AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepavali: ಬೆಂಗಳೂರಿನಲ್ಲಿ ಪಟಾಕಿ ಮಾರಾಟ ಜೋರು, ಗ್ರಾಹಕರಿಗೆ ತಟ್ಟಿದ ಪಟಾಕಿ ಬೆಲೆಯೇರಿಕೆ ಬಿಸಿ

ಎಲ್ಲೆಡೆ ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮ ಮನೆಮಾಡಿದೆ. ಬೆಂಗಳೂರಿನಲ್ಲಿ ಪಟಾಕಿ ಮಾರಾಟ ಜೋರಾಗಿದೆ. ಚಾಮರಾಜಪೇಟೆಯ ಉದಯಭಾನು ಕಲಾಸಂಘದ ಮೈದಾನದಲ್ಲಿ ಪಟಾಕಿ ಸ್ಟಾಲ್​​ಗಳಲ್ಲಿ ಭರ್ಜರಿ ಮಾರಾಟವಾಗುತ್ತಿದ್ದು, ಅತ್ತ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ ಕೂಡ ತಟ್ಟುತ್ತಿದೆ. ಗ್ರೀನ್ ಪಟಾಕಿಗಳ ಬೆಲೆ ದುಪ್ಪಟ್ಟಾಗಿರುವುದಕ್ಕೆ ಗ್ರಾಹಕರು ಅಸಮಾಧಾನ ಹೊರಹಾಕಿದ್ದಾರೆ.

Deepavali: ಬೆಂಗಳೂರಿನಲ್ಲಿ ಪಟಾಕಿ ಮಾರಾಟ ಜೋರು, ಗ್ರಾಹಕರಿಗೆ ತಟ್ಟಿದ ಪಟಾಕಿ ಬೆಲೆಯೇರಿಕೆ ಬಿಸಿ
ಬೆಂಗಳೂರಿನಲ್ಲಿ ಪಟಾಕಿ ಮಾರಾಟ ಜೋರು, ಗ್ರಾಹಕರಿಗೆ ತಟ್ಟಿದ ಪಟಾಕಿ ಬೆಲೆಯೇರಿಕೆ ಬಿಸಿ
ಶಾಂತಮೂರ್ತಿ
| Edited By: |

Updated on: Oct 31, 2024 | 7:35 AM

Share

ಬೆಂಗಳೂರು, ಅಕ್ಟೋಬರ್ 31: ದೀಪಗಳ ಹಬ್ಬ ದೀಪಾವಳಿಗೆ ರಾಜಧಾನಿ ಬೆಂಗಳೂರು ಭರ್ಜರಿ ಸಿದ್ಧತೆ ಮಾಡಿದ್ದು, ನಗರದಲ್ಲಿ ಸಂಭ್ರಮದ ವಾತಾವರಣ ಮನೆ ಮಾಡಿದೆ. ಇತ್ತ ಪಟಾಕಿ ಮಾರಾಟ ಕೂಡ ಜೋರಾಗಿದೆ. ಬೆಂಗಳೂರಿನ ಚಾಮರಾಜಪೇಟೆ ಸೇರಿ ಹಲವೆಡೆ ಮೈದಾನಗಳಲ್ಲಿ ಪಟಾಕಿ ಸ್ಟಾಲ್​ಗಳಲ್ಲಿ ಭರ್ಜರಿ ವ್ಯಾಪಾರವಾಗುತ್ತಿದೆ. ಮೊದಲ ದಿನವಾದ್ದರಿಂದ ಗ್ರಾಹಕರ ಸಂಖ್ಯೆ ಕಡಿಮೆ ಇದ್ದರೂ ಕೂಡ ಹಾಕಿರುವ ಬಂಡವಾಳಕ್ಕೆ ತಕ್ಕ ವ್ಯಾಪಾರ ಆಗುತ್ತಿರುವುದಕ್ಕೆ ವ್ಯಾಪಾರಿಗಳು ಖುಷಿಯಾಗಿದ್ದಾರೆ. ಇನ್ನು ಹಸಿರು ಪಟಾಕಿಗಳ ಮಾರಾಟ ಮಾಡಲು ಮಾತ್ರ ಅವಕಾಶ ಕೊಟ್ಟಿರುವುದರಿಂದ ಪೊಲೀಸರು ನೀಡಿರುವ ಮಾರ್ಗಸೂಚಿಯಂತೆಯೇ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಪಟಾಕಿ ವ್ಯಾಪಾರ ನಡೆಸಲಾಗುತ್ತಿದೆ.

ಇನ್ನು ಬಗೆ ಬಗೆಯ ಗ್ರೀನ್ ಪಟಾಕಿಗಳು ಮಾರುಕಟ್ಟೆಗೆ ಲಗ್ಗೆಯಿಟ್ಟಿದ್ದು, ಹೊಸೂರಿನಿಂದ ಬಂದಿರುವ ಪಟ್ ಪಟ್ ಪಟಾಕಿಗಳು ಗ್ರಾಹಕರ ಗಮನಸೆಳೆಯುತ್ತಿವೆ. ಗ್ರೀನ್ ಪಟಾಕಿಗೆ ಮಾತ್ರ ಮಾರಾಟಕ್ಕೆ ಅವಕಾಶ ಇರುವುದರಿಂದ ಢಂ ಢಂ ಅಂತಾ ಸದ್ದುಮಾಡುವ ದೊಡ್ಡ ದೊಡ್ಡ ಪಟಾಕಿಗಳಿಗೆ ಹುಡುಕಾಡುವ ಜನರಿಗೆ ಸ್ವಲ್ಪ ಬೇಸರವಾಗಿದೆ. ಅತ್ತ ಪಟಾಕಿಗಳ ಬೆಲೆ ಏರಿಕೆಯಾಗಿರುವುದು ಕೂಡ ಗ್ರಾಹಕರನ್ನು ನಿರಾಸೆಗೊಳಿಸಿದೆ.

ಸದ್ಯ ಇಂದಿನಿಂದ ದೀಪಾವಳಿಯ ಆಚರಣೆ ಶುರುವಾಗಿದ್ದು, ಹಬ್ಬವನ್ನು ದೀಪಗಳ ಜೊತೆ ರಂಗೇರಿಸಲು ಪಟಾಕಿಗಳು ಕೂಡ ಸಜ್ಜಾಗಿವೆ. ಇತ್ತ ಪಟಾಕಿಯಿಂದ ಆಗಬಹುದಾದ ಅನಾಹುತಗಳನ್ನ ತಪ್ಪಿಸಲು ಪೊಲೀಸ್ ಇಲಾಖೆ ಕೆಲ ಸಲಹೆ ಸೂಚನೆಗಳನ್ನ ನೀಡಿದೆ.

ಪಟಾಕಿ ಸಿಡಿಸುವವರಿಗೆ ಪೊಲೀಸರ ಸಲಹೆಗಳೇನು?

  • ಲೈಸೆನ್ಸ್ ಪಡೆದ ಅಂಗಡಿಯಿಂದ ಮಾತ್ರ ಪಟಾಕಿ ಖರೀದಿಸಿ.
  • ಅತಿ ಹೆಚ್ಚು ಶಬ್ದ,ಮಾಲಿನ್ಯ ಉಂಟು ಮಾಡೋ ಪಟಾಕಿ ಬೇಡ.
  • ಚಿಕ್ಕ ಮಕ್ಕಳು ಒಬ್ಬರೇ ಪಟಾಕಿ ಹಚ್ಚಲು ಬಿಡಬಾರದು.
  • ತೆರೆದ ಮೈದಾನ, ಕಡಿಮೆ ಜನರಿರೋ ಪ್ರದೇಶದಲ್ಲಿ ಮಾತ್ರ ಪಟಾಕಿ ಸಿಡಿಸಿ.
  • ಪಟಾಕಿ ಹಚ್ಚುವ ಕಡೆ ಬೆಂಕಿ ನಿರೋಧಕ, ನೀರು ಬಳಸಿ.

ಇದನ್ನೂ ಓದಿ: ಪಟಾಕಿ ದುರಂತ ಕರಿ ನೆರಳು: ಅತ್ತಿಬೆಲೆಯಲ್ಲಿ ಪಟಾಕಿ ಮಾರಾಟ ಕುಸಿತ

ಒಟ್ಟಿನಲ್ಲಿ ಬೆಳಕಿನ ಹಬ್ಬ ದೀಪಾವಳಿಗೆ ದೀಪಗಳ ಜೊತೆಗೆ ಪಟಾಕಿಗಳಿಗೂ ಬೇಡಿಕೆ ಹೆಚ್ಚಾಗಿದೆ. ಇತ್ತ ರಾತ್ರಿ 8 ಗಂಟೆಯಿಂದ ರಾತ್ರಿ 10 ಗಂಟೆ ತನಕ ಮಾತ್ರ ಪಟಾಕಿ ಸಿಡಿಸಲು ಅವಕಾಶ ಕೊಡಲಾಗಿದ್ದು, ಪರಿಸರಕ್ಕೆ ಹಾನಿಮಾಡದಂತೆ ಪರಿಸರಸ್ನೇಹಿ ದೀಪಾವಳಿ ಆಚರಿಸುವ ಮೂಲಕ ಜವಬ್ದಾರಿಯುತ ನಾಗರೀಕರಾಗಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು