AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವುದೇ ಕಾರಣಕ್ಕೂ ಗ್ಯಾರಂಟಿ ಬದಲಾವಣೆ ಪ್ರಶ್ನೆಯೇ ಇಲ್ಲ-ಡಿಕೆ ಶಿವಕುಮಾರ್​

ಗ್ಯಾರಂಟಿಗೆ ಶಾಸಕರ ಅಸಮಾಧಾನ ವಿಚಾರ ಕುರಿತು ಬೆಂಗಳೂರಿನ ಪದ್ಮನಾಭನಗರ ಕ್ಷೇತ್ರದಲ್ಲಿ ಅನುಷ್ಠಾನ ಸಮಿತಿ ಕಚೇರಿ ಉದ್ಘಾಟಿಸಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ‘ಅವೆಲ್ಲವೂ ಸುಳ್ಳು, ಗ್ಯಾರಂಟಿ ತಂದುಬಿಟ್ಟರಲ್ಲ ಎಂದು ವಿರೋಧ ಪಕ್ಷಗಳು ಕೈ ಹಿಸುಕಿಕೊಳ್ಳುತ್ತೀವೆ ಎಂದರು.

ಯಾವುದೇ ಕಾರಣಕ್ಕೂ ಗ್ಯಾರಂಟಿ ಬದಲಾವಣೆ ಪ್ರಶ್ನೆಯೇ ಇಲ್ಲ-ಡಿಕೆ ಶಿವಕುಮಾರ್​
ಡಿಕೆ ಶಿವಕುಮಾರ್​
ಕಿರಣ್ ಹನುಮಂತ್​ ಮಾದಾರ್
|

Updated on: Aug 14, 2024 | 4:46 PM

Share

ಬೆಂಗಳೂರು, ಆ.14: ಯಾವುದೇ ಕಾರಣಕ್ಕೂ ಗ್ಯಾರಂಟಿ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್(DK Shivakumar) ಸ್ಪಷ್ಟನೆ ನೀಡಿದರು. ಇಂದು(ಬುಧವಾರ) ಬೆಂಗಳೂರಿನ ಪದ್ಮನಾಭನಗರ ಕ್ಷೇತ್ರದಲ್ಲಿ ಅನುಷ್ಠಾನ ಸಮಿತಿ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ‘ಪಕ್ಷದ ಅಧ್ಯಕ್ಷನಾಗಿ ಹೇಳ್ತಿದ್ದೀನಿ, ಸಿದ್ದರಾಮಯ್ಯ ಸಹ ಹೇಳಿದ್ದಾರೆ. ಕೆಲ ಕಡೆ ಆದಾಯ ಹೆಚ್ಚಿರುವವರು ಗ್ಯಾರಂಟಿ ಪಡೆಯುತ್ತಿದ್ದಾರೆ. ಇದರ ಬಗ್ಗೆ ದೂರು ಇವೆ, ಅಂತಹದ್ದನ್ನು ಪರಿಶೀಲನೆ ಮಾಡುತ್ತೇವೆ ಎಂದರು.

ಬಜೆಟ್​​ನಲ್ಲಿ ಗ್ಯಾರಂಟಿಗೆ 56 ಸಾವಿರ ಕೋಟಿ

ಪ್ರತಿ ಯೋಜನೆಗೆ ಐಡಿ ಕಾರ್ಡ್ ಮಾಡಬೇಕೆಂಬ ಪ್ರಸ್ತಾಪ ಇದೆ. ಇನ್ನು ಬಜೆಟ್​​ನಲ್ಲಿ ಗ್ಯಾರಂಟಿಗೆ 56 ಸಾವಿರ ಕೋಟಿ ಮೀಸಲಿಡಲಾಗಿದ್ದು, ಉಚಿತ ಪ್ರಯಾಣದಿಂದ ಪ್ರವಾಸೋದ್ಯಮ ವಹಿವಾಟು ಹೆಚ್ಚಾಗಿದೆ. 224 ಕ್ಷೇತ್ರದಲ್ಲೂ ಗ್ಯಾರಂಟಿ ಅನುಷ್ಠಾನ ಸಮಿತಿ ರಚನೆ ಮಾಡಿದ್ದೇವೆ. ಪ್ರತಿ ಕ್ಷೇತ್ರದಲ್ಲಿ ಓರ್ವ ಸಮಿತಿ ಅಧ್ಯಕ್ಷರು, ಸದಸ್ಯರ ನೇಮಿಸಿದ್ದೇವೆ. ಗ್ಯಾರಂಟಿಗಳಲ್ಲಿ ಲೋಪ ಆಗಬಾರದು, ಲಂಚ ಕೇಳಬಾರದು. ಇವೆಲ್ಲವನ್ನ ನೋಡಿಕೊಳ್ಳುವುದಕ್ಕೆ ನಾವು ಸಮಿತಿ ರಚನೆ ಮಾಡಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ:ಲೂಟಿ ಮಾಡಿದ್ದು ಸಾಕು, ಹೆಚ್​ಎಂಟಿ ಪುನಶ್ಚೇತನಕ್ಕೆ ಸಹಕಾರ ಕೊಡಿ: ಡಿಕೆ ಶಿವಕುಮಾರ್​ಗೆ ಕುಮಾರಸ್ವಾಮಿ ಟಾಂಗ್

ಇದೇ ವೇಳೆ ಗ್ಯಾರಂಟಿಗೆ ಶಾಸಕರ ಅಸಮಾಧಾನ ವಿಚಾರ, ‘ಅವೆಲ್ಲವೂ ಸುಳ್ಳು, ಗ್ಯಾರಂಟಿ ತಂದುಬಿಟ್ಟರಲ್ಲ ಎಂದು ವಿರೋಧ ಪಕ್ಷಗಳು ಕೈ ಹಿಸುಕಿಕೊಳ್ಳುತ್ತೀವೆ. ಇನ್ನು ಗ್ಯಾರಂಟಿಯಿಂದ ಅಭಿವೃದ್ಧಿಗೆ ಹಣ ಸಿಗುತ್ತಿಲ್ಲ ಎಂಬ ಸಚಿವ ಮುನಿಯಪ್ಪ ಹೇಳಿಕೆಗೆ ಉತ್ತರಿಸಿ, ‘ಯಾವ ಸಚಿವರು ಹೇಳೋದಕ್ಕೆ ಆಗಲ್ಲ, ಯಾವ ಮುನಿಯಪ್ಪನು ಹೇಳಿಲ್ಲ, ಅವೆಲ್ಲವು ಸುಳ್ಳು. ಏನ್ ಕೊಡಬೇಕೋ ಕೊಟ್ಟಿದೆ. ಎಸ್​ ಎಮ್ ಕೃಷ್ಣ ಅವರು ಇದ್ದಾಗ ಬಜೆಟ್ 26 ಸಾವಿರ ಕೋಟಿ, ಈಗ ಮೂರು ಲಕ್ಷ ಕೋಟಿಯಾಗಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Kiran Hanumant Madar
Kiran Hanumant Madar

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್