಿರುವುದಾಗಿ ಬೆಂಗಳೂರು ದಕ್ಷಿಣ ವಿಭಾಗದ ಡಿಡಿಪಿಐ ಬೈಲಾಂಜನಪ್ಪ ಮಾಹಿತಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಬೆಂಗಳೂರಿನ ಹಲವು ರಸ್ತೆಗಳಲ್ಲಿ ಮಳೆ ನೀರು ನಿಂತಲ್ಲೆ ನಿಂತಿದೆ. ಮಲ್ಲೇಶ್ವರಂನ ಕೆಲವು ರಸ್ತೆಗಳಲ್ಲಿ ನೀರು ತುಂಬಿದೆ. ವಾಹನ ಸವಾರರು ಹರಸಾಹಸ ಪಡ್ತಿದ್ದಾರೆ. ನಾಯಂಡಹಳ್ಳಿ,ಲಗ್ಗೆರೆ, ಶಿವಾನಂದ ವೃತ್ತ ಸೇರಿದಂತೆ ನಗರದ ಬಹುತೇಕ ಅಂಡರ್ ಪಾಸ್ ಗಳು ಮಳೆ‌ನೀರಿನಿಂದ ಆವೃತವಾಗಿವೆ. ಉತ್ತರಹಳ್ಳಿ 39.5mm, ನಾಯಂಡಗಳ್ಳಿ 49.5mm ಮಳೆ, ಹಂಪಿ ನಗರ 44.5mm ಮಳೆ, ಹೆಚ್.ಗೊಲ್ಲಹಳ್ಳಿ 44.5mm, ಕೋಣನಕುಂಟೆ 55.0mm, ಅರಕೆರೆ(ಬೊಮ್ಮನಹಳ್ಳಿ) 47.5mm, ಬಿಳೇಕಹಳ್ಳಿ 60.5mm ಪ್ರಮಾಣದಲ್ಲಿ ಮಳೆಯಾಗಿದೆ.

ಮಳೆಯಿಂದಾಗಿ ಧರೆಗುರುಳಿದ ಬೃಹತ್ ಮರದ ಕೊಂಬೆ

ಬೆಂಗಳೂರಿನ ಮಲ್ಲೇಶ್ವರಂನ 8ನೇ ಕ್ರಾಸ್‌ನಲ್ಲಿ ಮಳೆಯಿಂದಾಗಿ ಕೊಂಬೆ ಬಿದ್ದ ಪರಿಣಾಮ ರಸ್ತೆ ಬದಿ ನಿಲ್ಲಿಸಿದ್ದ ಕಾರು ಜಖಂ ಗೊಂಡಿದೆ. ಕಾರಿನಲ್ಲಿ ಯಾರೂ ಇಲ್ಲದಿದ್ದರಿಂದ ಅನಾಹುತ ತಪ್ಪಿದೆ.

Published On - 9:59 pm, Mon, 29 August 22

Follow Us
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ