AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepavali: ಬೆಂಗಳೂರಿನಲ್ಲಿ ಪಟಾಕಿ ಮಾರಾಟ ಜೋರು, ಗ್ರಾಹಕರಿಗೆ ತಟ್ಟಿದ ಪಟಾಕಿ ಬೆಲೆಯೇರಿಕೆ ಬಿಸಿ

ಎಲ್ಲೆಡೆ ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮ ಮನೆಮಾಡಿದೆ. ಬೆಂಗಳೂರಿನಲ್ಲಿ ಪಟಾಕಿ ಮಾರಾಟ ಜೋರಾಗಿದೆ. ಚಾಮರಾಜಪೇಟೆಯ ಉದಯಭಾನು ಕಲಾಸಂಘದ ಮೈದಾನದಲ್ಲಿ ಪಟಾಕಿ ಸ್ಟಾಲ್​​ಗಳಲ್ಲಿ ಭರ್ಜರಿ ಮಾರಾಟವಾಗುತ್ತಿದ್ದು, ಅತ್ತ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ ಕೂಡ ತಟ್ಟುತ್ತಿದೆ. ಗ್ರೀನ್ ಪಟಾಕಿಗಳ ಬೆಲೆ ದುಪ್ಪಟ್ಟಾಗಿರುವುದಕ್ಕೆ ಗ್ರಾಹಕರು ಅಸಮಾಧಾನ ಹೊರಹಾಕಿದ್ದಾರೆ.

Deepavali: ಬೆಂಗಳೂರಿನಲ್ಲಿ ಪಟಾಕಿ ಮಾರಾಟ ಜೋರು, ಗ್ರಾಹಕರಿಗೆ ತಟ್ಟಿದ ಪಟಾಕಿ ಬೆಲೆಯೇರಿಕೆ ಬಿಸಿ
ಬೆಂಗಳೂರಿನಲ್ಲಿ ಪಟಾಕಿ ಮಾರಾಟ ಜೋರು, ಗ್ರಾಹಕರಿಗೆ ತಟ್ಟಿದ ಪಟಾಕಿ ಬೆಲೆಯೇರಿಕೆ ಬಿಸಿ
ಶಾಂತಮೂರ್ತಿ
| Edited By: |

Updated on: Oct 31, 2024 | 7:35 AM

Share

ಬೆಂಗಳೂರು, ಅಕ್ಟೋಬರ್ 31: ದೀಪಗಳ ಹಬ್ಬ ದೀಪಾವಳಿಗೆ ರಾಜಧಾನಿ ಬೆಂಗಳೂರು ಭರ್ಜರಿ ಸಿದ್ಧತೆ ಮಾಡಿದ್ದು, ನಗರದಲ್ಲಿ ಸಂಭ್ರಮದ ವಾತಾವರಣ ಮನೆ ಮಾಡಿದೆ. ಇತ್ತ ಪಟಾಕಿ ಮಾರಾಟ ಕೂಡ ಜೋರಾಗಿದೆ. ಬೆಂಗಳೂರಿನ ಚಾಮರಾಜಪೇಟೆ ಸೇರಿ ಹಲವೆಡೆ ಮೈದಾನಗಳಲ್ಲಿ ಪಟಾಕಿ ಸ್ಟಾಲ್​ಗಳಲ್ಲಿ ಭರ್ಜರಿ ವ್ಯಾಪಾರವಾಗುತ್ತಿದೆ. ಮೊದಲ ದಿನವಾದ್ದರಿಂದ ಗ್ರಾಹಕರ ಸಂಖ್ಯೆ ಕಡಿಮೆ ಇದ್ದರೂ ಕೂಡ ಹಾಕಿರುವ ಬಂಡವಾಳಕ್ಕೆ ತಕ್ಕ ವ್ಯಾಪಾರ ಆಗುತ್ತಿರುವುದಕ್ಕೆ ವ್ಯಾಪಾರಿಗಳು ಖುಷಿಯಾಗಿದ್ದಾರೆ. ಇನ್ನು ಹಸಿರು ಪಟಾಕಿಗಳ ಮಾರಾಟ ಮಾಡಲು ಮಾತ್ರ ಅವಕಾಶ ಕೊಟ್ಟಿರುವುದರಿಂದ ಪೊಲೀಸರು ನೀಡಿರುವ ಮಾರ್ಗಸೂಚಿಯಂತೆಯೇ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಪಟಾಕಿ ವ್ಯಾಪಾರ ನಡೆಸಲಾಗುತ್ತಿದೆ.

ಇನ್ನು ಬಗೆ ಬಗೆಯ ಗ್ರೀನ್ ಪಟಾಕಿಗಳು ಮಾರುಕಟ್ಟೆಗೆ ಲಗ್ಗೆಯಿಟ್ಟಿದ್ದು, ಹೊಸೂರಿನಿಂದ ಬಂದಿರುವ ಪಟ್ ಪಟ್ ಪಟಾಕಿಗಳು ಗ್ರಾಹಕರ ಗಮನಸೆಳೆಯುತ್ತಿವೆ. ಗ್ರೀನ್ ಪಟಾಕಿಗೆ ಮಾತ್ರ ಮಾರಾಟಕ್ಕೆ ಅವಕಾಶ ಇರುವುದರಿಂದ ಢಂ ಢಂ ಅಂತಾ ಸದ್ದುಮಾಡುವ ದೊಡ್ಡ ದೊಡ್ಡ ಪಟಾಕಿಗಳಿಗೆ ಹುಡುಕಾಡುವ ಜನರಿಗೆ ಸ್ವಲ್ಪ ಬೇಸರವಾಗಿದೆ. ಅತ್ತ ಪಟಾಕಿಗಳ ಬೆಲೆ ಏರಿಕೆಯಾಗಿರುವುದು ಕೂಡ ಗ್ರಾಹಕರನ್ನು ನಿರಾಸೆಗೊಳಿಸಿದೆ.

ಸದ್ಯ ಇಂದಿನಿಂದ ದೀಪಾವಳಿಯ ಆಚರಣೆ ಶುರುವಾಗಿದ್ದು, ಹಬ್ಬವನ್ನು ದೀಪಗಳ ಜೊತೆ ರಂಗೇರಿಸಲು ಪಟಾಕಿಗಳು ಕೂಡ ಸಜ್ಜಾಗಿವೆ. ಇತ್ತ ಪಟಾಕಿಯಿಂದ ಆಗಬಹುದಾದ ಅನಾಹುತಗಳನ್ನ ತಪ್ಪಿಸಲು ಪೊಲೀಸ್ ಇಲಾಖೆ ಕೆಲ ಸಲಹೆ ಸೂಚನೆಗಳನ್ನ ನೀಡಿದೆ.

ಪಟಾಕಿ ಸಿಡಿಸುವವರಿಗೆ ಪೊಲೀಸರ ಸಲಹೆಗಳೇನು?

  • ಲೈಸೆನ್ಸ್ ಪಡೆದ ಅಂಗಡಿಯಿಂದ ಮಾತ್ರ ಪಟಾಕಿ ಖರೀದಿಸಿ.
  • ಅತಿ ಹೆಚ್ಚು ಶಬ್ದ,ಮಾಲಿನ್ಯ ಉಂಟು ಮಾಡೋ ಪಟಾಕಿ ಬೇಡ.
  • ಚಿಕ್ಕ ಮಕ್ಕಳು ಒಬ್ಬರೇ ಪಟಾಕಿ ಹಚ್ಚಲು ಬಿಡಬಾರದು.
  • ತೆರೆದ ಮೈದಾನ, ಕಡಿಮೆ ಜನರಿರೋ ಪ್ರದೇಶದಲ್ಲಿ ಮಾತ್ರ ಪಟಾಕಿ ಸಿಡಿಸಿ.
  • ಪಟಾಕಿ ಹಚ್ಚುವ ಕಡೆ ಬೆಂಕಿ ನಿರೋಧಕ, ನೀರು ಬಳಸಿ.

ಇದನ್ನೂ ಓದಿ: ಪಟಾಕಿ ದುರಂತ ಕರಿ ನೆರಳು: ಅತ್ತಿಬೆಲೆಯಲ್ಲಿ ಪಟಾಕಿ ಮಾರಾಟ ಕುಸಿತ

ಒಟ್ಟಿನಲ್ಲಿ ಬೆಳಕಿನ ಹಬ್ಬ ದೀಪಾವಳಿಗೆ ದೀಪಗಳ ಜೊತೆಗೆ ಪಟಾಕಿಗಳಿಗೂ ಬೇಡಿಕೆ ಹೆಚ್ಚಾಗಿದೆ. ಇತ್ತ ರಾತ್ರಿ 8 ಗಂಟೆಯಿಂದ ರಾತ್ರಿ 10 ಗಂಟೆ ತನಕ ಮಾತ್ರ ಪಟಾಕಿ ಸಿಡಿಸಲು ಅವಕಾಶ ಕೊಡಲಾಗಿದ್ದು, ಪರಿಸರಕ್ಕೆ ಹಾನಿಮಾಡದಂತೆ ಪರಿಸರಸ್ನೇಹಿ ದೀಪಾವಳಿ ಆಚರಿಸುವ ಮೂಲಕ ಜವಬ್ದಾರಿಯುತ ನಾಗರೀಕರಾಗಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್