AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ 250 ಮೀಟರ್​ ಎತ್ತರದ ‘ಸ್ಕೈ ಡೆಸ್ಕ್’ ನಿರ್ಮಾಣಕ್ಕೆ ಡಿಕೆ ಶಿವಕುಮಾರ್​​​ ಪ್ರಸ್ತಾಪ: ಇಲ್ಲಿದೆ ಮಾಹಿತಿ

ಬೆಂಗಳೂರಿನಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಸರ್ಕಾರ ಇತ್ತೀಚೆಗೆ ಸುರಂಗ ಮಾರ್ಗದ ಪರಿಕಲ್ಪನೆಯನ್ನು ತೆರೆದಿಟ್ಟಿತ್ತು. ಇದೀಗ ಅದೇ ರೀತಿಯಾಗಿ ಮತ್ತೊಂದು ಯೋಜನೆಗೆ ಸರ್ಕಾರ ಚಿಂತನೆ ನಡೆಸುತ್ತಿದೆ. ನಗರದಲ್ಲಿ 250 ಮೀಟರ್​ ಎತ್ತರದ ಸ್ಕೈ ಡೆಸ್ಕ್ ನಿರ್ಮಾಣಕ್ಕೆ ಡಿಸಿಎಂ ಡಿಕೆ ಶಿವಕುಮಾರ್​ ಪ್ರಸ್ತಾಪ ಮಾಡಿದ್ದಾರೆ.

ಬೆಂಗಳೂರಲ್ಲಿ 250 ಮೀಟರ್​ ಎತ್ತರದ ‘ಸ್ಕೈ ಡೆಸ್ಕ್’ ನಿರ್ಮಾಣಕ್ಕೆ ಡಿಕೆ ಶಿವಕುಮಾರ್​​​ ಪ್ರಸ್ತಾಪ: ಇಲ್ಲಿದೆ ಮಾಹಿತಿ
ಸ್ಕೈ ಡೆಸ್ಕ್ ಯೋಜನೆ
ಗಂಗಾಧರ​ ಬ. ಸಾಬೋಜಿ
|

Updated on:Oct 19, 2023 | 4:40 PM

Share

ಬೆಂಗಳೂರು, ಅಕ್ಟೋಬರ್​​ 19: ನಗರದಲ್ಲಿ ಸಂಚಾರ ದಟ್ಟಣೆ ಒಂದು ಸವಾಲಾಗಿ ಪರಿಣಮಿಸಿದೆ. ಈ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಸರ್ಕಾರ ಇತ್ತೀಚೆಗೆ ಸುರಂಗ ಮಾರ್ಗದ ಪರಿಕಲ್ಪನೆಯನ್ನು ತೆರೆದಿಟ್ಟಿತ್ತು. ಇದೀಗ ಅದೇ ರೀತಿಯಾಗಿ ಮತ್ತೊಂದು ಯೋಜನೆಗೆ ಸರ್ಕಾರ ಚಿಂತನೆ ನಡೆಸುತ್ತಿದೆ. ಹಾಗಾದರೆ ಆ ಯೋಜನೆ ಏನು ಅಂದರೆ, ಬೆಂಗಳೂರಿನಲ್ಲಿ 250 ಮೀಟರ್​ ಎತ್ತರದ ಸ್ಕೈ ಡೆಸ್ಕ್ (Skydeck) ನಿರ್ಮಾಣಕ್ಕೆ ಮಂಗಳವಾರ ಡಿಸಿಎಂ ಡಿಕೆ ಶಿವಕುಮಾರ್ (DK Shivakumar)​ ಪ್ರಸ್ತಾಪ ಮಾಡಿದ್ದಾರೆ. ಒಂದು ವೇಳೆ ಈ ಸ್ಕೈ ಡೆಸ್ಕ್ ನಿರ್ಮಾಣವಾದರೆ ದೇಶದ ಅತಿ ಎತ್ತರದ ವೀಕ್ಷಣಾ ಗೋಪುರ ಎಂಬ ಹೆಗ್ಗಳಿಕೆ ಪಡೆಯಲಿದೆ.

ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಡಿಕೆ ಶಿವಕುಮಾರ್​​, ಯೋಜನೆಗೆ ತಗುಲುವ ವೆಚ್ಚ ಮತ್ತು ಅದರ ನಿರ್ಮಾಣಕ್ಕೆ ಬೇಕಾದ 8-10 ಎಕರೆ ಭೂಮಿಯನ್ನು ಗುರುತಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸ್ಕೈ ಡೆಸ್ಕ್ ಯೋಜನೆಯು ಆಲದ ಮರದ ರಚನೆಯಲ್ಲಿರಲಿದ್ದು, 250 ಮೀಟರ್ ಎತ್ತರವಿರಲಿದೆ.

ಸ್ಕೈ ಡೆಸ್ಕ್ ​​ ಯೋಜನೆಯನ್ನು ವಿಶ್ವ ವಿನ್ಯಾಸ ಸಂಸ್ಥೆ (ಡಬ್ಲ್ಯುಡಿಒ) ಸಹಯೋಗದೊಂದಿಗೆ ಆಸ್ಟ್ರೀಯ ಮೂಲದ ವಿನ್ಯಾಸ ಮತ್ತು ವಾಸ್ತುಶಿಲ್ಪ ಸಂಸ್ಥೆಯಾಗಿರುವ ಕೋಪ್ ಹಿಮ್ಮೆಲ್ಬ್ (ಎಲ್) ಎಯು ಈ ಯೋಜನೆಯನ್ನು ವಿನ್ಯಾಸಗೊಳಿಸಲಿದೆ.

ಈ ಕುರಿತಾಗಿ ಟ್ವೀಟ್ ಮಾಡಿರುವ ಡಿಕೆ ಶಿವಕುಮಾರ್​​, ಆಸ್ಟ್ರೀಯಾ ಮೂಲದ COOP HIMMELB(L)AU ಸಂಸ್ಥೆಯು ವರ್ಲ್ಡ್‌ ಡಿಸೈನ್ ಆರ್ಗನೈಸೇಶನ್ ಸಹಕಾರದೊಂದಿಗೆ ಬೆಂಗಳೂರಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸ್ಕೈ ಡೆಸ್ಕ್ ಯೋಜನೆಯನ್ನು ಪರಿಶೀಲಿಸಿದೆ. ಇದು ನಿರ್ಮಾಣವಾದ ನಂತರ ದೇಶದಲ್ಲೇ ಅತಿ ಎತ್ತರದ ವೀಕ್ಷಣಾ ಗೋಪುರ ಎನ್ನುವ ಕೀರ್ತಿಗೆ ಪಾತ್ರವಾಗಲಿದೆ. ಯೋಜನೆಯ ಅನುಷ್ಠಾನಕ್ಕೆ ಸೂಕ್ತವಾದ 8-10 ಎಕರೆ ಭೂಮಿಯನ್ನು ಗುರುತಿಸುವುದರ ಜೊತೆಗೆ ಆರ್ಥಿಕ ಕಾರ್ಯಸಾಧ್ಯತೆಯನ್ನು ನಿರ್ಣಯಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ ಎಂದು ಮಾಹಿತಿ ನೀಡಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್​ ಟ್ವೀಟ್​​ 

ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ಈ ಹಿಂದೆ ಡಿಕೆ ಶಿವಕುಮಾರ್​​​ ಪ್ರಸ್ತಾಪಿಸಿದ್ದ ಸುರಂಗ ಮಾರ್ಗ ಯೋಜನೆಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಬೆಂಗಳೂರಿನಲ್ಲಿ ಸಾರ್ವಜನಿಕ ಸಾರಿಗೆ ಮತ್ತು ಸಾಮೂಹಿಕ ಸಾರಿಗೆ ವ್ಯವಸ್ಥೆಗಳ ಅಭಿವೃದ್ಧಿಯು ಸಂಚಾರ ದಟ್ಟಣೆಯನ್ನು ನಿವಾರಿಸಲು ಸುಸ್ಥಿರವಾಗಿರುತ್ತದೆ ಎಂದು ತಜ್ಞರು ಹೇಳಿದ್ದರು.

ಈ ಯೋಜನೆ ನಿರ್ಮಾಣವಾದರೆ, ಮೊದಲ ಹಂತಕ್ಕೆ ಮಾತ್ರ 22,000 ಕೋಟಿ ರೂ.ಗಳ ಆರಂಭಿಕ ಹೂಡಿಕೆಯ ಅಗತ್ಯವಿದೆ. ಸಿಂಗಾಪುರದ ಸುರಂಗ ಮಾರ್ಗಗಳ ಸ್ಫೂರ್ತಿ ಪಡೆದಿದ್ದು, ಇದು 99 ಕಿಲೋಮೀಟರ್ ಉದ್ದದ ಯೋಜನೆಯಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:40 pm, Thu, 19 October 23

Follow Us
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ