Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿ ಹಬ್ಬ: ಕೆಆರ್​ ಮಾರ್ಕೆಟ್​ನಲ್ಲಿ ಖರೀದಿ ಜೋರು, ಹೂವು, ಹಣ್ಣುಗಳ ದರ ಏರಿಕೆ

KR Market: ದೀಪಾವಳಿ ಹಬ್ಬದ ಸಂಭ್ರಮದಲ್ಲಿರುವ ಜನರು ಖರೀದಿ ಭರಾಟೆಗೆ ಮುಂದಾಗಿದ್ದಾರೆ. ಇಂದು ನರಕ ಚತುರ್ದಶಿ ಮತ್ತು ಧನಲಕ್ಷ್ಮೀ ಪೂಜೆ ಹಿನ್ನೆಲೆ ಬೆಂಗಳೂರಿನ ಕೆ.ಆರ್.ಮಾರ್ಕೆಟ್​ನಲ್ಲಿ ಜನರು ದಾಂಗುಡಿಯಿಟ್ಟಿದ್ದಾರೆ. ಹೂವು, ಹಣ್ಣುಗಳನ್ನು ಗ್ರಾಹಕರು ಖರೀದಿಸುತ್ತಿದ್ದಾರೆ. ಹಣ್ಣು, ಹೂವುಗಳ ಬೆಲೆಯಲ್ಲೂ ದರ ಏರಿಕೆ ಆಗಿದೆ.

Follow us
Shivaprasad
| Updated By: ಗಂಗಾಧರ​ ಬ. ಸಾಬೋಜಿ

Updated on:Nov 12, 2023 | 8:05 AM

ಬೆಂಗಳೂರು, ನವೆಂಬರ್​​​ 12: ದೀಪಾವಳಿ ಹಬ್ಬದ (Diwali festival) ಸಂಭ್ರಮದಲ್ಲಿರುವ ಜನರು ಖರೀದಿ ಭರಾಟೆಗೆ ಮುಂದಾಗಿದ್ದಾರೆ. ಇಂದು ನರಕ ಚತುರ್ದಶಿ ಮತ್ತು ಧನಲಕ್ಷ್ಮೀ ಪೂಜೆ ಹಿನ್ನೆಲೆ ಬೆಂಗಳೂರಿನ ಕೆ.ಆರ್.ಮಾರ್ಕೆಟ್​ನಲ್ಲಿ ಜನರು ದಾಂಗುಡಿಯಿಟ್ಟಿದ್ದಾರೆ. ಹೂವು, ಹಣ್ಣುಗಳನ್ನು ಗ್ರಾಹಕರು ಖರೀದಿಸುತ್ತಿದ್ದಾರೆ. ಇನ್ನು ಕೆ.ಆರ್.ಮಾರ್ಕೆಟ್ ಫ್ಲೈಓವರ್ ಮೇಲೆ ಅನಧಿಕೃತವಾಗಿ ಗ್ರಾಹಕರು ವಾಹನಗಳ ಪಾರ್ಕಿಂಗ್ ಮಾಡಿದ್ದಾರೆ. ಹಾಗಾಗಿ ಕಿರಿದಾದ ಮೇಲ್ಸೆತುವೆ ಮೇಲೆ ವಾಹನ ಚಲಾಯಿಸಲು ಸವಾರರು  ಹರಸಾಹಸ ಪಟ್ಟಿದ್ದಾರೆ.

ದೀಪಾವಳಿ ಹಬ್ಬದ ಪ್ರಯುಕ್ತ ಕೆ.ಆರ್ ಮಾರುಕಟ್ಟೆಯಲ್ಲಿ ಖರೀದಿ ಬಲು ಜೋರಾಗಿದ್ದು, ಹಣ್ಣು, ಹೂವುಗಳ ದರ ಏರಿಕೆ ಆಗಿದೆ. ಮಾರು ಹೂವಿನ ಬೆಲೆ 50 ರೂ ಏರಿಕೆ ಆಗಿದ್ದು, ಹೂ, ಹಣ್ಣುಗಳ ಖರೀದಿಗೆ ಗ್ರಾಹಕರು ಆಗಮಿಸುತ್ತಿದ್ದಾರೆ. ನಾಳೆ ದೀಪಾವಳಿ ಅಮವಾಸ್ಯೆ, ಬಲಿಂದ್ರನ ಪೂಜೆ, ಮಂಗಳವಾರ ಬಲಿಪಾಡ್ಯಮಿ ದೀಪಾವಳಿ ಹಬ್ಬದ ಚಂದ್ರದರ್ಶನ ಇದೆ.

ಹಣ್ಣಿನ ಬೆಲೆ (ಕೆ.ಜಿ.ಗೆ)

  • ಸೇಬು – 120-140 ರೂ
  • ದಾಳಿಂಬೆ- 150-170 ರೂ
  • ಮೊಸಂಬಿ 100 ರೂ
  • ಸೀತಾಫಲ 120
  • ಕಿತ್ತಳೆ 80
  • ದ್ರಾಕ್ಷಿ 200
  • ಕರಿ ದ್ರಾಕ್ಷಿ 160
  • ಏಲಕ್ಕಿ ಬಾಳೆಹಣ್ಣು 80
  • ಸೀಬೆಕಾಯಿ 120
  • ಬಾಳೆಹಣ್ಣು 30-40

ಹೂವಿನ ದರ ಬೆಲೆ (1 ಮಾರು)

  • ಸೇವಂತಿ 50 ರೂ.
  • ಮಲ್ಲಿಗೆ 150
  • ಕಾಕಡ ಮಲ್ಲಿಗೆ – 120
  • ಕನಕಾಂಬರ -120
  • ಸುಗಂಧ ರಾಜ- 100-150
  • ಗುಲಾಬಿ – 200
  • ಬಿಳಿ ಸೇವಂತಿ – 120

ಪಟಾಕಿ ಖರೀದಿಗೆ ಮುಗಿಬಿದ್ದ ಜನರು: ಟ್ರಾಫಿಕ್​ಜಾಮ್

ದೀಪಾವಳಿ ಹಬ್ಬದ ರಜೆ ಹಿನ್ನೆಲೆ ಜನರು ತಮ್ಮ ಊರುಗಳಿಗೆ ಹೊರಟಿದ್ದಾರೆ. ಒಂದೆಡೆ ಪಟಾಕಿ ಖರೀದಿ ಮಾಡುತ್ತಿದ್ದಾರೆ ಹಾಗಾಗಿ ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್​ಜಾಮ್ ಉಂಟಾಗಿತ್ತು.

ಇದನ್ನೂ ಓದಿ: ಆನೇಕಲ್: ಪಟಾಕಿ ಮಳಿಗೆ ಮಾರಾಟಗಾರರಿಗೆ ಗುಡ್​​ ನ್ಯೂಸ್: ನ. 17ರವರೆಗೆ ಪಟಾಕಿ ಮಾರಾಟಕ್ಕೆ ಹೈಕೋರ್ಟ್ ಅನುಮತಿ

ಹೆಬ್ಬಗೋಡಿಯಿಂದ 10 ಕಿಲೋ ಮೀಟರ್​ವರೆಗೆ ರಾಷ್ಟ್ರೀಯ ಹೆದ್ದಾರಿ ಟ್ರಾಫಿಕ್​ ಜಾಮ್​ ಆಗಿದ್ದು, ವಾಹನ ಸವಾರರು ಪರದಾಡಿದ್ದರು. ಕಳೆದ 2 ಗಂಟೆಯಿಂದ ರಸ್ತೆಯಲ್ಲಿ ವಾಹನಗಳು ಸಾಲುಗಟ್ಟಿ ನಿಂತ್ತಿದ್ದವು. ಅತ್ತಿಬೆಲೆ ಸುತ್ತಮುತ್ತ ಪಟಾಕಿ ಖರೀದಿಗೆ ಗ್ರಾಹಕರು ಆಗಮಿಸುತ್ತಿದ್ದು, ಪಟಾಕಿ ಖರೀದಿ ಭರಾಟೆಯಿಂದ ಹೆದ್ದಾರಿಯಲ್ಲಿ ಟ್ರಾಫಿಕ್​ಜಾಮ್ ಸಂಭವಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:57 am, Sun, 12 November 23

ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ
ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ
ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ
ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ
ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ
ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ
ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್​ ಕುಲಕರ್ಣಿ
ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್​ ಕುಲಕರ್ಣಿ
ಕೇವಲ ಎರಡು ತಿಂಗಳ ಅಕ್ಕಿ ಹಣ ಮಾತ್ರ ಟ್ರಾನ್ಸ್​ಫರ್ ಮಾಡೋದು ಬಾಕಿ: ಸಚಿವ
ಕೇವಲ ಎರಡು ತಿಂಗಳ ಅಕ್ಕಿ ಹಣ ಮಾತ್ರ ಟ್ರಾನ್ಸ್​ಫರ್ ಮಾಡೋದು ಬಾಕಿ: ಸಚಿವ
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯೂ ನಿಷ್ಕ್ರಿಯ, ಮಹಿಳೆಯರು ಅಸಹಾಯಕ
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯೂ ನಿಷ್ಕ್ರಿಯ, ಮಹಿಳೆಯರು ಅಸಹಾಯಕ
ರಾಜಣ್ಣಗೆ ಯಾರ ಮೇಲೂ ಸಿಟ್ಟಿಲ್ಲ, ಅವರು ಮಾತಾಡೋ ಶೈಲಿಯೇ ಹಾಗೆ: ಜಾರಕಿಹೊಳಿ
ರಾಜಣ್ಣಗೆ ಯಾರ ಮೇಲೂ ಸಿಟ್ಟಿಲ್ಲ, ಅವರು ಮಾತಾಡೋ ಶೈಲಿಯೇ ಹಾಗೆ: ಜಾರಕಿಹೊಳಿ
ಚೇತನ್ ದುಡುಕಿನ ನಿರ್ಧಾರ ತೆಗೆದುಕೊಂಡು ಘೋರ ಅಪರಾಧವೆಸಗಿದ್ದಾನೆ: ಸೋಮಶೇಖರ್
ಚೇತನ್ ದುಡುಕಿನ ನಿರ್ಧಾರ ತೆಗೆದುಕೊಂಡು ಘೋರ ಅಪರಾಧವೆಸಗಿದ್ದಾನೆ: ಸೋಮಶೇಖರ್
ಪಿಂಕ್​​ ಲೈನ್​ ಮೆಟ್ರೋ ಟನಲ್​ ಕಾಮಗಾರಿ ಬಗ್ಗೆ ಮಾಹಿತಿ ನೀಡಿದ ಇಂಜಿನಿಯರ್
ಪಿಂಕ್​​ ಲೈನ್​ ಮೆಟ್ರೋ ಟನಲ್​ ಕಾಮಗಾರಿ ಬಗ್ಗೆ ಮಾಹಿತಿ ನೀಡಿದ ಇಂಜಿನಿಯರ್
ಸಿಎಂ ಮತ್ತು ಕೆಪಿಸಿಸಿ ಬದಲಾವಣೆ ಬಿಟ್ಟು ಕೆಲ ಸಚಿವರು ಬೇರೇನೂ ಮಾತಾಡಲಾರರು!
ಸಿಎಂ ಮತ್ತು ಕೆಪಿಸಿಸಿ ಬದಲಾವಣೆ ಬಿಟ್ಟು ಕೆಲ ಸಚಿವರು ಬೇರೇನೂ ಮಾತಾಡಲಾರರು!