AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕಕ್ಕೆ ಯೋಜನೆಗಳ ಸುರಿಮಳೆಯನ್ನೇ ಸುರಿಸಿದ್ದಾರೆ; ಕೇಂದ್ರ ಬಜೆಟ್​ಗೆ ಡಿಕೆ ಶಿವಕುಮಾರ್ ಲೇವಡಿ

ಮನ್ರೇಗಾ ಯೋಜನೆಯ ಹಣವನ್ನು ಕಡಿಮೆ ಮಾಡಿದರು. 2 ಕೋಟಿ ಉದ್ಯೋಗ ಸೃಷ್ಟಿ ಮಾಡುವುದಾಗಿ ಹೇಳಿದ್ದರು. ಅದನ್ನು ಈಗ 60 ಲಕ್ಷಕ್ಕೆ ಇಳಿಸಿದ್ದಾರೆ ಎಂದು ಟಿಕೆ ಮಾಡಿದ ಡಿಕೆ ಶಿವಕುಮಾರ್, ಕೊರೊನಾ ಸಂದರ್ಭದಲ್ಲಿ ಉದ್ಯೋಗ ಕಳೆದುಕೊಂಡಿದ್ದಾರೆ.

ಕರ್ನಾಟಕಕ್ಕೆ ಯೋಜನೆಗಳ ಸುರಿಮಳೆಯನ್ನೇ ಸುರಿಸಿದ್ದಾರೆ; ಕೇಂದ್ರ ಬಜೆಟ್​ಗೆ ಡಿಕೆ ಶಿವಕುಮಾರ್ ಲೇವಡಿ
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್
TV9 Web
| Edited By: sandhya thejappa|

Updated on:Feb 01, 2022 | 4:57 PM

Share

ಬೆಂಗಳೂರು: ಇದು ಕೇಂದ್ರ ಬಜೆಟ್ ಅಲ್ಲ, ಕೊವಿಡ್ ಬಜೆಟ್ ಅಂತ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಕೇಂದ್ರ ಬಜೆಟ್​ಗೆ (Budget) ಲೇವಡಿ ಮಾಡಿದ್ದಾರೆ. ರಾಜ್ಯದ ಹೆಸರೇ ಇಲ್ಲದಂತಹ ಬಜೆಟ್ ಕೊಡಿಸಿದ್ದಾರೆ. ರಾಜ್ಯಕ್ಕೆ ಯೋಜನೆಗಳ ಸುರಿಮಳೆಯನ್ನೇ ಸುರಿಸಿದ್ದಾರೆ. ಹೀಗಾಗಿ ರಾಜ್ಯದ 25 ಸಂಸದರಿಗೆ, ಸಿಎಂಗೆ ಅಭಿನಂದನೆ. ನಿರ್ಮಲಾ ಸೀತಾರಾಮನ್ ರಾಜ್ಯದಿಂದ ಹೋಗಿದ್ದಾರೆ. ಇಲ್ಲಿನ ಋಣ ತೀರಿಸಬೇಕೆಂದು ಕಾರ್ಯಕ್ರಮ ಕೊಡಬೇಕಿತ್ತು. ದೇಶದಲ್ಲಿ ಜನಸಾಮಾನ್ಯರು ಕೊವಿಡ್​ನಿಂದ ನರಳುತ್ತಿದ್ದಾರೆ. ಬಜೆಟ್ ಕೂಡ ಅದೇ ರೀತಿ ನರಳುತ್ತಿದೆ ಅಂತ ಡಿಕೆಶಿ ಟೀಕೆ ಮಾಡಿದ್ದಾರೆ.

ಮನ್ರೇಗಾ ಯೋಜನೆಯ ಹಣವನ್ನು ಕಡಿಮೆ ಮಾಡಿದರು. 2 ಕೋಟಿ ಉದ್ಯೋಗ ಸೃಷ್ಟಿ ಮಾಡುವುದಾಗಿ ಹೇಳಿದ್ದರು. ಅದನ್ನು ಈಗ 60 ಲಕ್ಷಕ್ಕೆ ಇಳಿಸಿದ್ದಾರೆ ಎಂದು ಟಿಕೆ ಮಾಡಿದ ಡಿಕೆ ಶಿವಕುಮಾರ್, ಕೊರೊನಾ ಸಂದರ್ಭದಲ್ಲಿ ಉದ್ಯೋಗ ಕಳೆದುಕೊಂಡಿದ್ದಾರೆ. ಈ ಬಜೆಟ್​ನಿಂದ ರೈತರಿಗೆ ಏನಾದ್ರು ಸಹಾಯವಾಗಿದ್ಯಾ? ವೇತನ ಪಡೆಯುವವರಿಗೂ ಯಾವುದೇ ರಿಲೀಫ್ ಇಲ್ಲ. 40 ವರ್ಷದಲ್ಲಿ ಇಂತಹ ಪೇಷಂಟ್ ಬಜೆಟ್ ನೋಡಿಲ್ಲ ಅಂತ ಹೇಳಿದರು.

ಕಾರ್ಪೊರೇಟ್ ಲಾಬಿಗೆ ಮಣಿದು ಅವರಿಗೆ ಅವಕಾಶ ನೀಡಿದ್ದಾರೆ. ಎಲ್ಲರ ಜೇಬು ಪಿಕ್‌ಪಾಕೆಟ್ ಮಾಡುವಂತಹ ಬಜೆಟ್ ಇದು ಅಂತ ಕೇಂದ್ರ ಬಜೆಟ್ ಬಗ್ಗೆ ವಾಗ್ದಾಳಿ ನಡೆಸಿದ ಶಿವಕುಮಾರ್, ನದಿ ಜೋಡಣೆ ವಿಚಾರಕ್ಕೂ ಟೀಕೆ ಮಾಡಿದ್ದಾರೆ. ಪೆನ್ನಾರ್ ನದಿ ಎಲ್ಲಿದೆ, ಇದರಿಂದ ರಾಜ್ಯಕ್ಕೇನು ಲಾಭ? ಅದರ ಬದಲಿಗೆ ಮೇಕೆದಾಟು ಯೋಜನೆಯನ್ನು ಕೊಡಲಿ. ಬಡ್ಡಿ‌ರಹಿತ ಸಾಲವನ್ನು ರಾಜ್ಯ ಸರ್ಕಾರಗಳಿಗೆ ಕೊಡ್ತಿದ್ದಾರೆ. ದೇಶದಲ್ಲಿರುವ ಜನರಿಗೆ ಬಡ್ಡಿ ರಹಿತ ಸಾಲ ಕೊಡ್ತಿದ್ದಾರಾ? ಡಿಜಿಟಲ್ ವಿವಿ ರಾಜ್ಯದಲ್ಲಿ ಮಾಡಿದ್ರೆ ಜಮೀನು ಕೊಡಿಸ್ತೇನೆ. ಸಿಎಂ ಬೊಮ್ಮಾಯಿ ರಾಜ್ಯಕ್ಕೆ ಡಿಜಿಟಲ್ ವಿವಿಯನ್ನು ತರಲಿ ಎಂದರು.

ನಿಮ್ಹಾನ್ಸ್‌ಗೆ ನೋಡಲ್ ಏಜೆನ್ಸಿ ನೀಡಿರುವುದಕ್ಕೂ ಡಿಕೆಶಿ ಟೀಕೆ ಮಾಡಿದ್ದಾರೆ. ರಾಜ್ಯ ಸರ್ಕಾರದಲ್ಲಿ ಮೆಂಟಲ್ ಕೇಸ್‌ಗಳು ಜಾಸ್ತಿ ಇವೆ. ಅದಕ್ಕೆ ಅದನ್ನ ಕೊಟ್ಟಿದ್ದಾರೆ ಅಂತ ಹೇಳಿದರು.

ಇದನ್ನೂ ಓದಿ

ಒ ಇದ್ದಲ್ಲೆಲ್ಲ ಸೊನ್ನೆ ಹಾಕಿದ ಕಾಂಗ್ರೆಸ್​ ಸಂಸದ ರಾಹುಲ್​ ಗಾಂಧಿ; ಕೇಂದ್ರ ಬಜೆಟ್​​ಗೆ ನೀಡಿದ ಪ್ರತಿಕ್ರಿಯೆ ಇದು !

ಕಾಂಗ್ರೆಸ್ ಕಚೇರಿಯಲ್ಲಿ ಕನ್ಹಯ್ಯ ಕುಮಾರ್ ಮೇಲೆ ಮಸಿ ಎರಚಿದ ಯುವಕರು; ಅದು ಇಂಕ್ ಅಲ್ಲ ಆ್ಯಸಿಡ್ ಎಂದು ಕೈ ನಾಯಕರು

Published On - 4:53 pm, Tue, 1 February 22

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!