AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೀರ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್​​: ಅಷ್ಟಕ್ಕೂ ಯಾರು ಈ ಅಜ್ಜಯ್ಯ?

ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಆರಾಧ್ಯ ದೈವ ವೀರ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಭಕ್ತಿಪೂರ್ವಕವಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ವಿಶೇಷ ಎಂದರೆ ಪದಗ್ರಹಣ ಸಮಾರಂಭ ಕೂಡ ಅಜ್ಜಯ್ಯನ ಮಠ ನೀಡಿರುವ ದಿನಾಂಕ ಮತ್ತು ಸಮಯದಂದೇ ನೆರವೇರಿದೆ. ಸಿಎಂ ಸ್ಥಾನ ಪಡೆಯುವ ಮೊದಲಿಗಿಂತ ಹಿಡಿದು ಪ್ರಮಾಣವಚನದವರೆಗೂ ಪ್ರತಿ ನಿರ್ಧಾರವನ್ನು ಅಜ್ಜಯ್ಯನ ಮಠದ ಈಗಿನ ಡಾ. ಕರಿವೃಷಭ ಶಿವಯೋಗಿಶ್ವರ ಶ್ರೀಗಳ ಮಾರ್ಗದರ್ಶನದನುಸಾರ ಡಿಕೆಶಿ ತೆಗೆದುಕೊಂಡಿದ್ದಾರೆ.

ವೀರ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್​​: ಅಷ್ಟಕ್ಕೂ ಯಾರು ಈ ಅಜ್ಜಯ್ಯ?
ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್Image Credit source: PTI
ಪ್ರಸನ್ನ ಹೆಗಡೆ
|

Updated on: Jun 03, 2026 | 5:28 PM

Share

ಬೆಂಗಳೂರು, ಜೂನ್​​ 03: ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್​​ (DK Shivakumar) ಪ್ರಮಾಣವಚನ ಸ್ವೀಕರಿಸಿದ್ದಾರೆ.  ರಾಜ್ಯಪಾಲ ಥಾವರ್​​ಚಂದ್​​ ಗೆಹ್ಲೋಟ್​​ ಪ್ರತಿಜ್ಞಾವಿಧಿ ಬೋಧೀಸಿದ್ದು, ವೀರ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಡಿಕೆಶಿ ಪ್ರಮಾಣ ಸ್ವೀಕರಿಸಿರೋದು ಗಮನ ಸೆಳೆದಿದೆ. ತಮ್ಮ ಜೀವನದ ಮಹತ್ವದ ಘಟ್ಟದ ವೇಳೆ ತಮ್ಮ ಆರಾಧ್ಯ ದೈವವಾದ ಅಜ್ಜಯ್ಯನನ್ನು ನೆನೆದಿರೋದು ಡಿ.ಕೆ. ಶಿವಕುಮಾರ್​​ಗೆ ಅವರ ಮೇಲಿರುವ ನಂಬಿಕೆ ಎಂತಹದ್ದು ಎಂಬುದಕ್ಕೆ ಹಿಡಿದ ಕೈಗನ್ನಡಿಯಾಗಿದೆ.

ಪ್ರಮಾಣವಚನಕ್ಕೂ ಮುನ್ನ ಅಜ್ಜಯ್ಯನಿಗೆ ಪುಷ್ಪಾಚನೆ

ವೇದಿಕೆಯಲ್ಲಿ ಇಡಲಾಗಿದ್ದ ಅಜ್ಜಯ್ಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರೆವೇರಸಿದ ಬಳಿಕೆಯೇ ಕರ್ನಾಟಕ ಸಿಎಂ ಆಗಿ ಡಿ.ಕೆ. ಶಿವಕುಮಾರ್​​ ಪ್ರಮಾಣವಚನ ಸ್ವೀಕರಿಸಿದ್ದಾರೆ. ವಿಶೇಷ ಎಂದರೆ ಪದಗ್ರಹಣ ಸಮಾರಂಭ ಕೂಡ ಅಜ್ಜಯ್ಯನ ಮಠ ನೀಡಿರುವ ದಿನಾಂಕ ಮತ್ತು ಸಮಯದಂದೇ ನೆರವೇರಿದೆ. ಸಿಎಂ ಸ್ಥಾನ ಪಡೆಯುವ ಮೊದಲಿಗಿಂತ ಹಿಡಿದು ಪ್ರಮಾಣವಚನದವರೆಗೂ ಪ್ರತಿ ನಿರ್ಧಾರವನ್ನು ಅಜ್ಜಯ್ಯನ ಮಠದ ಈಗಿನ ಡಾ. ಕರಿವೃಷಭ ಶಿವಯೋಗಿಶ್ವರ ಶ್ರೀಗಳ ಮಾರ್ಗದರ್ಶನದನುಸಾರ ಡಿಕೆಶಿ ತೆಗೆದುಕೊಂಡಿದ್ದಾರೆ. ನಿನ್ನೆ ರಾತ್ರಿಯೂ ಬೆಂಗಳೂರಿನ ನಾಗರಭಾವಿಯಲ್ಲಿರುವ ಅಜ್ಜಯ್ಯನ ಶಾಖಾ ಮಠಕ್ಕೆ ಕುಟುಂಬ ಸಮೇತ ಭೇಟಿ ನೀಡಿದ್ದ ಶಿವಕುಮಾರ್, ತಡರಾತ್ರಿಯವರೆಗೂ ಅಲ್ಲಿಯೇ ಸಮಯ ಕಳೆದಿದ್ದರು.

ಇದನ್ನೂ ಓದಿ: ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆ ಶಿವಕುಮಾರ್!

ಎಲ್ಲಿದೆ ಈ ಅಜ್ಜಯ್ಯನ ಮಠ?

ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆ ಕಾಡಸಿದ್ದೇಶ್ವರ ಮಠ (ಸೋಮೇಕಟ್ಟೆ ಶ್ರೀ ಕಾಡಸಿದ್ದೇಶ್ವರ ಮಠ) ಅತ್ಯಂತ ಪ್ರಸಿದ್ಧ ಹಾಗೂ ಐತಿಹಾಸಿಕ ಧಾರ್ಮಿಕ ಶಕ್ತಿ ಕೇಂದ್ರವಾಗಿದೆ. ಈ ಮಠವನ್ನು ಸ್ಥಳೀಯವಾಗಿ ‘ಅಜ್ಜಯ್ಯನ ಮಠ’ ಎಂದೂ ಕರೆಯಲಾಗುತ್ತದೆ. ಈ ಮಠವು ಕರ್ನಾಟಕದ ಪ್ರಮುಖ ರಾಜಕಾರಣಿಗಳ ನೆಚ್ಚಿನ ಧಾರ್ಮಿಕ ಶಕ್ತಿ ಕೇಂದ್ರವಾಗಿದ್ದು, ಕರ್ನಾಟಕದ ನೂತನ ಸಿಎಂ ಡಿಕೆ ಶಿವಕುಮಾರ್​​ ಸೇರಿ ಹಲವರು ಇಲ್ಲಿನ ಭಕ್ತರಾಗಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
Prasanna Hegde
Prasanna Hegde

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!