AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖ್ಯಮಂತ್ರಿ ಮಾದರಿಯಲ್ಲಿ ಭಾಷಣ ಮಾಡಿದ ಡಿ.ಕೆ.ಶಿವಕುಮಾರ್; ಭಾಷಣ ವೇಳೆ ಮಾತು ತಪ್ಪಿದ ಡಿಕೆಶಿ

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲೂ ವಿರೋಧಿಗಳಿಗೆ ಟಾಂಗ್ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar), ಮುಖ್ಯಮಂತ್ರಿ ಮಾದರಿಯಲ್ಲಿ ಭಾಷಣ ಮಾಡಿದ್ದಾರೆ. ಕಾಂಗ್ರೆಸ್ (Congress) ಭವನದಲ್ಲಿ ನಡೆದ 75ನೇ ಸ್ವಾತಂತ್ರ್ಯ ದಿನಾಚರಣೆ (Independence Day) ಕಾರ್ಯಕ್ರಮದಲ್ಲಿ ವೇದಿಕೆ ಮೇಲೆ ಡಿಕೆಶಿ ಲಿಖಿತ ಭಾಷಣ ಓದಿದರು. ಈ ಹಿಂದಿನ ಅಧ್ಯಕ್ಷರು ಇತ್ತೀಚಿಗೆ ಈ ಮಾದರಿಯಲ್ಲ ಭಾಷಣ ಮಾಡಿಲ್ಲ. ಧ್ವಜಾರೋಹಣ ಮಾಡಿದ ಡಿಕೆಶಿ, ಪರೆಡ್ ಮೈದಾನದಲ್ಲಿ ಮುಖ್ಯಮಂತ್ರಿ ಮಾದರಿಯಲ್ಲಿ ಭಾಷಣ ಆರಂಭಿಸಿದರು. ಸಿದ್ದರಾಮಯ್ಯ ಸಮ್ಮುಖದಲ್ಲೇ ವೇದಿಕೆ ಮೇಲೆ ಡಿಕೆಶಿ ಲಿಖಿತ […]

ಮುಖ್ಯಮಂತ್ರಿ ಮಾದರಿಯಲ್ಲಿ ಭಾಷಣ ಮಾಡಿದ ಡಿ.ಕೆ.ಶಿವಕುಮಾರ್; ಭಾಷಣ ವೇಳೆ ಮಾತು ತಪ್ಪಿದ ಡಿಕೆಶಿ
ಡಿ.ಕೆ. ಶಿವಕುಮಾರ್ (ಸಂಗ್ರಹ ಚಿತ್ರ)
TV9 Web
| Edited By: |

Updated on:Aug 15, 2021 | 10:23 AM

Share

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲೂ ವಿರೋಧಿಗಳಿಗೆ ಟಾಂಗ್ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar), ಮುಖ್ಯಮಂತ್ರಿ ಮಾದರಿಯಲ್ಲಿ ಭಾಷಣ ಮಾಡಿದ್ದಾರೆ. ಕಾಂಗ್ರೆಸ್ (Congress) ಭವನದಲ್ಲಿ ನಡೆದ 75ನೇ ಸ್ವಾತಂತ್ರ್ಯ ದಿನಾಚರಣೆ (Independence Day) ಕಾರ್ಯಕ್ರಮದಲ್ಲಿ ವೇದಿಕೆ ಮೇಲೆ ಡಿಕೆಶಿ ಲಿಖಿತ ಭಾಷಣ ಓದಿದರು. ಈ ಹಿಂದಿನ ಅಧ್ಯಕ್ಷರು ಇತ್ತೀಚಿಗೆ ಈ ಮಾದರಿಯಲ್ಲ ಭಾಷಣ ಮಾಡಿಲ್ಲ. ಧ್ವಜಾರೋಹಣ ಮಾಡಿದ ಡಿಕೆಶಿ, ಪರೆಡ್ ಮೈದಾನದಲ್ಲಿ ಮುಖ್ಯಮಂತ್ರಿ ಮಾದರಿಯಲ್ಲಿ ಭಾಷಣ ಆರಂಭಿಸಿದರು.

ಸಿದ್ದರಾಮಯ್ಯ ಸಮ್ಮುಖದಲ್ಲೇ ವೇದಿಕೆ ಮೇಲೆ ಡಿಕೆಶಿ ಲಿಖಿತ ಭಾಷಣ ಮಾಡಿದರು. ಸಿಎಂ ಸ್ವಾತಂತ್ರ್ಯೋತ್ಸವ ಸಂದೇಶ ಮಾದರಿಯಲ್ಲೇ ಮಾತನಾಡಿದ್ದಾರೆ. ಇದೊಂದು ಐತಿಹಾಸಿಕ ದಿನ. ನಮ್ಮ ಪಾಲಿನ ಸುದಿನ. ನಮಗೆ ಸ್ವಾತಂತ್ರ್ಯ ತಂದ ದಿನ. ಸ್ವಾತಂತ್ರ್ಯ ಅಮೃತ ಮಹೋತ್ಸವ. ಸ್ವಾತಂತ್ರ್ಯ ಬಂದು 75 ವರ್ಷ ಕಳೆದಿದೆ. ನಮ್ಮ ನಾಯಕ ನೆಹರು ಹೇಳಿದ್ರು, ಪ್ರತಿಯೊಬ್ಬ ನಾಗರಿಕನ ಕಣ್ಣಿರು ಒರೆಸಬೇಕು. ಎಲ್ಲಿಯವರೆಗೆ ಕಷ್ಟ ಇರುತ್ತೋ ಅಲ್ಲಿಯವರೆಗೆ ಕೆಲಸ ಮಾಡಬೇಕು. ಇದರಿಂದ ಮನೆ ಇಲ್ಲದವರಿಗೆ ಮನೆ, ಭೂಮಿ, ಕೆಲಸ ಸಿಕ್ಕಿದೆ. ಸ್ವಾತಂತ್ರ್ಯ ಭಾರತದ ಕಲ್ಯಾಣ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಕೊಡುಗೆಯಿದೆ ಎಂದು ಭಾಷಣದಲ್ಲಿ ಹೇಳಿದರು.

ಕಳೆದ ಏಳು ವರ್ಷದಿಂದ ಬಿಜೆಪಿ ಆಡಳಿತ ಇದೆ. ಆದ್ರೆ ಒಂದೆ ಒಂದು ಕಲ್ಯಾಣ ಕಾರ್ಯಕ್ರಮ ಮಾಡಿಲ್ಲ. ಜನರಿಗೆ ಕೊಡುಗೆ ಕೊಟ್ಟಿಲ್ಲ. ಬಿಕ್ಕಟ್ಟಿನ ಸಂದರ್ಭದಲ್ಲಿ ಸರ್ಕಾರದ ಜೊತೆ ಕೈ ಜೊಡಿಸಿದ್ದೇವೆ. ಆದ್ರೆ ಆಡಳಿತ ಪಕ್ಷ ಮಾಡಿದ ಸಾಧನೆ ನೊಡಿದ್ದೇವೆ. ಲಾಕ್ಡೌನ್ ಮಾಡಿದ್ರು, ಸಾವಿರಾರು ಜನರು ಸಂಕಷ್ಟದಲ್ಲಿದ್ದರು. ರೈತರು, ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ರು. ಅವರ ಧ್ವನಿಯಾಗಿ ಕಾಂಗ್ರೆಸ್ ಕೆಲಸ ಮಾಡಿದೆ ಅಂತ ಕೇಂದ್ರ ಸರ್ಕಾರದ ವಿರುದ್ಧ ಡಿಕೆಶಿ ವಾಗ್ದಾಳಿ ನಡೆಸಿದರು.

ಮಾತು ತಪ್ಪಿದ ಡಿಕೆಶಿ ಭಾಷಣದ ವೇಳೆಯಲ್ಲಿ ಹುತಾತ್ಮ ಇಂದಿರಾ ಗಾಂಧಿ ಎನ್ನುವ ಬದಲು ಸೋನಿಯಾ ಗಾಂಧಿ ಎಂದು ಡಿ.ಕೆ.ಶಿವಕುಮಾರ್ ಹೇಳಿದರು. ಈ ಸಂದರ್ಭದಲ್ಲಿ ಡಿಕೆಶಿಯನ್ನ ಕೈ ನಾಯಕರು ಹಾಗೂ ಕಾರ್ಯಕರ್ತರು ಎಚ್ಚರಿಸಿದರು.

ಇಂದೀರಾ ಕ್ಯಾಂಟೀನ್ ಹೆಸರು ಇಂದೀರಾ ಕ್ಯಾಂಟೀನ್ ಹೆಸರು ಬದಲಿಸುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಕೆಪಿಸಿಸಿ ಅಧ್ಯಕ್ಷ, ಮತಿಗೇಡಿಗಳು ಇಂದೀರಾ ಕ್ಯಾಂಟೀನ್ ಹೆಸರನ್ನು ಬದಲಾವಣೆ ಮಾಡಲು ಹೊರಟಿದ್ದಾರೆ. ಅವರ ಇತಿಹಾಸ ತಿಳಿಯದೆ ಕೈ ಹಾಕಿದ್ದಾರೆ. ಕಾಂಗ್ರೆಸ್ ಕಟ್ಟುವ ಕೆಲಸ ಮಾಡಿದೆ. ಆದ್ರೆ ಬಿಜೆಪಿ ಕೆಡವುವ ಕೆಲಸ ಮಾಡಿದ್ದಾರೆ. ಅದರ ವಿರುದ್ಧ ಧ್ವನಿ ಎತ್ತೋಣ. ಜನರ ಬಳಿ ಹೋಗೋಣ. ಚುನಾವಣೆ ಏದುರಿಸಿ ಮತ್ತೆ ಅಧಿಕಾರಕ್ಕೆ ಬರೋಣ ಅಂತ ಕಾರ್ಯಕರ್ತರಿಗೆ ಕರೆ ನೀಡಿದರು.

ನಾನು ಮುಖ್ಯಮಂತ್ರಿ ಮಾದರಿಯಲ್ಲಿ ಭಾಷಣ ಮಾಡಿಲ್ಲ. ಕಾಂಗ್ರೆಸ್ ಅಧ್ಯಕ್ಷನಾಗಿ ನಾನು ಭಾಷಣವನ್ನು ಮಾಡಿದ್ದೇನೆ. ರಾಜ್ಯದ ಜನರಿಗೆ ಏನು ಸಂದೇಶ ನೀಡಬೇಕೋ ನೀಡಿದ್ದೇನೆ. ನಮ್ಮ ಕಾರ್ಯಕ್ರಮ ಸಾಗಬೇಕಾದ ದಾರಿ ಬಗ್ಗೆ ಹೇಳಿದ್ದೇನೆ. ಮುಂದಿನ ದಿನಗಳಲ್ಲಿ ಪ್ರತಿ ಗ್ರಾಮ ಪಂಚಾಯಿತಿಗೆ ಭೇಟಿ ಕೊಡುತ್ತೀವಿ. ರಾಜ್ಯದಲ್ಲಿ ಪಕ್ಷದ ಸಂಘಟನೆಯನ್ನು ಬಲ ಪಡಿಸುತ್ತೇವೆ ಎಂದು ಶಿವಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ

ಇಂದಿನಿಂದಲೇ ನವ ಕರ್ನಾಟಕ ನಿರ್ಮಾಣ ಆರಂಭ; ಸಿಎಂ ಬಸವರಾಜ ಬೊಮ್ಮಾಯಿ

ದೇಶದ ಎಲ್ಲ ಸೈನಿಕ ಶಾಲೆಗಳಲ್ಲೂ ಹೆಣ್ಣುಮಕ್ಕಳ ಪ್ರವೇಶಕ್ಕೆ ಅವಕಾಶ: ಪ್ರಧಾನಿ ಮೋದಿ

(DK Shivakumar delivered the speech in Chief Minister style at Bengaluru)

Published On - 10:19 am, Sun, 15 August 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್