ವೈದ್ಯ ಎಡವಟ್ಟು; ನೆಗಡಿ, ಕೆಮ್ಮು, ಜ್ವರದಿಂದ ಬಳಲುತ್ತಿದ್ದ ಯುವಕನ ಕಾಲು ಕತ್ತರಿಸುವ ಹಂತಕ್ಕೆ ಸೋಂಕು

ನೆಗಡಿ, ಕೆಮ್ಮು, ಜ್ವರದಿಂದ ಬಳಲುತ್ತಿದ್ದ 18 ವರ್ಷದ ಅಭಿ ಎಂಬ ಯುವಕ ಜನವರಿ 6ರಂದು ಬೇಗೂರಿನ ಮೈಲಸಂದ್ರದಲ್ಲಿರುವ ಸಾನಿಕಾ ಕ್ಲಿನಿಕ್‌ಗೆ ಹೋಗಿದ್ದರು. ಈ ವೇಳೆ ಶೀತ ಕೆಮ್ಮು ಜ್ವರ ಇದ್ದ ಕಾರಣ ಡಾ.ಅಶೋಕ್ ಎಂಬುವವರು ಅಭಿಗೆ ಇಂಜೆಕ್ಷನ್ ನೀಡಿದ್ದರು.

ವೈದ್ಯ ಎಡವಟ್ಟು; ನೆಗಡಿ, ಕೆಮ್ಮು, ಜ್ವರದಿಂದ ಬಳಲುತ್ತಿದ್ದ ಯುವಕನ ಕಾಲು ಕತ್ತರಿಸುವ ಹಂತಕ್ಕೆ ಸೋಂಕು
ಪ್ರಾತಿನಿಧಿಕ ಚಿತ್ರ
Follow us
| Updated By: ಆಯೇಷಾ ಬಾನು

Updated on:Jan 28, 2022 | 9:05 AM

ಆನೇಕಲ್: ವೈದ್ಯೋ ನಾರಾಯಣೋ ಹರಿ ಅಂತಾರೆ. ವೈದ್ಯರನ್ನು ದೇವರಿಗೆ ಹೋಲಿಸುತ್ತಾರೆ. ಆದ್ರೆ ಆ ವೈದ್ಯರು ಮಾಡುವ ತಪ್ಪಿನಿಂದ ಇಡೀ ಜೀವನ ಕಷ್ಟಕ್ಕೆ ಸಿಲುಪುವ, ಸಿಲುಕಿರುವ ಘಟನೆಗಳು ಅನೇಕ. ಅದೇ ರೀತಿ ಇಲ್ಲಿ ವೈದ್ಯರ ಎಡವಟ್ಟಿನಿಂದ ಯುವಕನ ಕಾಲಿಗೆ ಸೋಂಕು? ಕುಟುಂಬಸ್ಥರು ನ್ಯಾಯಕ್ಕಾಗಿ ಪೊಲೀಸರ ಮೊರೆಹೋಗಿದ್ದಾರೆ.

ನೆಗಡಿ, ಕೆಮ್ಮು, ಜ್ವರದಿಂದ ಬಳಲುತ್ತಿದ್ದ 18 ವರ್ಷದ ಅಭಿ ಎಂಬ ಯುವಕ ಜನವರಿ 6ರಂದು ಬೇಗೂರಿನ ಮೈಲಸಂದ್ರದಲ್ಲಿರುವ ಸಾನಿಕಾ ಕ್ಲಿನಿಕ್‌ಗೆ ಹೋಗಿದ್ದರು. ಈ ವೇಳೆ ಶೀತ ಕೆಮ್ಮು ಜ್ವರ ಇದ್ದ ಕಾರಣ ಡಾ.ಅಶೋಕ್ ಎಂಬುವವರು ಅಭಿಗೆ ಇಂಜೆಕ್ಷನ್ ನೀಡಿದ್ದರು. ಡಾ.ಅಶೋಕ್ ಇಂಜೆಕ್ಷನ್ ನೀಡಿದ ಬಳಿಕ ಅಭಿಗೆ ಕಾಲಿನಲ್ಲಿ ಊತ ಕಾಣಿಸಿಕೊಂಡಿದೆ. ಇಂಜೆಕ್ಷನ್ ನೀಡಿದ ಜಾಗದಿಂದ ಇಡೀ ಕಾಲಿಗೆ ಸೋಂಕು ಹರಡಿದೆ. ಹೀಗಾಗಿ ಸಾನಿಕಾ ಕ್ಲಿನಿಕ್ ತಾವು ಮಾಡಿದ ತಪ್ಪನ್ನು ಸರಿಪಡಿಸಿಕೊಳ್ಳಲು ತಾವೇ ಸೋಂಕಿಗೆ ಚಿಕಿತ್ಸೆ ನೀಡುವುದಾಗಿ ಹೇಳಿದ್ದರು. ಆದ್ರೆ ಈಗ ತಮ್ಮಿಂದ ಆಗಲ್ಲ ಎಂದು ಕ್ಲಿನಿಕ್‌ನವರಿಂದ ತಗಾದೆ ಕೇಳಿ ಬಂದಿದೆ.

ಸದ್ಯ ಈಗ ಕಾಲು ಕತ್ತರಿಸುವ ಹಂತಕ್ಕೆ ಸೋಂಕು ಹರಡಿಕೊಂಡಿದೆ. ಇತ್ತ ವೈದ್ಯರ ಎಡವಟ್ಟಿನಿಂದ ಯುವಕ ತನ್ನ ಕಾಲನ್ನೇ ಕಳೆದುಕೊಳ್ಳುವ ಪರಿಸ್ಥಿತಿ ಬಂದಿದೆ. ಅಭಿ ಅಕ್ಕ ಶಶಿಕಲಾ ನ್ಯಾಯಕ್ಕಾಗಿ ಎಲೆಕ್ಟ್ರಾನಿಕ್ ಸಿಟಿ ಪೊಲೀಸರಿಗೆ ದೂರು ನೀಡಿದ್ದಾರೆ.

FIR ದಾಖಲಾಗುತ್ತಿದ್ದಂತೆ ವೈದ್ಯ ಡಾ.ಅಶೋಕ್ ಪರಾರಿ ಇನ್ನು FIR ದಾಖಲಾಗುತ್ತಿದ್ದಂತೆ ವೈದ್ಯ ಡಾ.ಅಶೋಕ್ ಪರಾರಿಯಾಗಿದ್ದಾರೆ. ಡಾ.ಅಶೋಕ್, ಸಾನಿಕಾ ಕ್ಲಿನಿಕ್‌ ನಡೆಸುತ್ತಿದ್ದರು. ಅಭಿಗೆ ಅವರು ನೀಡಿದ ಇಂಜೆಕ್ಷನ್​ನಿಂದ ಕಾಲಿಗೆ ಸೋಂಕು ಹರಡಿತ್ತು. ಈ ವೇಳೆ ಇನ್ಫೆಕ್ಷನ್ ಕಡಿಮೆ ಆಗಲು ವೈದ್ಯ ಅಶೋಕ್ ಮಾತ್ರೆಗಳನ್ನು ನೀಡಿದ್ದರು, ಆದರೆ ಮಾತ್ರೆಗಳನ್ನು ಸೇವಿಸಿದ ಬಳಿಕ ಇನ್ಫೆಕ್ಷನ್ ಹೆಚ್ಚಾಗಿತ್ತು. ನಂತರ ತಮ್ಮ ಎಡವಟ್ಟಿನ ಅರಿವಾಗಿ 40 ಸಾವಿರ‌ ರೂಪಾಯಿ‌ ಪರಿಹಾರ ನೀಡಿದ್ರು. ಅಲ್ಲದೆ ಮುಂದೆ ಚಿಕಿತ್ಸೆ ನೀಡಲು ಸಹ ನಿರಾಕರಿಸಿದ್ದರು. ಹೀಗಾಗಿ ವೈದ್ಯನ ವಿರುದ್ಧ ಎಫ್​ಐಆರ್ ದಾಖಲಿಸಲಾಗಿತ್ತು. ಎಫ್​ಐಆರ್ ದಾಖಲಾಗುತ್ತಿದ್ದಂತೆ ವೈದ್ಯ ಅಶೋಕ್ ನಾಪತ್ತೆಯಾಗಿದ್ದಾರೆ. ಸದ್ಯ ಕಾಲಿನ ಸೋಂಕಿಗೆ ಬೇರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು ಲಕ್ಷಾಂತರ ಹಣ ಖರ್ಚಾಗಿದೆ. ಸಾಲದ ಶೂಲಕ್ಕೆ ಕುಟುಂಬ ಸಿಲುಕಿದೆ. ವಯಸ್ಸಿಗೆ ಬಂದ ಮಗನ‌ ಸ್ಥಿತಿ ಕಂಡು ತಾಯಿ ಮರುಗುತ್ತಿದ್ದಾರೆ.

ಇದನ್ನೂ ಓದಿ: ಮಹಿಳೆಗೆ ಹೆರಿಗೆ ನಂತರ ಊದಿಕೊಂಡು, ಕೆಂಪಾಯಿತು ಹೊಟ್ಟೆ; ಸಿಟಿ ಸ್ಕ್ಯಾನ್​ನಲ್ಲಿ ಗೊತ್ತಾಯ್ತು ವೈದ್ಯರು ಮಾಡಿದ ಎಡವಟ್ಟು, ಕೋರ್ಟ್ ಮೆಟ್ಟಿಲೇರಿದ ಪತಿ

Published On - 12:41 pm, Thu, 27 January 22

ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು