AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದ ಬೊಕ್ಕಸ ತುಂಬಿಸುವ ಇಲಾಖೆಗಳಿಗೆ ಬಿಸಿ ಮುಟ್ಟಿಸಿದ ಡಿಕೆಶಿ: ಅಧಿಕಾರಿಗಳಿಗೆ ನೀಡಿದ ಸೂಚನೆಗಳೇನು?

ಹಲವು ಪ್ರಮುಖ ಖಾತೆಗಳನ್ನು ನಿರ್ವಹಿಸಿರುವ ಡಿಕೆ ಶಿವಕುಮಾರ್​​ ಇದೀಗ ಹಣಕಾಸು, ವಾಣಿಜ್ಯ ತೆರಿಗೆ ಇಲಾಖೆಗಳ ಕಾರ್ಯವೈಖರಿ ಅರ್ಥ ಮಾಡಿಕೊಳ್ಳಲು ಪ್ರಯತ್ನದಲ್ಲಿದ್ದಾರೆ. ಈ ನಿಟ್ಟಿನಲ್ಲಿ ಇಂದು ಇಲಾಖಾವಾರು ಪ್ರಗತಿ ಪರಿಶೀಲನಾ ಸಭೆ ಮಾಡಿದರು. ಸಭೆಯಲ್ಲಿ ಹಿರಿಯ ಅಧಿಕಾರಿಗಳಿಗೆ ಸಿಎಂ ಡಿಕೆ ಶಿವಕುಮಾರ್​ ಖಡಕ್​ ಸೂಚನೆ ನೀಡಿದ್ದಾರೆ.

ಸರ್ಕಾರದ ಬೊಕ್ಕಸ ತುಂಬಿಸುವ ಇಲಾಖೆಗಳಿಗೆ ಬಿಸಿ ಮುಟ್ಟಿಸಿದ ಡಿಕೆಶಿ: ಅಧಿಕಾರಿಗಳಿಗೆ ನೀಡಿದ ಸೂಚನೆಗಳೇನು?
ಸಿಎಂ ಡಿಕೆ ಶಿವಕುಮಾರ್​ ಸಭೆImage Credit source: x.com/DKShivakumar
ಗಂಗಾಧರ​ ಬ. ಸಾಬೋಜಿ
|

Updated on: Jun 26, 2026 | 6:08 PM

Share

ಮುಖ್ಯಾಂಶಗಳು

  • ಆಡಳಿತ ಯಂತ್ರಕ್ಕೆ ಮತ್ತಷ್ಟು ಚುರುಕು ಮುಟ್ಟಿಸಿದ ಸಿಎಂ ಡಿಕೆ ಶಿವಕುಮಾರ್​
  • ತೆರಿಗೆ ಮತ್ತು ಅಬಕಾರಿ ಇಲಾಖಾಧಿಕಾರಿಗಳ ಜೊತೆ ಸಭೆ
  • ವಂಚಕರಿಗೆ ಕಠಿಣ ಶಿಕ್ಷೆ, ಪ್ರಾಮಾಣಿಕರಿಗೆ ಪೂರ್ಣ ರಕ್ಷೆ ಎಂದ ಸಿಎಂ

ಬೆಂಗಳೂರು, ಜೂನ್​​ 26: ಸಿಎಂ ಡಿಕೆ‌ ಶಿವಕುಮಾರ್ (DK Shivakumar) ತಮ್ಮ ಸರ್ಕಾರ ಆಡಳಿತ ಯಂತ್ರಕ್ಕೆ ಮತ್ತಷ್ಟು ವೇಗ ನೀಡುತ್ತಿದ್ದಾರೆ. ಕಳೆದ ವಾರ ಜಿಲ್ಲಾ ಡಿಸಿ, ಎಸ್​ಪಿಗಳ ಜೊತೆ ಸಭೆ ಮಾಡಿದ್ದ ಡಿಕೆ ಶಿವಕುಮಾರ್​ ಇಂದು ಇಲಾಖಾವಾರು ಮೀಟಿಂಗ್ ಮಾಡಿದರು. ಅದರಲ್ಲೂ ಸರ್ಕಾರದ ಖಜಾನೆ ತುಂಬುವ ಇಲಾಖೆಗಳು ಅಂದರೆ ಆದಾಯ ತೆರಿಗೆ ಇಲಾಖೆ ಮತ್ತು ಅಬಕಾರಿ. ಹೀಗಾಗಿ ಇವಗಳನ್ನ ಅರ್ಥ ಮಾಡಿಕೊಳ್ಳೋಕೆ ಸಿಎಂ ಹೆಜ್ಜೆ ಇಟ್ಟಿದ್ದರು. ಅದಕ್ಕಾಗಿ ವಿಧಾನಸೌಧದಲ್ಲಿ ಎರಡೂ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ಮಾಡಿದ ಸಿಎಂ ಖಡಕ್ ಸೂಚನೆ ನೀಡಿದ್ದಾರೆ.

ತೆರಿಗೆ ಸೋರಿಕೆಯನ್ನು ತಡೆಯಬೇಕು ಎಂದ ಸಿಎಂ

ತೆರಿಗೆ ರಿಟರ್ನ್‌ಗಳನ್ನು ನಿಗದಿತ ಅವಧಿಯೊಳಗೆ ಸಲ್ಲಿಸದವರನ್ನು ಗುರುತಿಸಿ, ಅವರಿಂದ ಸಮಯಕ್ಕೆ ಸರಿಯಾಗಿ ರಿಟರ್ನ್ಸ್ ಸಲ್ಲಿಕೆ ಮಾಡಿಸಲು ಜಂಟಿ ಆಯುಕ್ತರುಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ನಮ್ಮ ಉದ್ದೇಶ ಯಾರಿಗೂ ಅನಗತ್ಯ ತೊಂದರೆ ನೀಡುವುದಲ್ಲ. ಪ್ರಾಮಾಣಿಕ ತೆರಿಗೆದಾರರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಅವರ ಸಮಸ್ಯೆಗಳನ್ನು ಆನ್‌ಲೈನ್ ಮೂಲಕವೇ ತ್ವರಿತವಾಗಿ ಬಗೆಹರಿಸಿ, ಘನತೆಯಿಂದ ನಡೆಸಿಕೊಳ್ಳಬೇಕು ಎಂದಿದ್ದಾರೆ.

ಸಿಎಂ ಡಿಕೆ‌ ಶಿವಕುಮಾರ್ ಟ್ವೀಟ್​

ಬುದ್ಧಿವಂತಿಕೆಯಿಂದ ಕಾರ್ಯನಿರ್ವಹಿಸಿದರೆ ಗುರಿ ತಲುಪಲು ಸಾಧ್ಯ, ಆದರೆ ತೆರಿಗೆ ವಂಚನೆಗೆ ಮಾತ್ರ ಯಾವುದೇ ಅವಕಾಶ ಇರಬಾರದು. ತೆರಿಗೆ ಸೋರಿಕೆಯನ್ನು ತಡೆಯುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ನಾನು ನೀಡಿರುವ ಪ್ರತಿಯೊಂದು ಸೂಚನೆಯೂ ಜಾರಿಯಾಗಿರಬೇಕು. ಮುಂದಿನ ಸಭೆಯಲ್ಲಿ ನಿಮ್ಮ ಕಾರ್ಯಕ್ಷಮತೆಯನ್ನು ಪರಿಶೀಲಿಸುತ್ತೇನೆ ಎಂದು ಹೇಳಿದ್ದಾರೆ.

ದಾಖಲೆ ಇಲ್ಲದ ವಾಹನಗಳಿಗೆ ಗಡಿಯಲ್ಲೇ ತಡೆ

ಯಾವುದೇ ಸರಕು ಸಾಗಣೆ ವಾಹನಗಳು ಸೂಕ್ತ ಲೆಕ್ಕಪತ್ರ ಹಾಗೂ ಅಗತ್ಯ ದಾಖಲೆಗಳಿಲ್ಲದೆ ಚೆಕ್‌ಪೋಸ್ಟ್‌ ಅಥವಾ ರಾಜ್ಯದ ಗಡಿಯನ್ನು ದಾಟುವಂತಿಲ್ಲ. ತೆರಿಗೆ ವಂಚನೆ ಹಾಗೂ ಬೋಗಸ್ ಕಂಪನಿಗಳ ಸೃಷ್ಟಿಕರ್ತರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಇನ್ನು ಪಕ್ಕದ ರಾಜ್ಯಗಳ ವಾಣಿಜ್ಯ ತೆರಿಗೆ ಇಲಾಖೆ ಹಾಗೂ ಜಾರಿ ಸಂಸ್ಥೆಗಳೊಂದಿಗೆ ಉತ್ತಮ ಸಮನ್ವಯ ಸಾಧಿಸಿ, ಮಾಹಿತಿ ಹಂಚಿಕೆಯ ಮೂಲಕ ತೆರಿಗೆ ಸೋರಿಕೆಯನ್ನು ಪರಿಣಾಮಕಾರಿಯಾಗಿ ತಡೆಯುವಂತೆ ಸಿಎಂ ಡಿಕೆ ಶಿವಕುಮಾರ್​ ಸೂಚಿಸಿದರು.

ಇದನ್ನೂ ಓದಿ: 25 ರಿಂದ 30 ಹೊಸ ಜನಪ್ರಿಯ ಯೋಜನೆಗಳ ಘೋಷಣೆಗೆ ಡಿಕೆಶಿ ಸರ್ಕಾರ ಚಿಂತನೆ, ಎಚ್ಚರಿಕೆ ಕೊಟ್ಟ ಆರ್ಥಿಕ ತಜ್ಞರು!

ಇನ್ನು ಇದಾದ್ಮೇಲೆ ಅಬಕಾರಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ಕೂಡ ನಡೆಯಿತು. ಈ ವೇಳೆ ಅಧಿಕಾರಿಗಳಿಗೆ ಸಿಎಂ ಡಿಕೆ ಶವಕುಮಾರ್​ ಖಡಕ್ ಸೂಚನೆ ನೀಡಿದ್ದಾರೆ. ನೀವುಗಳು ಘನತೆ ಉಳಿಸಿಕೊಂಡರೆ ಸರ್ಕಾರದ ಘನತೆ ಹೆಚ್ಚುತ್ತದೆ. ನೀವು ಸರ್ಕಾರದ ಘನತೆಗೆ ಧಕ್ಕೆ ತರುವ ಕೆಲಸ ಮಾಡಿದರೆ ನಾವು ನೋಡುತ್ತಾ ಕೂರುವುದಿಲ್ಲ. ಅಬಕಾರಿ ಇಲಾಖೆಯ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ಬೇರೆ ಇಲಾಖೆಗೆ ವರ್ಗಾವಣೆ ಮಾಡುವುದಕ್ಕೆ ಆಗುವುದಿಲ್ಲ ಎಂದುಕೊಳ್ಳಬೇಡಿ. ಅಗತ್ಯಬಿದ್ದರೆ ವರ್ಗಾವಣೆ ಮಾಡಲು ಅಗತ್ಯವಾದ ಕಾನೂನು ಬದಲಾವಣೆಯನ್ನೂ ತರಲು ಅಕಾಶಗಳಿವೆ ಎಂದಿದ್ದಾರೆ. ಆ ಮೂಲಕ ಬಹಳ ಎಚ್ಚರಿಕೆಯಿಂದ ಕೆಲಸ ಮಾಡುವಂತೆ ಸಿಎಂ ಸೂಚನೆ ನೀಡಿದ್ದಾರೆ.

ಇಲಾಖೆ ಘನತೆ ಉಳಿದರೆ ಸರ್ಕಾರದ ಘನತೆ ಹೆಚ್ಚುತ್ತದೆ: ಡಿಕೆ ಶಿವಕುಮಾರ್​

ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಯಾರನ್ನೂ, ಯಾವ ಪ್ರಯತ್ನವನ್ನೂ ನಾನು ಸಹಿಸುವುದಿಲ್ಲ. ಇಲಾಖೆಯಲ್ಲಿ ಹೊಸದಾಗಿ ಎಐಬಿ ಪದ್ಧತಿ ಜಾರಿಯಾದ ಬಳಿಕ ನಿರೀಕ್ಷಿತ ಪ್ರಮಾಣದಲ್ಲಿ ಬೆಳವಣಿಗೆ ಆಗಿದೆ. ಹೊಸದಾಗಿ 574 ಸನ್ನದುಗಳನ್ನು ಇ-ಹರಾಜು ಹಾಕಲು ನಿರ್ಧರಿಸಲಾಗಿದೆ. ಪರವಾನಗಿ ನವೀಕರಣ ಮೊತ್ತವನ್ನು ಎರಡು ಕಂತುಗಳಲ್ಲಿ ಪಾವತಿಸಲು ಅವಕಾಶ ಕಲ್ಪಿಸಿ ಎಂದರು. ಅಕ್ಕ ಪಕ್ಕದ ರಾಜ್ಯಗಳಲ್ಲಿ ಇಲಾಖೆ ಹೇಗೆ ನಡೆಯುತ್ತಿದೆ ಎನ್ನುವ ವರದಿ ನೋಡಿದ್ದೇನೆ. ಇಲಾಖೆಗೆ ಕೊಟ್ಟಿರುವ ಗುರಿ ತಲುಪಲು ಶ್ರಮಿಸಬೇಕು. ನೀವುಗಳು ಘನತೆ ಉಳಿಸಿಕೊಂಡರೆ ಇಲಾಖೆಯ ಘನತೆ ಉಳಿಯುತ್ತದೆ. ಇಲಾಖೆ ಘನತೆ ಉಳಿದರೆ ಸರ್ಕಾರದ ಘನತೆ ಹೆಚ್ಚುತ್ತದೆ. ಸರ್ಕಾರದ ಘನತೆ ಉಳಿಸುವ ವೃತ್ತಿಪರತೆ ಪ್ರದರ್ಶಿಸಿ, ಇಲ್ಲದಿದ್ದರೆ ಕಠಿಣ ಕ್ರಮ ಅನಿವಾರ್ಯ ಎಂದಿದ್ದಾರೆ.

ಇದನ್ನೂ ಓದಿ: ಸಚಿವ ಸ್ಥಾನಕ್ಕೆ ಶಾಸಕರ ಲಾಬಿ: ಹೈಕಮಾಂಡ್​​​​ನಿಂದ ಬಂತು ಫೋನ್, ಡಿಕೆಶಿಗೆ ಖಡಕ್ ಎಚ್ಚರಿಕೆ

ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಡಿಕೆ ಶಿವಕುಮಾರ್, ಎಲ್ಲಾ ಇಲಾಖೆಯ ಆಳ ಮತ್ತು ಅಗಲ ಅರ್ಥ ಮಾಡಿಕೊಳ್ಳುತ್ತಿದ್ದಾರೆ. ಅದರಲ್ಲೂ ಆರ್ಥಿಕ ಇಲಾಖೆ, ಅಬಕಾರಿ ಮತ್ತು ಆದಾಯ ತೆರಿಗೆ ಇಲಾಖೆ ಸರ್ಕಾರದ ಬೊಕ್ಕಸವನ್ನ ತುಂಬುವ ಅಕ್ಷಯ ಪಾತ್ರೆ. ಹೀಗಾಗಿ ಸಭೆ ಕರೆದು ಅಧಿಕಾರಿಗಳಿಗೆ ತಮ್ಮ ಆಡಳಿತ ವೈಖರಿಯನ್ನ ತಿಳಿಸುತ್ತಿದ್ದಾರೆ. ಅಲ್ಲದೆ ನೀವು ಹೀಗೇ ಕೆಲಸ ಮಾಡಬೇಕು ಅಂತ ಸೂಚನೆ ನೀಡಿದ್ದಾರೆ.

ವರದಿ: ಈರಣ್ಣಾ ಬಸವಾ ಟಿವಿ9 ಬೆಂಗಳೂರು. 

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!