AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿಯಂದು ದೆಹಲಿ ಜಗಮಗಿಸುತ್ತಿದೆ, ಬೆಂಗಳೂರು ಮಂಕಾಗಿದೆ, ಕಾರಣವೇನು?

ಈ ದೀಪಾವಳಿ ಹಬ್ಬಕ್ಕೆ ದೆಹಲಿ ಮತ್ತು ಬೆಂಗಳೂರಿನ ರಾತ್ರಿ ನೋಟದ ವೈರಲ್ ವಿಡಿಯೋ ಹಲವು ಚರ್ಚೆ ಹುಟ್ಟುಹಾಕಿದೆ. ವಿಮಾನದಿಂದ ಚಿತ್ರೀಕರಿಸಿದ ಈ ವಿಡಿಯೋದಲ್ಲಿ ದೆಹಲಿ ಪ್ರಕಾಶಮಾನವಾಗಿ ಬೆಳಗಿದರೆ, ಬೆಂಗಳೂರು ಮಂಕಾಗಿದೆ. ವಿಮಾನ ನಿಲ್ದಾಣಗಳ ಭೌಗೋಳಿಕ ಸ್ಥಳ ಮತ್ತು ನಗರಗಳ ಹಬ್ಬದ ಸಂಭ್ರಮದ ವ್ಯತ್ಯಾಸಗಳು ಇದಕ್ಕೆ ಕಾರಣವೆಂದು ಸಾಮಾಜಿಕ ಮಾಧ್ಯಮಗಳಲ್ಲಿ ಬಳಕೆದಾರರು ಪ್ರತಿಕ್ರಿಯಿಸಿದ್ದಾರೆ.

ದೀಪಾವಳಿಯಂದು ದೆಹಲಿ ಜಗಮಗಿಸುತ್ತಿದೆ, ಬೆಂಗಳೂರು ಮಂಕಾಗಿದೆ, ಕಾರಣವೇನು?
ವೈರಲ್​​ ವಿಡಿಯೋ
ಅಕ್ಷಯ್​ ಪಲ್ಲಮಜಲು​​
|

Updated on:Oct 20, 2025 | 2:55 PM

Share

ದೇಶದಲ್ಲಿ ದೀಪಾವಳಿ ಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿದೆ. ಎಲ್ಲ ಕಡೆ ದೀಪ ಹಾಗೂ ಲೈಟಿಂಗ್​​ಗಳು ಜಗಮಗಿಸುತ್ತಿದೆ. ಆದರೆ ಇದರಲ್ಲಿ ಬೆಂಗಳೂರು ಯಾಕೋ ಮಂಕಾಗಿದೆ. ಹೇಗೆ ಎಂಬುದನ್ನು ಈ ವೈರಲ್​ ಪೋಸ್ಟ್​​​​ ನೋಡಿದ್ರೆ ಗೊತ್ತಾಗುತ್ತದೆ. ದೀಪಾವಳಿ ಸಮಯದಲ್ಲಿ ದೆಹಲಿ (Delhi ) ಹಾಗೂ ಬೆಂಗಳೂರಿಗೂ (Bengaluru ) ಇರುವ ವ್ಯತ್ಯಾಸವನ್ನು ಇಲ್ಲಿ ಹೇಳಿದ್ದಾರೆ. ದೆಹಲಿ ದೀಪಗಳಿಂದ ಹಾಗೂ ವಿದ್ಯುತ್ ದೀಪಾಲಂಕಾರದಿಂದ ಹೊಳೆಯುತ್ತಿದೆ. ಆದರೆ ಬೆಂಗಳೂರು ಯಾಕೆ ಇಷ್ಟೊಂದು ಮಂಕಾಗಿದೆ. ಈ ಎರಡು ವ್ಯತ್ಯಾಸವನ್ನು ವಿಮಾನದಲ್ಲಿ ಪ್ರಯಾಣಿಸುವಾಗ ಚಿತ್ರೀಕರಿಸಲಾಗಿದೆ. ದೆಹಲಿ ಮತ್ತು ಬೆಂಗಳೂರಿನ ರಾತ್ರಿಯ ನೋಟ ಹೇಗಿದೆ ಎಂಬುದನ್ನು ಇಲ್ಲಿ ವಿವರಿಸಿದ್ದಾರೆ.

ವೈರಲ್ ಆಗಿರುವ ವಿಡಿಯೋದಲ್ಲಿ ದೆಹಲಿ ತುಂಬಾ ಹೊಳೆಯುತ್ತಿದೆ. ಅಲಂಕಾರಿಕ ಬೆಳಕಿನಿಂದ ಪ್ರಕಾಶಮಾನವಾಗಿ ಬೆಳಗುತ್ತಿದೆ. ಆದರೆ ಬೆಂಗಳೂರು ಶಾಂತವಾಗಿರುವಂತೆ ತೋರುತ್ತಿದೆ. ಯಾವುದೇ ಬೆಳಕಿನಿಂದ ಹೊಳೆಯುತ್ತಿಲ್ಲ, ಎಲ್ಲವೂ ನೀರವ ಮೌನವಾಗಿದೆ. ಇದೀಗ ಈ ಪೋಸ್ಟ್​ ಹಲವು ಚರ್ಚೆಗೆ ಕಾರಣವಾಗಿದೆ. ಬೆಂಗಳೂರು ನಗರ ಹಬ್ಬದ ಸಮಯದಲ್ಲೂ ಇಷ್ಟೊಂದು ಶಾಂತವಾಗಿದೆ ಎಂಬ ಪ್ರಶ್ನೆಗೆ ಸೋಶಿಯಲ್​ ಮೀಡಿಯಾ ಬಳಕೆದಾರರು ಉತ್ತರಿಸಿದ್ದಾರೆ.

ಇದನ್ನೂ ಓದಿ: 20 ನಿಮಿಷಗಳಲ್ಲಿ 14 ಕಿ.ಮೀ ತಲುಪಿದೆ, ದೀಪಾವಳಿಯಿಂದ ಬೆಂಗಳೂರು ಖಾಲಿ ಖಾಲಿ ಎಂದ ಟೆಕ್ಕಿ

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ದೆಹಲಿ ನನ್ನ ಹೃದಯ ಗೆದ್ದಿದೆ ಎಂಬ ಶೀರ್ಷಿಕೆಯನ್ನು ಈ ಪೋಸ್ಟ್​​​ನಲ್ಲಿ ಹೇಳಲಾಗಿದೆ. ಈ ವಿಡಿಯೋ 3.1 ಮಿಲಿಯನ್ ವೀಕ್ಷಣೆ ಪಡೆದುಕೊಂಡಿದ್ದು, ಹಲವು ಜನ ಈ ಪೋಸ್ಟ್​​ಗೆ ಕಮೆಂಟ್​​ ಮಾಡಿದ್ದಾರೆ. ಅನೇಕ ಬಳಕೆದಾರರು ಈ ವ್ಯತ್ಯಾಸಕ್ಕೆ ಭೌಗೋಳಿಕ ಕಾರಣ ಎಂದು ಹೇಳಿದ್ದಾರೆ. ಬೆಂಗಳೂರಿನ ವಿಮಾನ ನಿಲ್ದಾಣವು ಮುಖ್ಯ ನಗರದಿಂದ ದೂರದಲ್ಲಿದೆ, ಆದರೆ ದೆಹಲಿಯ ವಿಮಾನ ನಿಲ್ದಾಣವು ಜನನಿಬಿಡ ಪ್ರದೇಶಗಳ ಪಕ್ಕದಲ್ಲಿದೆ. ದು ನೈಸರ್ಗಿಕವಾಗಿ ಪ್ರಕಾಶಮಾನವಾದ ವೈಮಾನಿಕ ನೋಟವನ್ನು ನೀಡುತ್ತದೆ ಎಂದು ಹಲವು ಜನ ಹೇಳಿದ್ದಾರೆ. ದೆಹಲಿಗೆ ಹಬ್ಬಗಳನ್ನು ಹೇಗೆ ಆಚರಣೆ ಮಾಡಬೇಕು ಎಂಬುದು ತಿಳಿದಿದೆ ಎಂದು ಒಬ್ಬ ಬಳಕೆದಾರ ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರ ದೀಪಾವಳಿಯಂದು ಸಹ ಬೆಂಗಳೂರು ಶಾಂತವಾಗಿರುತ್ತದೆ, ಅದು ನಮಗೆ ಇಷ್ಟ ಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರ ಆಕಾಶದಿಂದ ದೆಹಲಿಯ ನೋಟವು ಮಾಂತ್ರಿಕವಾಗಿ ಕಾಣುತ್ತದೆ ಎಂದು ಹೇಳಿದ್ದಾರೆ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:51 pm, Mon, 20 October 25

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಭೂಪಟದಿಂದಲೇ ಮರೆಯಾಗಬೇಕಾದೀತು: ಪಾಕ್​ಗೆ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!
ಭೂಪಟದಿಂದಲೇ ಮರೆಯಾಗಬೇಕಾದೀತು: ಪಾಕ್​ಗೆ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!
ನೆದರ್‌ಲ್ಯಾಂಡ್ಸ್‌ ತಲುಪಿದ ಮೋದಿ; ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ
ನೆದರ್‌ಲ್ಯಾಂಡ್ಸ್‌ ತಲುಪಿದ ಮೋದಿ; ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ