AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಗಸ್ಟ್​ 15 ರಂದು ಮೆಟ್ರೋ ಪ್ರಯಾಣಿಕರಿಗೆ ರಿಯಾಯ್ತಿ ನೀಡಲು ಸಿಎಂ ಬೊಮ್ಮಾಯಿಗೆ ಮನವಿ ಮಾಡಿದ ಡಿಕೆ ಶಿವಕುಮಾರ್

ಆಗಸ್ಟ್​ 15, 75ನೇ ಸ್ವತಂತ್ರೋತ್ಸದಂದು ಮೆಟ್ರೋ ಪ್ರಯಾಣಿಕರಿಗೆ ಶೇ.50ರಷ್ಟು ರಿಯಾಯ್ತಿ ನೀಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮತ್ತು  ಬಿಎಮ್​ಆರ್​​ಸಿಎಲ್​​ಗೆ ಪತ್ರ ಬರೆದು ಮನವಿ ಮಾಡಿದ್ದಾರೆ. 

ಆಗಸ್ಟ್​ 15 ರಂದು ಮೆಟ್ರೋ ಪ್ರಯಾಣಿಕರಿಗೆ ರಿಯಾಯ್ತಿ ನೀಡಲು ಸಿಎಂ ಬೊಮ್ಮಾಯಿಗೆ ಮನವಿ ಮಾಡಿದ ಡಿಕೆ ಶಿವಕುಮಾರ್
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ
TV9 Web
| Updated By: ವಿವೇಕ ಬಿರಾದಾರ|

Updated on:Aug 10, 2022 | 10:39 PM

Share

ಬೆಂಗಳೂರು: ಆಗಸ್ಟ್​ 15, 75ನೇ ಸ್ವತಂತ್ರೋತ್ಸದಂದು (Independence day)  ಮೆಟ್ರೋ (Metro) ಪ್ರಯಾಣಿಕರಿಗೆ ಶೇ.50ರಷ್ಟು ರಿಯಾಯ್ತಿ ನೀಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ (DK Shivakumar) ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavraj Bommai) ಅವರಿಗೆ ಮತ್ತು  ಬಿಎಮ್​ಆರ್​​ಸಿಎಲ್​​ಗೆ (BMRCL) ಪತ್ರ ಬರೆದು ಮನವಿ ಮಾಡಿದ್ದಾರೆ. ಆ.15ರಂದು ಕಾಂಗ್ರೆಸ್​​ನಿಂದ ನಡೆಯುವ ಸ್ವಾತಂತ್ರ್ಯೋತ್ಸವ ನಡಿಗೆ ಹಿನ್ನೆಲೆ ರಿಯಾಯ್ತಿ ನೀಡಿ ಟ್ರಾಫಿಕ್ ಜಾಮ್ ಆಗದಂತೆ ತಡೆಯಲು ವಾಹನಗಳ ಬದಲು ಮೆಟ್ರೋ ಸಂಚಾರಕ್ಕೆ ಒತ್ತು ನೀಡಲು ಮನವಿ ಮಾಡಿದ್ದಾರೆ.

ಮೋದಿ ಹರ್ ಘರ್ ತಿರಂಗಾ ಎಂದು ನಾಟಕ ಆಡುತ್ತಿದ್ದಾರೆ: ವಿಪಕ್ಷ ನಾಯಕ ಸಿದ್ದರಾಮಯ್ಯ 

ಬಾದಾಮಿ: ಸ್ಥಳೀಯ ಶಾಸಕ ಸಿದ್ದರಾಮಯ್ಯ ಅವರು ಬಾದಾಮಿಯಲ್ಲಿ ಭಾಷಣ‌‌ ಮಾಡುತ್ತಾ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಪಕ್ಷವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಮೋದಿ ಹರ್ ಘರ್ ತಿರಂಗಾ ಎಂದು ನಾಟಕ ಆಡುತ್ತಿದ್ದಾರೆ. ಯಾವ ಬಿಜೆಪಿ ನಾಯಕರು ರಾಷ್ಟ್ರ ಧ್ವಜವನ್ನು ಅಗೌರವದಿಂದ ಕಂಡಿದ್ದರೋ… ಅವರು ಈಗ ಹರ್ ಘರ್ ತಿರಂಗಾ ಅಂತಿದ್ದಾರೆ. ಇದು ನಾಟಕ, ಡೊಂಗಿತನ ಅಲ್ವಾ? ಮಾತೆತ್ತಿದರೆ ತಮ್ಮ ಹುಡುಗರ ಕಡೆಯಿಂದ.. ಬಿಜೆಪಿ-ಮೋದಿ ಅಂತಾರೆ ಎಂದು ಸಿದ್ದರಾಮಯ್ಯ ವ್ಯಂಗ್ಯ ಮಾಡಿದ್ದಾರೆ. ಬಿಜೆಪಿಯವರು ದೇಶ ಹಾಳು ಮಾಡುತ್ತಿದ್ದಾರೆ. ಅವರಿಂದ ಸಂವಿಧಾನಕ್ಕೆ, ರಾಷ್ಟ್ರಧ್ವಜಕ್ಕೆ, ಗೌರವ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಸಿದ್ದರಾಮಯ್ಯ ಭಾಷಣ‌‌ದ ಸಾರಾಂಶ:

ಭಾವುಟವನ್ನು ಹತ್ತಿಯಿಂದ ಅಥವಾ ಸಿಲ್ಕ್ ನಲ್ಲಿ ತಯಾರು ಮಾಡಬೇಕು. ಇವರು ಪಾಲಿಸ್ಟರ್ ಬಟ್ಟೆಯಿಂದ ತಯಾರು ಮಾಡೋಕೆ ಹೊರಟಿದಾರಲ್ಲ. ನಾಚಿಕೆ ಆಗೋದಿಲ್ವಾ ಇವರಿಗೆ, ಇದು ಅಗೌರವ ಅಲ್ಲವಾ..? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಮಂಗಳೂರಲ್ಲಿ ಮೂರು ಮರ್ಡರ್ ಆಗಿವೆ. ಸಿಎಂ ಆದವನು ಒಂದು ಧರ್ಮದ ಮುಖ್ಯಮಂತ್ರಿ ನಾ..? ಎಲ್ಲರಿಗೂ ಬೇಕಾದ ಮುಖ್ಯಮಂತ್ರಿ.. ಪ್ರವೀಣ, ಫಾಜಿಲ್, ಮಸೂದ್ ಕೊಲೆಯಾಯ್ತು.. ಸಿಎಂ ಬೊಮ್ಮಾಯಿ ಕೇವಲ ಪ್ರವೀಣ ಮನೆಗೆ ಹೋದರು.. ಮಸೂದ್ ಮತ್ತು ಫಾಜಿಲ್ ಮನೆಗೆ ಹೋಗಲಿಲ್ಲ.. ಅವರು ಮನುಷ್ಯರಲವಾ.. ಪ್ರವೀಣಗೆ ಪರಿಹಾರ ಕೊಟ್ಟಿದ್ದು ಸರಿ. ಆದರೆ ಫಾಜಿಲ್- ಮಸೂದ್ ಗೆ ಯಾಕೆ ಕೊಡಲಿಲ್ಲ..? ಸಿಎಂ ಆಗೋದಕ್ಕೆ ಬೊಮ್ಮಾಯಿ ನಾಲಾಯಕ್ ಎಂದು ಆಕ್ರೋಶದ ದನಿಯಲ್ಲಿ ಸಿದ್ದರಾಮಯ್ಯ ಹೇಳಿದರು.

ಇದು ಜನ ವಿರೋಧಿ ಸರಕಾರ.. 2023 ಮೇ ನಲ್ಲಿ ಚುನಾವಣೆ ಬರುತ್ತಿದೆ… ಎಲ್ಲರೂ ತೀರ್ಮಾನ ತೆಗೆದುಕೊಳ್ಳಬೇಕು.. ನರೇಂದ್ರ ಮೋದಿ ಇದಾನಲ್ಲ ಸ್ವಾತಂತ್ರ್ಯ ಬಂದ ಮೇಲೆ ಹುಟ್ಟಿದವರು.. ಇವರು ಯಾರೂ ಪ್ರಾಣ ಕಳೆದುಕೊಂಡಿಲ್ಲ.. ಮನ್ ಕಿ ಬಾತ್ ಅಂತೆ! ನೀವೇ ತೀರ್ಮಾನ ಮಾಡಿ.. ಬಿಜೆಪಿ ಕಿತ್ತೆಸೆಯುತ್ತೇವೆ ಎಂದು ಶಪಥ ಮಾಡಿ. ದಯಮಾಡಿ ಕೈ ಜೋಡಿಸಿ ಪ್ರಾರ್ಥನೆ ಮಾಡ್ತೀನಿ ಬಿಜೆಪಿಯವರನ್ನು ಅಧಿಕಾರದಿಂದ ತೆಗೆದು ಹಾಕಿ.. ಸಂವಿಧಾನ ಉಳಿಸ್ರಯ್ಯಾ ಎಂದು ಜನರಲ್ಲಿ ಸಿದ್ದರಾಮಯ್ಯ ಕೇಳಿಕೊಂಡರು.

ಮತ್ತಷ್ಟು ರಾಜ್ಯದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:09 pm, Wed, 10 August 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ