AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CM DK Shivakumar: ಡಿ.ಕೆ. ಶಿವಕುಮಾರ್​ ಎಂಬ ಹೆಸರಿನವನಾದ ನಾನು…, ಕರ್ನಾಟಕದ 25ನೇ ಸಿಎಂ ಆಗಿ ಡಿಕೆಶಿ ಪ್ರಮಾಣವಚನ

ಸಿಎಂ ಆಗಿ ಡಿ.ಕೆ. ಶಿವಕುಮಾರ್​​ ಪ್ರಮಾಣ: ಬೆಂಗಳೂರಿನ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಡಿ.ಕೆ. ಶಿವಕುಮಾರ್ ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್​​ಚಂದ್​​ ಗೆಹ್ಲೋಟ್​​ ನೂತನ ಸಿಎಂಗೆ ಪ್ರತಿಜ್ಞಾವಿಧಿ ಬೋಧಿಸಿದ್ದು, ಸಮಾರಂಭಕ್ಕೆ ಗಣ್ಯಾತಿ ಗಣ್ಯರು ಸಾಕ್ಷಿಯಾಗಿದರು. ಧಾರ್ಮಿಕ ನಾಯಕರು ಸೇರಿ ಬಿಜೆಪಿಯ ಉಚ್ಛಾಟಿತ ಶಾಸಕರೂ ಉಪಸ್ಥಿತರಿದ್ದರು.

CM DK Shivakumar: ಡಿ.ಕೆ. ಶಿವಕುಮಾರ್​ ಎಂಬ ಹೆಸರಿನವನಾದ ನಾನು..., ಕರ್ನಾಟಕದ 25ನೇ ಸಿಎಂ ಆಗಿ ಡಿಕೆಶಿ ಪ್ರಮಾಣವಚನ
ಕರ್ನಾಟಕದ 25ನೇ ಸಿಎಂ ಆಗಿ ಡಿಕೆಶಿ ಪ್ರಮಾಣವಚನImage Credit source: PTI
ಪ್ರಸನ್ನ ಹೆಗಡೆ
|

Updated on:Jun 03, 2026 | 4:50 PM

Share

ಬೆಂಗಳೂರು, ಜೂನ್​​ 03: ಕರ್ನಾಟಕದ 25 ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ (DK Shivakumar)​​ ಪ್ರಮಾಣವಚನ ಸ್ವೀಕರಿಸಿದ್ದಾರೆ. ಬೆಂಗಳೂರಿನ ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್​​ಚಂದ್​ ಗೆಹ್ಲೋಟ್​​ ನೂತನ ಸಿಎಂಗೆ ಪ್ರತಿಜ್ಞಾವಿಧಿ ಬೋಧಿಸಿದ್ದು, ವೀರ ಗಂಗಾಧರ ಅಜ್ಜಯ್ಯ ಹೆಸರಲ್ಲಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರೇಷ್ಮೆ ಪಂಚೆ, ಜುಬ್ಬ, ಶಲ್ಯ ಧರಿಸಿ ಸಾಂಪ್ರದಾಯಿಕ ಉಡುಗೆಯಲ್ಲಿ ಶಿವಕುಮಾರ್​​ ಕಾಣಿಸಿಕೊಂಡಿರೋದು ಗಮನಸೆಳೆಯಿತು.

ಮುಖ್ಯಾಂಶಗಳು

  • ಕರ್ನಾಟಕದ 25ನೇ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
  • ನೂತನ ಸಿಎಂಗೆ ಪ್ರತಿಜ್ಞಾವಿಧಿ ಬೋಧಿಸಿದ ರಾಜ್ಯಪಾಲ ಗೆಹ್ಲೋಟ್​​
  • ಬೆಂಗಳೂರಿನ ರಾಜಭವನದಲ್ಲಿ ಸರಳವಾಗಿ ನಡೆದ ಕಾರ್ಯಕ್ರಮ

ಕಾರ್ಯಕ್ರಮದಲ್ಲಿ ಗಣ್ಯಾತಿ ಗಣ್ಯರು ಭಾಗಿ

ಸಿಎಂ ಆಗಿ ಡಿಕೆಶಿ ಪ್ರಮಾಣವಚನಕ್ಕೆ ಗಣ್ಯಾತಿ ಗಣ್ಯರು ಸಾಕ್ಷಿಯಾಗಿದ್ದಾರೆ. ಕಾಂಗ್ರೆಸ್​​ ವರಿಷ್ಠ ರಾಹುಲ್​​ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್​​, ತೆಲಂಗಾಣ ಸಿಎಂ ರೇವಂತ್​​ ರೆಡ್ಡಿ, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಮಾಜಿ ಸಿಎಂ ಸಿದ್ದರಾಮಯ್ಯ, ತೆಲಂಗಾಣ ಸಿಎಂ ರೇವಂತ್​ ರೆಡ್ಡಿ ಕೇರಳಂ ಸಿಎಂ ಸತೀಶನ್​,  ಕಾಂಗ್ರೆಸ್ ನಾಯಕರಾದ ಹರಿಪ್ರಸಾದ್​, ಮೊಹಮ್ಮದ್ ಅಜರುದ್ದೀನ್, ರಾಜೀವ್ ಶುಕ್ಲಾ ಸೇರಿ ಪಕ್ಷದ ಪ್ರಮುಖ ನಾಯಕರು ಮತ್ತು ಜನಪ್ರತಿನಿಧಿಗಳು, ವಿವಿಧ ಮಠಾಧೀಶರು, ಮೌಲ್ವಿಗಳು, ಮತ್ತು ಚರ್ಚ್​​ಗಳ ಮುಖ್ಯಸ್ಥರು, ಸಿನಿ ತಾರೆಯರು ಸೇರಿ ಡಿಕೆಶಿ ಕುಟುಂಬಸ್ಥರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಬಿಜೆಪಿಯ ಉಚ್ಛಾಟಿತ ಶಾಸಕರಾದ ಶಿವರಾಮ ಹೆಬ್ಬಾರ್​​ ಮತ್ತು ಎಸ್.ಟಿ.ಸೋಮಶೇಖರ್ ಕೂಡ ಈ ವೇಳೆ ಕಾಣಿಸಿಕೊಂಡಿರೋದು ವಿಶೇಷವಾಗಿತ್ತು.

ಇದನ್ನೂ ಓದಿ: ಡಿಕೆ ಶಿವಕುಮಾರ್ ಸಿಎಂ, ಪರಮೇಶ್ವರ್-ಡಿಸಿಎಂ; ಇಲ್ಲಿದೆ ಹೊಸ ಸಚಿವರ ಅಧಿಕೃತ ಲಿಸ್ಟ್

ಪ್ರಮಾಣವಚನಕ್ಕೂ ಮುನ್ನ ವಿಶೇಷ ಪೂಜೆ

ಕರ್ನಾಟಕದ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುವ ಮುನ್ನ ಡಿ.ಕೆ. ಶಿವಕುಮಾರ್​​ ಅವರ ಸದಾಶಿವನಗರದಲ್ಲಿರುವ ನಿವಾಸದಲ್ಲಿ 5ಕ್ಕೂ ಹೆಚ್ಚು ಪುರೋಹಿತರಿಂದ ವಿಶೇಷ ಪೂಜೆ ನೆರವೇರಿಸಲಾಗಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 4:16 pm, Wed, 3 June 26

Follow Us
‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಸಿಂಗಾರಗೊಂಡ ಗಾಂಧಿನಗರ; ವಿಡಿಯೋ ನೋಡಿ..
‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಸಿಂಗಾರಗೊಂಡ ಗಾಂಧಿನಗರ; ವಿಡಿಯೋ ನೋಡಿ..
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್ ತೆರವು ಅಭಿಯಾನ
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್ ತೆರವು ಅಭಿಯಾನ
ಒಳ್ಳೆ ಪತಿಯಾಗುವುದು ಹೇಗೆ? ಚಿಕ್ಕಣ್ಣನಿಗೆ ಪಾಠ ಹೇಳಿದ್ದಾರಂತೆ ಯಶ್
ಒಳ್ಳೆ ಪತಿಯಾಗುವುದು ಹೇಗೆ? ಚಿಕ್ಕಣ್ಣನಿಗೆ ಪಾಠ ಹೇಳಿದ್ದಾರಂತೆ ಯಶ್
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
ಕರ್ನಾಟಕದಲ್ಲಿ ಕೆಜಿ ಈರುಳ್ಳಿ ದರ ಶೀಘ್ರವೇ 100 ರೂಪಾಯಿ?
ಕರ್ನಾಟಕದಲ್ಲಿ ಕೆಜಿ ಈರುಳ್ಳಿ ದರ ಶೀಘ್ರವೇ 100 ರೂಪಾಯಿ?
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗೆ ಬೀಗ?
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗೆ ಬೀಗ?
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ