AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

6ನೇ ಗ್ಯಾರಂಟಿ ಘೋಷಿಸಿದ ಡಿಕೆ ಶಿವಕುಮಾರ್, ಬೆಂಗಳೂರಿಗರಿಗೆ ಬಂಪರ್ ಗಿಫ್ಟ್!

ಇ-ಖಾತಾ, ನಂಬಿಕೆ ನಕ್ಷೆ ಸೇರಿ ಬೆಂಗಳೂರಿನ ಜನರಿಗಾಗಿ ಈಗಾಗಲೇ ಹಲವು ಯೋಜನೆಗಳನ್ನು ರಾಜ್ಯ ಸರ್ಕಾರ ಅನುಷ್ಠಾನಗೊಳಿಸಿದೆ. ಅದರ ಜತೆಗೆ ಇದೀಗ ಬೆಂಗಳೂರಿಗೆ ಸೀಮಿತವಾಗಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಇಂದು (ಇಂದು 13) 6ನೇ ಗ್ಯಾರಂಟಿ ಘೋಷಣೆ ಮಾಡಿದ್ದಾರೆ. ಏನದು 6ನೇ ಗ್ಯಾರಂಟಿ ಎನ್ನುವ ಡಿಟೇಲ್ಸ್ ಇಲ್ಲಿದೆ.

6ನೇ ಗ್ಯಾರಂಟಿ ಘೋಷಿಸಿದ ಡಿಕೆ ಶಿವಕುಮಾರ್, ಬೆಂಗಳೂರಿಗರಿಗೆ ಬಂಪರ್ ಗಿಫ್ಟ್!
Dk Shivakumar
Anil Kalkere
| Edited By: |

Updated on:May 13, 2026 | 3:16 PM

Share

ಬೆಂಗಳೂರು, (ಮೇ 13): ಇ-ಖಾತಾ, ನಂಬಿಕೆ ನಕ್ಷೆ ಸೇರಿ ಬೆಂಗಳೂರಿನ (Bengaluru) ಜನರಿಗಾಗಿ ಈಗಾಗಲೇ ಹಲವು ಯೋಜನೆಗಳನ್ನು ರಾಜ್ಯ ಸರ್ಕಾರ ಅನುಷ್ಠಾನಗೊಳಿಸಿದೆ. ಅದರ ಜತೆಗೆ ಇದೀಗ ಬೆಂಗಳೂರಿಗೆ ಸೀಮಿತವಾಗಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ (DK Shivakumar) ಅವರು ಇಂದು(ಮೇ 13) 6ನೇ ಗ್ಯಾರಂಟಿ ಘೋಷಿಸಿದ್ದಾರೆ. ಬಿ ಖಾತೆಯಿಂದ ಎ ಖಾತೆ ಮಾಡಿಕೊಳ್ಳಲು ಅಭಿಯಾನ (Property Ownership Drive ಮಾಡುವುದಾಗಿ ಘೋಷಿಸಿದ್ದಾರೆ. ಜಿಬಿಎ ವ್ಯಾಪ್ತಿಯ 5 ನಗರ ಪಾಲಿಕೆಗಳಲ್ಲಿ 16-05-2026 ರಂದು ನಡೆಯುವ ನನ್ನ ಖಾತಾ ನನ್ನ ಹಕ್ಕು ಅಭಿಯಾನ(e-Khatha Open House) ಘೋಷಿಸಿದ್ದು, ಓಸಿ ಇಲ್ಲದೇ ವಿದ್ಯುತ್ ಸಂಪರ್ಕ, ನೀರಿನ ಸಂಪರ್ಕ ಸಿಗದೇ ಪರದಾಡುತ್ತಾ ಇದ್ದವರಿಗೆ ಅನುಕೂಲವಾಗಲಿದೆ.

  • ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿ ಘೋಷಿಸಿದ ಡಿಸಿಎಂ ಡಿಕೆ ಶಿವಕುಮಾರ್
  • ಭೂ ಗ್ಯಾರಂಟಿ ನಮ್ಮ ಸರ್ಕಾರದ ಆರನೇ ಗ್ಯಾರಂಟಿ ಎಂದ ಡಿಕೆಶಿ
  • ಬಿ ಖಾತಾದಿಂದ ಎ ಖಾತಾ ಪರಿವರ್ತನೆ, ಗೈಡ್‌ಲೈನ್ಸ್‌ ವ್ಯಾಲ್ಯೂ ಇಳಿಕೆ

ಬಿ ಖಾತೆಯಿಂದ ಎ ಖಾತೆ ಮಾಡಿಕೊಳ್ಳಲು ಅಭಿಯಾನ

ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ಬಿ ಖಾತೆಯಿಂದ ಎ ಖಾತೆ ಮಾಡಿಕೊಳ್ಳಲು ಅವಕಾಶ ಕೊಡುತ್ತೇವೆ.ಒಟ್ಟು 7 ಲಕ್ಷ ಬಿ ಖಾತೆಗಳಿದ್ದು, ಬಿ ಖಾತೆಯಿಂದ ಎ ಖಾತೆ ಮಾಡಿಕೊಳ್ಳಲು ಅಭಿಯಾನ ಮಾಡುತ್ತೇವೆ. ನಗರದಲ್ಲಿ ಕೆಲವರು ಪ್ಲ್ಯಾನ್​ ಇಲ್ಲದೆ ಮನೆಗಳನ್ನು ಕಟ್ಟಿಕೊಂಡಿದ್ದಾರೆ. ಅಂತಹವರ ಅನುಕೂಲಕಕ್ಕಾಗಿ ಈ ಅಭಿಯಾನ ಹಮ್ಮಿಕೊಂಡಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ: 10.45 ಗಂಟೆಯಲ್ಲಿ ಶ್ರೀಲಂಕಾದಿಂದ ಭಾರತಕ್ಕೆ ಈಜಿದ ಜೋಡಿ: ಐತಿಹಾಸಿಕ ಸಾಧನೆ ಮಾಡಿದ ಬೆಂಗಳೂರಿನ ದಂಪತಿ

ಗೈಡೆನ್ಸ್ ವ್ಯಾಲ್ಯೂ ಶೇಕಡಾ 5ರಿಂದ 2ಕ್ಕೆ ಇಳಿಕೆ

ಶಾಲೆ ಆವರಣದಲ್ಲಿ ಬೆಂಗಳೂರಿನ ಪ್ರತಿ ವಿಧಾನಸಭಾ ಕ್ಷೇತ್ರದ 10 ಕಡೆ ಅಭಿಯಾನ ನಡೆಯಲಿದ್ದು, ಮೇ 16ರ ಬಳಿಕ ಪ್ರತಿ ಶನಿವಾರ ಜಾಗ ನಿಗದಿ ಮಾಡಲಾಗುತ್ತದೆ. ಅಧಿಕಾರಿಗಳು ರಜೆ ಇದ್ದರೂ ಕೂಡ ಕೆಲಸ ಮಾಡಬೇಕು. ನಗರದ ನಾಗರಿಕರು ಬಂದು ದಾಖಲೆಗಳನ್ನು ಸರಿ ಮಾಡಿಕೊಳ್ಳಬೇಕು .ಬಿ ಖಾತೆಯಿಂದ ಎ ಖಾತೆ ಮಾಡಿಕೊಂಡರೆ ಗೈಡೆನ್ಸ್ ವ್ಯಾಲ್ಯೂ ಶೇಕಡಾ 5ರಿಂದ 2ಕ್ಕೆ ಇಳಿಕೆ ಮಾಡುತ್ತಿದ್ದೇವೆ. ಸೂಕ್ತ ದಾಖಲೆ ಕೊಟ್ಟರೆ ಆಸ್ತಿ ಪ್ರಮಾಣಪತ್ರ ಮನೆಗೆ ತಲುಪಿಸುತ್ತೇವೆ .ಮುಂದಿನ 100 ದಿನಗಳಲ್ಲಿ ಈ ಅವಕಾಶ ಪಡೆದುಕೊಳ್ಳಬೇಕು ಎಂದರು.

ಕೆಂಪೇಗೌಡ ಜಯಂತಿ ದಿನ ಗ್ರೀನ್ ಬೆಂಗಳೂರು

ಕೆಂಪೇಗೌಡ ಜಯಂತಿ ದಿನ ಗ್ರೀನ್ ಬೆಂಗಳೂರು ಮಾಡಲು ತೀರ್ಮಾನ ಮಾಡಲಾಗಿದ್ದು, 15 ಲಕ್ಷ ಸಸಿಗಳನ್ನು ನೆಡಬೇಕು ಅಂತಾ ನಿರ್ಧಾರ ಮಾಡಿದ್ದೇವೆ. ಬಿಡಿಎ 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಜೂನ್ 27ರಂದು ಅದ್ಧೂರಿಯಾಗಿ ಕಾರ್ಯಕ್ರಮ ಮಾಡುತ್ತೇವೆ ಎಂದು ತಿಳಿಸಿದರು.

33 ಕಿ. ಮೀ ಬಿಸಿನೆಸ್ ಕಾರಿಡಾರ್

ಎಲೆಕ್ಟ್ರಾನಿಕ್ ಸಿಟಿಯಿಂದ ಮೈಸೂರು ರಸ್ತೆ ವರೆಗೆ 33 ಕಿಲೋ ಮೀಟರ್ ಬಿಸಿನೆಸ್ ಕಾರಿಡಾರ್ ಆಗಲಿದೆ. ಈ ಭಾಗದಲ್ಲಿ ಭೂಮಿ ಕೊಡುವ ಮಾಲೀಕರಿಗೆ 5 ವಿವಿಧ ರೂಪದ ಪರಿಹಾರ ಕೊಡುತ್ತೇವೆ. ಯಾವುದೇ ಕಾರಣಕ್ಕೂ ಇದನ್ನ ಡಿನೋಟಿಫೈ ಮಾಡಲ್ಲ ಎಂದು ಸ್ಪಷ್ಟಪಡಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:11 pm, Wed, 13 May 26

Follow Us
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?