AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಬಗ್ಗೆ ಡಿಕೆ ಶಿವಕುಮಾರ್​ಗೆ ಮಾಹಿತಿಯ ಕೊರತೆ ಇದೆ; ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಇಡೀ‌ ವಿಶ್ವದಲ್ಲಿ ಯಾವ ವಿರೋಧ ಪಕ್ಷವೂ ಸರ್ಕಾರದ ಕೊವಿಡ್ ನಿಯಂತ್ರಣ ಟೀಕಿಸಿಲ್ಲ. ಇಡೀ ವಿಶ್ವದಲ್ಲಿ ವಿಪಕ್ಷಗಳು ಮೊಸರಲ್ಲಿ ಕಲ್ಲು ಹುಡುಕಲು ಹೋಗಿಲ್ಲ. ಎಲ್ಲ ಕಡೆಯೂ ವಿಪಕ್ಷಗಳು ಸರ್ಕಾರದ ಜತೆ ಕೈ ಜೋಡಿಸಿವೆ. ನಮ್ಮಲ್ಲಿ ವಿಪಕ್ಷ ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ. ಇಂಥ ಸಮಯದಲ್ಲಿ ರಾಜಕಾರಣ ಸರಿಯಲ್ಲ. ಅವರನ್ನು ಜನ ನೋಡುತ್ತಿದ್ದಾರೆ ಎಂದು ಡಾ. ಸುಧಾಕರ್​ ತಿಳಿಸಿದ್ದಾರೆ.

ಕೊವಿಡ್ ಬಗ್ಗೆ ಡಿಕೆ ಶಿವಕುಮಾರ್​ಗೆ ಮಾಹಿತಿಯ ಕೊರತೆ ಇದೆ; ಆರೋಗ್ಯ ಸಚಿವ ಡಾ.ಕೆ.ಸುಧಾಕರ್
ಆರೋಗ್ಯ ಸಚಿವ ಡಾ.ಕೆ.ಸುಧಾಕರ್
TV9 Web
| Updated By: preethi shettigar|

Updated on:Jan 08, 2022 | 11:18 AM

Share

ಬೆಂಗಳೂರು: ರಾಜ್ಯದಲ್ಲಿ ಪಾಸಿಟಿವಿಟ್ ದರ ಶೇಕಡಾ 2 ರಷ್ಟು ಸಹ ಇಲ್ಲ. ಸರ್ಕಾರದ್ದು ಸುಳ್ಳು ಲೆಕ್ಕ ಎಂಬ ಡಿ.ಕೆ ಶಿವಕುಮಾರ್​‌ ಆರೋಪಕ್ಕೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್​ ತಿರುಗೇಟು ನೀಡಿದ್ದಾರೆ. ಕೊವಿಡ್ ( Covid 19) ಬಗ್ಗೆ ಡಿಕೆಶಿಗೆ ಮಾಹಿತಿಯ ಕೊರತೆ ಇದೆ. ಡಿಕೆಶಿ ಆರೋಪಕ್ಕೆ ನಾನು ಏನೂ ಮಾತಾಡಲ್ಲ. ಸರ್ಕಾರ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದೆ. ಇಡೀ‌ ವಿಶ್ವದಲ್ಲಿ ಯಾವ ವಿರೋಧ ಪಕ್ಷವೂ ಸರ್ಕಾರದ ಕೊವಿಡ್ ನಿಯಂತ್ರಣ ಟೀಕಿಸಿಲ್ಲ. ಇಡೀ ವಿಶ್ವದಲ್ಲಿ ವಿಪಕ್ಷಗಳು ಮೊಸರಲ್ಲಿ ಕಲ್ಲು ಹುಡುಕಲು ಹೋಗಿಲ್ಲ. ಎಲ್ಲ ಕಡೆಯೂ ವಿಪಕ್ಷಗಳು ಸರ್ಕಾರದ ಜತೆ ಕೈ ಜೋಡಿಸಿವೆ. ನಮ್ಮಲ್ಲಿ ವಿಪಕ್ಷ ಕಾಂಗ್ರೆಸ್ (Congress) ರಾಜಕಾರಣ ಮಾಡುತ್ತಿದೆ. ಇಂಥ ಸಮಯದಲ್ಲಿ ರಾಜಕಾರಣ ಸರಿಯಲ್ಲ. ಅವರನ್ನು ಜನ ನೋಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಬಳಿಕ ಮಾತನಾಡಿದ ಅವರು ಕಾಂಗ್ರೆಸ್ ಪಾದಯಾತ್ರೆ ದುರದೃಷ್ಟಕರ. ಸರ್ಕಾರದ ಕಾನೂನು ಪಾಲನೆ ಮಾಡದ ಪಕ್ಷಕ್ಕೆ ವಿರೋಧ ಪಕ್ಷ ಅಂತ ಕರೆಯಕ್ಕಾಗುತ್ತಾ? ಮುಂದೊಂದು ದಿನ ಇವರೇ ಆಡಳಿತ ಮಾಡಿದಾಗ, ವಿಪಕ್ಷಗಳು ಛೀಮಾರಿ ಹಾಕಿದಾಗ ಇವರಿಗೆ ಹೇಗೆ ಅನಿಸುತ್ತದೆ? ಇದರ ಕನಿಷ್ಟ ತಿಳುವಳಿಕೆ ಅವರಿಗೆ ಇರಬೇಕಿತ್ತು. ಕಾಂಗ್ರೆಸ್​ನವರು ಕುದುರೆ ರೇಸ್ ಆದರೂ‌ ಮಾಡಲಿ, ಮ್ಯಾರಥಾನ್ ಆದರೂ ಮಾಡಲಿ. ಈಗಾಗಲೇ ಅವರು ಜಟಕಾ ಗಾಡಿ, ಎತ್ತಿನ‌ ಗಾಡಿ, ಸೈಕಲ್​ನಲ್ಲಿ ಹೋಗಿದ್ದಾರೆ. ಈಗ ರೈಲಲ್ಲಾದರೂ ಹೋಗಲಿ, ಬಸ್​ನಲ್ಲಾದರೂ ಹೋಗಲಿ, ಟ್ರೆಕ್ಕಿಂಗ್ ಮಾಡಲಿ. ಇವೆಲ್ಲವೂ ಅವರ ಆರೋಗ್ಯಕ್ಕೆ ಒಳ್ಳೆಯದು. ಮಾಡುವುದನ್ನು ಮಾಡಲಿ, ಸಮಯ ನೋಡಿ ಮಾಡಲಿ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್​ ಕಾಂಗ್ರೆಸ್ ನಾಯಕರ ಕಾಲೆಳೆದಿದ್ದಾರೆ.

ಸಚಿವ ಆರ್.ಅಶೋಕ್‌ಗೂ ನನಗೂ ಪ್ರಾಥಮಿಕ ಸಂಪರ್ಕ ಇಲ್ಲ: ಡಾ.ಕೆ.ಸುಧಾಕರ್ ಕಂದಾಯ ಸಚಿವ ಆರ್.ಅಶೋಕ್‌ ಅವರಿಗೆ ಕೊವಿಡ್​ ಪಾಸಿಟಿವ್​ ಬಂದ ವಿಚಾರಕ್ಕೆ ಸಂಬಂಧಪಟ್ಟಂತೆ ಮಾತನಾಡಿದ ಅವರು, ಸಚಿವ ಆರ್.ಅಶೋಕ್‌ಗೂ ನನಗೂ ಪ್ರಾಥಮಿಕ ಸಂಪರ್ಕ ಇಲ್ಲ. ಅವರನ್ನು ಭೇಟಿಯಾಗಿ ಸುಮಾರು 10 ದಿನಗಳಾಗಿದೆ. ತಜ್ಞರ ಸಭೆಯಲ್ಲಿ ನಾವು ಮಾಸ್ಕ್ ಧರಿಸಿ ಭಾಗಿಯಾಗಿದ್ದೆವು. 2 ದಿನದ ಹಿಂದೆ ನಾನು ಮತ್ತು ಸಿಎಂ ಬೊಮ್ಮಾಯಿ ಟೆಸ್ಟ್ ಮಾಡಿಸಿದ್ದೇವೆ. ಕೊವಿಡ್ ಟೆಸ್ಟ್ ವರದಿಯಲ್ಲಿ ನೆಗೆಟಿವ್ ಬಂದಿದೆ. ಈವರೆಗೂ ಸುಮಾರು 50 ರಿಂದ 60 ಬಾರಿ ಟೆಸ್ಟ್ ಮಾಡಿಸಿದ್ದೇನೆ. ನನಗೆ ಈವರೆಗೂ ಪಾಸಿಟಿವ್ ಬಂದಿಲ್ಲವೆಂದು ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಇದನ್ನೂ ಓದಿ: ಮಂಡ್ಯದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋದ ಬೆಂಬಲಿಗರ ವಿರುದ್ಧ ಡಿಕೆ ಶಿವಕುಮಾರ್ ಗರಂ; ಮೊಬೈಲ್ ಕಸಿದುಕೊಂಡು ಸಿಡಿಮಿಡಿಗೊಂಡ ಡಿಕೆಶಿ

ರಾಜ್ಯದಲ್ಲಿ ವೈದ್ಯಕೀಯ ಆಕ್ಸಿಜನ್ ಕೊರತೆ ಇದೆ ಎಂಬ ತಪ್ಪು ಮಾಹಿತಿ ಹಬ್ಬಿಸಬೇಡಿ.. ಏನೂ ತೊಂದರೆ ಇಲ್ಲ: ಡಾ. ಕೆ.ಸುಧಾಕರ್​

Published On - 11:03 am, Sat, 8 January 22