AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಟ್ರಾಫಿಕ್‌ಗೆ ಡಿಕೆಶಿ ಮಾಸ್ಟರ್ ಪ್ಲಾನ್: ಚಾಮರಾಜಪೇಟೆ TO ಕೆಂಗೇರಿ 810 ಕೋಟಿ ರೂ. ವೆಚ್ಚದ ಮೇಲ್ಸೇತುವೆ ಯೋಜನೆ!

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಧಾನ ಪರಿಷತ್ತಿನಲ್ಲಿ ಚಾಮರಾಜಪೇಟೆ ಹಾಗೂ ಮೈಸೂರು ರಸ್ತೆಯ ವಾಹನ ದಟ್ಟಣೆ ನಿಯಂತ್ರಣಕ್ಕೆ ಸರ್ಕಾರದ ಯೋಜನೆಗಳನ್ನು ವಿವರಿಸಿದ್ದಾರೆ. ಚಾಮರಾಜಪೇಟೆಯಿಂದ ಕೆಂಗೇರಿವರೆಗೆ 810 ಕೋಟಿ ರೂ. ವೆಚ್ಚದಲ್ಲಿ ಮೇಲ್ಸೇತುವೆ ವಿಸ್ತರಣೆ ಪ್ರಸ್ತಾವನೆ ಸಿದ್ಧವಾಗಿದೆ. ಸಂಚಾರ ಸುಗಮಗೊಳಿಸಲು ಹಲವು ಕ್ರಮ ಕೈಗೊಳ್ಳಲಾಗಿದ್ದು, ಪ್ರಸ್ತುತ ಡಿಪಿಆರ್ ಪರಿಶೀಲನೆಯಲ್ಲಿದೆ. ಇದು ಬೆಂಗಳೂರು ಸಂಚಾರಕ್ಕೆ ಪರಿಹಾರ ನೀಡುವ ಮಹತ್ವದ ಯೋಜನೆಯಾಗಿದೆ.

ಬೆಂಗಳೂರು ಟ್ರಾಫಿಕ್‌ಗೆ ಡಿಕೆಶಿ ಮಾಸ್ಟರ್ ಪ್ಲಾನ್: ಚಾಮರಾಜಪೇಟೆ TO ಕೆಂಗೇರಿ 810 ಕೋಟಿ ರೂ. ವೆಚ್ಚದ ಮೇಲ್ಸೇತುವೆ ಯೋಜನೆ!
ಸಾಂದರ್ಭಿಕ ಚಿತ್ರ Image Credit source: Tv9 kannada
ಅಕ್ಷಯ್​ ಪಲ್ಲಮಜಲು​​
|

Updated on: Mar 18, 2026 | 10:50 AM

Share

ಬೆಂಗಳೂರು, ಮಾ.18: ವಿಧಾನಸಭೆಯಲ್ಲಿ ಬಜೆಟ್​​ ಮೇಲಿನ ಚರ್ಚೆ ನಡೆಯುತ್ತಿದೆ. ಈ ವೇಳೆ ವಿಧಾನ ಪರಿಷತ್ತಿನ ಪ್ರಶ್ನೋತ್ತರ ಸಮಯದಲ್ಲಿ ಶಾಸಕರು ಕೇಳಿದ ಹಲವು ಪ್ರಶ್ನೆಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉತ್ತರಿಸಿದ್ದಾರೆ. ಈ ಮೂಲಕ ಒಂದು ಐತಿಹಾಸಿಕ ವಿಚಾರದ ಬಗ್ಗೆ ಅವರು ಪ್ರಸ್ತಾಪಿಸಿದ್ದಾರೆ. ಚಾಮರಾಜಪೇಟೆ ಮತ್ತು ಮೈಸೂರು ರಸ್ತೆಯಲ್ಲಿ ವಾಹನ ದಟ್ಟಣೆ ನಿಯಂತ್ರಣಕ್ಕೆ ಸರ್ಕಾರ ತೆಗೆದುಕೊಂಡಿರುವ ಕ್ರಮಗಳು ಹಾಗೂ ಈಗಾಗಲೇ ಮಾಡುತ್ತಿರುವ ಯೋಜನೆಗಳ ಬಗ್ಗೆ ಡಿಕೆ ಶಿವಕುಮಾರ್​​​​​​​​​​​​​ ವಿಧಾನ ಪರಿಷತ್ತಿನಲ್ಲಿ ತಿಳಿಸಿದ್ದಾರೆ.

ಈ ಭಾಗದಲ್ಲಿ ಸಂಚಾರ ಸುಗಮಗೊಳಿಸಲು ಕಳೆದ ಎರಡು ವರ್ಷಗಳಲ್ಲಿ ಸರ್ಕಾರ ಕೈಗೊಂಡ ಕ್ರಮಗಳೇನು? ಎಂಬ ಪ್ರಶ್ನೆಯನ್ನು ಕೇಳಲಾಗಿತ್ತು. ಇದಕ್ಕೆ ಉತ್ತರಿಸಿದ ಡಿಕೆ ಶಿವಕುಮಾರ್ ಅವರು ಕಳೆದ 2 ವರ್ಷಗಳಲ್ಲಿ ಈ ರಸ್ತೆಯಲ್ಲಿ ವಾಹನ ದಟ್ಟಣೆ ಕಡಿಮೆ ಮಾಡಲು ಕಾರ್ಯಸಾಧ್ಯತಾ ವರದಿಯನ್ನು ಸಿದ್ಧಪಡಿಸಲಾಗಿದೆ. ಪ್ರಸುತ್ತ ಚಾಮರಾಜಪೇಟೆ ಸಿರಸಿ ಜಂಕ್ಷನ್‌ನಿಂದ ಬಿ.ಹೆಚ್.ಇ.ಎಲ್ ಕಿಮ್‌ಕೋ ಜಂಕ್ಷನ್‌ವರೆಗೂ ಮೇಲ್ಸೇತುವೆಯನ್ನು ವಿಸ್ತರಿಸುವ ಯೋಜನೆಯನ್ನು ರೂಪಿಸಲಾಗಿದೆ ಎಂದು ಹೇಳಿದ್ದಾರೆ.

ಇನ್ನು ಇದೆ ವೇಳೆ, ಚಾಮರಾಜಪೇಟೆಯಿಂದ ಕೆಂಗೇರಿವರೆಗೆ ಮೇಲ್ಸೇತುವೆ ವಿಸ್ತರಿಸುವ ಪ್ರಸ್ತಾವನೆ ಮತ್ತು ಅದರ ಅಂದಾಜು ವೆಚ್ಚ ಎಷ್ಟು? ಎಂಬ ಬಗ್ಗೆ ಪ್ರಶ್ನೆಯನ್ನು ಕೇಳಲಾಗಿತ್ತು. ಈ ಯೋಜನೆಗೆ ಭೂ-ಸ್ವಾಧೀನ ವೆಚ್ಚವೂ ಸೇರಿದಂತೆ ಅಂದಾಜು 810.00 ಕೋಟಿ ರೂ.ಗಳ ಕಾರ್ಯತಂತ್ರ ತಯಾರಿಸಲಾಗಿದೆ. ಪ್ರಸ್ತುತ ಡಿ.ಪಿ.ಆರ್ (DPR) ತಯಾರಿಸಿ, ಆಡಳಿತಾತ್ಮಕ ಅನುಮೋದನೆಗಾಗಿ ಪರಿಶೀಲನೆಯಲ್ಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮೈಸೂರು ಪಾಲಿಕೆಯಿಂದಲೇ ಫುಟ್​ಪಾತ್ ಒತ್ತುವರಿ! ಅರಮನೆ ಮುಂಭಾಗದ ರಾಜಮಾರ್ಗ ಒಡೆದು ಟಾಂಗಾ ಸ್ಟ್ಯಾಂಡ್​

ನಾಯಂಡಹಳ್ಳಿ ಮೇಲ್ಸೇತುವೆಯ ನಂತರ ರಾಜರಾಜೇಶ್ವರಿನಗರ ಮುಖ್ಯರಸ್ತೆಯ ಕಮಾನು (Arch) ಭಾಗದಲ್ಲಿ ಮೇಲ್ಸೇತುವೆ ನಿರ್ಮಾಣ ಕಾರ್ಯ ಜಾರಿಯಲ್ಲಿದೆ. ರಾಜರಾಜೇಶ್ವರಿನಗರ ಕಮಾನಿನಿಂದ ಕೆಂಗೇರಿವರೆಗಿನ ರಸ್ತೆಗೆ 75.00 ಕೋಟಿ ರೂ. ವೆಚ್ಚದಲ್ಲಿ ಡಾಂಬರೀಕರಣ ಯೋಜನೆ ಪೂರ್ಣಗೊಳ್ಳುವ ಹಂತದಲ್ಲಿದೆ.ಮೈಸೂರು ರಸ್ತೆಗೆ ಪರ್ಯಾಯವಾಗಿ ಸುರಂಗ ರಸ್ತೆ ಅಥವಾ ರಾಜಕಾಲುವೆ ಪಕ್ಕದಲ್ಲಿ ರಸ್ತೆ ಅಭಿವೃದ್ಧಿಪಡಿಸುವ ಯೋಜನೆ ಇದೆಯೇ? ಎಂಬ ಪ್ರಶ್ನೆಯನ್ನು ಕೇಳಲಾಗಿತ್ತು. ಪ್ರಸ್ತುತ ಈ ವಿಧದ ಯಾವುದೇ ವಿಶೇಷ ಕ್ರಿಯಾಯೋಜನೆಯ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಇಕ್ಕೆ ಉತ್ತರಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us