ಬೆಂಗಳೂರು ನಿರ್ವಹಣೆಗೆ ಇಲಾಖೆಗಳ ನಡುವೆ ಸಮನ್ವಯತೆ ಕುರಿತು ಜು.27 ಕ್ಕೆ ಜನಪ್ರತಿನಿಧಿಗಳ ಸಭೆ: ಡಿಕೆ ಶಿವಕುಮಾರ್

ಇಂದು(ಜು.16) ನಡೆದ ವಿಧಾನಸಭೆ ಕಲಾಪದಲ್ಲಿ ಮಾತನಾಡಿದ ಬಿಜೆಪಿ ನಾಯಕರು, ‘ಬೆಂಗಳೂರು ಅಭಿವೃದ್ದಿಗೆ ಇರುವ ಇಲಾಖೆಗಳ ನಡುವೆ ಸಮನ್ವಯತೆ ಕೊರತೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು. ಇದಕ್ಕೆ ಉತ್ತರಿಸಿದ ಡಿಸಿಎಂ ಅವರು, ‘ಬೆಂಗಳೂರು ಅಭಿವೃದ್ದಿಗೆ ಇರುವ ಪ್ರತಿ ಇಲಾಖೆಗಳ ನಡುವೆ ಸಮನ್ವಯತೆ ಸಾಧಿಸುವ ವಿಚಾರವಾಗಿ ಬೆಂಗಳೂರು ವ್ಯಾಪ್ತಿಯ ಶಾಸಕರು, ಸಂಸದರ ಸಭೆಯನ್ನು ಜುಲೈ. 27 ರಂದು ನಡೆಸಲಾಗುವುದು”ಎಂದು ಹೇಳಿದರು.

ಬೆಂಗಳೂರು ನಿರ್ವಹಣೆಗೆ ಇಲಾಖೆಗಳ ನಡುವೆ ಸಮನ್ವಯತೆ ಕುರಿತು ಜು.27 ಕ್ಕೆ ಜನಪ್ರತಿನಿಧಿಗಳ ಸಭೆ: ಡಿಕೆ ಶಿವಕುಮಾರ್
ಬೆಂಗಳೂರು ನಿರ್ವಹಣೆಗೆ ಇಲಾಖೆಗಳ ನಡುವೆ ಸಮನ್ವಯತೆ ಕುರಿತು ಜು.27 ಕ್ಕೆ ಸಭೆ
Follow us
|

Updated on: Jul 16, 2024 | 4:33 PM

ಬೆಂಗಳೂರು, ಜುಲೈ. 16: ವಿಧಾನಸಭೆಯ ಪ್ರಶ್ನೋತ್ತರ ಕಲಾಪದ ವೇಳೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಶಾಸಕರಾದ ಎಸ್. ಸುರೇಶ್ ಕುಮಾರ್, ರಾಮಮೂರ್ತಿ ಅವರ ಪ್ರಸ್ತಾವನೆಗೆ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್(DK shivakumar), “ಬಿಬಿಎಂಪಿ, ಬಿಡಿಎ, ಬಿಡಬ್ಲ್ಯೂಎಸ್​ಎಸ್​ಬಿ, ಬೆಸ್ಕಾಂ ಸೇರಿದಂತೆ ಬೆಂಗಳೂರು ಅಭಿವೃದ್ದಿಗೆ ಇರುವ ಪ್ರತಿ ಇಲಾಖೆಗಳ ನಡುವೆ ಸಮನ್ವಯತೆ ಸಾಧಿಸುವ ವಿಚಾರವಾಗಿ ಬೆಂಗಳೂರು ವ್ಯಾಪ್ತಿಯ ಶಾಸಕರು, ಸಂಸದರ ಸಭೆಯನ್ನು ಜುಲೈ. 27 ರಂದು ನಡೆಸಲಾಗುವುದು”ಎಂದು ಹೇಳಿದ್ದಾರೆ.

ಇದಕ್ಕೂ ಮೊದಲು ಬಿಜೆಪಿ ನಾಯಕರು ಬೆಂಗಳೂರು ಅಭಿವೃದ್ದಿಗೆ ಇರುವ ಇಲಾಖೆಗಳ ನಡುವೆ ಸಮನ್ವಯತೆ ಕೊರತೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು. ಇದಕ್ಕೆ ಉತ್ತರಿಸಿದ ಡಿಸಿಎಂ ಅವರು, “ಅಶೋಕ್, ಸುರೇಶ್ ಕುಮಾರ್ ಹಾಗೂ ರಾಮಮೂರ್ತಿ ಅವರ ಮಾತಿಗೆ ನನ್ನ ಸಹಮತವಿದೆ. ಕಳೆದ ಒಂದು ವರ್ಷದಿಂದ ಸಮನ್ವಯತೆ ಸಾಧಿಸಲು ನಾನೇ ಸಾಕಷ್ಟು ಕಸರತ್ತು ನಡೆಸಿದ್ದೇನೆ. ಇದರಲ್ಲಿ ಸಂಪೂರ್ಣ ಯಶಸ್ವಿಯಾಗಿಲ್ಲ. ಆದರೆ, ಒಂದು ಹಂತಕ್ಕೆ ಸಮಸ್ಯೆ ನಿವಾರಣೆ ಮಾಡಿದ್ದೇನೆ. ಈ ಪ್ರಯತ್ನ ಮುಂದುವರೆಸಿದ್ದೇನೆ. ಪ್ರತಿಪಕ್ಷದವರು ಸಹಕಾರ ನೀಡಿದರೆ ಕಸ ವಿಲೇವಾರಿ, ಕುಡಿಯುವ ನೀರು, ಸಂಚಾರ ದಟ್ಟಣೆ, ಬೀದಿ ದೀಪ, ತೆರಿಗೆ ಸಂಗ್ರಹ, ಹಸಿರೀಕರಣ – ಹೀಗೆ ಅನೇಕ ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಬಹುದು”ಎಂದು ತಿಳಿಸಿದರು.

ಇದನ್ನೂ ಓದಿ:ಪರಿಷತ್​ ಕಲಾಪದಲ್ಲಿ ‘ನಿತ್ಯ ಸುಮಂಗಲಿ’ ಪದ ಗದ್ದಲ, ಸಿಟಿ ರವಿ ವಿರುದ್ಧ ಮುಗಿಬಿದ್ದ ಕಾಂಗ್ರೆಸ್ ಸದಸ್ಯರು

“ನನ್ನ ಬಳಿ ಎರಡು ಆಯ್ಕೆಗಳಿದ್ದು, ಸ್ಪೀಕರ್ ಅವರು ಅವಕಾಶ ನೀಡಿದರೆ ಸದನದಲ್ಲೇ ಚರ್ಚೆ ನಡೆಸಬಹುದು ಅಥವಾ ಸದನ ಮುಗಿದ ಮಾರನೇ ದಿನವೇ ನೀವು ತಿಳಿಸಿದ ಜಾಗದಲ್ಲಿ ಇದೇ ವಿಚಾರವಾಗಿ ಇಡೀ ದಿನ ಚರ್ಚೆ ನಡೆಸೋಣ” ಎಂದರು. ಆಗ ‘ಎರಡನೇ ಆಯ್ಕೆಯೇ ಉತ್ತಮʼ ಎಂದು ಸ್ಪೀಕರ್ ಯು.ಟಿ.ಖಾದರ್ ಅವರು ಹೇಳಿದರು. ಇನ್ನು ನೀವು ವಿಧಾನಸಭೆ ಕಲಾಪವನ್ನು ಯಾವಾಗ ಮುಗಿಸುತ್ತೀರಾ ಎಂಬ ಸ್ಪೀಕರ್ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, ಜುಲೈ 26ಕ್ಕೆ ಮುಗಿಸುತ್ತೇವೆ ಎಂದರು.

ಎತ್ತಿನಹೊಳೆ ನೀರು ತುಮಕೂರಿಗೆ ತಲುಪುತ್ತದೆಯೇ ಎನ್ನುವ ಭಯ ಕಾಡುತ್ತಿದೆ

“ಎತ್ತಿನಹೊಳೆ ಯೋಜನೆಗೆ 25 ಸಾವಿರ ಕೋಟಿ ಹಣ ಖರ್ಚಾಗಿದೆ. ಕಾಲುವೆಗಳಿಂದ ನೀರನ್ನು ಪಂಪ್ ಸೆಟ್ ಮೂಲಕ ಎತ್ತುವ ಕಾರಣಕ್ಕೆ ನನಗೆ ಹಾಗೂ ನಮ್ಮ ಶಾಸಕರಿಗೆ ಭಯವಾಗುತ್ತಿದ್ದು, ತುಮಕೂರು ಭಾಗಕ್ಕೂ ನೀರು ತಲುಪುತ್ತದೆಯೇ ಎನ್ನುವ ಅನುಮಾನ ಬಂದಿದೆ” ಎಂದು ವಿಧಾನಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಆತಂಕ ವ್ಯಕ್ತಪಡಿಸಿದರು. ಇದೇ ವೇಳೆ ಶಾಸಕ ಜಗದೀಶ್ ಶಿವ ಗುಡಗಂಟಿ ಅವರು, ‘ತುಂಗಳ- ಸಾವಳಗಿ ಏತ ನೀರಾವರಿ ಯೋಜನೆಯ ಕೊನೆಯ ಭಾಗಗಳ ರೈತರಿಗೆ ನೀರು ತಲುಪುತ್ತಿಲ್ಲ ಎನ್ನುವ ವಿಚಾರಕ್ಕೆ ಉತ್ತರಿಸಿದ ಡಿಸಿಎಂ , “ಎತ್ತಿನಹೊಳೆ ಯೋಜನೆಯ ಕಾಲುವೆಗಳಿಗೆ ನೀರು ಹರಿಸಿದರೆ ನೀರನ್ನು ಪಂಪ್, ಸೈಫನ್ ಮಾಡುತ್ತಾರೆ. ಅದೇ ರೀತಿ ಉತ್ತರ ಕರ್ನಾಟಕದ ಅನೇಕ ಕಡೆ ಶೇಕಡಾ 90 ರಷ್ಟು ನೀರನ್ನು ಪಂಪ್ ಮಾಡಲಾಗುತ್ತಿದೆ. ಇದನ್ನು ತಡೆಯುವ ಕೆಲಸ ಅಧಿಕಾರಿಗಳಿಂದ ಆಗುವುದಿಲ್ಲ. ಜನಪ್ರತಿನಿಧಿಗಳಾದ ನಾವುಗಳು ನಮ್ಮ ರೈತರಿಗೆ ಮನವರಿಕೆ ಮಾಡಿಕೊಡಬೇಕು” ಎಂದರು.

ಇದನ್ನೂ ಓದಿ:ವಿಧಾನಮಂಡಲ ಕಲಾಪ: ವಿಧಾನಸೌಧದಲ್ಲಿ ಶಾಸಕರ ಹಾಜರಾತಿ ದಾಖಲು ಮಾಡುತ್ತೆ ಎಐ ಕ್ಯಾಮರಾ!

ಸದನ ಒಪ್ಪುವುದಾದರೆ ವಾರದೊಳಗೆ ಬಿಲ್ ತಯಾರು

“ಮಂಡ್ಯ, ಹಾಸನ, ಬಾಗಲಕೋಟೆ ಸೇರಿದಂತೆ ರಾಜ್ಯದ ನೀರಾವರಿ ಪ್ರದೇಶಗಳ ಟೇಲ್ ಎಂಡ್ ಭಾಗಗಳಿಗೆ ನೀರು ತಲುಪುತ್ತಿಲ್ಲ. ಏತ ನೀರಾವರಿ ಮಾಡಿದರೂ ಸಹ ಶೇ.50 ರಷ್ಟು ನೀರು ಸಹ ಹೋಗುತ್ತಿಲ್ಲ. ಸದನ ಒಪ್ಪುವುದಾದರೆ ಇದನ್ನು ತಡೆಯಲು ವಾರದೊಳಗೆ ಬಿಲ್ ತಯಾರು ಮಾಡಲಾಗುವುದು” ಎಂದರು. “ಇದನ್ನು ಯಾವ ರೀತಿ ನಿಯಂತ್ರಣ ಮಾಡಬೇಕು ಎಂದು ಪರಿಶೀಲನೆ ನಡೆಸಲಾಗಿದೆ. ನಾವು ನೀರನ್ನು ಏತ ನೀರಾವರಿ ಮೂಲಕ ಹರಿಸುತ್ತೇವೆ. ಆ ನೀರನ್ನೇ ಪಂಪ್ ಮೂಲಕ 10 ಕಿಮೀಗಟ್ಟಲೇ ಪಂಪ್ ಮಾಡುತ್ತಾರೆ. ಈ ಯೋಜನೆ ಮಾಡಿ ಏನು ಲಾಭ?” ಎಂದು ಹೇಳಿದರು.

ಜೊತೆಗೆ ಕೆಆರ್​ಎಸ್​ ನೀರು ಮಳವಳ್ಳಿಗೆ ಹೋಗುವುದೇ ಇಲ್ಲ. ಕಾಲುವೆ ಮಾಡಿ 20 ವರ್ಷಗಳಾದರೂ ಗದಗ ಜಿಲ್ಲೆ ನೀರನ್ನೇ ನೋಡಿಲ್ಲ. ಎಲ್ಲರೂ ಸಹಕಾರ ಕೊಟ್ಟರೇ ನಾವು ನೀರಿನ ರಕ್ಷಣೆ ಮಾಡಿ ಕೊನೆಯ ಭಾಗದ ರೈತರಿಗೂ ನೀರು ತಲುಪುವಂತೆ ಮಾಡುವ ಕಾನೂನು ತರಲಾಗುವುದು” ಎಂದು ತಿಳಿಸಿದರು. ದಯವಿಟ್ಟು ಆದಷ್ಟು ಬೇಗ ವಿಧೇಯಕ ಸಿದ್ದಪಡಿಸಿ, ನಮ್ಮ ಸಂಪೂರ್ಣ ಸಹಕಾರವಿದೆ ಎಂದು ಬಿಜೆಪಿ ಶಾಸಕ ಸಿ.ಸಿ.ಪಾಟೀಲ್ ಅವರ ಮಾತಿಗೆ ಸಹಮತ ವ್ಯಕ್ತಪಡಿಸಿದರು.

ಕಾವೇರಿ ಜಲಾನಯನ ಪ್ರದೇಶಗಳ ನದಿ ನೀರು ಹರಿವಿನ ಪ್ರಮಾಣ ಮಾಹಿತಿ ನೀಡಿದ ಡಿಸಿಎಂ

ಹಾರಂಗಿ ಜಲಾಶಯಕ್ಕೆ 12,827 ಕ್ಯೂಸೆಕ್ಸ್, ಹೇಮಾವತಿ 14,027, ಕೆ.ಆರ್ ಎಸ್ 25,933, ಕಬಿನಿಗೆ 28,840 ಒಟ್ಟು 56, 626 ಕ್ಯೂಸೆಕ್ಸ್ ನೀರಿನ ಒಳಹರಿವಿದೆ. ಕಾನೂನಿನ ಪ್ರಕಾರ 40 ಟಿಎಂಸಿ ನೀರು ಹೋಗಬೇಕಾಗಿತ್ತು. ಬಿಳಿಗುಂಡ್ಲುವಿನಲ್ಲಿ ದಾಖಲೆ ಪ್ರಕಾರ 6 ಟಿಎಂಸಿ ನೀರು ಹೋಗಿದೆ. ಅಂದರೆ ಪ್ರತಿ ದಿನ ನೀರಿನ ಹರಿವಿನ ಪ್ರಮಾಣ 1.5 ಟಿಎಂಸಿ ಮುಟ್ಟಿದೆ. ಏಕೆಂದರೆ 250 ಕಿ.ಮೀ ನಷ್ಟು ನೀರು ಹರಿಯಬೇಕಿದೆ. ಇದೇ ರೀತಿ ಮಳೆ ಬಂದು ನೀರು ಹರಿದರೆ ತೊಂದರೆಯಾಗುವುದಿಲ್ಲ ಎಂಬುದು ನನ್ನ ಭಾವನೆ” ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ ದಿನಾಂಕ ಯಾವುದು ಗೊತ್ತಾ?
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ ದಿನಾಂಕ ಯಾವುದು ಗೊತ್ತಾ?
ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್​ಐಆರ್
ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್​ಐಆರ್
ಆರ್​ಎಸ್ಎಸ್, ಬಿಜೆಪಿ ವಿರುದ್ಧ ಎಂ ಲಕ್ಷ್ಮಣ್ ಗಂಭೀರ ಆರೋಪ
ಆರ್​ಎಸ್ಎಸ್, ಬಿಜೆಪಿ ವಿರುದ್ಧ ಎಂ ಲಕ್ಷ್ಮಣ್ ಗಂಭೀರ ಆರೋಪ
ವಿಡಿಯೋ ನೋಡಿ - ಪಪ್ಪಾಯಿ ಹಣ್ಣಿನಲ್ಲಿ ವಿಚಿತ್ರ ವಿನಾಯಕ!
ವಿಡಿಯೋ ನೋಡಿ - ಪಪ್ಪಾಯಿ ಹಣ್ಣಿನಲ್ಲಿ ವಿಚಿತ್ರ ವಿನಾಯಕ!
‘ಬೇರೇ ಜೈಲಿಗೆ ಶಿಫ್ಟ್ ಮಾಡಿ ಪ್ಲೀಸ್’; ಬಳ್ಳಾರಿ ಜೈಲಲ್ಲಿ ಸುಸ್ತಾದ ದರ್ಶನ್
‘ಬೇರೇ ಜೈಲಿಗೆ ಶಿಫ್ಟ್ ಮಾಡಿ ಪ್ಲೀಸ್’; ಬಳ್ಳಾರಿ ಜೈಲಲ್ಲಿ ಸುಸ್ತಾದ ದರ್ಶನ್
ನಾಗಮಂಗಲ ಕೋಮುಗಲಭೆ​​: ಬೆಂಕಿ ಬಿದ್ದಿದ್ದ ಬೈಕ್​ ಶೋರೂಂಗೆ ಹೆಚ್​ಡಿಕೆ ಭೇಟಿ
ನಾಗಮಂಗಲ ಕೋಮುಗಲಭೆ​​: ಬೆಂಕಿ ಬಿದ್ದಿದ್ದ ಬೈಕ್​ ಶೋರೂಂಗೆ ಹೆಚ್​ಡಿಕೆ ಭೇಟಿ
ನಾಗಮಂಗಲ ಕೋಮುಗಲಭೆ ಕೇಸ್​​: ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ನಾಗಮಂಗಲ ಕೋಮುಗಲಭೆ ಕೇಸ್​​: ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
Daily Devotional: ಎಕ್ಕದ ಗಣಪತಿಯ ಮಹತ್ವ ತಿಳಿಯಿರಿ
Daily Devotional: ಎಕ್ಕದ ಗಣಪತಿಯ ಮಹತ್ವ ತಿಳಿಯಿರಿ
Nithya Bhavishya: ಈ ರಾಶಿಯವರಿಗೆ ಆಸ್ತಿ ಖರೀದಿಯ ಯೋಜನೆ ಯಶಸ್ವಿಯಾಗಬಹುದು
Nithya Bhavishya: ಈ ರಾಶಿಯವರಿಗೆ ಆಸ್ತಿ ಖರೀದಿಯ ಯೋಜನೆ ಯಶಸ್ವಿಯಾಗಬಹುದು
ಕೆಲವು ಅನುಮಾನವಿತ್ತು, ಕೇಳಿದ್ದೇನೆ: ದರ್ಶನ್ ಭೇಟಿ ಬಳಿಕ ಲಾಯರ್ ಮಾತು
ಕೆಲವು ಅನುಮಾನವಿತ್ತು, ಕೇಳಿದ್ದೇನೆ: ದರ್ಶನ್ ಭೇಟಿ ಬಳಿಕ ಲಾಯರ್ ಮಾತು