AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gruha Jyothi Scheme: ಬಾಡಿಗೆದಾರರಿಗೂ ಉಚಿತ ವಿದ್ಯುತ್ ಸಿಗುತ್ತಾ? ಸ್ಪಷ್ಟನೆ ನೀಡಿದ ಸಚಿವ ಕೆಜೆ ಜಾರ್ಜ್​

ಗೃಹಜ್ಯೋತಿ ಯೋಜನೆ ಕುರಿತಾಗಿ ಹಲವು ಅನುಮಾನಗಳಿವೆ. ಜನರಲ್ಲಿ ಹಲವು ಗೊಂದಲ ಮತ್ತು ಪ್ರಶ್ನೆಗಳು ಮೂಡಿವೆ ಈ ಕುರಿತು ಇಂಧನ ಸಚಿವ ಕೆಜೆ ಜಾರ್ಜ ಸ್ಪಷ್ಟನೆ ನೀಡಿದ್ದಾರೆ.

Gruha Jyothi Scheme: ಬಾಡಿಗೆದಾರರಿಗೂ ಉಚಿತ ವಿದ್ಯುತ್ ಸಿಗುತ್ತಾ? ಸ್ಪಷ್ಟನೆ ನೀಡಿದ ಸಚಿವ ಕೆಜೆ ಜಾರ್ಜ್​
ಕೆಜೆ ಜಾರ್ಜ್​​
ವಿವೇಕ ಬಿರಾದಾರ
|

Updated on: Jun 03, 2023 | 12:50 PM

Share

ಬೆಂಗಳೂರು: ರಾಜ್ಯ ಸರ್ಕಾರ (Karnataka Government) 5 ಗ್ಯಾರೆಂಟಿ (5 Guarantee) ಯೋಜನೆಗಳಲ್ಲಿ ಮೊದಲ ಗ್ಯಾರಂಟಿಯಾಗಿರುವ ಗೃಹಜ್ಯೋತಿ (Gruha Jyothi Scheme) ಯೋಜನೆಯನ್ನು ಸರ್ಕಾರ ಜಾರಿ ಮಾಡಿದೆ. ನಿನ್ನೆ (ಜೂ.2) ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಸುದ್ದಿಗೋಷ್ಠಿ ನಡೆಸಿ 5 ಗ್ಯಾರೆಂಟಿ ಯೋಜನೆಗಳನ್ನು ಜಾರಿ ಮಾಡಿದರು. ಇನ್ನು ಗೃಹಜ್ಯೋತಿ ಯೋಜನೆ ಕುರಿತಾಗಿ ಹಲವು ಅನುಮಾನಗಳಿವೆ. ಜನರಲ್ಲಿ ಹಲವು ಗೊಂದಲ ಮತ್ತು ಪ್ರಶ್ನೆಗಳು ಮೂಡಿವೆ ಈ ಕುರಿತು ಇಂಧನ ಸಚಿವ ಕೆಜೆ ಜಾರ್ಜ (KJ George) ಸ್ಪಷ್ಟನೆ ನೀಡಿದ್ದಾರೆ. ಯಾವ ಬಾಡಿಗೆದಾರರೂ ವಿದ್ಯುತ್ ಬಿಲ್ ಕಟ್ಟಬೇಕಿಲ್ಲ. ನಾವು ಆರ್​​ಆರ್ ಸಂಖ್ಯೆ ಆಧಾರದ ಮೇಲೆ ಯುನಿಟ್​​ ಪರಿಗಣಿಸುತ್ತೇವೆ ಎಂದು ಹೇಳಿದರು.

ಬೆಂಗಳೂರಲ್ಲಿ ಟಿವಿ9 ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು ಬಾಡಿಗೆದಾರರನ್ನು ಪ್ರತ್ಯೇಕವಾಗಿ ಗುರುತಿಸುವ ಪ್ರಶ್ನೆಯೇ ಬರುವುದಿಲ್ಲ. ಮಾಲೀಕರಿರಲಿ, ಬಾಡಿಗೆದಾರಿರಲಿ ಆರ್ ಆರ್ ಸಂಖ್ಯೆ ಆಧಾರದ ಮೀಟರ್​​ ರೀಡ್​ ಮಾಡಲಾಗುತ್ತದೆ. ಅಲ್ಲಿ 200 ಯುನಿಟ್​​ ಒಳಗಡೆ ಬಳಸಿದ್ದರೇ ಉಚಿತ ನೀಡುತ್ತೇವೆ ಎಂದರು.

ಇದನ್ನೂ ಓದಿ: ಗೃಹಜ್ಯೋತಿ ಯೋಜನೆ ಅಡಿ ವಿದ್ಯುತ್ ಬಿಲ್ ಲೆಕ್ಕಾಚಾರ ಹೇಗೆ? ಇಲ್ಲಿದೆ ಸ್ಪಷ್ಟ ಚಿತ್ರಣ

ಅಲ್ಲದೇ ನಿಗದಿತ ಪ್ರಮಾಣಕ್ಕಿಂತ ಹೆಚ್ಚು ಬಳಸಿದರೆ ಹೆಚ್ಚುವರಿ ಬಿಲ್ ಮಾತ್ರ ಕಟ್ಟಬೇಕು. ಅಂದರೆ ವಾರ್ಷಿಕ ಸರಾಸರಿ 10% ಗಿಂತ ಹೆಚ್ವು ಬಳಸಿದರೆ ಮಾತ್ರ ಬಿಲ್ ಕಟ್ಟಬೇಕು. ಉದಾಹರಣೆಗೆ ವಾರ್ಷಿಕ ಸರಾಸರಿ ಬಳಕೆಯು 100 ಯೂನಿಟ್‌ ಇದೆ ಎಂದಿಟ್ಟುಕೊಳ್ಳೋಣ (ಮಾಸಿಕ ವಿದ್ಯುತ್ ಬಳಕೆಯನ್ನು ಒಟ್ಟು ಲೆಕ್ಕ ಹಾಕಿ 12 ರಿಂದ ಭಾಗಿಸುವ ಮೂಲಕ ಇದನ್ನು ಪಡೆಯಲಾಗಿದೆ). ಒಟ್ಟು ಸರಾಸರಿ ಬಳಕೆಯ ಮೇಲೆ ಹೆಚ್ಚುವರಿ ಶೇ 10 ರಷ್ಟನ್ನು ಒದಗಿಸಲಾಗುತ್ತದೆ. ಇದರೊಂದಿಗೆ, ಶೇ 110 ಯೂನಿಟ್ ವರೆಗೆ ವಿದ್ಯುತ್ ಬಳಸಿದರೆ ಬಿಲ್ ಪಾವತಿಸಬೇಕಿಲ್ಲ.

ಇದಕ್ಕಿಂತ ಹೆಚ್ಚಿಗೆ ಬಳಸಿದರೇ ಮಾತ್ರ ಬಿಲ್​ ಕಟ್ಟಬೇಕು. ಮತ್ತು ಈ ಯೋಜನೆ ಜುಲೈ 1 ರಿಂದ ಬಳಕೆ ಮಾಡುವ ವಿದ್ಯುತ್ ಉಚಿತವಾಗಿರಲಿದೆ ಎಂದು ಹೇಳಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?