Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಐಸಿಸಿಗೆ ಹಣ ಕಳಿಸ್ತಿದ್ದಾರೆ ಎಂಬ ದೇವೇಗೌಡ ಹೇಳಿಕೆಗೆ ಡಿಕೆ ಶಿವಕುಮಾರ್ ತಿರುಗೇಟು

ಚುನಾವಣಾ ಕೆಲಸಕ್ಕಾಗಿ ರಾಜ್ಯ ಕಾಂಗ್ರೆಸ್​, ಎಐಸಿಸಿಗೆ ಹಣ ಕಳುಹಿಸುತ್ತಿದ್ದಾರೆ ಎಂಬ ದೇವೇಗೌಡರ ಆರೋಪಕ್ಕೆ ಅವರು ಐಟಿ ಅಧಿಕಾರಿನಾ ಎಂದು ಡಿ.ಕೆ ಶಿವಕುಮಾರ್(D. K. Shivakumar) ಪ್ರಶ್ನಿಸುವ ಮೂಲಕ ತಿರುಗೇಟು ನೀಡಿದ್ದಾರೆ. ನಮ್ಮ ಪಕ್ಷ 20ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತದೆ ಎಂಬ ಮಾಹಿತಿ ಇದೆ. ಈ ಹಿನ್ನಲೆ ಅಸೂಯೆಯಿಂದ ಹೆಚ್​.ಡಿ.ದೇವೇಗೌಡರು ಮಾತನಾಡುತ್ತಿದ್ದಾರೆ.

ಎಐಸಿಸಿಗೆ ಹಣ ಕಳಿಸ್ತಿದ್ದಾರೆ ಎಂಬ ದೇವೇಗೌಡ ಹೇಳಿಕೆಗೆ ಡಿಕೆ ಶಿವಕುಮಾರ್ ತಿರುಗೇಟು
ಡಿಕೆ ಶಿವಕುಮಾರ್​
Follow us
ಪ್ರಸನ್ನ ಗಾಂವ್ಕರ್​
| Updated By: ಕಿರಣ್ ಹನುಮಂತ್​ ಮಾದಾರ್

Updated on:Mar 29, 2024 | 7:09 PM

ಬೆಂಗಳೂರು, ಮಾ.29: ಚುನಾವಣಾ ಕೆಲಸಕ್ಕಾಗಿ ರಾಜ್ಯ ಕಾಂಗ್ರೆಸ್​, ಎಐಸಿಸಿಗೆ ಹಣ ಕಳುಹಿಸುತ್ತಿದ್ದಾರೆ ಎಂಬ ದೇವೇಗೌಡರ ಆರೋಪಕ್ಕೆ ಅವರು ಐಟಿ ಅಧಿಕಾರಿನಾ ಎಂದು ಡಿ.ಕೆ ಶಿವಕುಮಾರ್(D. K. Shivakumar) ಪ್ರಶ್ನಿಸುವ ಮೂಲಕ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ‘ನಮ್ಮ ಪಕ್ಷಕ್ಕೆ ಐಟಿ ಇಲಾಖೆ 1823 ಕೋಟಿ ರೂ. ಕಟ್ಟಬೇಕೆಂದು ನೋಟಿಸ್​ ಕೊಟ್ಟಿದೆ. ನಾವು ಎಐಸಿಸಿಗೆ ದುಡ್ಡು ಕಳುಹಿಸುವ ಅವಶ್ಯಕತೆ ಇಲ್ಲ ಎಂದು ಸ್ಪಷ್ಟಪಡಿಸಿದರು.

‘ನಮ್ಮ ಪಕ್ಷ 20ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತದೆ ಎಂಬ ಮಾಹಿತಿ ಇದೆ. ಈ ಹಿನ್ನಲೆ ಅಸೂಯೆಯಿಂದ ಹೆಚ್​.ಡಿ.ದೇವೇಗೌಡರು ಮಾತನಾಡುತ್ತಿದ್ದಾರೆ. ಇವರೇ JDS ಪಕ್ಷವನ್ನು ವಿಲೀನ ಮಾಡಿಬಿಟ್ಟರೆಂಬ ನೋವು ಇದೆ. ವಿರೋಧ ಪಕ್ಷದವರು ಪ್ರಬಲವಾಗಿರಬೇಕು ಎಂದು ನಮ್ಮ ಆಸೆ. ಆದರೆ, ಇವರೇ ಬಿಜೆಪಿ ಜೊತೆಗೆ ಪಾರ್ಟಿ ವಿಲೀನ ಮಾಡುತ್ತಿದ್ದಾರಲ್ಲ. ಬಹಳ ದೊಡ್ಡ ನಾಯಕರು, ನಮ್ಮ ಪಾರ್ಟಿ ಸಂಪರ್ಕ ಮಾಡುತ್ತಿದ್ದಾರೆ. ಈಗ ಹೆಸರು ಹೇಳುವುದಕ್ಕೆ ಹೋಗುವುದಿಲ್ಲ ಎಂದರು.

ಇದನ್ನೂ ಓದಿ:ಡಿಕೆ ಶಿವಕುಮಾರ್ 40 ಶಾಸಕರೊಂದಿಗೆ ಬಿಜೆಪಿ ಸೇರಲು ಸಿದ್ದರಾಗಿದ್ದಾರೆಂದು ಮುನಿರತ್ನ ನಾಯ್ಡು ಹೇಳುತ್ತಾರೆ!

ಎಚ್‌ಡಿಡಿ ಮಾಡಿದ್ದ ಆರೋಪವೇನು?

ಇಂದು(ಮಾ.29) ನಗರದಲ್ಲಿ ನಡೆದ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದ್ದ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರು, ರಾಜ್ಯ ಕಾಂಗ್ರೆಸ್‌ನಿಂದ ಎಐಸಿಸಿಗೆ ಹಣವನ್ನು ನೀಡಲಾಗುತ್ತಿದೆ ಎಂದು ಆರೋಪಿಸಿದ್ದರು. ದೇವೇಗೌಡರ ಈ ಆರೋಪ ಇದೀಗ ಗಂಭೀರ ಚರ್ಚೆಗೆ ಕಾರಣವಾಗುತ್ತಿದ್ದು, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಇದಕ್ಕೆ ತಿರುಗೇಟು ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:36 pm, Fri, 29 March 24

Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್