AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾನವಸಹಿತ ಗಗನಯಾನ ಕಾರ್ಯಕ್ರಮ ಸ್ಥಳಾಂತರ ಮಾಡದಂತೆ ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿಗೆ ಮನವಿ ಪತ್ರ ಬರೆದ ಡಿಕೆ ಶಿವಕುಮಾರ್

ಮಾನವಸಹಿತ ಗಗನಯಾನ ಕಾರ್ಯಕ್ರಮವು ಬೆಂಗಳೂರಿನಿಂದ ಗುಜರಾತ್ಗೆ ಸ್ಥಳಾಂತರಕ್ಕೆ ಡಿಕೆ ಶಿವಕುಮಾರ್ ವಿರೋಧ ವ್ಯಕ್ತಪಡಿಸಿದ್ದಾರೆ. ಗಗನಯಾನ ಯೋಜನೆ ಅನುಷ್ಠಾನ ಒಂದು ಜವಾಬ್ದಾರಿ. ಮಾನವಸಹಿತ ಗಗನಯಾನದಲ್ಲಿ ಭಾರತ 4ನೇ ರಾಷ್ಟ್ರವಾಗಲಿದೆ. ಕರ್ನಾಟಕದಲ್ಲಿ ಇಂತಹ ಗಗನಯಾನ ಯೋಜನೆಯಿಂದ ಕನ್ನಡಿಗರು ಹೆಮ್ಮೆಪಡುತ್ತಾರೆ ಎಂದು ಪತ್ರದಲ್ಲಿ ಬರೆದಿದ್ದಾರೆ.

ಮಾನವಸಹಿತ ಗಗನಯಾನ ಕಾರ್ಯಕ್ರಮ ಸ್ಥಳಾಂತರ ಮಾಡದಂತೆ ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿಗೆ ಮನವಿ ಪತ್ರ ಬರೆದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್
Follow us
TV9 Web
| Updated By: ಆಯೇಷಾ ಬಾನು

Updated on: Nov 28, 2021 | 2:22 PM

ಬೆಂಗಳೂರು: ಮಾನವಸಹಿತ ಗಗನಯಾನ ಕಾರ್ಯಕ್ರಮ ಸ್ಥಳಾಂತರ ವಿಚಾರಕ್ಕೆ ಸಂಬಂಧಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಮಾನವಸಹಿತ ಗಗನಯಾನ ಕಾರ್ಯಕ್ರಮವು ಬೆಂಗಳೂರಿನಿಂದ ಗುಜರಾತ್ಗೆ ಸ್ಥಳಾಂತರಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ಗಗನಯಾನ ಯೋಜನೆ ಅನುಷ್ಠಾನ ಒಂದು ಜವಾಬ್ದಾರಿ. ಮಾನವಸಹಿತ ಗಗನಯಾನದಲ್ಲಿ ಭಾರತ 4ನೇ ರಾಷ್ಟ್ರವಾಗಲಿದೆ. ಕರ್ನಾಟಕದಲ್ಲಿ ಇಂತಹ ಗಗನಯಾನ ಯೋಜನೆಯಿಂದ ಕನ್ನಡಿಗರು ಹೆಮ್ಮೆಪಡುತ್ತಾರೆ. ಈ ಯೋಜನೆ ಗುಜರಾತ್ಗೆ ಸ್ಥಳಾಂತರಿಸುವ ಪ್ರಸ್ತಾವನೆ ಇದೆ. ಈ ಪ್ರಸ್ತಾವನೆಯಿಂದ ಕನ್ನಡಿಗರು ಆಘಾತಕ್ಕೊಳಗಾಗಿದ್ದಾರೆ. ಹೀಗಾದರೆ, ಕೇಂದ್ರ ಸರಕಾರ ಸ್ಥಳೀಯರ ಭಾವನೆಗಳಿಗೆ ಮಣಿಯದೆ, ದ್ರೋಹ ಬಗೆದಿದೆ. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಮಲತಾಯಿ ಧೋರಣೆಯಾಗಿದೆ ಎಂದು ಕನ್ನಡಿಗರಿಗೆ ಅನಿಸುತ್ತದೆ. ಈ ಕ್ರಮವು ರಾಷ್ಟ್ರದಲ್ಲಿ ಒಕ್ಕೂಟ ವ್ಯವಸ್ಥೆಯ ಬಲವರ್ಧನೆಯ ಮೇಲೆ ಪ್ರತಿಕೂಲ ಪರಿಣಾಮಗಳನ್ನು ಉಂಟುಮಾಡುತ್ತದೆ.

ಈ ಪ್ರಸ್ತಾವನೆಯನ್ನು ಕೈಬಿಡುವಂತೆ ಈಗಾಗಲೇ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದೇನೆ. ಆದ್ದರಿಂದ, ದಯವಿಟ್ಟು ಸಂಸತ್ ಸದಸ್ಯರ ನಿಯೋಗದ ಜತೆ ಪ್ರಧಾನಿ ನರೇಂದ್ರ ಮೋದಿಗೆ ವಿವರಿಸಿ. ಕೇಂದ್ರ ಸರ್ಕಾರದ ಪ್ರಸ್ತಾವ ಕೈಬಿಡುವಂತೆ ಮನವಿ ಮಾಡಿ ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡುವಂತೆ ಸಿಎಂ ಬಸವರಾಜ ಬೊಮ್ಮಾಯಿಗೆ ಡಿಕೆಶಿ ಪತ್ರ ಬರೆದಿದ್ದಾರೆ.

ಪ್ರಧಾನಿಗೂ ಪತ್ರ ಬರೆದ ಡಿಕೆಶಿ ಇನ್ನು ಮತ್ತೊಂದು ಕಡೆ ಇದೇ ವಿಚಾರಕ್ಕೆ ಸಂಬಂಧಿಸಿ ಪ್ರಧಾನಿ ಮೋದಿಗೂ ಡಿಕೆ ಶಿವಕುಮಾರ್ ಪತ್ರ ಬರೆದು ಮಾನವಸಹಿತ ಗಗನಯಾನ ಕಾರ್ಯಕ್ರಮ ಸ್ಥಳಾಂತರ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಮೇಕೆದಾಟು ಭೇಟಿ ವೇಳೆ ಹುಟ್ಟು ಹಾಕಿ ತೆಪ್ಪ ನಡೆಸಿ ಗಮನ ಸೆಳೆದ ಡಿಕೆ ಶಿವಕುಮಾರ್, ಮೇಕೆದಾಟು ಯೋಜನೆ ಪಾದಯಾತ್ರೆ ಬಗ್ಗೆ ಹೇಳಿದ್ದೇನು?

1 ನಿಮಿಷದಲ್ಲಿ 10 ಯೋಗದ ಆಸನ: ವಿಶ್ವ ದಾಖಲೆ ಬರೆದ ಹಾಸನದ ಬಾಲಕಿ
1 ನಿಮಿಷದಲ್ಲಿ 10 ಯೋಗದ ಆಸನ: ವಿಶ್ವ ದಾಖಲೆ ಬರೆದ ಹಾಸನದ ಬಾಲಕಿ
ರಚಿತಾ ರಾಮ್ ವಿರುದ್ಧ ದೂರು, ನಟಿಯ ಕರೆಸಿ ವಿಚಾರಿಸುತ್ತೇವೆ: ಸಾರಾ ಗೋವಿಂದು
ರಚಿತಾ ರಾಮ್ ವಿರುದ್ಧ ದೂರು, ನಟಿಯ ಕರೆಸಿ ವಿಚಾರಿಸುತ್ತೇವೆ: ಸಾರಾ ಗೋವಿಂದು
ಬಿಜೆಪಿ ನಾಯಕರಿಗೆ ಸರ್ಕಾರದ ಜನಪ್ರಿಯತೆ ಸಹಿಸಲಾಗುತ್ತಿಲ್ಲ: ಈಶ್ವರ್ ಖಂಡ್ರೆ
ಬಿಜೆಪಿ ನಾಯಕರಿಗೆ ಸರ್ಕಾರದ ಜನಪ್ರಿಯತೆ ಸಹಿಸಲಾಗುತ್ತಿಲ್ಲ: ಈಶ್ವರ್ ಖಂಡ್ರೆ
ಪಲ್ಟಿ ಹೊಡೆದು ಶತಕದ ಸಂಭ್ರಮಾಚರಣೆ ಮಾಡಿದ ಪಂತ್
ಪಲ್ಟಿ ಹೊಡೆದು ಶತಕದ ಸಂಭ್ರಮಾಚರಣೆ ಮಾಡಿದ ಪಂತ್
ನೀವು ಉತ್ತಮ ಕೆಲಸಗಾರರೆಂದು ಕೇಳಸಿಕೊಂಡಿದ್ದೇನೆ ಅಂತ ಡಿಸಿಗೆ ಹೇಳಿದ ಸೋಮಣ್ಣ
ನೀವು ಉತ್ತಮ ಕೆಲಸಗಾರರೆಂದು ಕೇಳಸಿಕೊಂಡಿದ್ದೇನೆ ಅಂತ ಡಿಸಿಗೆ ಹೇಳಿದ ಸೋಮಣ್ಣ
73ನೇ ವಯಸ್ಸಿನಲ್ಲೂ 51 ಪುಶ್-ಅಪ್ ಮಾಡಿದ ತಮಿಳುನಾಡು ರಾಜ್ಯಪಾಲ
73ನೇ ವಯಸ್ಸಿನಲ್ಲೂ 51 ಪುಶ್-ಅಪ್ ಮಾಡಿದ ತಮಿಳುನಾಡು ರಾಜ್ಯಪಾಲ
ರಿಷಭ್ ಪಂತ್​ಗೆ ಕೈ ಮುಗಿದ ರಾಹುಲ್; ವಿಡಿಯೋ ವೈರಲ್
ರಿಷಭ್ ಪಂತ್​ಗೆ ಕೈ ಮುಗಿದ ರಾಹುಲ್; ವಿಡಿಯೋ ವೈರಲ್
ಐಸಿಯು ಬಗ್ಗೆ ಮಾತಾಡಲು ಸಂಸದ ಸುಧಾಕರ್​ಗೆ ನಾಚಿಕೆಯಾಗಬೇಕು: ಸಚಿವ
ಐಸಿಯು ಬಗ್ಗೆ ಮಾತಾಡಲು ಸಂಸದ ಸುಧಾಕರ್​ಗೆ ನಾಚಿಕೆಯಾಗಬೇಕು: ಸಚಿವ
ಊಹಿಸಲಾಗದ ದುಃಖ ಬರಲಿದೆ, ಜನವರಿ ಒಳಗೆ ದೊಡ್ಡ ಗಂಡಾಂತರ: ಕೋಡಿ ಶ್ರೀ ಭವಿಷ್ಯ
ಊಹಿಸಲಾಗದ ದುಃಖ ಬರಲಿದೆ, ಜನವರಿ ಒಳಗೆ ದೊಡ್ಡ ಗಂಡಾಂತರ: ಕೋಡಿ ಶ್ರೀ ಭವಿಷ್ಯ
ಕಾಂಗ್ರೆಸ್ ಸರ್ಕಾರ ಬಡವರನ್ನೂ ಬಿಡದೆ ಸುಲಿಗೆ ಮಾಡುತ್ತಿದೆ: ಅಶೋಕ
ಕಾಂಗ್ರೆಸ್ ಸರ್ಕಾರ ಬಡವರನ್ನೂ ಬಿಡದೆ ಸುಲಿಗೆ ಮಾಡುತ್ತಿದೆ: ಅಶೋಕ