ಜನರ ತೆರಿಗೆ ಹಣದಲ್ಲಿ ಡಿಕೆ ಶಿವಕುಮಾರ್​ ಶೋಕಿ; ಕಾಂಗ್ರೆಸ್​ ವಿರುದ್ಧ ರಾಜ್ಯ ಬಿಜೆಪಿ ವಾಗ್ದಾಳಿ

ಕುರುಡು ಕಾಂಚಾಣ ಕುಣಿಯುತ್ತದೆ ಎಂಬುದಕ್ಕೆ ಡಿಸಿಎಂ ಡಿಕೆ ಶಿವಕುಮಾರ್(DK shivakumar)​ ಅವರು ನಡೆಸುತ್ತಿರುವ ಅಂಧ ದರ್ಬಾರ್ ಸಾಕ್ಷಿಯಾಗಿದೆ ಎಂದು ಬಿಜೆಪಿ(BJP) ಟ್ವೀಟ್​ ಮೂಲಕ ವಾಗ್ದಾಳಿ ನಡೆಸಿದೆ. ಜೊತೆಗೆ ಡಿಕೆಶಿ ಅವರು ಹಾಕಿಕೊಂಡಿರುವ ಶಾಲಿನ ಬೆಲೆ ಕುರಿತು ವ್ಯಂಗ್ಯವಾಡಿದೆ.

ಜನರ ತೆರಿಗೆ ಹಣದಲ್ಲಿ ಡಿಕೆ ಶಿವಕುಮಾರ್​ ಶೋಕಿ; ಕಾಂಗ್ರೆಸ್​ ವಿರುದ್ಧ ರಾಜ್ಯ ಬಿಜೆಪಿ ವಾಗ್ದಾಳಿ
ಕಾಂಗ್ರೆಸ್​ ವಿರುದ್ಧ ರಾಜ್ಯ ಬಿಜೆಪಿ ವಾಗ್ದಾಳಿ
Edited By: ಕಿರಣ್ ಹನುಮಂತ್​ ಮಾದಾರ್

Updated on: Jun 23, 2024 | 9:43 PM

ಬೆಂಗಳೂರು, ಜೂ.23: ಕುರುಡು ಕಾಂಚಾಣ ಕುಣಿಯುತ್ತದೆ ಎಂಬುದಕ್ಕೆ ಡಿಸಿಎಂ ಡಿಕೆ ಶಿವಕುಮಾರ್(DK shivakumar)​ ಅವರು ನಡೆಸುತ್ತಿರುವ ಅಂಧ ದರ್ಬಾರ್ ಸಾಕ್ಷಿಯಾಗಿದೆ ಎಂದು ಬಿಜೆಪಿ(BJP) ಟ್ವೀಟ್​ ಮೂಲಕ ವಾಗ್ದಾಳಿ ನಡೆಸಿದೆ. ‘ನಮ್ಮ ಕಾಸ್ಟ್ಲಿ ಕುಮಾರ್ ಅವರು ಧರಿಸಿರುವ ಶಾಲಿನ ಬೆಲೆ ಬರೋಬ್ಬರಿ 59,500 ಆಗಿದೆ. ಬೆಲೆ ಏರಿಕೆಯಿಂದ ಜನ ಒಂದು ಹೊತ್ತಿನ ಊಟಕ್ಕೂ ತತ್ವಾರ ಅನುಭವಿಸುತ್ತಿದ್ದಾರೆ. ಆದರೆ, ಜನಪ್ರತಿನಿಧಿಗಳು ಮಾತ್ರ ಜನರ ತೆರಿಗೆ ದುಡ್ಡಿನಲ್ಲಿ ಶೋಕಿ ಮಾಡುತ್ತಿರುವುದು ನಿಜಕ್ಕೂ ದುರಂತ ಎಂದು ಕಿಡಿಕಾರಿದ್ದಾರೆ.

ಕಾಸ್ಟ್ಲಿ ಕುಮಾರ್ ಧರಿಸಿರುವ ಶಾಲಿನ ಬೆಲೆ ಬರೋಬ್ಬರಿ 59 ಸಾವಿರ ರೂ. ಎಂದು ಬಿಜೆಪಿ ಟ್ವೀಟ್​

ಇದನ್ನೂ ಓದಿ:ಚನ್ನಪಟ್ಟಣ ಅಸೆಂಬ್ಲಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಜೆಡಿಎಸ್ ಅಭ್ಯರ್ಥಿನಾ ಅಥವಾ ಬಿಜೆಪಿ? ಕುಮಾರಸ್ವಾಮಿ ಜಾಣ್ಮೆಯ ಉತ್ತರ!

ಇನ್ನು ಇತ್ತೀಚೆಗಷ್ಟೇ ರಾಜ್ಯ ಕಾಂಗ್ರೆಸ್​, ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಮಾಡಿತ್ತು. ಈ ಹಿನ್ನಲೆ ಸರ್ಕಾರದ ನಡೆಗೆ ಸಾರ್ವಜನಿಕರು ಸೇರಿದಂತೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಕುರಿತು ವಿಜಯಪುರದಲ್ಲಿ ಮಾತನಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ , ‘ವ್ಯಾಟ್ ಹೆಚ್ಚಳ ಬಳಿಕ ದಕ್ಷಿಣ ಭಾರತದ ರಾಜ್ಯಗಳಿಗಿಂತ ಕರ್ನಾಟಕದಲ್ಲೇ ಪೆಟ್ರೋಲ್-ಡೀಸೆಲ್ ದರ ಕಡಿಮೆ ಇದೆ. ಮಹಾರಾಷ್ಟ್ರ, ಗುಜರಾತ್ ಮತ್ತು ಮಧ್ಯಪ್ರದೇಶಕ್ಕಿಂತಲೂ ನಮ್ಮಲ್ಲಿ ಡೀಸೆಲ್ ದರ ಕಡಿಮೆಯಿದೆ ಎನ್ನುವ ಮೂಲಕ ಸಿಎಂ ಸಮರ್ಥಿಸಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:36 pm, Sun, 23 June 24

Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us